ದಿನದ ಸುದ್ದಿ
ಮದ್ದೂರು | ಬಗರ್ ಹುಕುಂ ಸಾಗುವಳಿದಾರರ ತಾಲ್ಲೂಕು ಸಮಾವೇಶ : ಸಾಗುವಳಿ ಪತ್ರನೀಡಲು ಮನವಿ
ಸುದ್ದಿದಿನ, ಮದ್ದೂರು : ಬಗರ್ ಹುಕುಂ ಸಾಗುವಳಿದಾರರ ತಾಲ್ಲೂಕು ಸಮಾವೇಶ ಹಾಗೂ ಕರ್ನಾಟಕ ಪ್ರಾಂತ್ಯ ರೈತ ಸಂಘದ ವತಿಯಿಂದ ಮದ್ದೂರು ಪಟ್ಟಣದ ಶ್ರೀ ನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ಇಂದು ತಾಲ್ಲೂಕು ಮಟ್ಟದ ಸಮಾವೇಶವನ್ನು ನಡೆಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಪ್ರಾಂತ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಯ್ಯಾರೆಡ್ಡಿ ರವರು ಬಗರ್ಹುಕುಂ ಸಾಗುವಳಿ ಸಕ್ರಮ ಕೋರಿ ನಮೂನೆ 57 ರ ಅರ್ಜಿ ಸ್ವೀಕರಿಸಬೇಕು ಹಿಂದೆ ಮಂಜೂರಾತಿ ಆಗಿರುವ ರೈತರ ಕೃಷಿ ಭೂಮಿ ದುರಸ್ತಿ ಮಾಡಲು ವಿಶೇಷ ತಹಸೀಲ್ದಾರ್ ಅವರನ್ನು ನೇಮಕ ಮಾಡುವಂತೆ ನಮ್ಮ ಗ್ರಾಮಗಳಲ್ಲಿ ಇರುವ ಬಗರಹುಕುಂ ಸಾಗುವಳಿ ಚೀಟಿಗಳನ್ನು ನೀಡಬೇಕು.
ಅಲ್ಲದೆ ಹಿಂದೆ ಮಂಜೂರಾತಿಯಾಗಿರುವ ಭೂಮಿಯನ್ನು ದುರಸ್ತಿ ಮಾಡಿ ರೈತರ ಭೂ ದಾಖಲಾತಿಗಳನ್ನು ಸಮರ್ಪಕಗೊಳಿಸಿ ಕೆಲಸ ನಿಗದಿತ ಅವಧಿಯಲ್ಲಿ ಮುಗಿಯುವಂತೆ ಖಾತರಿಗೊಳಿಸಲು ವಿಶೇಷ ತಹಶೀಲ್ದಾರ್ ಅವರ ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ಕಾಗೋಡು ತಿಮ್ಮಪ್ಪರವರ ಹೋರಾಟ ಮತ್ತು ಪರಿಶ್ರಮದಿಂದ ಐದು ಲಕ್ಷ ರೈತ ಕುಟುಂಬಗಳಿಗೆ ಜಮೀನು ಸಿಕ್ಕಿದೆ. ಗೋಮಾಳ ಸರ್ಕಾರಿ ಮತ್ತಿತರ ವಿವರಗಳಿರುವ ಭೂಮಿಯಲ್ಲಿ ಬೇಸಾಯ ಮಾಡುತ್ತಿರುವ ಎಲ್ಲ ರೈತರು ಈ ಅವಕಾಶವನ್ನು ಬಳಸಿಕೊಂಡು ಭೂಮಿ ಸಕ್ರಮ ಮಾಡಿಕೊಳ್ಳಲು ಮತ್ತೊಮ್ಮೆ ಅವಕಾಶ ಸಿಕ್ಕಿದೆ ಎಂದು ರೈತರಿಗೆ ತಿಳಿಸಿದರು.
