Connect with us

ದಿನದ ಸುದ್ದಿ

ಮದ್ದೂರು | ಬಗರ್ ಹುಕುಂ ಸಾಗುವಳಿದಾರರ ತಾಲ್ಲೂಕು ಸಮಾವೇಶ : ಸಾಗುವಳಿ‌ ಪತ್ರನೀಡಲು ಮನವಿ

Published

on

ಸುದ್ದಿದಿನ, ಮದ್ದೂರು : ಬಗರ್ ಹುಕುಂ ಸಾಗುವಳಿದಾರರ ತಾಲ್ಲೂಕು ಸಮಾವೇಶ ಹಾಗೂ ಕರ್ನಾಟಕ ಪ್ರಾಂತ್ಯ ರೈತ ಸಂಘದ ವತಿಯಿಂದ ಮದ್ದೂರು ಪಟ್ಟಣದ ಶ್ರೀ ನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ಇಂದು ತಾಲ್ಲೂಕು ಮಟ್ಟದ ಸಮಾವೇಶವನ್ನು ನಡೆಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಪ್ರಾಂತ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಯ್ಯಾರೆಡ್ಡಿ ರವರು ಬಗರ್ಹುಕುಂ ಸಾಗುವಳಿ ಸಕ್ರಮ ಕೋರಿ ನಮೂನೆ 57 ರ ಅರ್ಜಿ ಸ್ವೀಕರಿಸಬೇಕು ಹಿಂದೆ ಮಂಜೂರಾತಿ ಆಗಿರುವ ರೈತರ ಕೃಷಿ ಭೂಮಿ ದುರಸ್ತಿ ಮಾಡಲು ವಿಶೇಷ ತಹಸೀಲ್ದಾರ್ ಅವರನ್ನು ನೇಮಕ ಮಾಡುವಂತೆ ನಮ್ಮ ಗ್ರಾಮಗಳಲ್ಲಿ ಇರುವ ಬಗರಹುಕುಂ ಸಾಗುವಳಿ ಚೀಟಿಗಳನ್ನು ನೀಡಬೇಕು.
ಅಲ್ಲದೆ ಹಿಂದೆ ಮಂಜೂರಾತಿಯಾಗಿರುವ ಭೂಮಿಯನ್ನು ದುರಸ್ತಿ ಮಾಡಿ ರೈತರ ಭೂ ದಾಖಲಾತಿಗಳನ್ನು ಸಮರ್ಪಕಗೊಳಿಸಿ ಕೆಲಸ ನಿಗದಿತ ಅವಧಿಯಲ್ಲಿ ಮುಗಿಯುವಂತೆ ಖಾತರಿಗೊಳಿಸಲು ವಿಶೇಷ ತಹಶೀಲ್ದಾರ್ ಅವರ ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಕಾಗೋಡು ತಿಮ್ಮಪ್ಪರವರ ಹೋರಾಟ ಮತ್ತು ಪರಿಶ್ರಮದಿಂದ ಐದು ಲಕ್ಷ ರೈತ ಕುಟುಂಬಗಳಿಗೆ ಜಮೀನು ಸಿಕ್ಕಿದೆ. ಗೋಮಾಳ ಸರ್ಕಾರಿ ಮತ್ತಿತರ ವಿವರಗಳಿರುವ ಭೂಮಿಯಲ್ಲಿ ಬೇಸಾಯ ಮಾಡುತ್ತಿರುವ ಎಲ್ಲ ರೈತರು ಈ ಅವಕಾಶವನ್ನು ಬಳಸಿಕೊಂಡು ಭೂಮಿ ಸಕ್ರಮ ಮಾಡಿಕೊಳ್ಳಲು ಮತ್ತೊಮ್ಮೆ ಅವಕಾಶ ಸಿಕ್ಕಿದೆ ಎಂದು ರೈತರಿಗೆ ತಿಳಿಸಿದರು.

