ರಾಜಕೀಯ
ಮಹಾರಾಷ್ಟ್ರದ ಹೀನಾಯ ಸೋಲಿನಲ್ಲಿ ಬಟ್ಟಬಯಲಾದ ಬಿಜೆಪಿ-ಆರೆಸ್ಸೆಸ್
- ಈ ಸ್ವಯಂ-ದೋಷಾರೋಪಣೆಯ ಪ್ರಾಜೆಕ್ಟಿನಲ್ಲಿ ಮೂವರು ಉನ್ನತ ಸಂವಿಧಾನಿಕ ವ್ಯಕ್ತಿಗಳು ಕಂಡುಬಂದರು- ರಾಜ್ಯಪಾಲರು, ಭಾರತದ ಪ್ರಧಾನ ಮಂತ್ರಿಗಳು ಮತ್ತು ಭಾರತದ ರಾಷ್ಟ್ರಪತಿಗಳು. ಇಂತಹ ಪ್ರಜಾಪ್ರಭುತ್ವ-ವಿರೋಧಿ ಯೋಜನೆಯನ್ನು ದಕ್ಕಿಸಿಕೊಳ್ಳಬಹುದು ಎಂಬ ಆತ್ಮವಿಶ್ವಾಸ ಬಿಜೆಪಿಗೆ ಬಂದದ್ದಾದರೂ ಹೇಗೆ? ಕಳೆದ ವರ್ಷ ಕರ್ನಾಟಕದಲ್ಲಿ ಆದ ಮುಖಭಂಗದಿಂದಲೂ ಬಿಜೆಪಿಯಾಗಲೀ, ಅದರ ಅಧ್ಯಕ್ಷ ಅಮಿತ್ ಷಾರಾಗಲೀ ಬುದ್ಧಿ ಕಲಿಯಲಿಲ್ಲ. ಇನ್ನಷ್ಟು ದೊಡ್ಡ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದು ಗೃಹಮಂತ್ರಿಯಾದದ್ದು ಈ ಚಾಣಕ್ಯ ಇನ್ನಷ್ಟು ಭಂಡತನದಿಂದ ಹೊಲಸು ಉಪಾಯಗಳನ್ನು ಮಾಡಲು ಧೈರ್ಯ ತುಂಬಿತಷ್ಟೇ. ಈ ಕೊಬ್ಬಿನ ಫಲಿತಾಂಶ ದೇಶದ ಮುಂದಿದೆ. ಮಹಾರಾಷ್ಟ್ರದ ಕುತಂತ್ರಗಳು ಬಿಜೆಪಿಯ ಮತ್ತು ಅದಕ್ಕೆ ನೇತೃತ್ವ ನೀಡಿರುವ ಆರೆಸ್ಸೆಸ್ ಮುಖಂಡರುಗಳ ಪ್ರಜಾಪ್ರಭುತ್ವ-ವಿರೋಧಿ ಮತ್ತು ಸರ್ವಾಧಿಕಾರಶಾಹೀ ಚಾರಿತ್ರ್ಯದ ಬಗ್ಗೆ ಭಾರತದ ಜನತೆಯ ಕಣ್ಣು ತೆರೆಸಬೇಕು.
–ಪ್ರಕಾಶ ಕಾರಟ್
ಫಡ್ನವೀಸ್ ಸರಕಾರದ ಮೂರು ದಿನದ ಕೌತುಕ ಈಗ ಮಾಯವಾಗಿರುವುದರಿಂದ ಈ ಇಡೀ ಹೊಲಸು ಪ್ರಕರಣದಿಂದ ಏನೇನೆಲ್ಲ ಪಾಟಗಳನ್ನು ಕಲಿಯಬಹುದು ಎಂದು ಹಿಂದಿರುಗಿ ನೋಡಬಹುದಾಗಿದೆ.