ಹಾಗೂ ಇನ್ನು ಮುಂತಾದ ರೈತರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಈ ಕೂಡಲೇ ಮಧ್ಯ ಪ್ರವೇಶಿಸಿ ಸ್ಪಂದಿಸಬೇಕು ಇಲ್ಲದಿದ್ದರೆ ರಾಜ್ಯವ್ಯಾಪಿ ಉಗ್ರ ಹೋರಾಟವನ್ನು ನಡೆಸಲಾಗುವುದು ಎಂದು ಎಚ್ಚರಿಸಿದರು.
ಸಭೆಯಲ್ಲಿತಾಲ್ಲೂಕುಪ್ರ.ಕಾ.ಯಶವಂತ್,ನರಸಿಂಹೇಗೌಡ, ಆತ್ಮಾನಂದ, ರಾಮು,ಜನವಾದಿ ಮಹಿಳಾ ಸಂಘಟನೆಯ ಪುಪ್ಪ ಮತ್ತು ಪದಾಧಿಕಾರಿಗಳು ರೈತ ಮುಖಂಡರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಜಗಳೂರು | ಮ್ಯಾಸ ನಾಯಕ ಬುಡಕಟ್ಟು ಜನಾಂಗದ ಸಮಿತಿಯಿಂದ ದೇವರ ಎತ್ತುಗಳಿಗೆ ಮೇವು ಸಂಗ್ರಹಣೆ

ಸುದ್ದಿದಿನ, ಜಗಳೂರು : ಮ್ಯಾಸ ಬೇಡ/ಮ್ಯಾಸ ನಾಯಕ ಬುಡಕಟ್ಟು ಜನಾಂಗವು ರಾಜ್ಯದಲ್ಲಿ ವಿಶಿಷ್ಟವಾದ ಬುಡಕಟ್ಟು ಸಂಸ್ಕೃತಿಯನ್ನು ಹೊಂದಿದ ಸಮೂದಾಯವಾಗಿದೆ. ಆನಾಧಿಕಾಲದಿಂದಲೂ ಸಂರಕ್ಷಣೆ ಮಾಡಿಕೊಂಡು ಬಂದಿರುವ ದೇವರ ಎತ್ತುಗಳು ಇಂದು ಮೇವು ನೀರು ಇಲ್ಲದೆ ಸತ್ತು ಹೊಗುತ್ತಿವೆ. ದೇವರ ಎತ್ತಿನ ಕಿಲಾರಿ ಗಳು ದೇವರ ಎತ್ತುಗಳನ್ನು ಉಳಿಸಿಕೊಳ್ಳಲು ತುಂಬಾ ಕಷ್ಟಪಡುತ್ತಿದ್ದಾರೆ.
ಈ ಜನಾಂಗಕ್ಕೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳು ಸಿಗುತ್ತಿಲ್ಲ. ಕರ್ನಾಟಕದಲ್ಲಿ ಪರಿಶಿಷ್ಟ ಪಂಗಡದವರ ಅನುದಾನ ಸಾಕಷ್ಟು ದುರ್ಭಳಕೆಯಾಗುತ್ತಿದೆ. ಸುಮಾರು ವರ್ಷಗಳಿಂದ ದೇವರ ಎತ್ತುಗಳಿಗೆ ಮೇವು ನೀರಿನ ವ್ಯವಸ್ಥೆ ಮಾಡಲು ಕ್ರಮಕೈಗೊಳ್ಳಲು ಮನವಿ ಮಾಡಿದರು ಸಹ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ ಈಗಾಗಲೇ ಎಲ್ಲಾ ಗುಡಿಕಟ್ಟೆಗಳ ಸುಮಾರು ದೇವರ ಎತ್ತುಗಳು ಮೇವು ನೀರು ಇಲ್ಲದೆ ಸತ್ತು ಹೋಗಿವೆ.
ಈ ಬಗ್ಗೆ ಟಿವಿ ಮತ್ತು ಪತ್ರಿಕಾ ಮಾದ್ಯಮದಲ್ಲಿ ಸಕಾಷ್ಟು ಬಾರಿ ವರಿದಿಯಾಗಿದೆ. ಆದರೂ ಸಹ ಸರ್ಕಾರ ಮೇವು ನೀರಿನ ಸೌಲಭ್ಯವನ್ನು ಅನುಕೂಲ ಮಾಡದೆ ಬುಡಕಟ್ಟು ಜನರನ್ನು ಕಡೆಗಣಿಸಿದೆ. ಹಿಗಾದರೆ ಬುಡಕಟ್ಟು ಜನರು ಉಳಿಸಿಕೊಂಡು ಬಂದ ದೇವರ ಎತ್ತುಗಳನ್ನು ಕಳೆದುಕೊಳ್ಳಬೇಕಾಗುತ್ತದೆ. ಸಮಿತಿ ವತಿಯಿಂದ “ದೇವರ ಎತ್ತುಗಳಿಗೆ ಮೇವು ಸಂಗ್ರಹ “ ʼಒಂದು ಹೊರೆ ಹುಲ್ಲು ನೀಡಿ, ನಮ್ಮ ಪೂರ್ವಜರ ಪ್ರತೀಕವಾಗಿರುವ ದೇವರ ಎತ್ತುಗಳನ್ನು ಉಳಿಸಿಕೊಳ್ಳೂಣʼ ಎಂದು ಮ್ಯಾಸ ನಾಯಕ ಬುಡಕಟ್ಟು ಜನರು ಮತ್ತು ಮುಖ್ಯವಾಹಿನಿಯ ಎಲ್ಲಾ ಸಾರ್ವಜನಿಕರಿಂದ ಮೇವು ಸಂಗ್ರಹ ಮಾಡಲಾಗುತ್ತದೆ.
ಇದರ ಭಾಗವಾಗಿ ಇಂದು ಜಗಳೂರು ತಾಲ್ಲೂಕು ಮಾದಮುತ್ತೇನಹಳ್ಳಿ ಗ್ರಾಮದ ಕಾಮಗೇತಿ ಬೆಡಗಿನ ಶ್ರೀಮತಿ ಜಯಮ್ಮ ಮತ್ತು ಶ್ರೀ ತಿಮ್ಮಲಾಪುರದ ಪಾಲಯ್ಯ ಇವರ ಮಕ್ಕಳು ಒಂದು ಲೋಡ್ ರಾಗಿ ಹುಲ್ಲನ್ನು ಖರಿದಿಸಿ ದೇವರ ಎತ್ತುಗಳಿಗೆ ನೀಡಿರುತ್ತಾರೆ.
ಮ್ಯಾಸ ಮಂಡಲದ ಸಮಸ್ತ ನೆಂಟರು ಬಂಟರು ಹಾಗೂ ಸರ್ವ ಸಾರ್ವಜನಿಕರು ಈ ಒಂದು ಮೇವು ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿ ಪ್ರತಿಯೊಬ್ಬರು ತಮ್ಮ ತಮ್ಮ ಗ್ರಾಮದಲ್ಲಿ ಮೇವು ಸಂಗ್ರಹಿಸಿ ಮ್ಯಾಸ ಮಂಡಲದ ಎಲ್ಲಾ ಗುಡಿಕಟ್ಟೆಯ ದೇವರ ಎತ್ತುಗಳಿಗೆ ನೀಡಬೇಕೆಂದು ಕೋರಿಕೊಳ್ಳುತ್ತೇವೆ.
ಮೇವು ಸಂಗ್ರಹಿಸಿದವರು ನಮ್ಮ ಸಮಿತಿಗೆ ತಿಳಿಸಿದರೆ ಮೇವುನ್ನು ತೆಗೆದುಕೊಂಡು ಹೋಗಿ ದೇವರ ಎತ್ತುಗಳಿಗೆ ತಲುಪಿಸುತ್ತೇವೆ ಎಂದು ಈ ಮೂಲಕ ತಿಳಿಯಪಡಿಸುತ್ತೇವೆ. ಶ್ರೀಮತಿ ಜಯಮ್ಮ ಶ್ರೀ ಪಾಲಯ್ಯ ಕುಟುಂಬದವರು ಭಕ್ತಿ ಪೂರ್ವಕವಾಗಿ ಉರಿಮೆ ವಾಧ್ಯದೊಂದಿಗೆ ಪೂಜೆ ಸಲ್ಲಿಸಿ ದೇವರ ಎತ್ತುಗಳ ಉಳಿವಿಗಾಗಿ ಕೋರಿಕೊಂಡರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಮ್ಯಾಸ ಬೇಡ ಅಥವಾ ಮ್ಯಾಸ ನಾಯಕ ಬುಡಕಟ್ಟು ಜನರ ದೇವರ ಎತ್ತುಗಳ ಗೊಳು ಕೇಳಬೇಕೆಂದು ಮನವಿ ಮಾಡುತ್ತೇವೆ. ಮತ್ತು ಮಹರ್ಷಿ ವಾಲ್ಮೀಕಿ ಮ್ಯಾಸ ಬೇಡರ ಅಭಿವೃದ್ದಿ ನಿಗಮ ಸ್ಥಾಪನೆ ಮಾಡಿ ಪ್ರತ್ಯೇಕ ಅನುದಾನವನ್ನು ಮೀಸಲಿಡಬೇಕೆಂದು ಒತ್ತಾಯಿಸುತ್ತೇವೆ.