ಹಾಗೂ ಇನ್ನು ಮುಂತಾದ ರೈತರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಈ ಕೂಡಲೇ ಮಧ್ಯ ಪ್ರವೇಶಿಸಿ ಸ್ಪಂದಿಸಬೇಕು ಇಲ್ಲದಿದ್ದರೆ ರಾಜ್ಯವ್ಯಾಪಿ ಉಗ್ರ ಹೋರಾಟವನ್ನು ನಡೆಸಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿತಾಲ್ಲೂಕುಪ್ರ.ಕಾ.ಯಶವಂತ್,ನರಸಿಂಹೇಗೌಡ, ಆತ್ಮಾನಂದ, ರಾಮು,ಜನವಾದಿ ಮಹಿಳಾ ಸಂಘಟನೆಯ ಪುಪ್ಪ ಮತ್ತು ಪದಾಧಿಕಾರಿಗಳು ರೈತ ಮುಖಂಡರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ; ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣ

Published

on

ಸುದ್ದಿದಿನ ಡೆಸ್ಕ್ : ಇದೇ 12 ರಿಂದ 19 ರವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. “ಪ್ರವೇಶ ಪತ್ರ” ತೋರಿಸಿ, ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕನ್ನಡ ಸಾಹಿತ್ಯ ಪರಿಷತ್ | ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟ

Published

on

ಸುದ್ದಿದಿನ, ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾಗಿರುವ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟವಾಗಿದೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು 2022ನೇ ಸಾಲಿನ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ಪ್ರಶಸ್ತಿಯು 51 ಸಾವಿರ ರೂಪಾಯಿ ನಗದು, ಸ್ಮರಣಿಕೆ ಹಾಗೂ ಫಲ ತಾಂಬೂಲಗಳನ್ನು ಒಳಗೊಂಡಿರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮುಂಗಾರು ಹಂಗಾಮಿನ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ

Published

on

ಸುದ್ದಿದಿನ ಡೆಸ್ಕ್ : 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕುರಿತ ಸಚಿವ ಸಮಿತಿ ಅನುಮೋದಿಸಿದೆ.

ಸಾಮಾನ್ಯ ದರ್ಜೆ ಭತ್ತಕ್ಕೆ ಕ್ವಿಂಟಲ್‌ಗೆ 2 ಸಾವಿರದ 40 ರೂಪಾಯಿಯಿಂದ 2ಸಾವಿರದ 183 ರೂಪಾಯಿಗೆ ಹಾಗೂ ’ಎ’ ದರ್ಜೆ ಭತ್ತಕ್ಕೆ 2 ಸಾವಿರದ 60 ರಿಂದ 2 ಸಾವಿರದ 203 ರೂಪಾಯಿಗೆ ಹೆಚ್ಚಿಸಲಾಗಿದೆ.

ರಾಗಿಗೆ ಪ್ರತಿ ಕ್ವಿಂಟಲ್‌ಗೆ 3 ಸಾವಿರದ 578 ರೂಪಾಯಿಯಿಂದ 3 ಸಾವಿರದ 846 ರೂಪಾಯಿಗೆ ಹೆಚ್ಚಿಸಲಾಗಿದೆ. ತೊಗರಿಗೆ ಪ್ರತಿ ಕ್ವಿಂಟಲ್‌ಗೆ 6 ಸಾವಿರದ 600 ರಿಂದ 7 ಸಾವಿರ ರೂಪಾಯಿಗೆ, ಹೆಸರು ಕಾಳಿಗೆ ಪ್ರತಿ ಕ್ವಿಂಟಲ್‌ಗೆ 7 ಸಾವಿರದ 755 ರಿಂದ 8 ಸಾವಿರದ 558 ರೂಪಾಯಿಗೆ, ಪ್ರತಿ ಕ್ವಿಂಟಲ್ ಉದ್ದಿಗೆ 6 ಸಾವಿರದ 600 ರಿಂದ 6 ಸಾವಿರದ 950 ರೂಪಾಯಿಗೆ ಹೆಚ್ಚಿಸಲಾಗಿದೆ.

ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪಿಯೂಷ್ ಗೋಯಲ್ 2022-23ನೇ ಸಾಲಿಗೆ 330.5 ದಶಲಕ್ಷ ಟನ್‌ನಷ್ಟು ಆಹಾರ ಧಾನ್ಯ ಉತ್ಪಾದನೆ ಅಂದಾಜಿಸಲಾಗದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ5 hours ago

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ; ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣ

ಸುದ್ದಿದಿನ ಡೆಸ್ಕ್ : ಇದೇ 12 ರಿಂದ 19 ರವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ...

ದಿನದ ಸುದ್ದಿ7 hours ago

ಕನ್ನಡ ಸಾಹಿತ್ಯ ಪರಿಷತ್ | ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟ

ಸುದ್ದಿದಿನ, ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾಗಿರುವ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟವಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ...

ದಿನದ ಸುದ್ದಿ16 hours ago

ಮುಂಗಾರು ಹಂಗಾಮಿನ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ

ಸುದ್ದಿದಿನ ಡೆಸ್ಕ್ : 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕುರಿತ ಸಚಿವ...