ನವಂಬರ್ 23ರ ರಾತ್ರಿ ಮತ್ತು 24ರ ಮುಂಜಾನೆ ನಡೆದದ್ದು ಸಂವಿಧಾನ ಮತ್ತು ಪ್ರಜಾಪ್ರಬುತ್ವ ನೀತಿಗಳ ಮೇಲೆ ಒಂದು ನಾಚಿಕೆಗೆಟ್ಟ ಪ್ರಹಾರ. ಮನಸ್ಸನ್ನು ಘಾಸಿಗೊಳಿಸುವ ಸಂಗತಿಯೆಂದರೆ ಈ ಸ್ವಯಂ-ದೋಷಾರೋಪಣೆಯ ಪ್ರಾಜೆಕ್ಟಿನಲ್ಲಿ ಮೂವರು ಉನ್ನತ ಸಂವಿಧಾನಿಕ ವ್ಯಕ್ತಿಗಳು ಕಂಡುಬಂದರು- ರಾಜ್ಯಪಾಲರು, ಭಾರತದ ಪ್ರಧಾನ ಮಂತ್ರಿಗಳು ಮತ್ತು ರಾಷ್ಟ್ರಪತಿಗಳು. ಇವರೆಲ್ಲರೂ ಸಂವಿಧಾನಿಕ ವಿಧಿವಿಧಾನಗಳನ್ನು ಅನುಸರಿಸುವ ಬದಲು ಬಿಜೆಪಿಯ ಆಣತಿಯಂತೆ ಮತ್ತು ಆಳುವ ಪಕ್ಷದ ಹಿತ ಸಾಧಿಸಲು ಕೆಲಸ ಮಾಡಿದರು.
ದೇವೇಂದ್ರ ಫಡ್ನವೀಸರಿಗೆ, ಎನ್ಸಿಪಿ ಶಾಸಕಾಂಗ ಪಕ್ಷದ ಮುಖಂಡರಾದ ಅಜಿತ್ ಪವಾರ್ ಕೊಟ್ಟ ಒಂದು ಬೋಗಸ್ ಪತ್ರದ ಆಧಾರದಲ್ಲಿ ಮುಖ್ಯಮಂತ್ರಿಯಾಗಿ ಪ್ರತಿಜ್ಞೆ ಸ್ವೀಕಾರ ಮಾಡಿಸಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ತನ್ನ ಪಕ್ಷದ ಆಶಯವನ್ನು ಈಡೇರಿಸಲು ತನ್ನ ಹುದ್ದೆಯನ್ನು ದುರುಪಯೋಗ ಪಡಿಸಿಕೊಂಡರು. ರಾಷ್ಟ್ರಪತಿ ಆಳ್ವಿಕೆಯನ್ನು ತೆಗೆಯಲು ಮಧ್ಯರಾತ್ರಿಯಲ್ಲಿ ಅವರು ಶಿಫಾರಸು ಮಾಡಿದ ರೀತಿ ಇದನ್ನು ಮತ್ತಷ್ಟು ಗಹನಗೊಳಿಸಿತು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಂಜಾನೆ 5.47ಕ್ಕೆ ಸಂಪುಟ ಮಂಜೂರಾತಿ ಇಲ್ಲದೆ ರಾಷ್ಟ್ರಪತಿ ಆಳ್ವಿಕೆಯನ್ನು ತೆಗೆಯಲು ಒಪ್ಪಿಗೆಯನ್ನು ಪಡೆದರು. ಇದಕ್ಕಾಗಿ ಅವರು ಭಾರತ ಸರಕಾರ (ವ್ಯವಹಾರ ನಡಾವಳಿ) ನಿಯಮಗಳಲ್ಲಿ, ತುರ್ತು ಸಂದರ್ಭಗಳಲ್ಲಿ ಬಳಸಲೆಂದು ಇರುವ ಅವಕಾಶವನ್ನು ಬಳಸಿಕೊಂಡರು. ಪ್ರಧಾನ ಮಂತ್ರಿಗಳು ಈ ಮಧ್ಯರಾತ್ರಿಯ ರಾಜಕೀಯ ಕ್ಷಿಪ್ರಕ್ರಾಂತಿಯನ್ನು ನಡೆಸಲು ಈ ನಿಯಮವನ್ನು ಬಳಸಲೂ ಹೇಸಲಿಲ್ಲ.
ಅಂತಿಮವಾಗಿ, ಭಾರತದ ರಾಷ್ಟ್ರಪತಿಗಳು ವಿಧಿ ವಿಧಾನಗಳನ್ನು ಸರಿಯಾಗಿ ಅನುಸರಿಸಲಾಗಿದೆಯೇ ಎಂದು ಸ್ವತಃ ಖಾತ್ರಿಪಡಿಸಿಕೊಳ್ಳದೆಯೇ ರಾಷ್ಟ್ರಪತಿ ಆಳ್ವಿಕೆಯನ್ನು ತೆಗೆಯುವ ಆದೇಶಕ್ಕೆ ಸಹಿ ಹಾಕಿದರು.