ಈ ಸಂದರ್ಭದಲ್ಲಿ ಮ್ಯಾಸ ನಾಯಕ ಬುಡಕಟ್ಟು ಜನಾಂಗದ ಸಮಿತಿಯ ಕಾರ್ಯದರ್ಶಿಯಾದ ದೊಡ್ಡಮನಿ ಪ್ರಸಾದ್, ಉಪಾಧ್ಯಕ್ಷರಾದ ಎಂ ಕೆ ಬೋಸಪ್ಪ, ಕೆ.ಬಿ.ಓಬಣ್ಣ, ಕವಲಹಳ್ಳಿ ಕಾಮಣ್ಣ, ಕಿಲಾರಿ ಬಡಯ್ಯ, ದಿಬ್ದಹಳ್ಳಿ ರಮೇಶ, ಪೂಜಾರ್ ನಾಗರಾಜ ಮತ್ತು ಇತರರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಂದ ಸಂಗೀತ ನೃತ್ಯ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2020-21ನೇ ಸಾಲಿಗೆ ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಗೆ ಗುರು ಶಿಷ್ಯ ಪರಂಪರೆ ಯೋಜನೆಯಡಿ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಅಕಾಡೆಮಿ ವ್ಯಾಪ್ತಿಗೆ ಒಳಪಡುವ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಸುಗಮ ಸಂಗೀತ, ನೃತ್ಯ, ಕಥಾಕೀರ್ತನ ಮತ್ತು ಗಮಕ ಕಲಾಪ್ರಕಾರಗಳಲ್ಲಿ ಕಲಿಯಲು ಆಸಕ್ತಿಯುಳ್ಳ ಅಭ್ಯಾಸ ಮಾಡುತ್ತಿರುವ/ಹೆಚ್ಚಿನ ಅಭ್ಯಾಸ ಮಾಡಲ್ಚಿಸುವ ವಿದ್ಯಾರ್ಥಿಗಳಿಗೆ 3 ತಿಂಗಳವರೆಗೆ ತರಬೇತಿ ನೀಡಲು ಅರ್ಜಿಯನ್ನು ಆಹ್ವಾನಿಸಿದೆ.
ಅಭ್ಯರ್ಥಿಗಳು 16 ರಿಂದ 26 ವರ್ಷದ ವಯೋಮಾನದವರಾಗಿರಬೇಕು. ಅರ್ಜಿಯನ್ನು ಅಕಾಡೆಮಿಯ ವೇಳೆಯಲ್ಲಿ ವೆಬ್ಸೈಟ್ https//karnatakasangeetanrityaacademy.com
ಮೂಲಕ ಪಡೆದು ಸಲ್ಲಿಸಬಹುದು. ಬೇರೆ ಬೇರೆ ಜಿಲ್ಲೆಯ ಅಭ್ಯರ್ಥಿಗಳು ಆಯಾ ಜಿಲ್ಲೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಉಚಿತವಾಗಿ ಪಡೆಯಬಹುದಾಗಿದ್ದು ಜ.30 ಅರ್ಜಿ ಸಲ್ಲಿಸಲಯ ಕಡೆಯ ದಿನವಾಗಿರುತ್ತದೆ.
ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ ರಸ್ತೆ ಬೆಂಗಳೂರು-560002 ಇಲ್ಲಿಗೆ ಸಲ್ಲಿಸಬೇಕೆಂದು ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಬನಶಂಕರಿ ವಿ ಅಂಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಉತ್ತಮ ಕೈಗಾರಿಕಾ ನೀತಿ ಜಾರಿ ; ರಾಜ್ಯದಲ್ಲಿ ಹೆಚ್ಚು ಉದ್ಯೋಗ ಸೃಷ್ಟಿ : ಬಿ.ಎಸ್.ಯಡಿಯೂರಪ್ಪ

ಸುದ್ದಿದಿನ,ಬಾಗಲಕೋಟೆ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಾತನಾಡಿ, ಕರ್ನಾಟಕ ಉದ್ಯಮ ಸ್ನೇಹಿ ರಾಜ್ಯವಾಗಿದ್ದು, ಉತ್ತಮ ಕೈಗಾರಿಕಾ ನೀತಿ ಜಾರಿ ಮಾಡುವ ಮೂಲಕ ದೊಡ್ಡ ದೊಡ್ಡ ಪ್ರಮಾಣದ ಉದ್ಯಮಗಳನ್ನು ರಾಜ್ಯಕ್ಕೆ ತಂದು ಉದ್ಯೋಗ ಸೃಷ್ಟಿ ಮಾಡಲಾಗುತ್ತಿದೆ.
ಬಾದಾಮಿ ತಾಲೂಕಿನ ಕೆರಕಲಮಟ್ಟಿ ಗ್ರಾಮ ಬಳಿಯ ಸಾಯಿಪ್ರಿಯ ಶುಗರ್ಸ್ ಲಿ. ಯೂನಿಟ್ ಆವರಣದಲ್ಲಿ ಎಂ.ಆರ್.ಎನ್. (ನಿರಾಣಿ) ಉದ್ಯಮ ಸಮೂಹ ಸಂಸ್ಥೆ ವತಿಯಿಂದ ಭಾನುವಾರದಂದು ಏರ್ಪಡಿಸಿದ ಸಮಾರಂಭದಲ್ಲಿ ನೂತನ ಕಾರ್ಖಾನೆ ಗಳ ಉದ್ಘಾಟನೆ, ನಿರಾಣಿ ಸಮೂಹ ದಿಂದ 75 ಸಾವಿರ ಟಿಸಿಡಿ ಕಬ್ಬು ನುರಿಸುವ, 260 ಮೆ.ವ್ಯಾ. ಸಹ ವಿದ್ಯುತ್, 26 ಲಕ್ಷ ಲೀ. ಇಥೆನಾಲ್ ಪ್ರತಿದಿನ ಬಯೋ ಸಿ.ಎನ್.ಜಿ. ಮತ್ತು ಸಿಒ2 ಉತ್ಪಾದನೆ ಗಳ ವಿಸ್ತರಣೆ ಯೋಜನೆಗಳಿಗೆ ಭೂಮಿಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ವರುಣ ದೇವರ ಕೃಪೆಯಿಂದ ಉತ್ತಮ ಮಳೆಯಾಗಿ ಹಳ್ಳ ಕೊಳ್ಳಗಳು ಭರ್ತಿಯಾಗಿವೆ. ಮುಂಬರುವ 2 ವರ್ಷ ಕಬ್ಬು ಬೆಳೆಗಾರರರಿಗೆ ನೀರಿನ ತೊಂದರೆ ಆಗಲಿಕ್ಕಿಲ್ಲ ಎಂದರು. ಮುಂಬರುವ ದಿನಗಳಲ್ಲಿ ರಾಜ್ಯದಾದ್ಯಂತ ರೈತರು ನೆಮ್ಮದಿಯ ಜೀವನ ನಡೆಸಲು ಶ್ರಮಿಸುವೆ. ಕೊರೊನಾ ಸಂದರ್ಭದಲ್ಲಿ ರಾಜ್ಯ ಸಾಕಷ್ಟು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿತ್ತು, ಆದರೂ ರಾಜ್ಯದ ಅಭಿವೃದ್ಧಿಗಾಗಿ ಶಕ್ತಿ ಮೀರಿ ಪ್ರಯತ್ನ ಮಾಡಿದ್ದೇವೆ ಎಂದರು.
