ರಾಜಕೀಯ
ಮಹಾರಾಷ್ಟ್ರದ ಹೀನಾಯ ಸೋಲಿನಲ್ಲಿ ಬಟ್ಟಬಯಲಾದ ಬಿಜೆಪಿ-ಆರೆಸ್ಸೆಸ್
- ಈ ಸ್ವಯಂ-ದೋಷಾರೋಪಣೆಯ ಪ್ರಾಜೆಕ್ಟಿನಲ್ಲಿ ಮೂವರು ಉನ್ನತ ಸಂವಿಧಾನಿಕ ವ್ಯಕ್ತಿಗಳು ಕಂಡುಬಂದರು- ರಾಜ್ಯಪಾಲರು, ಭಾರತದ ಪ್ರಧಾನ ಮಂತ್ರಿಗಳು ಮತ್ತು ಭಾರತದ ರಾಷ್ಟ್ರಪತಿಗಳು. ಇಂತಹ ಪ್ರಜಾಪ್ರಭುತ್ವ-ವಿರೋಧಿ ಯೋಜನೆಯನ್ನು ದಕ್ಕಿಸಿಕೊಳ್ಳಬಹುದು ಎಂಬ ಆತ್ಮವಿಶ್ವಾಸ ಬಿಜೆಪಿಗೆ ಬಂದದ್ದಾದರೂ ಹೇಗೆ? ಕಳೆದ ವರ್ಷ ಕರ್ನಾಟಕದಲ್ಲಿ ಆದ ಮುಖಭಂಗದಿಂದಲೂ ಬಿಜೆಪಿಯಾಗಲೀ, ಅದರ ಅಧ್ಯಕ್ಷ ಅಮಿತ್ ಷಾರಾಗಲೀ ಬುದ್ಧಿ ಕಲಿಯಲಿಲ್ಲ. ಇನ್ನಷ್ಟು ದೊಡ್ಡ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದು ಗೃಹಮಂತ್ರಿಯಾದದ್ದು ಈ ಚಾಣಕ್ಯ ಇನ್ನಷ್ಟು ಭಂಡತನದಿಂದ ಹೊಲಸು ಉಪಾಯಗಳನ್ನು ಮಾಡಲು ಧೈರ್ಯ ತುಂಬಿತಷ್ಟೇ. ಈ ಕೊಬ್ಬಿನ ಫಲಿತಾಂಶ ದೇಶದ ಮುಂದಿದೆ. ಮಹಾರಾಷ್ಟ್ರದ ಕುತಂತ್ರಗಳು ಬಿಜೆಪಿಯ ಮತ್ತು ಅದಕ್ಕೆ ನೇತೃತ್ವ ನೀಡಿರುವ ಆರೆಸ್ಸೆಸ್ ಮುಖಂಡರುಗಳ ಪ್ರಜಾಪ್ರಭುತ್ವ-ವಿರೋಧಿ ಮತ್ತು ಸರ್ವಾಧಿಕಾರಶಾಹೀ ಚಾರಿತ್ರ್ಯದ ಬಗ್ಗೆ ಭಾರತದ ಜನತೆಯ ಕಣ್ಣು ತೆರೆಸಬೇಕು.
–ಪ್ರಕಾಶ ಕಾರಟ್
ಫಡ್ನವೀಸ್ ಸರಕಾರದ ಮೂರು ದಿನದ ಕೌತುಕ ಈಗ ಮಾಯವಾಗಿರುವುದರಿಂದ ಈ ಇಡೀ ಹೊಲಸು ಪ್ರಕರಣದಿಂದ ಏನೇನೆಲ್ಲ ಪಾಟಗಳನ್ನು ಕಲಿಯಬಹುದು ಎಂದು ಹಿಂದಿರುಗಿ ನೋಡಬಹುದಾಗಿದೆ.
ನವಂಬರ್ 23ರ ರಾತ್ರಿ ಮತ್ತು 24ರ ಮುಂಜಾನೆ ನಡೆದದ್ದು ಸಂವಿಧಾನ ಮತ್ತು ಪ್ರಜಾಪ್ರಬುತ್ವ ನೀತಿಗಳ ಮೇಲೆ ಒಂದು ನಾಚಿಕೆಗೆಟ್ಟ ಪ್ರಹಾರ. ಮನಸ್ಸನ್ನು ಘಾಸಿಗೊಳಿಸುವ ಸಂಗತಿಯೆಂದರೆ ಈ ಸ್ವಯಂ-ದೋಷಾರೋಪಣೆಯ ಪ್ರಾಜೆಕ್ಟಿನಲ್ಲಿ ಮೂವರು ಉನ್ನತ ಸಂವಿಧಾನಿಕ ವ್ಯಕ್ತಿಗಳು ಕಂಡುಬಂದರು- ರಾಜ್ಯಪಾಲರು, ಭಾರತದ ಪ್ರಧಾನ ಮಂತ್ರಿಗಳು ಮತ್ತು ರಾಷ್ಟ್ರಪತಿಗಳು. ಇವರೆಲ್ಲರೂ ಸಂವಿಧಾನಿಕ ವಿಧಿವಿಧಾನಗಳನ್ನು ಅನುಸರಿಸುವ ಬದಲು ಬಿಜೆಪಿಯ ಆಣತಿಯಂತೆ ಮತ್ತು ಆಳುವ ಪಕ್ಷದ ಹಿತ ಸಾಧಿಸಲು ಕೆಲಸ ಮಾಡಿದರು.
ದೇವೇಂದ್ರ ಫಡ್ನವೀಸರಿಗೆ, ಎನ್ಸಿಪಿ ಶಾಸಕಾಂಗ ಪಕ್ಷದ ಮುಖಂಡರಾದ ಅಜಿತ್ ಪವಾರ್ ಕೊಟ್ಟ ಒಂದು ಬೋಗಸ್ ಪತ್ರದ ಆಧಾರದಲ್ಲಿ ಮುಖ್ಯಮಂತ್ರಿಯಾಗಿ ಪ್ರತಿಜ್ಞೆ ಸ್ವೀಕಾರ ಮಾಡಿಸಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ತನ್ನ ಪಕ್ಷದ ಆಶಯವನ್ನು ಈಡೇರಿಸಲು ತನ್ನ ಹುದ್ದೆಯನ್ನು ದುರುಪಯೋಗ ಪಡಿಸಿಕೊಂಡರು. ರಾಷ್ಟ್ರಪತಿ ಆಳ್ವಿಕೆಯನ್ನು ತೆಗೆಯಲು ಮಧ್ಯರಾತ್ರಿಯಲ್ಲಿ ಅವರು ಶಿಫಾರಸು ಮಾಡಿದ ರೀತಿ ಇದನ್ನು ಮತ್ತಷ್ಟು ಗಹನಗೊಳಿಸಿತು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಂಜಾನೆ 5.47ಕ್ಕೆ ಸಂಪುಟ ಮಂಜೂರಾತಿ ಇಲ್ಲದೆ ರಾಷ್ಟ್ರಪತಿ ಆಳ್ವಿಕೆಯನ್ನು ತೆಗೆಯಲು ಒಪ್ಪಿಗೆಯನ್ನು ಪಡೆದರು. ಇದಕ್ಕಾಗಿ ಅವರು ಭಾರತ ಸರಕಾರ (ವ್ಯವಹಾರ ನಡಾವಳಿ) ನಿಯಮಗಳಲ್ಲಿ, ತುರ್ತು ಸಂದರ್ಭಗಳಲ್ಲಿ ಬಳಸಲೆಂದು ಇರುವ ಅವಕಾಶವನ್ನು ಬಳಸಿಕೊಂಡರು. ಪ್ರಧಾನ ಮಂತ್ರಿಗಳು ಈ ಮಧ್ಯರಾತ್ರಿಯ ರಾಜಕೀಯ ಕ್ಷಿಪ್ರಕ್ರಾಂತಿಯನ್ನು ನಡೆಸಲು ಈ ನಿಯಮವನ್ನು ಬಳಸಲೂ ಹೇಸಲಿಲ್ಲ.
ಅಂತಿಮವಾಗಿ, ಭಾರತದ ರಾಷ್ಟ್ರಪತಿಗಳು ವಿಧಿ ವಿಧಾನಗಳನ್ನು ಸರಿಯಾಗಿ ಅನುಸರಿಸಲಾಗಿದೆಯೇ ಎಂದು ಸ್ವತಃ ಖಾತ್ರಿಪಡಿಸಿಕೊಳ್ಳದೆಯೇ ರಾಷ್ಟ್ರಪತಿ ಆಳ್ವಿಕೆಯನ್ನು ತೆಗೆಯುವ ಆದೇಶಕ್ಕೆ ಸಹಿ ಹಾಕಿದರು.