ಇವನ್ನೆಲ್ಲ ಮಾಡಿದ್ದು ಸ್ಪಷ್ಟ ಬಹುಮತ ಪಡೆದಿರುವ ಶಿವಸೇನಾ-ಎನ್ಸಿಪಿ-ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬರುವ ಅವಕಾಶವನ್ನು ಮೊದಲೇ ಮೊಟಕುಗೊಳಿಸುವುದಕ್ಕಾಗಿ.
ಆದರೆ ಇದೆಲ್ಲ ಸಂವಿಧಾನ ಮತ್ತು ಸಂಸದೀಯ ಪ್ರಜಾಪ್ರಭುತ್ವದ ಮೇಲೆ ಎಷ್ಟರ ಮಟ್ಟಿನ ಪ್ರಹಾರ ಮಾಡಲಾಗಿದೆ ಎಂಬುದನ್ನು ವಿವರಿಸುವುದಿಲ್ಲ. ಈ ಪ್ರಜಾಪ್ರಭುತ್ವ-ವಿರೋಧಿ ಯೋಜನೆಯನ್ನು ದಕ್ಕಿಸಿಕೊಳ್ಳಬಹುದು ಎಂಬ ಆತ್ಮವಿಶ್ವಾಸ ಬಿಜೆಪಿಗೆ ಬಂದದ್ದಾದರೂ ಹೇಗೆ? ಅದು ದುರಹಂಕಾರದ ಆತ್ಮವಿಶ್ವಾಸ. ಏಕೆಂದರೆ ತನ್ನ ಹಣಬಲವನ್ನು ಮುಂದಿಟ್ಟುಕೊಂಡು ಮತ್ತು ಭ್ರಷ್ಟಾಚಾರದ ಹೂಟವನ್ನು ಬಳಸಿ ಸಾಕಷ್ಟು ಸಂಖ್ಯೆಯಲ್ಲಿ ಪಕ್ಷಾಂತರ ಮಾಡಿಸಬಹುದೆಂಬ ಪೂರ್ಣ ವಿಶ್ವಾಸ ಅದಕ್ಕೆ ಇತ್ತು.
ಈ ಮಹಾರಾಷ್ಟ್ರ ಪ್ರಕರಣ ಬಿಜೆಪಿ ರಾಜಕೀಯ ವಿಧೇಯತೆಗಳನ್ನು ಚಿತಾಯಿಸಲು ಭಾರೀ ಕುಳಗಳಿಂದ ಪಡೆದ ಹಣವನ್ನು ಮತ್ತು ಪ್ರಭುತ್ವದ ಸಂಸ್ಥೆಗಳ ಮೂಲಕ ಭೀತಿ ಹುಟ್ಟಿಸುವುದನ್ನು ಎಷ್ಟರ ಮಟ್ಟಿಗೆ ಬಳಸುತ್ತದೆ ಎಂಬುದನ್ನು ಪ್ರಕಟಪಡಿಸಿದೆ. ಅಜಿತ್ ಪವಾರ್ ಪಕ್ಷಾಂತರ ಇದಕ್ಕೆ ಕಣ್ಣುಕುಕ್ಕುವಂತಹ ರುಜುವಾತು. ಉಪಮುಖ್ಯಮಂತ್ರಿಯಾಗಿ ಪ್ರತಿಜ್ಞಾ ಸ್ವೀಕಾರದ 48ಗಂಟೆಗಳ ನಂತರ ಅವರ ವಿರುದ್ಧ ಇದ್ದ ನೀರಾವರಿ ಹಗರಣದ ಒಂಭತ್ತು ಪ್ರಕರಣಗಳಲ್ಲಿ ಆರೋಪಗಳನ್ನು ಭ್ರಷ್ಟಾಚಾರ ನಿಗ್ರಹ ಕಚೇರಿ (ಎಸಿಬಿ) ಕೈಬಿಟ್ಟಿತು. ಈ ಹಿಂದೆ ಒಬ್ಬ ಪ್ರತಿಪಕ್ಷದ ಶಾಸಕನಾಗಿ ದೇವೇಂದ್ರ ಫಡ್ನವೀಸ್ ಈ 70,000 ರೂ.ಗಳ ಹಗರಣದಲ್ಲಿ ಪವಾರ್ ಕೇಂದ್ರವ್ಯಕ್ತಿ ಎಂದು ಆಪಾದಿಸಿದ್ದರು. ಬಿಜೆಪಿ ಪಕ್ಷಾಂತರ ಮಾಡುವ ಪ್ರತಿಯೊಬ್ಬ ಎನ್ಸಿಪಿ ಶಾಸಕರಿಗೆ ಅಪಾರ ಮೊತ್ತ ತೆರಲು ಸಿದ್ಧವಾಗಿತ್ತು ಎಂದು ವರದಿಯಾಗಿದೆ.
ಬಿಜೆಪಿ ಕಳೆದ ವರ್ಷ ಕರ್ನಾಟಕದಲ್ಲಿ ಇಂತಹುದೇ ಒಂದು ಹಿನ್ನಡೆಯನ್ನು ಅನುಭವಿಸಿತ್ತು. ರಾಜ್ಯಪಾಲರು ಯೆಡಿಯೂರಪ್ಪನವರನ್ನು ಮುಖ್ಯಮಂತ್ರಿಯಾಗಿ ಪ್ರತಿಜ್ಞೆ ಬೋಧಿಸುವಂತೆ ಅದು ಮಾಡಿತ್ತು. ಆದರೆ ಅವರು 24ಗಂಟೆಗಳೊಳಗೆ ಸದನದಲ್ಲಿ ಬಲಪರೀಕ್ಷೆ ನಡೆಸಬೇಕು ಎಂದು ಸುಪ್ರಿಂ ಕೋರ್ಟ್ ಆದೇಶ ನೀಡಿದಾಗ ರಾಜೀನಾಮೆ ನೀಡಬೇಕಾಯಿತು.
ಆದರೆ ಬಿಜೆಪಿಯಾಗಲೀ, ಅದರ ಅಧ್ಯಕ್ಷ ಅಮಿತ್ ಷಾರಾಗಲೀ ಇದರಿಂದ ಬುದ್ಧಿ ಕಲಿಯಲಿಲ್ಲ ಎಂಬುದು ಸ್ವಯಂವೇದ್ಯ. ಇನ್ನಷ್ಟು ದೊಡ್ಡ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದು ಗೃಹಮಂತ್ರಿಯಾದದ್ದು ಈ ಚಾಣಕ್ಯ ಇನ್ನಷ್ಟು ಭಂಡತನದಿಂದ ಹೊಲಸು ಉಪಾಯಗಳನ್ನು ಮಾಡಲು ಧೈರ್ಯ ತುಂಬಿತಷ್ಟೇ. ಆದರೆ ಈ ಕೊಬ್ಬಿನ ಫಲಿತಾಂಶ-ಒಂದು ಅವಮಾನಕಾರೀ ಪರಾಭವ.
ಮರುದಿನವೇ ಸದನದಲ್ಲಿ ಬಲಪರೀಕ್ಷೆ ನಡೆಯಬೇಕು ಎಂಬ ಸುಪ್ರಿಂ ಕೋರ್ಟಿನ ಆದೇಶ ಅಸಂವಿಧಾನಿಕ ಮತ್ತು ಅಪ್ರಾತಿನಿಧಿಕ ಸರಕಾರದ ಗುಳ್ಳೆಯನ್ನು ಚುಚ್ಚಿತು. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಹಿತದೃಷ್ಟಿಯಿಂದ ನ್ಯಾಯಾಲಯ ಈ ಇಡೀ ಪ್ರಕರಣವನ್ನು ಪರೀಕ್ಷಿಸಬೇಕು ಮತ್ತು ಇದಕ್ಕೆ ಹೊಣೆಗಾರರಾದ ಅಪರಾಧಿಗಳನ್ನು ಬೊಟ್ಟುಮಾಡಿ ತೋರಬೇಕು.
ಭಾರತದ ಜನತೆಗೆ ಮಹಾರಾಷ್ಟ್ರದ ಕುತಂತ್ರಗಳು ಬಿಜೆಪಿಯ ಮತ್ತು ಅದಕ್ಕೆ ನೇತೃತ್ವ ನೀಡಿರುವ ಆರೆಸ್ಸೆಸ್ ಮುಖಂಡರುಗಳ ಪ್ರಜಾಪ್ರಭುತ್ವ-ವಿರೋಧಿ ಮತ್ತು ಸರ್ವಾಧಿಕಾರಶಾಹೀ ಚಾರಿತ್ರ್ಯದ ನಿಜಸ್ವರೂಪ ಕಣ್ಣು ತೆರೆಸಬೇಕು.