ಮುರುಗೇಶ್ ನಿರಾಣಿಯವರು ಸಕ್ಕರೆ ಕಾರ್ಖಾನೆ ಆರಂಭಿಸಿ, 10 ಸಾವಿರಕ್ಕೂ ಅಧಿಕ ಜನರಿಗೆ ಉದ್ಯೋಗ ಸೃಷ್ಟಿ ಮಾಡಿದ್ದಾರೆ. ಕಬ್ಬಿನ ರಸದಿಂದ ಇಥೆನಾಲ್ ತಯಾರಿಸಿ ಪರಿಸರ ಸಂರಕ್ಷಣೆ ಮಾಡುತ್ತಿದ್ದಾರೆ. ದೇವರು ಅವರಿಗೆ ಇನ್ನಷ್ಟು ಉದ್ಯೋಗ ಸೃಷ್ಟಿಸುವ ಶಕ್ತಿ ನೀಡಲಿ.
ದೇಶಕ್ಕೆ ವಲ್ಲಬಾಯಿ ಪಟೇಲ್ ನಂತರ ಅಮಿತ ಶಾ ಅವರು ಉತ್ತಮ ಗೃಹ ಸಚಿವರಾಗಿ ಅನೇಕ ಕಾರ್ಯಗಳನ್ನು ಮಾಡುತ್ತಿದ್ದಾರೆ. ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಳಪಡಿಸಲಾಗುವುದು ಎಂದು ಅವರಿಗೆ ಈ ವೇದಿಕೆಯ ಮೂಲಕ ಭರವಸೆ ನೀಡುವೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಆಂದೋಲನ-ಈ ಜೀವ ಈ ಜೀವನ | ಅಂಗನವಾಡಿ ಕಾರ್ಯಕರ್ತೆಯ ಅಸಾಮಾನ್ಯ ಕರ್ತವ್ಯಪ್ರಜ್ಞೆ..!
-
ಲೈಫ್ ಸ್ಟೈಲ್6 days ago
ಏಳಿ ಎದ್ದೇಳಿ ಗುರಿಮುಟ್ಟುವ ತನಕ ನಿಲ್ಲದಿರಿ : ವಿವೇಕಾನಂದ
-
ದಿನದ ಸುದ್ದಿ5 days ago
“ನೀನು ಅಪ್ಪನಿಗೆ ಹುಟ್ಟಿದಿಯಾ ಅನ್ನೋದಕ್ಕೆ ಸಾಕ್ಷಿ ಏನು..?” : ಸಚಿವ ಈಶ್ವರಪ್ಪ
-
ಸಿನಿ ಸುದ್ದಿ6 days ago
ಬಾಂಬೆ ಹೀರೋಹಿನ್ ಗಳು ಕಡಿಮೆ ಸಂಭಾವನೆಗೆ ಕೆಲಸ ಮಾಡ್ತಾರೆ ಅಂದವರಿಗೆ ಹೀಗಂದ್ರು ನಟಿ ಕೃತ್ತಿಕಾ ರವೀಂದ್ರ..!
-
ದಿನದ ಸುದ್ದಿ5 days ago
ಸಚಿವ ಸಂಪುಟ ವಿಸ್ತರಣೆ : ಏಳು ಹೊಸ ಸಚಿವರ ಹೆಸರು ಫೈನಲ್ ಗೊಳಿಸಿದ ಯಡಿಯೂರಪ್ಪ
-
ದಿನದ ಸುದ್ದಿ5 days ago
ರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್ ಮಷಿನ್ಗಳು..!
-
ದಿನದ ಸುದ್ದಿ6 days ago
ಹೊಸ ಚರಿತ್ರೆ ಬರೆಯಲಿರುವ ಜನವರಿ-26
-
ದಿನದ ಸುದ್ದಿ4 days ago
ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು, ಸಂಜೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ್ರು ನಾಗೇಶ್..!