ಇವನ್ನೆಲ್ಲ ಮಾಡಿದ್ದು ಸ್ಪಷ್ಟ ಬಹುಮತ ಪಡೆದಿರುವ ಶಿವಸೇನಾ-ಎನ್ಸಿಪಿ-ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬರುವ ಅವಕಾಶವನ್ನು ಮೊದಲೇ ಮೊಟಕುಗೊಳಿಸುವುದಕ್ಕಾಗಿ.
ಆದರೆ ಇದೆಲ್ಲ ಸಂವಿಧಾನ ಮತ್ತು ಸಂಸದೀಯ ಪ್ರಜಾಪ್ರಭುತ್ವದ ಮೇಲೆ ಎಷ್ಟರ ಮಟ್ಟಿನ ಪ್ರಹಾರ ಮಾಡಲಾಗಿದೆ ಎಂಬುದನ್ನು ವಿವರಿಸುವುದಿಲ್ಲ. ಈ ಪ್ರಜಾಪ್ರಭುತ್ವ-ವಿರೋಧಿ ಯೋಜನೆಯನ್ನು ದಕ್ಕಿಸಿಕೊಳ್ಳಬಹುದು ಎಂಬ ಆತ್ಮವಿಶ್ವಾಸ ಬಿಜೆಪಿಗೆ ಬಂದದ್ದಾದರೂ ಹೇಗೆ? ಅದು ದುರಹಂಕಾರದ ಆತ್ಮವಿಶ್ವಾಸ. ಏಕೆಂದರೆ ತನ್ನ ಹಣಬಲವನ್ನು ಮುಂದಿಟ್ಟುಕೊಂಡು ಮತ್ತು ಭ್ರಷ್ಟಾಚಾರದ ಹೂಟವನ್ನು ಬಳಸಿ ಸಾಕಷ್ಟು ಸಂಖ್ಯೆಯಲ್ಲಿ ಪಕ್ಷಾಂತರ ಮಾಡಿಸಬಹುದೆಂಬ ಪೂರ್ಣ ವಿಶ್ವಾಸ ಅದಕ್ಕೆ ಇತ್ತು.
ಈ ಮಹಾರಾಷ್ಟ್ರ ಪ್ರಕರಣ ಬಿಜೆಪಿ ರಾಜಕೀಯ ವಿಧೇಯತೆಗಳನ್ನು ಚಿತಾಯಿಸಲು ಭಾರೀ ಕುಳಗಳಿಂದ ಪಡೆದ ಹಣವನ್ನು ಮತ್ತು ಪ್ರಭುತ್ವದ ಸಂಸ್ಥೆಗಳ ಮೂಲಕ ಭೀತಿ ಹುಟ್ಟಿಸುವುದನ್ನು ಎಷ್ಟರ ಮಟ್ಟಿಗೆ ಬಳಸುತ್ತದೆ ಎಂಬುದನ್ನು ಪ್ರಕಟಪಡಿಸಿದೆ. ಅಜಿತ್ ಪವಾರ್ ಪಕ್ಷಾಂತರ ಇದಕ್ಕೆ ಕಣ್ಣುಕುಕ್ಕುವಂತಹ ರುಜುವಾತು. ಉಪಮುಖ್ಯಮಂತ್ರಿಯಾಗಿ ಪ್ರತಿಜ್ಞಾ ಸ್ವೀಕಾರದ 48ಗಂಟೆಗಳ ನಂತರ ಅವರ ವಿರುದ್ಧ ಇದ್ದ ನೀರಾವರಿ ಹಗರಣದ ಒಂಭತ್ತು ಪ್ರಕರಣಗಳಲ್ಲಿ ಆರೋಪಗಳನ್ನು ಭ್ರಷ್ಟಾಚಾರ ನಿಗ್ರಹ ಕಚೇರಿ (ಎಸಿಬಿ) ಕೈಬಿಟ್ಟಿತು. ಈ ಹಿಂದೆ ಒಬ್ಬ ಪ್ರತಿಪಕ್ಷದ ಶಾಸಕನಾಗಿ ದೇವೇಂದ್ರ ಫಡ್ನವೀಸ್ ಈ 70,000 ರೂ.ಗಳ ಹಗರಣದಲ್ಲಿ ಪವಾರ್ ಕೇಂದ್ರವ್ಯಕ್ತಿ ಎಂದು ಆಪಾದಿಸಿದ್ದರು. ಬಿಜೆಪಿ ಪಕ್ಷಾಂತರ ಮಾಡುವ ಪ್ರತಿಯೊಬ್ಬ ಎನ್ಸಿಪಿ ಶಾಸಕರಿಗೆ ಅಪಾರ ಮೊತ್ತ ತೆರಲು ಸಿದ್ಧವಾಗಿತ್ತು ಎಂದು ವರದಿಯಾಗಿದೆ.
