ದಿನದ ಸುದ್ದಿ
ಎಂಜಿ ರೋಡ್ ಶಾಂತಿ ಬದುಕು ಮತ್ತು ಬವಣೆ
![](https://suddidina.com/wp-content/uploads/2018/05/M.G.Road-Shanti-suddidina.jpg)
ಸುದ್ದಿದಿನ ವಿಶೇಷ: ಸ್ಯಾಂಡಲ್ವುಡ್ನ ಜ್ಯೂನಿಯರ್ ಆರ್ಟಿಸ್ಟ್ಗಳಿಗೆ ಎಂಜಿ ರೋಡ್ ಆರ್ಟಿಸ್ಟ್ಗಳು ಎಂಬ ಅನ್ವರ್ಥ ನಾಮವೊಂದಿದೆ. ಸಿನಿಮಾದಲ್ಲಿ ಸಣ್ಣಪುಟ್ಟ ರೋಲ್ ಮಾಡುವವರ ಇಂಥ ಕಲಾವಿದರ ಬದುಕನ್ನು ಅನಾವರಣ ಮಾಡುವ ‘ಎಂಜಿ ರೋಡ್ ಶಾಂತಿ’ ನಾಟಕವು ಇದೇ 20ರಂದು ಬೆಂಗಳೂರಿನಲ್ಲಿ ಪ್ರದರ್ಶನವಾಗಲಿದೆ.
ಒಬ್ಬಳು ನಾಟಕದ ಮೂಲಕ ದೇಶಾದ್ಯಂತ ಹೆಸರು ಮಾಡಿದ ರಂಗ ಕಲಾವಿದ ಪ್ರಸನ್ನ ಡಿ. ಅವರು ಈ ನಾಟಕವನ್ನು ನಿರ್ದೇಶಿಸಿದ್ದು, ಮೇ.20ರ ಸಂಜೆ 7.15ಕ್ಕೆ ಬೆಂಗಳೂರಿನ ಮಲ್ಲಹಳ್ಳಿಯಲ್ಲಿರುವ ಕಲಾಗ್ರಾಮದಲ್ಲಿ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
ಭಾರತೀಯ ಸಿನಿಮಾ ಹಾಗೂ ರಂಗಭೂಮಿ ಕ್ಷೇತ್ರದಿಂದ ಹತ್ತಿರದಿಂದ ಕಂಡು ಮಾಧ್ಯಮಗಳಲ್ಲಿ ಕೆಲಸ ಮಾಡಿರುವ ಅನುಭವವಿರುವ ಬರಹಗಾರ ವಿಜಯ್ ತೆಂಡೂಲ್ಕರ್ ಅವರ ‘ಬೇಬಿ’ ಮರಾಠಿ ಕಾಂದಂಬರಿಯ ಕನ್ನಡ ಅವತರಣಿಕೆಯು ಎಂಜಿ ರೋಡ್ ಶಾಂತಿ.
ಮರಾಠಿ ಕಾದಂಬರಿಯನ್ನು ಕನ್ನಡ ಮಣ್ಣಿಗೆ ಹೊಂದಿಕೊಳ್ಳುವಂತೆ ಕೆಲವು ಅಂಶಗಳನ್ನು ಸೇರಿಸಿ ನಾಟಕವನ್ನು ಕನ್ನಡಿಗನ ಮನ ಮುಟ್ಟುವಂತೆ ರೂಪಿಸಲಾಗಿದೆ ಎನ್ನುತ್ತಾರೆ ನಿರ್ದೇಶಕ ಪ್ರಸನ್ನ ಡಿ.
ಸಾಗರ ಮೂಲದವರಾದ ಪ್ರಸನ್ನ ಅವರು ಈವರೆಗೆ ಪೀರನೆಂಬ ಕಿರಾತಕನ ಪ್ರಸಂಗ, ಒಬ್ಬಳು, ಓವರ್ ಕೋಟ್, ಬಿಂಬಾಯಣ, ಪರಿಹಾರ ಮೊದಲಾದ ನಾಟಕಗಳನ್ನು ನಿರ್ದೇಶಿಸಿದೆ. ಒಬ್ಬಳು ನಾಟಕವು ಇವರಿಗೆ ರಾಷ್ಟ್ರಮಟ್ಟದ ಹೆಸರು ತಂದುಕೊಟ್ಟಿದೆ.
ಮಂಡ್ಯದ ಪಾಂಡವಪುರ ತಾಲೂಕಿನ ಕಲಾವಿದೆ, ರಾಜ್ಯ ಪ್ರಶಸ್ತಿ ವಿಜೇತೆ ಅಕ್ಷತಾ ಪಾಂಡವಪುರ ಅವರು ಲೀಡ್ ರೋಲ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಲ್ಕು ಪಾತ್ರಗಳಿರುವ ಈ ನಾಟಕದಲ್ಲಿ ಅಕ್ಷತಾ ಅವರೊಂದಿಗೆ ಕಲಾವಿದರಾದ ಶಿವು, ಮುರುಳಿ, ಗೋಮಾರ್ದನಹಳ್ಳಿ ಮಂಜುನಾಥ್ ನಟಿಸಿದ್ದಾರೆ.
ಮೂಲ ನಾಟಕದಲ್ಲಿ ಬೇಬಿ ಎಂಬುವವಳು ಒಬ್ಬ ಜ್ಯೂನಿಯರ್ ಆರ್ಟಿಸ್ಟ್. ಆಕೆಯ ಬದುಕಿನಲ್ಲಿ ಘಟಿಸುವ ಘಟನೆಗಳೇ ಈ ನಾಟಕದ ಕಥಾವಸ್ತು. ಚಿಕ್ಕಾಸಿಗಾಗಿ ಸಣ್ಣಪುಟ್ಟ ಪಾತ್ರಗಳನ್ನೇ ಅವಲಂಬಿಸಿರುವ ಬೇಬಿ ಶಿವಪ್ಪ ಎಂಬುವವನ ಮನೆಯಲ್ಲಿ ಆಶ್ರಯ ಪಡೆದಿರುತ್ತಾಳೆ. ಬೇಬಿಯನ್ನು ತನ್ನ ತೃಷೆಗಾಗಿ ಬಳಸಿಕೊಳ್ಳುವ ಶಿವಪ್ಪ ಆಕೆಯ ತಮ್ಮನಿಗೆ ಕಿರುಕುಳ ನೀಡಿ ಹುಚ್ಚಾಸ್ಪತ್ರೆಗೆ ಸೇರಿಸುತ್ತಾನೆ. ಎರಡು ವರ್ಷಗಳ ನಂತರ ಆತ ವಾಪಸ್ ಮನೆಗೆ ಬಂದಾಗ ಶಿವಪ್ಪ ಆತನನ್ನು ಪಶುವಿನಂತೆ ಕಾಣುತ್ತಾನೆ ಇನ್ನಷ್ಟು ಚಿತ್ರಹಿಂಸೆ ಕೊಡುತ್ತಾನೆ. ಇದನ್ನು ಕಂಡೂ ಕೂಡ ಬೇಬಿಗೆ ಏನೂ ಮಾಡಲಾಗದ ಸ್ಥಿತಿ.
ಸಂಗೀತಗಾರನೊಬ್ಬನ ಹಾಡುಗಳು ಆಕೆಯ ಬದುಕಿಗೆ ಸ್ಫೂರ್ತಿ. ಆತ ಬರೆಯುವ ಹಾಡುಗಳೇ ಆಕೆಯ ಬದುಕಿಗೆ ಶಕ್ತಿ. ಹೇಗಾದರೂ ಮಾಡಿ ಜೀವನದಲ್ಲಿ ಮುಂದೆ ಬರಬೇಕೆಂಬ ಹಂಬಲದಲ್ಲಿರುವ ಆಕೆಗೆ ಸಹಾಯಕ ನಿರ್ದೇಶಕನೊಬ್ಬ ತನ್ನ ಸಿನಿಮಾದ ನಾಯಕಿ ಮಾಡುವುದಾಗಿ ಭರವಸೆ ನೀಡುತ್ತಾನೆ. ಆತ ಒಬ್ಬ ಬೇಬಿ ಮನೆಗೆ ಬಂದಾಗ ಶಿವಪ್ಪ ಅದನ್ನು ಕಂಡು ಬೇಬಿಯನ್ನು ಮನೆಯಿಂದ ಹೊರ ಹಾಕುತ್ತಾನೆ. ಇದು ಸಿನಿಮಾದ ಮುಖ್ಯ ಕತೆ.
ಈ ಕತೆಯನ್ನು ಕನ್ನಡ ನೆಲಕ್ಕೆ ಹೊಂದಿಸುವ ನಿಟ್ಟಿನಲ್ಲಿ ನಿರ್ದೇಶಕರು ಡಬ್ಬಿಂಗ್ ಚರ್ಚೆ, ಕಾಸ್ಟಿಂಗ್ ಕೌಚ್ ಮೊದಲಾದ ವಿಷಯಗಳನ್ನು ಸ್ಪರ್ಶಿಸಿದ್ದಾರೆ.
ಜ್ಯೂನಿಯರ್ ಆರ್ಟಿಸ್ಟ್ಗಳು ಒಂದು ಸಿನಿಮಾದ ಬೆನ್ನೆಲುಬಾಗಿ ನಿಂತಿರುತ್ತಾರೆ. ಇವರಿಗೆ ನೀಡುವ ಸಂಭಾವನೆ ಅವರ ಪಾತ್ರಕ್ಕೆ ತಕ್ಕಂತಿರುತ್ತದೆ. ಮದುವೆ ಮನೆಯಲ್ಲಿ ಹೆಣ್ಣಿನ ಜತೆ ಇರುವ ಪಾತ್ರಕ್ಕೆ ಹೆಚ್ಚು, ಗ್ರಾಮೀಣ ಮಹಿಳೆ ಪಾತ್ರಕ್ಕೆ ಕಡಿಮೆ ಸಂಭಾವನೆ ಪಡೆಯುತ್ತಾರೆ. ಇಂಥ ಪಾತ್ರದಾರಿಗಳ ಬದುಕಿನ ಬವಣೆಗಳು ಹೇಳತೀರದು. ಅದನ್ನು ನಾಟಕವಾಗಿಸುವ ಪ್ರಯತ್ನ ನಮ್ಮದು ಎನ್ನುತ್ತಾರೆ ನಿರ್ದೇಶಕ ಪ್ರಸನ್ನ.
———————–……………………———————
“ಶ್ರೀ ರೆಡ್ಡಿ ಎಂಬ ಕಲಾವಿದೆ ಇತ್ತೀಚೆಗೆ ಸಾರ್ವಜನಿಕವಾಗಿ ಅರೆಬೆತ್ತಲಾಗಿದ್ದನ್ನು ಮಾಧ್ಯಮಗಳಲ್ಲಿ ನೋಡಿದ್ದೇವೆ. ಕಲಾವಿದೆ ಎಂದರೆ ಆಕೆಯನ್ನು ಕಾಮ ತೃಷೆ ತೀರಿಸಿಕೊಳ್ಳುವ ಗಂಡು ಮನಸ್ಥಿತಿಯ ಪ್ರತಿಭಟನೆಯ ರೂಪವೇ ಎಂಜಿ ರೋಡ್ ಶಾಂತಿ. ಒಬ್ಬ ಕಲಾವಿದೆಯಲ್ಲಿರುವ ಪ್ರತಿಭೆಯನ್ನು ಗಂಡು ಯಾವ ರೀತಿ ಅಪಾನಿಸುತ್ತಾನೆ ಎಂಬುದನ್ನು ಇದು ಪ್ರತಿಪಾದಿಸುತ್ತದೆ.”
|ಪ್ರಸನ್ನ ಡಿ. ರಂಗ ನಿದೇರ್ಶಕ
ಸುದ್ದಿದಿನ.ಕಾಂ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!