Connect with us

ಲೈಫ್ ಸ್ಟೈಲ್

ಮೇಡ್ ಇನ್ ಚೈನಾ

Published

on

ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ವಾತಾವರಣ ಉಂಟಾದಾಗ ಅಥವಾ ಭಾರತದಲ್ಲಿ ಭಯೋತ್ಪಾದಕರ ದಾಳಿ ನಡೆದಾಗ ಅಥವಾ ಅಜರ್ ಮಸೂದ್ ವಿಷಯ ಬಂದಾಗ ಅಥವಾ ಚೀನಾದ ಗಡಿಯಲ್ಲಿ ಘರ್ಷಣೆ ಉಂಟಾದಲೆಲ್ಲ ಎಲ್ಲರು ನಮ್ಮ ದೇಶದಲ್ಲಿ ಒಂದೇ ಮಾತುಗಳನ್ನ ನಾವು ಕೇಳಬಹುದು, ಅದು ಏನೆಂದರೆ ಚೀನಿ ವಸ್ತುಗಳನ್ನ ಬಹಿಷ್ಕರಿಸಿ ಯನ್ನುವುದು. ಆದರೆ ಒಂದು ಸರಿ ನಿಮ್ಮೆದೆ ಮೇಲೆ ಕೈಯಿಟ್ಟುಕೊಂಡು ಹೇಳಿ, ಚೀನಾದ ಎಲ್ಲ ವಸ್ತುಗಳನ್ನು ಬಹಿಷ್ಕರಿಸಿ ಬಿಡೋದಕ್ಕೆ ಸಾಧ್ಯವೇ?

ನಾವು ಬಳಕೆ ಮಾಡುವುದು ಎಲ್ಲವೂ ಮೇಡ್ ಇನ್ ಚೀನಾ ಇರುತ್ತವೆ. ನಮ್ಮ ಕಂಪ್ಯೂಟರ್ಗಳು ಮೇಡ್ ಇನ್ ಚೀನಾ, ನಮ್ಮ ಸೆಲ್ಫೋನ್ಗಳು ಮೇಡ್ ಇನ್ ಚೀನಾ ಕಡೆಗೆ ಸ್ವದೇಶಿ ಕಂಪನಿ ಅಂತ ಹೇಳಿಕೊಳ್ಳುವಷ್ಟು ಎಲೆಕ್ಟ್ರಾನಿಕ್ಸ್ ಕಂಪನಿಗಳು ತಮ್ಮ ವಸ್ತುಗಳನ್ನು ತಯಾರುಮಾಡುವುದು ಚಿನಾದಲ್ಲಿಯೇ. ಇನ್ನು ಅಮೇರಿಕಾದ ಐಫೋನ್ ಐಪ್ಯಾಡ್ ಎಲ್ಲವೂ ತಯಾರಗೋದು ಚಿನದಲ್ಲಿಯೇ! ಅವುಗಳ ಮೇಲೆ ಇರೋದು ಕೂಡ ಮೇಡ್ ಇನ್ ಚೀನಾ ಲೇಬಲ್.

ಚೀನಾ ಉತ್ಪಾದನಾ ಕ್ಷೇತ್ರದಲ್ಲಿ ಅತ್ಯಂತ ವ್ಯಾಪಿಸಿಕೊಂಡಿದಕ್ಕೆ ಕಾರಣವೇನು? ನಾವು ಬಳಸುವ ಆಹಾರ ಪದಾರ್ಥಗಳನ್ನು ಬಿಟ್ರೆ ಭಾರತದ ಹೋಟೆಲುಗಳಲ್ಲಿ ನಮ್ಮ ಫುಟ್ ಪಾತ್ ಗಳಲ್ಲಿ ನಾವು ತಿನ್ನುವ ಚಿನಿಸ್ ಪುಡ್ನ ಹೊರತುಪಡಿಸಿದರೆ ಉಳಿದೆಲ್ಲ ಎಲೆಕ್ಟ್ರೋನಿಕ್ ಐಟೆಮ್ಸ ಚೀನಾದಲ್ಲಿ ತಯಾರಾಗುವುದಕ್ಕೆ ಕಾರಣಗಳೇನು?

ಪಟಾಕಿಗಳಿಂದ ಹಿಡಿದು ರೋಬೋಗಳವರೆಗೆ ಕ್ಯಾಮರಾಗಳಿಂದ ಹಿಡಿದು ಜಗತ್ತಿನ ಅತಿ ದೊಡ್ಡ ಮಿಷನರಿಗಳ ವರೆಗೆ ಪ್ರತಿಯೊಂದು ಚೀನಾ ತಯಾರಿಸುವುದಕ್ಕೆ ಸಾಧ್ಯವಾಗ್ತಿರುವುದು ಹೇಗೆ? ನಾವು ಬಳಸುವ ಬಹುತೇಕ ವಸ್ತುಗಳ ಮೇಲೆ ಮೇಡ್ ಇನ್ ಚೀನಾ ಅಂತಯಾಕಿರುತ್ತದೆ? ಈ ಪ್ರಶ್ನೆಗೆ ಸಾಮಾನ್ಯವಾಗಿ ನಮಗೆ ಸಿಗುವ ಉತ್ತರ ಏನು ಅಂದ್ರೆ ಚೀನಾದಲ್ಲಿ ಲೇಬರ್ ಚೀಪು ಉತ್ಪಾದನಾ ವೆಚ್ಚ ಕಡಿಮೆ ಅನ್ನೋ ಕಾರಣಕ್ಕೆ ಎಲ್ಲ ಕಂಪನಿಗಳು ಎಲ್ಲವನ್ನು ಅಲ್ಲಿಯೇ ತಯಾರಿಸುತ್ತಾರೆ ಅನ್ನೋದು ನಿಜಾನ?

ಇವತ್ತು ಇಡೀ ಜಗತ್ತನ್ನು ಆವರಿಸುವುದಕ್ಕೆ ಇದೊಂದೇ ಕಾರಣವೇ? ಚೀನಾ ಅನ್ನುವುದು ಅಪ್ಪಟ ಕಮ್ಯುನಿಸ್ಟ್ ರಾಷ್ಟ್ರ, ಅಲ್ಲಿ ಲೇಬರ್ ಕಡಿಮೆ ವಿರುವುದು ಸಾಧ್ಯವಿಲ್ಲ, ಹಾಗಾದ್ರೆ ಭಾರತದಲ್ಲಿನ ಕಮ್ಯುನಿಸ್ಟ್ ಆಡಳಿತದ ರಾಜ್ಯಗಳಲ್ಲಿ ಕೂಡ ಹೀಗೆ ಇರಬೇಕಿತ್ತಲ್ಲವೇ?

ನಿಮಗೆ ನೆನಪಿರಲಿ ಈಗಿನ ಚೀನಾ, ಮಾವೋ ಪ್ರೆಸಿಡೆಂಟ್ ಆಗಿ ಇದ್ದ ಚಿನಗಿಂತ ಬಹಳ ವ್ಯತ್ಯಾಸವಿದೆ. ಮಾವೋ ಕಾಲದಲ್ಲಿ ಉತ್ಪಾದನೆ, ವ್ಯಾಪಾರ ಪ್ರತಿಯೊಂದನ್ನು ಸರ್ಕಾರವೇ ನೋಡಿಕೊಳ್ಳುತ್ತಿತ್ತು. ಚೀನಿ ಪ್ರಜೆಗಳಿಗೆ ತಮಗಾಗಿ ಏನನ್ನೂ ಮಾಡಿಕೊಳ್ಳುವ ಸ್ವಾತಂತ್ರ್ಯ ಇರಲಿಲ್ಲ ಆದರೆ 1976ರಲ್ಲಿ ಮಾವೋ ವಿಧಿವಶರಾದ ನಂತರ ಚೀನಾದ ಆಡಳಿತ ಹಾಗೂ ಆರ್ಥಿಕತೆಯಲ್ಲಿ ಸಾಕಷ್ಟು ಬದಲಾವಣೆಗಳಾದವು ಕೈಗಾರಿಕೀಕರಣಕ್ಕೆ ಆದ್ಯತೆ ಕೊಡಲಾಯಿತು.

ಚೀನಾದಲ್ಲಿ ಫ್ಯಾಕ್ಟರಿಗಳು ಶುರುವಾದವು. ಕಾಲಕ್ರಮೇಣ ಚೀನಾದಲ್ಲಿ ಜಾಗ ಇದ್ದಲೆಲ್ಲ ಫ್ಯಾಕ್ಟರಿಗಳು ತುಂಬಿಕೊಂಡವು. ಈಗ ಚೀನಾ ವಿಶ್ವ ಮಾರುಕಟ್ಟೆಯಲ್ಲಿ ಎರಡನೇ ಅತಿದೊಡ್ಡ ರಫ್ತು ದೇಶ. ಅಮೇರಿಕಾ ಕೂಡ ಒಂದೇ ವರ್ಷದಲ್ಲಿ 220 ಬಿಲಿಯನ್ ಡಾಲರ್ ಗಳಷ್ಟು ವಸ್ತುಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುತ್ತದೆ. ಪ್ರತಿವರ್ಷ ಭಾರತ ಮಾರುಕಟ್ಟೆಗೆ 57 ಬಿಲಿಯನ್ ಡಾಲರ್ಗಳಷ್ಟು ವಸ್ತುಗಳು ಚೀನಾದಿಂದ ಆಮದು ಮಾಡಿಕೊಳ್ಳುತ್ತದೆ.

ಚೀನಾ ಇವತ್ತು ನಾನಾ ರಾಷ್ಟ್ರಗಳ ಜನರ ಹಣ ಮತ್ತು ಉದ್ಯೋಗ ಕಸಿದುಕೊಂಡು ಒಂದು ದೊಡ್ಡ ದೈತ್ಯ ರಾಷ್ಟ್ರವಾಗಿ ಬೆಳೆಯುತ್ತಿದೆ. ಆದರೆ ಚೀನಾ ಅನ್ನೋ ದೇಶ ಹೇಗೆ ರಫ್ತು ಮಾರುಕಟ್ಟೆಯಲ್ಲಿ ದೈತ್ಯನಾಗಿ ಬೆಳೆಯೋದಕ್ಕೆ ಸಾಧ್ಯವಾಯಿತು, ಈ ಪ್ರಶ್ನೆಗೆ ಉತ್ತರ ಹುಡುಕಬೇಕು ಅಂದರೆ ಕಳೆದ 40 ವರ್ಷಗಳಲ್ಲಿ ಆದೇಶ ಗಳಿಸಿಕೊಂಡಿರುವ ಶಕ್ತಿ ಎಂಥದ್ದು ಅನ್ನೋದು ನಮಗೆ ಅರ್ಥ ಆಗಬೇಕು.

ಚೀನಾದಲ್ಲಿಲೇಬರ್ ಖರ್ಚು ಕಡಿಮೆ ಹಾಗಾಗಿ ಎಲ್ಲ ಕಂಪನಿಗಳು ತಮ್ಮ ವಸ್ತುಗಳನ್ನು ಚೀನಾದಲ್ಲಿ ತಯಾರಿಸುತ್ತಾರೆ ಎನ್ನುವುದಾದರೆ, ಕಡಿಮೆ ಬೆಲೆ ಕೆಲಸದವರು ಸಿಗುವ ಸಾಕಷ್ಟು ದೇಶಗಳು ಜಗತ್ತಲ್ಲಿ ಇಲ್ಲವೇ ಅಲ್ಲಿಗೆ ಯಾಕೆ ಕಂಪನಿಗಳು ಹೋಗ್ತಿಲ್ಲ? ಚೀನಾ ಕೈಗಾರಿಕರಣವನ್ನು ತೆರೆಯುತ್ತಿದಂತಲೆ ಅಲ್ಲಿ ಕೆಲಸಗಾರರ ಕ್ಷಮತೆಯನ್ನು ಹೆಚ್ಚಿಸುವ ಕೆಲಸಕ್ಕೆ ಕೈಹಾಕಿತು.
ಇವತ್ತು ಒಬ್ಬ ಅಮೆರಿಕನ್ ಒಂದು ವಾರದಲ್ಲಿ ಮಾಡಬಹುದಾದ ಕೆಲಸವನ್ನು ಚೀನಿಯರು ಎರಡು ದಿನಗಳಲ್ಲಿ ಮುಗಿಸುತ್ತಾರೆ.

ಉದಾಹರಣೆಗೆ, ಐಫೋನ್ ತನ್ನ ಸ್ಕ್ರೀನನ್ನು ಬದಲಾವಣೆ ಮಾಡಿ ಒಂದೇ ತಿಂಗಳಲ್ಲಿ ಪ್ರಾಡಕ್ಟನ್ನು ಮಾರುಕಟ್ಟೆಗೆ ಬರಬೇಕು ಅಂದುಕೊಂಡಾಗ ಚೀನಾದ ತಯಾರಿಕಾ ಕಂಪನಿ ಒಂದೇ ದನದಲ್ಲಿ 8000 ಕಾರ್ಮಿಕರನ್ನು ಒಗ್ಗೂಡಿಸಿ 10000ಐಫೋನು ಗಳಂತೆ ಸತತ 96 ಗಂಟೆಗಳ ಕಾಲ ಕೆಲಸ ಮಾಡುತ್ತಿತ್ತು. ಇದು ಚೀನಾದ ತಾಕತ್ತು. ಇಲ್ಲಿ ನುರಿತ ಕೆಲಸಗಾರರು ಸಿಗುತ್ತಾರೆ ಮತ್ತು ಅವರು ಮೈ ಬಗ್ಗಿಸಿ ದುಡಿತಾರೆ. ಇನ್ನು ಚೀನಾದಲ್ಲಿ ಎಲ್ಲ ರೀತಿಯ ಕಾರ್ಖಾನೆಗಳು ಇವೆ.

ಅಲ್ಲಿ ಕನೆಕ್ಟಿವಿಟಿ ಅನ್ನೋದು ಸಮಸ್ಯೆನೆಯಿಲ್ಲ. ಅಷ್ಟು ದೊಡ್ಡ ದೇಶದಲ್ಲಿ ಉತ್ತಮವಾದ ರೈಲು ಸಂಪರ್ಕ ಹಾಗೂ ಅತೀ ವೇಗದ ರೈಲುಗಳು ಇರುವುದರಿಂದ ದೇಶದ ನಾನಾ ಭಾಗಗಳನ್ನು ಏರ್ಪೋರ್ಟ್ ಮತ್ತು ಪೋರ್ಟ್ಗಳ ಜೊತೆಗೆ ಜೋಡಿಸೋದು ಸುಲಭವಾಗಿದೆ. ಸಾವಿರಾರು ಕಾರ್ಖಾನೆಗಳು ಸಮುದ್ರದ ತೀರದಲ್ಲಿಯೇ ಇರುವುದರಿಂದ ತಯಾರಿಸಿದ ವಸ್ತುಗಳನ್ನ ಆದಷ್ಟು ಬೇಗ ಅನ್ಯ ದೇಶಗಳಿಗೆ ರಫ್ತು ಮಾಡಲಾಗುತ್ತದೆ. ಅಲ್ಲಿ ವಿದ್ಯುತ್ ಸಮಸ್ಯೆ ಇಲ್ಲ. ಕಾರ್ಮಿಕರ ಮುಷ್ಕರ ಕೂಡ ಇಲ್ಲ. ಟ್ರಾನ್ಸ್ಪೋರ್ಟೇಷನ್ ಕೂಡ ಅತಿ ಸುಲಭವಾಗಿದೆ.

ಯಾವುದಕ್ಕೂ ಅಲ್ಲಿ ಕೊರತೆ ಇಲ್ಲ. ಇದೆರೆಲ್ಲರ ಜೊತೆ ಅಲ್ಲಿ ಪೊಲಿಟಿಕಲ್ ಸ್ಟೇಬಿಲಿಟಿ ಇದೆ. ಈ ಎಲ್ಲ ಕಾರಣಗಳಿಂದ ಚೀನಾ ಆರ್ಥಿಕವಾಗಿ ಗಟ್ಟಿಗೊಳ್ತಿರೋದೆ ಅಲ್ಲ ವಿಶ್ವ ಮಾರುಕಟ್ಟೆಗಳನ್ನ ಆಳುವುದಕ್ಕೆ ಆ ದೇಶಕ್ಕೆ ಸಾಧ್ಯವಾಗಿದೆ. ಹಾಗಂತ ಆ ಡ್ರ್ಯಾಗನ್ ದೇಶ ಮುಂದೇನು ಹೀಗೆ ಇರುತ್ತಾ, ಅದು ಆ ದೇವರಿಗೆ ಗೊತ್ತು. ಯಾಕೆ ಅಂದ್ರೆ ಅತಿಯಾದ ಕೈಗಾರಿಕರಣ ಚೀನಾದ ಪರಿಸರದ ಮೇಲೆ ಕೆಟ್ಟ ಪರಿಣಾಮ ಬೀರಿದೆ.

ಮುಂದೆ 10 ವರ್ಷದ ನಂತರ ನೀವು ಚೀನಾದಲ್ಲಿ ವಾಸಮಾಡ್ತೀನಿ ಅಂದ್ರು, ಅಲ್ಲಿ ನಿಮಿಷಕ್ಕೆ 5 ಸಿಗರೇಟ್ ಸೇದಿದಷ್ಟು ಹೊಗೆ ನಿಮ್ಮ ಶತೀರವನ್ನು ಸೇರಿಕೊಳ್ಳುತ್ತದೆ. ವಿಶ್ವದ ನಾನಾ ದೇಶಗಳ ಮೇಲಿನ ಮಾರುಕಟ್ಟೆ ಅವಲಂಬನೆ ಕೂಡ ಮುಂದೊಂದಿನ ಚೀನಾದ ಆರ್ಥಿಕತೆ ಮೇಲೆ ದುಷ್ಪರಿಣಾಮ ಬೀರಲಿದೆ. ಅದು ಪಾಕಿಸ್ತಾನ ಸೇರಿದಂತೆ ಹಲವು ಏಷ್ಯಾಯದ ದೇಶಗಳ ಮೇಲೆ ತನ್ನ ಬಂಡವಾಳ ಹೂಡುವ ಮೂಲಕ ತನ್ನ ಜನರಿಗೆ ಹೊಸ ಕೆಲಸ ಗಳನ್ನು ಕೊಡುವ ಪ್ರಯತ್ನದಲ್ಲಿದೆ.

ಒಂದು ಬಲಿಷ್ಠ ನಾಯಕತ್ವ ಮತ್ತು ಸ್ಥಿರ ಸರ್ಕಾರ ಹಾಗೂ ಅಲ್ಲಿನ ನಾಯಕರ ದೂರಲೋಚನೆ ಹಾಗೂ ಇಚ್ಚಾಶಕ್ತಿಗಳು ಇವತ್ತು ಚೀನಾದ ವಸ್ತುಗಳ ಮೇಲೆ ಇಡೀ ಜಗತ್ತು ಇವತ್ತು ಆಧಾರ ಪಡುವ ಹಾಗೆ ಮಾಡಿದೆ ಎಂದರೆ ಅದು ಖಂಡಿತ ಅತಿಶಯೋಕ್ತಿ ಅಲ್ಲ.

ನಮ್ಮ ಭಾರತದ ಮೇಕ್ ಇನ್ ಇಂಡಿಯಾ, ಮೇಡ್ ಇನ್ ಚೀನಾ ನ ಸಡ್ಡು ಹೊಡಿಯೋದಕ್ಕೆ ಆಗ್ಲಿ ಹತ್ತಿರ ಹೋಗಕ್ಕೆ ಕೂಡ ಅದು ಎಷ್ಟು ವರ್ಷಗಳು ಬೇಕಾಗಬಹುದೇನೋ

ಇದೇ ಜಗತ್ತಿನ ಬಹುತೇಕ ವಸ್ತುಗಳು ಮೇಡ್ ಇನ್ ಚೀನಾ ಇರುವ ಕಾರಣಗಳು. ಇದನ್ನು ನಿಮ್ಮವರೊಂದಿಗೆ ಶೇರ್ ಮಾಡಿ.

– ಮನನ್ ಜೈನ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂಕಣ

Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?

Published

on

indian birthwort, Aristolochia tagala

‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.

ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.

ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:

ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.

ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ

‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?

ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್‌ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.

‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?

ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.

ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.

ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

Continue Reading

ದಿನದ ಸುದ್ದಿ

ಗೃಹಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ

Published

on

ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.

ಗೃಹ ಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.

ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ3 days ago

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ....

ದಿನದ ಸುದ್ದಿ3 days ago

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ...

ದಿನದ ಸುದ್ದಿ4 days ago

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ. ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ...

ದಿನದ ಸುದ್ದಿ5 days ago

ಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ

ಸುದ್ದಿದಿನ,ದಾವಣಗೆರೆ:ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಉದ್ದಿಮೆ ಮಳಿಗೆಗಳು ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಭಾಷೆಯಲ್ಲಿ ನಾಮಫಲಕವನ್ನು ಅಳವಡಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ. ಒಂದು...

ದಿನದ ಸುದ್ದಿ5 days ago

ದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ದಾವಣಗೆರೆ ತಾಲ್ಲೂಕಿನ ಕಂದಗಲ್ಲು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಲಿಂಗೇಶ್ವರ ಹಿರಿಯ ಪ್ರಾಥಮಿಕ ಅನುದಾನಿತ ಶಾಲೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಡಳಿತಕ್ಕೆ ಒಳಪಟ್ಟಿದೆ. ನಿಯಮಬಾಹಿರವಾಗಿ ಸಾಮಾನ್ಯ...

ದಿನದ ಸುದ್ದಿ1 week ago

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ...

ದಿನದ ಸುದ್ದಿ2 weeks ago

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,...

ದಿನದ ಸುದ್ದಿ2 weeks ago

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ...

ದಿನದ ಸುದ್ದಿ2 weeks ago

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು...

ದಿನದ ಸುದ್ದಿ2 weeks ago

ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ರಾಜ್ಯ, ರಾಷ್ಟ್ರ ಮತ್ತು ಅಂತರ ರಾಷ್ಟ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಮಕ್ಕಳಿಗೆ ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ...

Trending