ಬಿಜೆಪಿ ಕಳೆದ ವರ್ಷ ಕರ್ನಾಟಕದಲ್ಲಿ ಇಂತಹುದೇ ಒಂದು ಹಿನ್ನಡೆಯನ್ನು ಅನುಭವಿಸಿತ್ತು. ರಾಜ್ಯಪಾಲರು ಯೆಡಿಯೂರಪ್ಪನವರನ್ನು ಮುಖ್ಯಮಂತ್ರಿಯಾಗಿ ಪ್ರತಿಜ್ಞೆ ಬೋಧಿಸುವಂತೆ ಅದು ಮಾಡಿತ್ತು. ಆದರೆ ಅವರು 24ಗಂಟೆಗಳೊಳಗೆ ಸದನದಲ್ಲಿ ಬಲಪರೀಕ್ಷೆ ನಡೆಸಬೇಕು ಎಂದು ಸುಪ್ರಿಂ ಕೋರ್ಟ್ ಆದೇಶ ನೀಡಿದಾಗ ರಾಜೀನಾಮೆ ನೀಡಬೇಕಾಯಿತು.
ಆದರೆ ಬಿಜೆಪಿಯಾಗಲೀ, ಅದರ ಅಧ್ಯಕ್ಷ ಅಮಿತ್ ಷಾರಾಗಲೀ ಇದರಿಂದ ಬುದ್ಧಿ ಕಲಿಯಲಿಲ್ಲ ಎಂಬುದು ಸ್ವಯಂವೇದ್ಯ. ಇನ್ನಷ್ಟು ದೊಡ್ಡ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದು ಗೃಹಮಂತ್ರಿಯಾದದ್ದು ಈ ಚಾಣಕ್ಯ ಇನ್ನಷ್ಟು ಭಂಡತನದಿಂದ ಹೊಲಸು ಉಪಾಯಗಳನ್ನು ಮಾಡಲು ಧೈರ್ಯ ತುಂಬಿತಷ್ಟೇ. ಆದರೆ ಈ ಕೊಬ್ಬಿನ ಫಲಿತಾಂಶ-ಒಂದು ಅವಮಾನಕಾರೀ ಪರಾಭವ.
ಮರುದಿನವೇ ಸದನದಲ್ಲಿ ಬಲಪರೀಕ್ಷೆ ನಡೆಯಬೇಕು ಎಂಬ ಸುಪ್ರಿಂ ಕೋರ್ಟಿನ ಆದೇಶ ಅಸಂವಿಧಾನಿಕ ಮತ್ತು ಅಪ್ರಾತಿನಿಧಿಕ ಸರಕಾರದ ಗುಳ್ಳೆಯನ್ನು ಚುಚ್ಚಿತು. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಹಿತದೃಷ್ಟಿಯಿಂದ ನ್ಯಾಯಾಲಯ ಈ ಇಡೀ ಪ್ರಕರಣವನ್ನು ಪರೀಕ್ಷಿಸಬೇಕು ಮತ್ತು ಇದಕ್ಕೆ ಹೊಣೆಗಾರರಾದ ಅಪರಾಧಿಗಳನ್ನು ಬೊಟ್ಟುಮಾಡಿ ತೋರಬೇಕು.
ಭಾರತದ ಜನತೆಗೆ ಮಹಾರಾಷ್ಟ್ರದ ಕುತಂತ್ರಗಳು ಬಿಜೆಪಿಯ ಮತ್ತು ಅದಕ್ಕೆ ನೇತೃತ್ವ ನೀಡಿರುವ ಆರೆಸ್ಸೆಸ್ ಮುಖಂಡರುಗಳ ಪ್ರಜಾಪ್ರಭುತ್ವ-ವಿರೋಧಿ ಮತ್ತು ಸರ್ವಾಧಿಕಾರಶಾಹೀ ಚಾರಿತ್ರ್ಯದ ನಿಜಸ್ವರೂಪ ಕಣ್ಣು ತೆರೆಸಬೇಕು.
ಉದ್ಧವ್ ಥಾಕ್ರೆ ನೇತೃತ್ವದ ಹೊಸ ಸರಕಾರ ಈ ಮೂರು ಪಕ್ಷಗಳ ಮೈತ್ರಿಕೂಟ ನಿರ್ಧರಿಸಿರುವ ಕನಿಷ್ಟ ಸಾಮಾನ್ಯ ಕಾರ್ಯಕ್ರಮದ ಪ್ರಕಾರ ಕೆಲಸ ಮಾಡಬೆಕು. ಮಹಾರಾಷ್ಟ್ರದ ಜನತೆ ಈ ಸರಕಾರದಿಂದ ಅದನ್ನು ನಿರೀಕ್ಷಿಸುತ್ತಾರೆ. ಈ ಸರಕಾರದ ಅಂಗಪಕ್ಷಗಳು ಸೈದ್ಧಾಂತಿಕವಾಗಿ ವಿರುದ್ಧವಾದ ಕಣ್ಣೋಟಗಳನ್ನು ಹೊಂದಿರುವುದರಿಂದ ಇದು ಮತ್ತಷ್ಟು ಮಹತ್ವದ್ದಾಗುತ್ತದೆ.
(ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
ಸುದ್ದಿದಿನ ಡೆಸ್ಕ್ : 2024ರ ಲೋಕಸಭಾ ಚುನಾವಣೆಯಲ್ಲಿ ಅಂದಾಜು ಒಂದು ಕೋಟಿ 80 ಲಕ್ಷ ಹೊಸ ಮತದಾರರು ತಮ್ಮ ಅಮೂಲ್ಯ ಹಕ್ಕನ್ನು ಮೊದಲ ಬಾರಿಗೆ ಚಲಾಯಿಸಲಿದ್ದಾರೆ. ಇವರೆಲ್ಲ 18-19ರ ಪ್ರಾಯದವರು.
ಮೊದಲ ಬಾರಿಗೆ ಮತ ಚಲಾಯಿಸುವ ಯುವಕರಿಗೆ ಅವರ ಈ ಪವಿತ್ರ ಕರ್ತವ್ಯದ ಮಹತ್ವವನ್ನು ಮನಗಾಣಿಸುವ ಸಲುವಾಗಿ ಸಾಮಾಜಿಕ ಜಾಲತಾಣಗಳಲ್ಲಿ ’ನಾನು ಖಂಡಿತ ಮತ ಚಲಾಯಿಸುತ್ತೇನೆ’ ಎನ್ನುವ ಪ್ರಚಾರ ಆಂದೋಲನಗಳು ನಡೆಯುತ್ತಿವೆ.
ಈ ಬಾರಿ ಚುನಾವಣೆಯಲ್ಲಿ ಭಾಗವಹಿಸುವ ಯುವ ಮತದಾರರ ಪೈಕಿ 20ರಿಂದ 29ವರ್ಷ ವಯೋಮಾನದ ಅಂದಾಜು 19 ಕೋಟಿ 74 ಲಕ್ಷ ಮತದಾರರು ಪಾಲ್ಗೊಳ್ಳಲಿದ್ದಾರೆ. 18 ವರ್ಷಕ್ಕೆ ಮತದಾನದ ಹಕ್ಕು ದೊರೆಯುವುದಾದರೂ ಈಗ 17 ವರ್ಷ ತುಂಬಿರುವ ಯುವಜನ ಸಮೂಹದಿಂದ 13.4ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ಮುಂಚಿತವಾಗಿಯೇ ಸ್ವೀಕರಿಸಲಾಗಿದೆ.
ಕೇಂದ್ರ ಚುನಾವಣಾ ಆಯೋಗ ಯುವ ಜನರಿಗೆ ಮತದಾನಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸಚಿನ್ ತೆಂಡುಲ್ಕರ್ ಮತ್ತು ರಾಜಕುಮಾರ್ ರಾವ್ ಅವರಂತಹ ರಾಷ್ಟ್ರೀಯ ದಿಗ್ಗಜರಿಂದ ಸಂದೇಶಗಳನ್ನು ಪ್ರಸಾರ ಮಾಡುತ್ತಿದೆ. ಸಾಮಾಜಿಕ ಮಾಧ್ಯಮ ಅಭಿಯಾನಗಳು ಮತ್ತು ರೇಡಿಯೋ ಮೂಲಕವೂ ಸಂದೇಶಗಳನ್ನು ಪ್ರಸಾರ ಮಾಡಲಾಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
ಸುದ್ದಿದಿನ,ಬೆಂಗಳೂರು : ದಕ್ಷಿಣ ಭಾರತದಲ್ಲಿ ಭಾರತೀಯ ಜನತಾಪಕ್ಷಕ್ಕೆ, ಕರ್ನಾಟಕ ಹೆಬ್ಬಾಗಿಲಿನಂತಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಬರಲಿರುವ ಮಹಾಚುನಾವಣೆಗೆ ಪಕ್ಷದ ಕೇಂದ್ರಬಿಂದುವಾಗಿ ಕಾರ್ಯನಿರ್ವಹಿಸಲಿರುವ ನೂತನ ಮಾಧ್ಯಮ ಕೇಂದ್ರದಲ್ಲಿ ಪಕ್ಷದ ರಾಜ್ಯ ನಾಯಕರು ಇಂದು ಬೆಳಿಗ್ಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ, ಜನಪರ ಆಡಳಿತ ನೀಡುವಲ್ಲಿ ಮತ್ತು ಬರಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆಪಾದಿಸಿದರು.
ಜನವಿರೋಧಿ ಕ್ರಮಗಳಿಂದಾಗಿ ರಾಜ್ಯದ ಜನತೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲುವ ಉದ್ದೇಶದಿಂದ ಕಾರ್ಯತಂತ್ರ ರೂಪಿಸಲು ತನ್ನ 200ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಕಾರ್ಯಾಗಾರ ನಡೆಸಲು ಬಿಜೆಪಿ ನಿರ್ಧರಿಸಿದೆ. ಈ ನಡುವೆ ಲೋಕಸಭಾ ಚುನಾವಣೆ ಕುರಿತಂತೆ ದೆಹಲಿಯಲ್ಲಿ ಇಂದು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಯ ಸಭೆ ನಡೆಯಲಿದೆ.
ಚುನಾವಣೆಗೆ ಪಕ್ಷದ ಕಾರ್ಯತಂತ್ರಗಳನ್ನು ಕುರಿತು ಸಮಾಲೋಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಹಾಗೂ ಚುನಾವಣಾ ಸಮಿತಿಯ ಸದಸ್ಯರು ಮತ್ತಿತರ ಪದಾಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
"ವಿಕಸಿತ ಭಾರತಕ್ಕಾಗಿ
ಮತ್ತೊಮ್ಮೆ ಮೋದಿ ಸರ್ಕಾರ"ಮಲ್ಲೇಶ್ವರಂನ ಜಿ.ಎಂ. ರಿಜಾಯ್ಸ್ ಹೋಟೆಲ್ನಲ್ಲಿ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದ ಉದ್ಘಾಟನೆ ನೆರವೇರಿಸಲಾಯಿತು. ರಾಜ್ಯದೆಲ್ಲೆಡೆ ಪ್ರಧಾನಿ ಮೋದಿ ಜೀ ಅವರ ಪರವಾದ ಅಲೆ ವ್ಯಾಪಕವಾಗಿದ್ದು 'ಮೋದಿ ಮತ್ತೊಮ್ಮೆ' ಎಂಬುದು ಜನಸಾಮಾನ್ಯರ ಸಂಕಲ್ಪವಾಗಿದೆ. ದೇಶದಲ್ಲಿ 400 ಹಾಗೂ… pic.twitter.com/gYbNmo1Poo
— Vijayendra Yediyurappa (Modi Ka Parivar) (@BYVijayendra) March 23, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು