ದಿನದ ಸುದ್ದಿ
ಮದ್ದೂರು : ಅಕ್ರಮ ಮರಳುಗಾರಿಕೆ ನಿಲ್ಲಿಸುವಂತೆ ಒತ್ತಾಯಿಸಿ ವಾಟರ್ ಟ್ಯಾಂಕ್ ಹತ್ತಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ..!
ಸುದ್ದಿದಿನ, ಮದ್ದೂರು : ಶಿಂಷಾ ನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ನಿಲ್ಲಿಸುವಂತೆ ಒತ್ತಾಯಿಸಿ ಶಿವಪುರದ ಸೋಮಣ್ಣ ಎಂಬುವರು ಕುಡಿಯುವ ನೀರಿನ ಮೇಜರ್ ಟ್ಯಾಂಕ್ ಹತ್ತಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾರೆ.
ಮಂಡ್ಯ ಜಿಲ್ಲೆಯ ಉಪ ವಿಭಾಗಾಧಿಕಾರಿ ರಾಜೇಶ್ ಅವರು ಶಿಂಷಾನದಿ ಪಾತ್ರದಲ್ಲಿ ಅಕ್ರಮ ಮರಳುಗಾರಿಕೆ ನಿಲ್ಲಿಸಿ ಎಂದರೆ ಉಡಾಫೆಯಾಗಿ ಮಾತನಾಡುತ್ತಾರೆ ಎಂದು ನಿರ್ಧಾರ ತೆಗೆದುಕೊಂಡು ಮೇಲಕ್ಕೆ ಹತ್ತಿದ್ದಾರೆ. ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳಲಾಗುವುದಾಗಿ ಎಚ್ಚರಿಕೆ ನೀಡಿದ್ದಾನೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401