ದಿನದ ಸುದ್ದಿ16 hours ago

ವಿದ್ಯುತ್ ಬಳಕೆ ಶುಲ್ಕ ಹೆಚ್ಚಳವನ್ನು ಮುಂದೂಡಲು ಒತ್ತಾಯ

ಸುದ್ದಿದಿನ ಡೆಸ್ಕ್ : ಆರ್ಥಿಕತೆಯಲ್ಲಿ ಸಾಮಾನ್ಯ ಸ್ಥಿತಿ ಮರಳುವವರೆಗೆ ವಿದ್ಯುತ್ ಬಳಕೆ ಶುಲ್ಕ ಹೆಚ್ಚಳವನ್ನು ಮುಂದೂಡುವಂತೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಸರ್ಕಾರವನ್ನು ಒತ್ತಾಯಿಸಿದೆ. ಪ್ರಸ್ತುತ...

ದಿನದ ಸುದ್ದಿ16 hours ago

ಗೃಹಜ್ಯೋತಿ ಯೋಜನೆ | ಮನೆ ಮಾಲೀಕರು ಮತ್ತು ಬಾಡಿಗೆದಾರರಿಗೂ ಅನ್ವಯ : ಸಚಿವ ಕೆ.ಜೆ. ಜಾರ್ಜ್

ಸುದ್ದಿದಿನ, ಬೆಂಗಳೂರು : ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್, ಮನೆ ಮಾಲೀಕರು ಮತ್ತು ಬಾಡಿಗೆದಾರರಿಗೂ ಅನ್ವಯಿಸಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ....

ದಿನದ ಸುದ್ದಿ20 hours ago

ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ

ಸುದ್ದಿದಿನ,ದಾವಣಗೆರೆ : ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರಾಮನ್ ಸಂಶೋಧನಾ ಸಂಸ್ಥೆಯ 75 ನೇ ವಾರ್ಷಿಕೋತ್ಸದ ಅಂಗವಾಗಿ...

ದಿನದ ಸುದ್ದಿ1 day ago

ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ನಿಗದಿ

ಸುದ್ದಿದಿನ ಡೆಸ್ಕ್ : ವಿಧಾನ ಪರಿಷತ್ ಸದಸ್ಯರಾಗಿದ್ದ ಬಾಬುರಾವ್ ಚಿಂಚನಸೂರು, ಆರ್.ಶಂಕರ್ ಹಾಗೂ ಲಕ್ಷ್ಮಣ್ ಸವದಿ, ರಾಜೀನಾಮೆಯಿಂದ ತೆರವಾಗಿದ್ದ ಮೂರು ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ...

ದಿನದ ಸುದ್ದಿ1 day ago

ಮೀಸಲಾತಿ ಹೆಚ್ಚಳ ; ಸಂವಿಧಾನದ 9ನೇ ಶೆಡ್ಯುಲ್‌ನಲ್ಲಿ ಸೇರಿಸಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಸಮುದಾಯದವರಿಗೆ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯಲ್‌ನಲ್ಲಿ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ...

ದಿನದ ಸುದ್ದಿ2 days ago

ನೈತಿಕ ಪೊಲೀಸ್‍ಗಿರಿಗೆ ಅವಕಾಶ ಇಲ್ಲ ; ಸಿ.ಎಂ. ಸಿದ್ದರಾಮಯ್ಯ ಎಚ್ಚರಿಕೆ

ಸುದ್ದಿದಿನ,ದಾವಣಗೆರೆ : ಪ್ರಜಾಪ್ರಭುತ್ವದಲ್ಲಿ ಜನರೇ ಮಾಲಿಕರಾಗಿದ್ದು ಜನರ ಆಶೋತ್ತರಗಳಿಗೆ ಸ್ಪಂಧಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸೂಚನೆ ನೀಡಿದರು. ಅವರು ಸೋಮವಾರ ದಾವಣಗೆರೆ ಜಿಲ್ಲಾ ಪಂಚಾಯಿತಿ...

ದಿನದ ಸುದ್ದಿ3 days ago

ಗೋ ಹತ್ಯೆ ನಿಷೇಧ ಕಾಯ್ದೆ ; ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ, ದಾವಣಗೆರೆ : ಗೋ ಹತ್ಯೆ ನಿಷೇಧ ಕಾಯ್ದೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನ ಕೈ ಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

Trending