ಉದ್ಧವ್ ಥಾಕ್ರೆ ನೇತೃತ್ವದ ಹೊಸ ಸರಕಾರ ಈ ಮೂರು ಪಕ್ಷಗಳ ಮೈತ್ರಿಕೂಟ ನಿರ್ಧರಿಸಿರುವ ಕನಿಷ್ಟ ಸಾಮಾನ್ಯ ಕಾರ್ಯಕ್ರಮದ ಪ್ರಕಾರ ಕೆಲಸ ಮಾಡಬೆಕು. ಮಹಾರಾಷ್ಟ್ರದ ಜನತೆ ಈ ಸರಕಾರದಿಂದ ಅದನ್ನು ನಿರೀಕ್ಷಿಸುತ್ತಾರೆ. ಈ ಸರಕಾರದ ಅಂಗಪಕ್ಷಗಳು ಸೈದ್ಧಾಂತಿಕವಾಗಿ ವಿರುದ್ಧವಾದ ಕಣ್ಣೋಟಗಳನ್ನು ಹೊಂದಿರುವುದರಿಂದ ಇದು ಮತ್ತಷ್ಟು ಮಹತ್ವದ್ದಾಗುತ್ತದೆ.
(ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಣಮಿಸಿದೆ. ಹಲವು ವರ್ಷಗಳಿಂದ ಪಕ್ಷದ ಸಂಘಟನೆಗೆ ಸಲ್ಲಿಸಿರುವ ಸೇವೆ, ಕ್ಷೇತ್ರದ ಅಭಿವೃದ್ಧಿಗೆ ನೀಡಿರುವ ಆದ್ಯತೆ ಹಾಗೂ ಜನಸಾಮಾನ್ಯರೊಂದಿಗೆ ಹೊಂದಿರುವ ನಿಕಟ ಸಂಪರ್ಕವನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸಚಿವರಾಗಿ ಆಯ್ಕೆಯಾದ ಸುದ್ದಿ ಪ್ರಕಟವಾಗುತ್ತಿದ್ದಂತೆಯೇ ಮಾಯಕೊಂಡ ಕ್ಷೇತ್ರ ಸೇರಿದಂತೆ ದಾವಣಗೆರೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭ್ರಮ ಮನೆಮಾಡಿತು. ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು. ಬಸವಂತಪ್ಪ ಅವರ ನಿವಾಸದ ಎದುರು ಬೆಳಗ್ಗಿನಿಂದಲೇ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಜಮಾಯಿಸಿ ಅಭಿನಂದನೆ ಸಲ್ಲಿಸಿದರು. ಮಹಿಳೆಯರು ಆರತಿ ಬೆಳಗಿ ಸ್ವಾಗತ ಕೋರಿದರೆ, ಯುವಕರು ಘೋಷಣೆಗಳನ್ನು ಕೂಗಿ ಸಂಭ್ರಮಾಚರಣೆ ನಡೆಸಿದರು.
ಕೆ.ಎಸ್. ಬಸವಂತಪ್ಪ ಅವರು ಹಲವು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದು, ರೈತರ ಸಮಸ್ಯೆಗಳು, ಕುಡಿಯುವ ನೀರಿನ ಯೋಜನೆಗಳು, ಗ್ರಾಮೀಣ ರಸ್ತೆ ಅಭಿವೃದ್ಧಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ವಿಶೇಷ ಆದ್ಯತೆ ನೀಡುವ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿರುವ ಕಾರಣದಿಂದಲೇ ಅವರಿಗೆ ಸಚಿವ ಸ್ಥಾನ ದೊರೆತಿದೆ ಎಂಬ ಅಭಿಪ್ರಾಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಮಾಯಕೊಂಡ ಕ್ಷೇತ್ರವು ಕೃಷಿ ಪ್ರಧಾನ ಪ್ರದೇಶವಾಗಿದ್ದು, ಇಲ್ಲಿ ನೀರಾವರಿ, ರಸ್ತೆ, ಶಿಕ್ಷಣ, ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಯಂತಹ ಹಲವು ಸವಾಲುಗಳಿವೆ. ಸಚಿವ ಸ್ಥಾನ ದೊರೆತಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ವೇಗ ಸಿಗಲಿದೆ ಎಂಬ ನಿರೀಕ್ಷೆ ಜನರಲ್ಲಿ ಮೂಡಿದೆ. ವಿಶೇಷವಾಗಿ ರೈತರು, ಯುವಕರು ಹಾಗೂ ಮಹಿಳಾ ಸಂಘಟನೆಗಳು ಹೊಸ ಸಚಿವರಿಂದ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ನಿರೀಕ್ಷಿಸುತ್ತಿವೆ.
