ರಾಜಕೀಯ
ಮಹದಾಯಿ ತೀರ್ಪು, ರೈತರಿಗೆ ಸಂದ ಜಯ: ಯಡಿಯೂರಪ್ಪ
ಸುದ್ದಿದಿನ ಡೆಸ್ಕ್: ಮಹಾದಾಯಿ ವಿಚಾರದಲ್ಲಿ ನ್ಯಾಯಾಧೀಕರಣವು ಇಂದು ಐತಿಹಾಸಿಕ ತೀರ್ಪು ನೀಡಿದ್ದು, ವೈಯಕ್ತಿಕವಾಗಿ ಸಮಾಧಾನ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ತೀರ್ಪು ಹೊರ ಬಿದ್ದಿರುವ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಇದು ರೈತರಿಗೆ ಸಿಕ್ಕ ಜಯ. ರೈತರ ವಿರುದ್ಧ ಇರುವ ಎಲ್ಲಾ ಪ್ರಕರಣಗಳನ್ನು ಸರ್ಕಾರ ಹಿಂಪಡೆಯಲಿ ಮತ್ತು ಯೋಜನೆ ಜಾರಿಗೆ ಸೂಕ್ತ ಕ್ರಮ ಕೈಗೊಳ್ಳಲಿ. ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ನಮ್ಮ ಅಭ್ಯಂತರವಿಲ್ಲ, ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಹೇಳಿದರು.