ದಿನದ ಸುದ್ದಿ
ಎಂಜಿ ರೋಡ್ ಶಾಂತಿ ಬದುಕು ಮತ್ತು ಬವಣೆ
ಸುದ್ದಿದಿನ ವಿಶೇಷ: ಸ್ಯಾಂಡಲ್ವುಡ್ನ ಜ್ಯೂನಿಯರ್ ಆರ್ಟಿಸ್ಟ್ಗಳಿಗೆ ಎಂಜಿ ರೋಡ್ ಆರ್ಟಿಸ್ಟ್ಗಳು ಎಂಬ ಅನ್ವರ್ಥ ನಾಮವೊಂದಿದೆ. ಸಿನಿಮಾದಲ್ಲಿ ಸಣ್ಣಪುಟ್ಟ ರೋಲ್ ಮಾಡುವವರ ಇಂಥ ಕಲಾವಿದರ ಬದುಕನ್ನು ಅನಾವರಣ ಮಾಡುವ ‘ಎಂಜಿ ರೋಡ್ ಶಾಂತಿ’ ನಾಟಕವು ಇದೇ 20ರಂದು ಬೆಂಗಳೂರಿನಲ್ಲಿ ಪ್ರದರ್ಶನವಾಗಲಿದೆ.
ಒಬ್ಬಳು ನಾಟಕದ ಮೂಲಕ ದೇಶಾದ್ಯಂತ ಹೆಸರು ಮಾಡಿದ ರಂಗ ಕಲಾವಿದ ಪ್ರಸನ್ನ ಡಿ. ಅವರು ಈ ನಾಟಕವನ್ನು ನಿರ್ದೇಶಿಸಿದ್ದು, ಮೇ.20ರ ಸಂಜೆ 7.15ಕ್ಕೆ ಬೆಂಗಳೂರಿನ ಮಲ್ಲಹಳ್ಳಿಯಲ್ಲಿರುವ ಕಲಾಗ್ರಾಮದಲ್ಲಿ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
ಭಾರತೀಯ ಸಿನಿಮಾ ಹಾಗೂ ರಂಗಭೂಮಿ ಕ್ಷೇತ್ರದಿಂದ ಹತ್ತಿರದಿಂದ ಕಂಡು ಮಾಧ್ಯಮಗಳಲ್ಲಿ ಕೆಲಸ ಮಾಡಿರುವ ಅನುಭವವಿರುವ ಬರಹಗಾರ ವಿಜಯ್ ತೆಂಡೂಲ್ಕರ್ ಅವರ ‘ಬೇಬಿ’ ಮರಾಠಿ ಕಾಂದಂಬರಿಯ ಕನ್ನಡ ಅವತರಣಿಕೆಯು ಎಂಜಿ ರೋಡ್ ಶಾಂತಿ.
ಮರಾಠಿ ಕಾದಂಬರಿಯನ್ನು ಕನ್ನಡ ಮಣ್ಣಿಗೆ ಹೊಂದಿಕೊಳ್ಳುವಂತೆ ಕೆಲವು ಅಂಶಗಳನ್ನು ಸೇರಿಸಿ ನಾಟಕವನ್ನು ಕನ್ನಡಿಗನ ಮನ ಮುಟ್ಟುವಂತೆ ರೂಪಿಸಲಾಗಿದೆ ಎನ್ನುತ್ತಾರೆ ನಿರ್ದೇಶಕ ಪ್ರಸನ್ನ ಡಿ.
ಸಾಗರ ಮೂಲದವರಾದ ಪ್ರಸನ್ನ ಅವರು ಈವರೆಗೆ ಪೀರನೆಂಬ ಕಿರಾತಕನ ಪ್ರಸಂಗ, ಒಬ್ಬಳು, ಓವರ್ ಕೋಟ್, ಬಿಂಬಾಯಣ, ಪರಿಹಾರ ಮೊದಲಾದ ನಾಟಕಗಳನ್ನು ನಿರ್ದೇಶಿಸಿದೆ. ಒಬ್ಬಳು ನಾಟಕವು ಇವರಿಗೆ ರಾಷ್ಟ್ರಮಟ್ಟದ ಹೆಸರು ತಂದುಕೊಟ್ಟಿದೆ.
ಮಂಡ್ಯದ ಪಾಂಡವಪುರ ತಾಲೂಕಿನ ಕಲಾವಿದೆ, ರಾಜ್ಯ ಪ್ರಶಸ್ತಿ ವಿಜೇತೆ ಅಕ್ಷತಾ ಪಾಂಡವಪುರ ಅವರು ಲೀಡ್ ರೋಲ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಲ್ಕು ಪಾತ್ರಗಳಿರುವ ಈ ನಾಟಕದಲ್ಲಿ ಅಕ್ಷತಾ ಅವರೊಂದಿಗೆ ಕಲಾವಿದರಾದ ಶಿವು, ಮುರುಳಿ, ಗೋಮಾರ್ದನಹಳ್ಳಿ ಮಂಜುನಾಥ್ ನಟಿಸಿದ್ದಾರೆ.
ಮೂಲ ನಾಟಕದಲ್ಲಿ ಬೇಬಿ ಎಂಬುವವಳು ಒಬ್ಬ ಜ್ಯೂನಿಯರ್ ಆರ್ಟಿಸ್ಟ್. ಆಕೆಯ ಬದುಕಿನಲ್ಲಿ ಘಟಿಸುವ ಘಟನೆಗಳೇ ಈ ನಾಟಕದ ಕಥಾವಸ್ತು. ಚಿಕ್ಕಾಸಿಗಾಗಿ ಸಣ್ಣಪುಟ್ಟ ಪಾತ್ರಗಳನ್ನೇ ಅವಲಂಬಿಸಿರುವ ಬೇಬಿ ಶಿವಪ್ಪ ಎಂಬುವವನ ಮನೆಯಲ್ಲಿ ಆಶ್ರಯ ಪಡೆದಿರುತ್ತಾಳೆ. ಬೇಬಿಯನ್ನು ತನ್ನ ತೃಷೆಗಾಗಿ ಬಳಸಿಕೊಳ್ಳುವ ಶಿವಪ್ಪ ಆಕೆಯ ತಮ್ಮನಿಗೆ ಕಿರುಕುಳ ನೀಡಿ ಹುಚ್ಚಾಸ್ಪತ್ರೆಗೆ ಸೇರಿಸುತ್ತಾನೆ. ಎರಡು ವರ್ಷಗಳ ನಂತರ ಆತ ವಾಪಸ್ ಮನೆಗೆ ಬಂದಾಗ ಶಿವಪ್ಪ ಆತನನ್ನು ಪಶುವಿನಂತೆ ಕಾಣುತ್ತಾನೆ ಇನ್ನಷ್ಟು ಚಿತ್ರಹಿಂಸೆ ಕೊಡುತ್ತಾನೆ. ಇದನ್ನು ಕಂಡೂ ಕೂಡ ಬೇಬಿಗೆ ಏನೂ ಮಾಡಲಾಗದ ಸ್ಥಿತಿ.
ಸಂಗೀತಗಾರನೊಬ್ಬನ ಹಾಡುಗಳು ಆಕೆಯ ಬದುಕಿಗೆ ಸ್ಫೂರ್ತಿ. ಆತ ಬರೆಯುವ ಹಾಡುಗಳೇ ಆಕೆಯ ಬದುಕಿಗೆ ಶಕ್ತಿ. ಹೇಗಾದರೂ ಮಾಡಿ ಜೀವನದಲ್ಲಿ ಮುಂದೆ ಬರಬೇಕೆಂಬ ಹಂಬಲದಲ್ಲಿರುವ ಆಕೆಗೆ ಸಹಾಯಕ ನಿರ್ದೇಶಕನೊಬ್ಬ ತನ್ನ ಸಿನಿಮಾದ ನಾಯಕಿ ಮಾಡುವುದಾಗಿ ಭರವಸೆ ನೀಡುತ್ತಾನೆ. ಆತ ಒಬ್ಬ ಬೇಬಿ ಮನೆಗೆ ಬಂದಾಗ ಶಿವಪ್ಪ ಅದನ್ನು ಕಂಡು ಬೇಬಿಯನ್ನು ಮನೆಯಿಂದ ಹೊರ ಹಾಕುತ್ತಾನೆ. ಇದು ಸಿನಿಮಾದ ಮುಖ್ಯ ಕತೆ.
ಈ ಕತೆಯನ್ನು ಕನ್ನಡ ನೆಲಕ್ಕೆ ಹೊಂದಿಸುವ ನಿಟ್ಟಿನಲ್ಲಿ ನಿರ್ದೇಶಕರು ಡಬ್ಬಿಂಗ್ ಚರ್ಚೆ, ಕಾಸ್ಟಿಂಗ್ ಕೌಚ್ ಮೊದಲಾದ ವಿಷಯಗಳನ್ನು ಸ್ಪರ್ಶಿಸಿದ್ದಾರೆ.
ಜ್ಯೂನಿಯರ್ ಆರ್ಟಿಸ್ಟ್ಗಳು ಒಂದು ಸಿನಿಮಾದ ಬೆನ್ನೆಲುಬಾಗಿ ನಿಂತಿರುತ್ತಾರೆ. ಇವರಿಗೆ ನೀಡುವ ಸಂಭಾವನೆ ಅವರ ಪಾತ್ರಕ್ಕೆ ತಕ್ಕಂತಿರುತ್ತದೆ. ಮದುವೆ ಮನೆಯಲ್ಲಿ ಹೆಣ್ಣಿನ ಜತೆ ಇರುವ ಪಾತ್ರಕ್ಕೆ ಹೆಚ್ಚು, ಗ್ರಾಮೀಣ ಮಹಿಳೆ ಪಾತ್ರಕ್ಕೆ ಕಡಿಮೆ ಸಂಭಾವನೆ ಪಡೆಯುತ್ತಾರೆ. ಇಂಥ ಪಾತ್ರದಾರಿಗಳ ಬದುಕಿನ ಬವಣೆಗಳು ಹೇಳತೀರದು. ಅದನ್ನು ನಾಟಕವಾಗಿಸುವ ಪ್ರಯತ್ನ ನಮ್ಮದು ಎನ್ನುತ್ತಾರೆ ನಿರ್ದೇಶಕ ಪ್ರಸನ್ನ.
———————–……………………———————
“ಶ್ರೀ ರೆಡ್ಡಿ ಎಂಬ ಕಲಾವಿದೆ ಇತ್ತೀಚೆಗೆ ಸಾರ್ವಜನಿಕವಾಗಿ ಅರೆಬೆತ್ತಲಾಗಿದ್ದನ್ನು ಮಾಧ್ಯಮಗಳಲ್ಲಿ ನೋಡಿದ್ದೇವೆ. ಕಲಾವಿದೆ ಎಂದರೆ ಆಕೆಯನ್ನು ಕಾಮ ತೃಷೆ ತೀರಿಸಿಕೊಳ್ಳುವ ಗಂಡು ಮನಸ್ಥಿತಿಯ ಪ್ರತಿಭಟನೆಯ ರೂಪವೇ ಎಂಜಿ ರೋಡ್ ಶಾಂತಿ. ಒಬ್ಬ ಕಲಾವಿದೆಯಲ್ಲಿರುವ ಪ್ರತಿಭೆಯನ್ನು ಗಂಡು ಯಾವ ರೀತಿ ಅಪಾನಿಸುತ್ತಾನೆ ಎಂಬುದನ್ನು ಇದು ಪ್ರತಿಪಾದಿಸುತ್ತದೆ.”
|ಪ್ರಸನ್ನ ಡಿ. ರಂಗ ನಿದೇರ್ಶಕ
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.
ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.
ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
ಸುದ್ದಿದಿನಡೆಸ್ಕ್:ಜಪಾನ್ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.
ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!
ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾಲಿಯ ಕನಸು ಒಂದೇ ಹೀರೋ ಆಗೋದು
ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!
ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!
ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.
ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!
ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ1 day agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ1 day agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ1 day agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ1 day agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ
-
ದಿನದ ಸುದ್ದಿ1 day agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!