ಸಚಿವ ಸ್ಥಾನ ಘೋಷಣೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆ.ಎಸ್. ಬಸವಂತಪ್ಪ ಅವರು, “ಈ ಜವಾಬ್ದಾರಿ ನನಗೆ ದೊರೆತಿರುವುದು ವೈಯಕ್ತಿಕ ಗೌರವ ಮಾತ್ರವಲ್ಲ, ಮಾಯಕೊಂಡ ಕ್ಷೇತ್ರದ ಪ್ರತಿಯೊಬ್ಬ ಮತದಾರನಿಗೂ ಸಂದ ಗೌರವವಾಗಿದೆ. ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಜನರ ನಿರೀಕ್ಷೆಗಳನ್ನು ಈಡೇರಿಸುವುದು ನನ್ನ ಮೊದಲ ಆದ್ಯತೆಯಾಗಿರುತ್ತದೆ” ಎಂದು ಹೇಳಿದರು.
ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಜೊತೆಗೆ, ದಾವಣಗೆರೆ ಜಿಲ್ಲೆಗೆ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ತರಲು ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದರು. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ಶಾಲೆಗಳು ಮತ್ತು ಆಸ್ಪತ್ರೆಗಳ ಸೌಲಭ್ಯಗಳ ಸುಧಾರಣೆ, ಯುವಕರಿಗೆ ಉದ್ಯೋಗಾವಕಾಶಗಳ ಸೃಷ್ಟಿ ಹಾಗೂ ಮಹಿಳಾ ಸಬಲೀಕರಣ ಕಾರ್ಯಕ್ರಮಗಳಿಗೆ ವಿಶೇಷ ಗಮನ ಹರಿಸಲಾಗುವುದು ಎಂದು ತಿಳಿಸಿದರು.
ಪಕ್ಷದ ಜಿಲ್ಲಾ ಮುಖಂಡರು ಮಾತನಾಡಿ, ಬಸವಂತಪ್ಪ ಅವರ ಸಚಿವ ಸ್ಥಾನದಿಂದ ಜಿಲ್ಲೆಗೆ ಹೆಚ್ಚಿನ ಅನುದಾನ ಮತ್ತು ಅಭಿವೃದ್ಧಿ ಯೋಜನೆಗಳು ಹರಿದು ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಆಡಳಿತಾತ್ಮಕ ಮಟ್ಟದಲ್ಲಿ ಜಿಲ್ಲೆಯ ವಿವಿಧ ಯೋಜನೆಗಳಿಗೆ ವೇಗ ಸಿಗಲಿದ್ದು, ಬಾಕಿ ಉಳಿದಿರುವ ಹಲವು ಕಾಮಗಾರಿಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.
ವಿವಿಧ ಸಂಘಟನೆಗಳ ಪ್ರತಿನಿಧಿಗಳು ಸಹ ಸಚಿವರಿಗೆ ಅಭಿನಂದನೆ ಸಲ್ಲಿಸಿ, ಜಿಲ್ಲೆಯ ಬಹುಕಾಲದ ಬೇಡಿಕೆಗಳಾದ ನೀರಾವರಿ ಯೋಜನೆಗಳ ವಿಸ್ತರಣೆ, ಕೈಗಾರಿಕಾ ಹೂಡಿಕೆ, ಸರ್ಕಾರಿ ಆಸ್ಪತ್ರೆಗಳ ಉನ್ನತೀಕರಣ, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಗ್ರಾಮೀಣ ರಸ್ತೆ ಸುಧಾರಣೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು.
ಸಾಮಾಜಿಕ ಜಾಲತಾಣಗಳಲ್ಲಿಯೂ ಬಸವಂತಪ್ಪ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿತು. ಸಾರ್ವಜನಿಕರು, ರಾಜಕೀಯ ಮುಖಂಡರು, ವಿವಿಧ ಸಂಘಟನೆಗಳು ಹಾಗೂ ಅಭಿಮಾನಿಗಳು ಶುಭಾಶಯಗಳನ್ನು ತಿಳಿಸಿ, ಸಚಿವರ ಹೊಸ ಜವಾಬ್ದಾರಿ ಯಶಸ್ವಿಯಾಗಲಿ ಎಂದು ಹಾರೈಸಿದರು.
ರಾಜಕೀಯ ವಿಶ್ಲೇಷಕರ ಅಭಿಪ್ರಾಯದಂತೆ, ರಾಜ್ಯ ಸಚಿವ ಸಂಪುಟದಲ್ಲಿ ಮಾಯಕೊಂಡ ಕ್ಷೇತ್ರಕ್ಕೆ ದೊರೆತಿರುವ ಈ ಪ್ರತಿನಿಧಿತ್ವವು ದಾವಣಗೆರೆ ಜಿಲ್ಲೆಯ ರಾಜಕೀಯ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ. ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ಜೊತೆಗೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಸಚಿವರ ಪಾತ್ರ ಮಹತ್ವದ್ದಾಗಿರಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮಾಯಕೊಂಡ ಕ್ಷೇತ್ರದ ಜನರು ಸಚಿವ ಸ್ಥಾನವನ್ನು ಕೇವಲ ರಾಜಕೀಯ ಸಾಧನೆಯಾಗಿ ನೋಡದೇ, ಅಭಿವೃದ್ಧಿಯ ಹೊಸ ಅಧ್ಯಾಯದ ಆರಂಭವಾಗಿ ಪರಿಗಣಿಸುತ್ತಿದ್ದಾರೆ. ಕುಡಿಯುವ ನೀರು, ರಸ್ತೆ, ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಕೈಗಾರಿಕಾ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆಗಳು ಆಗಲಿವೆ ಎಂಬ ಆಶಾಭಾವನೆ ವ್ಯಕ್ತವಾಗಿದೆ.
ಕೆ.ಎಸ್. ಬಸವಂತಪ್ಪ ಅವರ ಸಚಿವ ಸ್ಥಾನವು ಮಾಯಕೊಂಡ ಕ್ಷೇತ್ರ ಹಾಗೂ ದಾವಣಗೆರೆ ಜಿಲ್ಲೆಗೆ ಹೊಸ ಅವಕಾಶಗಳನ್ನು ತೆರೆದಿದೆ. ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಸರ್ಕಾರ ಮತ್ತು ಜನರ ನಡುವೆ ಪರಿಣಾಮಕಾರಿ ಸೇತುವೆಯಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ಎಲ್ಲ ವಲಯಗಳಲ್ಲೂ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಅವರ ಆಡಳಿತಾತ್ಮಕ ನಿರ್ಧಾರಗಳು ಹಾಗೂ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಜಿಲ್ಲೆಯ ಭವಿಷ್ಯದ ದಿಕ್ಕನ್ನು ನಿರ್ಧರಿಸಲಿವೆ ಎಂಬ ಅಭಿಪ್ರಾಯ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.
ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.
ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.
ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;
1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.
ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.
ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ತನಿಖಾ ವರದಿನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷö್ಯ ತೋರಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇಲ್ಲಿನ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿನ ಬುಡಕಟ್ಟು ಸಮುದಾಯಗಳ ಪ್ರಗತಿಗೆ ಸಂಬAಧಿಸಿದAತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಸಲುವಾಗಿ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರೂ. 695 ಲಕ್ಷ ರೂಪಾಯಿಗಳನ್ನು ಸರ್ಕಾರ ಬಿಡುಗಡೆ ಮಾಡಿರುತ್ತದೆ. ಸದರಿ ಅನುದಾನದ ಖರ್ಚು-ವೆಚ್ಚದಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಅಕ್ರಮಗಳು ನಡೆದಿರುವ ಅಧಿಕೃತ ದಾಖಲೆಗಳನ್ನು ಲಗತ್ತಿಸಿ ಇಲಾಖಾ ತನಿಖೆ ನಡೆಸುವಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರಿಗೆ ದಿನಾಂಕ: 27-04-2026 ರಂದು ದೂರು ನೀಡಲಾಗಿತ್ತು.
ಆದರೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಸಾರ್ವಜನಿಕ ಹಿತಾಸಕ್ತಿ ಕೇಂದ್ರಿತ ದೂರು ಅರ್ಜಿಗೆ ಸಂಬಂಧಿಸಿದಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರು ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡಿರುವುದಿಲ್ಲ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್
-
ದಿನದ ಸುದ್ದಿ3 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ದಿನದ ಸುದ್ದಿ20 hours agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ

