ರಾಜಕೀಯ
ಮಹಾರಾಷ್ಟ್ರದ ಹೀನಾಯ ಸೋಲಿನಲ್ಲಿ ಬಟ್ಟಬಯಲಾದ ಬಿಜೆಪಿ-ಆರೆಸ್ಸೆಸ್
- ಈ ಸ್ವಯಂ-ದೋಷಾರೋಪಣೆಯ ಪ್ರಾಜೆಕ್ಟಿನಲ್ಲಿ ಮೂವರು ಉನ್ನತ ಸಂವಿಧಾನಿಕ ವ್ಯಕ್ತಿಗಳು ಕಂಡುಬಂದರು- ರಾಜ್ಯಪಾಲರು, ಭಾರತದ ಪ್ರಧಾನ ಮಂತ್ರಿಗಳು ಮತ್ತು ಭಾರತದ ರಾಷ್ಟ್ರಪತಿಗಳು. ಇಂತಹ ಪ್ರಜಾಪ್ರಭುತ್ವ-ವಿರೋಧಿ ಯೋಜನೆಯನ್ನು ದಕ್ಕಿಸಿಕೊಳ್ಳಬಹುದು ಎಂಬ ಆತ್ಮವಿಶ್ವಾಸ ಬಿಜೆಪಿಗೆ ಬಂದದ್ದಾದರೂ ಹೇಗೆ? ಕಳೆದ ವರ್ಷ ಕರ್ನಾಟಕದಲ್ಲಿ ಆದ ಮುಖಭಂಗದಿಂದಲೂ ಬಿಜೆಪಿಯಾಗಲೀ, ಅದರ ಅಧ್ಯಕ್ಷ ಅಮಿತ್ ಷಾರಾಗಲೀ ಬುದ್ಧಿ ಕಲಿಯಲಿಲ್ಲ. ಇನ್ನಷ್ಟು ದೊಡ್ಡ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದು ಗೃಹಮಂತ್ರಿಯಾದದ್ದು ಈ ಚಾಣಕ್ಯ ಇನ್ನಷ್ಟು ಭಂಡತನದಿಂದ ಹೊಲಸು ಉಪಾಯಗಳನ್ನು ಮಾಡಲು ಧೈರ್ಯ ತುಂಬಿತಷ್ಟೇ. ಈ ಕೊಬ್ಬಿನ ಫಲಿತಾಂಶ ದೇಶದ ಮುಂದಿದೆ. ಮಹಾರಾಷ್ಟ್ರದ ಕುತಂತ್ರಗಳು ಬಿಜೆಪಿಯ ಮತ್ತು ಅದಕ್ಕೆ ನೇತೃತ್ವ ನೀಡಿರುವ ಆರೆಸ್ಸೆಸ್ ಮುಖಂಡರುಗಳ ಪ್ರಜಾಪ್ರಭುತ್ವ-ವಿರೋಧಿ ಮತ್ತು ಸರ್ವಾಧಿಕಾರಶಾಹೀ ಚಾರಿತ್ರ್ಯದ ಬಗ್ಗೆ ಭಾರತದ ಜನತೆಯ ಕಣ್ಣು ತೆರೆಸಬೇಕು.
–ಪ್ರಕಾಶ ಕಾರಟ್
ಫಡ್ನವೀಸ್ ಸರಕಾರದ ಮೂರು ದಿನದ ಕೌತುಕ ಈಗ ಮಾಯವಾಗಿರುವುದರಿಂದ ಈ ಇಡೀ ಹೊಲಸು ಪ್ರಕರಣದಿಂದ ಏನೇನೆಲ್ಲ ಪಾಟಗಳನ್ನು ಕಲಿಯಬಹುದು ಎಂದು ಹಿಂದಿರುಗಿ ನೋಡಬಹುದಾಗಿದೆ.
ನವಂಬರ್ 23ರ ರಾತ್ರಿ ಮತ್ತು 24ರ ಮುಂಜಾನೆ ನಡೆದದ್ದು ಸಂವಿಧಾನ ಮತ್ತು ಪ್ರಜಾಪ್ರಬುತ್ವ ನೀತಿಗಳ ಮೇಲೆ ಒಂದು ನಾಚಿಕೆಗೆಟ್ಟ ಪ್ರಹಾರ. ಮನಸ್ಸನ್ನು ಘಾಸಿಗೊಳಿಸುವ ಸಂಗತಿಯೆಂದರೆ ಈ ಸ್ವಯಂ-ದೋಷಾರೋಪಣೆಯ ಪ್ರಾಜೆಕ್ಟಿನಲ್ಲಿ ಮೂವರು ಉನ್ನತ ಸಂವಿಧಾನಿಕ ವ್ಯಕ್ತಿಗಳು ಕಂಡುಬಂದರು- ರಾಜ್ಯಪಾಲರು, ಭಾರತದ ಪ್ರಧಾನ ಮಂತ್ರಿಗಳು ಮತ್ತು ರಾಷ್ಟ್ರಪತಿಗಳು. ಇವರೆಲ್ಲರೂ ಸಂವಿಧಾನಿಕ ವಿಧಿವಿಧಾನಗಳನ್ನು ಅನುಸರಿಸುವ ಬದಲು ಬಿಜೆಪಿಯ ಆಣತಿಯಂತೆ ಮತ್ತು ಆಳುವ ಪಕ್ಷದ ಹಿತ ಸಾಧಿಸಲು ಕೆಲಸ ಮಾಡಿದರು.
ದೇವೇಂದ್ರ ಫಡ್ನವೀಸರಿಗೆ, ಎನ್ಸಿಪಿ ಶಾಸಕಾಂಗ ಪಕ್ಷದ ಮುಖಂಡರಾದ ಅಜಿತ್ ಪವಾರ್ ಕೊಟ್ಟ ಒಂದು ಬೋಗಸ್ ಪತ್ರದ ಆಧಾರದಲ್ಲಿ ಮುಖ್ಯಮಂತ್ರಿಯಾಗಿ ಪ್ರತಿಜ್ಞೆ ಸ್ವೀಕಾರ ಮಾಡಿಸಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ತನ್ನ ಪಕ್ಷದ ಆಶಯವನ್ನು ಈಡೇರಿಸಲು ತನ್ನ ಹುದ್ದೆಯನ್ನು ದುರುಪಯೋಗ ಪಡಿಸಿಕೊಂಡರು. ರಾಷ್ಟ್ರಪತಿ ಆಳ್ವಿಕೆಯನ್ನು ತೆಗೆಯಲು ಮಧ್ಯರಾತ್ರಿಯಲ್ಲಿ ಅವರು ಶಿಫಾರಸು ಮಾಡಿದ ರೀತಿ ಇದನ್ನು ಮತ್ತಷ್ಟು ಗಹನಗೊಳಿಸಿತು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಂಜಾನೆ 5.47ಕ್ಕೆ ಸಂಪುಟ ಮಂಜೂರಾತಿ ಇಲ್ಲದೆ ರಾಷ್ಟ್ರಪತಿ ಆಳ್ವಿಕೆಯನ್ನು ತೆಗೆಯಲು ಒಪ್ಪಿಗೆಯನ್ನು ಪಡೆದರು. ಇದಕ್ಕಾಗಿ ಅವರು ಭಾರತ ಸರಕಾರ (ವ್ಯವಹಾರ ನಡಾವಳಿ) ನಿಯಮಗಳಲ್ಲಿ, ತುರ್ತು ಸಂದರ್ಭಗಳಲ್ಲಿ ಬಳಸಲೆಂದು ಇರುವ ಅವಕಾಶವನ್ನು ಬಳಸಿಕೊಂಡರು. ಪ್ರಧಾನ ಮಂತ್ರಿಗಳು ಈ ಮಧ್ಯರಾತ್ರಿಯ ರಾಜಕೀಯ ಕ್ಷಿಪ್ರಕ್ರಾಂತಿಯನ್ನು ನಡೆಸಲು ಈ ನಿಯಮವನ್ನು ಬಳಸಲೂ ಹೇಸಲಿಲ್ಲ.
ಅಂತಿಮವಾಗಿ, ಭಾರತದ ರಾಷ್ಟ್ರಪತಿಗಳು ವಿಧಿ ವಿಧಾನಗಳನ್ನು ಸರಿಯಾಗಿ ಅನುಸರಿಸಲಾಗಿದೆಯೇ ಎಂದು ಸ್ವತಃ ಖಾತ್ರಿಪಡಿಸಿಕೊಳ್ಳದೆಯೇ ರಾಷ್ಟ್ರಪತಿ ಆಳ್ವಿಕೆಯನ್ನು ತೆಗೆಯುವ ಆದೇಶಕ್ಕೆ ಸಹಿ ಹಾಕಿದರು.
ಇವನ್ನೆಲ್ಲ ಮಾಡಿದ್ದು ಸ್ಪಷ್ಟ ಬಹುಮತ ಪಡೆದಿರುವ ಶಿವಸೇನಾ-ಎನ್ಸಿಪಿ-ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬರುವ ಅವಕಾಶವನ್ನು ಮೊದಲೇ ಮೊಟಕುಗೊಳಿಸುವುದಕ್ಕಾಗಿ.
ಆದರೆ ಇದೆಲ್ಲ ಸಂವಿಧಾನ ಮತ್ತು ಸಂಸದೀಯ ಪ್ರಜಾಪ್ರಭುತ್ವದ ಮೇಲೆ ಎಷ್ಟರ ಮಟ್ಟಿನ ಪ್ರಹಾರ ಮಾಡಲಾಗಿದೆ ಎಂಬುದನ್ನು ವಿವರಿಸುವುದಿಲ್ಲ. ಈ ಪ್ರಜಾಪ್ರಭುತ್ವ-ವಿರೋಧಿ ಯೋಜನೆಯನ್ನು ದಕ್ಕಿಸಿಕೊಳ್ಳಬಹುದು ಎಂಬ ಆತ್ಮವಿಶ್ವಾಸ ಬಿಜೆಪಿಗೆ ಬಂದದ್ದಾದರೂ ಹೇಗೆ? ಅದು ದುರಹಂಕಾರದ ಆತ್ಮವಿಶ್ವಾಸ. ಏಕೆಂದರೆ ತನ್ನ ಹಣಬಲವನ್ನು ಮುಂದಿಟ್ಟುಕೊಂಡು ಮತ್ತು ಭ್ರಷ್ಟಾಚಾರದ ಹೂಟವನ್ನು ಬಳಸಿ ಸಾಕಷ್ಟು ಸಂಖ್ಯೆಯಲ್ಲಿ ಪಕ್ಷಾಂತರ ಮಾಡಿಸಬಹುದೆಂಬ ಪೂರ್ಣ ವಿಶ್ವಾಸ ಅದಕ್ಕೆ ಇತ್ತು.
ಈ ಮಹಾರಾಷ್ಟ್ರ ಪ್ರಕರಣ ಬಿಜೆಪಿ ರಾಜಕೀಯ ವಿಧೇಯತೆಗಳನ್ನು ಚಿತಾಯಿಸಲು ಭಾರೀ ಕುಳಗಳಿಂದ ಪಡೆದ ಹಣವನ್ನು ಮತ್ತು ಪ್ರಭುತ್ವದ ಸಂಸ್ಥೆಗಳ ಮೂಲಕ ಭೀತಿ ಹುಟ್ಟಿಸುವುದನ್ನು ಎಷ್ಟರ ಮಟ್ಟಿಗೆ ಬಳಸುತ್ತದೆ ಎಂಬುದನ್ನು ಪ್ರಕಟಪಡಿಸಿದೆ. ಅಜಿತ್ ಪವಾರ್ ಪಕ್ಷಾಂತರ ಇದಕ್ಕೆ ಕಣ್ಣುಕುಕ್ಕುವಂತಹ ರುಜುವಾತು. ಉಪಮುಖ್ಯಮಂತ್ರಿಯಾಗಿ ಪ್ರತಿಜ್ಞಾ ಸ್ವೀಕಾರದ 48ಗಂಟೆಗಳ ನಂತರ ಅವರ ವಿರುದ್ಧ ಇದ್ದ ನೀರಾವರಿ ಹಗರಣದ ಒಂಭತ್ತು ಪ್ರಕರಣಗಳಲ್ಲಿ ಆರೋಪಗಳನ್ನು ಭ್ರಷ್ಟಾಚಾರ ನಿಗ್ರಹ ಕಚೇರಿ (ಎಸಿಬಿ) ಕೈಬಿಟ್ಟಿತು. ಈ ಹಿಂದೆ ಒಬ್ಬ ಪ್ರತಿಪಕ್ಷದ ಶಾಸಕನಾಗಿ ದೇವೇಂದ್ರ ಫಡ್ನವೀಸ್ ಈ 70,000 ರೂ.ಗಳ ಹಗರಣದಲ್ಲಿ ಪವಾರ್ ಕೇಂದ್ರವ್ಯಕ್ತಿ ಎಂದು ಆಪಾದಿಸಿದ್ದರು. ಬಿಜೆಪಿ ಪಕ್ಷಾಂತರ ಮಾಡುವ ಪ್ರತಿಯೊಬ್ಬ ಎನ್ಸಿಪಿ ಶಾಸಕರಿಗೆ ಅಪಾರ ಮೊತ್ತ ತೆರಲು ಸಿದ್ಧವಾಗಿತ್ತು ಎಂದು ವರದಿಯಾಗಿದೆ.
ಬಿಜೆಪಿ ಕಳೆದ ವರ್ಷ ಕರ್ನಾಟಕದಲ್ಲಿ ಇಂತಹುದೇ ಒಂದು ಹಿನ್ನಡೆಯನ್ನು ಅನುಭವಿಸಿತ್ತು. ರಾಜ್ಯಪಾಲರು ಯೆಡಿಯೂರಪ್ಪನವರನ್ನು ಮುಖ್ಯಮಂತ್ರಿಯಾಗಿ ಪ್ರತಿಜ್ಞೆ ಬೋಧಿಸುವಂತೆ ಅದು ಮಾಡಿತ್ತು. ಆದರೆ ಅವರು 24ಗಂಟೆಗಳೊಳಗೆ ಸದನದಲ್ಲಿ ಬಲಪರೀಕ್ಷೆ ನಡೆಸಬೇಕು ಎಂದು ಸುಪ್ರಿಂ ಕೋರ್ಟ್ ಆದೇಶ ನೀಡಿದಾಗ ರಾಜೀನಾಮೆ ನೀಡಬೇಕಾಯಿತು.
ಆದರೆ ಬಿಜೆಪಿಯಾಗಲೀ, ಅದರ ಅಧ್ಯಕ್ಷ ಅಮಿತ್ ಷಾರಾಗಲೀ ಇದರಿಂದ ಬುದ್ಧಿ ಕಲಿಯಲಿಲ್ಲ ಎಂಬುದು ಸ್ವಯಂವೇದ್ಯ. ಇನ್ನಷ್ಟು ದೊಡ್ಡ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದು ಗೃಹಮಂತ್ರಿಯಾದದ್ದು ಈ ಚಾಣಕ್ಯ ಇನ್ನಷ್ಟು ಭಂಡತನದಿಂದ ಹೊಲಸು ಉಪಾಯಗಳನ್ನು ಮಾಡಲು ಧೈರ್ಯ ತುಂಬಿತಷ್ಟೇ. ಆದರೆ ಈ ಕೊಬ್ಬಿನ ಫಲಿತಾಂಶ-ಒಂದು ಅವಮಾನಕಾರೀ ಪರಾಭವ.
ಮರುದಿನವೇ ಸದನದಲ್ಲಿ ಬಲಪರೀಕ್ಷೆ ನಡೆಯಬೇಕು ಎಂಬ ಸುಪ್ರಿಂ ಕೋರ್ಟಿನ ಆದೇಶ ಅಸಂವಿಧಾನಿಕ ಮತ್ತು ಅಪ್ರಾತಿನಿಧಿಕ ಸರಕಾರದ ಗುಳ್ಳೆಯನ್ನು ಚುಚ್ಚಿತು. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಹಿತದೃಷ್ಟಿಯಿಂದ ನ್ಯಾಯಾಲಯ ಈ ಇಡೀ ಪ್ರಕರಣವನ್ನು ಪರೀಕ್ಷಿಸಬೇಕು ಮತ್ತು ಇದಕ್ಕೆ ಹೊಣೆಗಾರರಾದ ಅಪರಾಧಿಗಳನ್ನು ಬೊಟ್ಟುಮಾಡಿ ತೋರಬೇಕು.
ಭಾರತದ ಜನತೆಗೆ ಮಹಾರಾಷ್ಟ್ರದ ಕುತಂತ್ರಗಳು ಬಿಜೆಪಿಯ ಮತ್ತು ಅದಕ್ಕೆ ನೇತೃತ್ವ ನೀಡಿರುವ ಆರೆಸ್ಸೆಸ್ ಮುಖಂಡರುಗಳ ಪ್ರಜಾಪ್ರಭುತ್ವ-ವಿರೋಧಿ ಮತ್ತು ಸರ್ವಾಧಿಕಾರಶಾಹೀ ಚಾರಿತ್ರ್ಯದ ನಿಜಸ್ವರೂಪ ಕಣ್ಣು ತೆರೆಸಬೇಕು.
ಉದ್ಧವ್ ಥಾಕ್ರೆ ನೇತೃತ್ವದ ಹೊಸ ಸರಕಾರ ಈ ಮೂರು ಪಕ್ಷಗಳ ಮೈತ್ರಿಕೂಟ ನಿರ್ಧರಿಸಿರುವ ಕನಿಷ್ಟ ಸಾಮಾನ್ಯ ಕಾರ್ಯಕ್ರಮದ ಪ್ರಕಾರ ಕೆಲಸ ಮಾಡಬೆಕು. ಮಹಾರಾಷ್ಟ್ರದ ಜನತೆ ಈ ಸರಕಾರದಿಂದ ಅದನ್ನು ನಿರೀಕ್ಷಿಸುತ್ತಾರೆ. ಈ ಸರಕಾರದ ಅಂಗಪಕ್ಷಗಳು ಸೈದ್ಧಾಂತಿಕವಾಗಿ ವಿರುದ್ಧವಾದ ಕಣ್ಣೋಟಗಳನ್ನು ಹೊಂದಿರುವುದರಿಂದ ಇದು ಮತ್ತಷ್ಟು ಮಹತ್ವದ್ದಾಗುತ್ತದೆ.
(ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ
ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.
ಶುಕ್ರವಾರ ಜೂನ್(19) ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.
ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್ಲೀನೋ, ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಯುರ್ವೇದ ಆರೋಗ್ಯಕರ ಜೀವನ ಶೈಲಿ
ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.
ಅವರು ಶನಿವಾರ ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಸಂಸ್ಥೆಯು ಏರ್ಪಡಿಸಿದ್ದ ದ್ವಿತೀಯ ಘಟಿಕೋತ್ಸವ ಸಮಾರಂಭವನ್ನು ಉದ್ಪಾಟಿಸಿ ಮಾತನಾಡಿದರು.
ಈಗಿನ ದಿನಮಾನಗಳಲ್ಲಿ ಇಡೀ ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ, ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದರು.
ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ. ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು.
ಆಧುನಿಕ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI) ಮತ್ತು ಡಿಜಿಟಲ್ ಆರೋಗ್ಯ ಸೇವೆಗಳು ಇಂದಿನ ವೈದ್ಯಕೀಯ ಕ್ಷೇತ್ರದ ಚಿತ್ರಣವನ್ನೇ ಸಂಪೂರ್ಣವಾಗಿ ಬದಲಾಯಿಸುತ್ತಿವೆ. ಇಂತಹ ತಾಂತ್ರಿಕ ಕ್ರಾಂತಿಯ ಯುಗದಲ್ಲಿ ಪದವಿ ಪಡೆದು ಹೊರಬರುತ್ತಿರುವ ನೂತನ ವೈದ್ಯರು ಕೇವಲ ಸಾಂಪ್ರದಾಯಿಕ ವೈದ್ಯಕೀಯ ಜ್ಞಾನಕ್ಕೆ ಸೀಮಿತವಾಗದೆ, ಆಧುನಿಕ ವಿಜ್ಞಾನದ ನೂತನ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಉಭಯ ಕ್ಷೇತ್ರಗಳ ನಡುವೆ ಬಲವಾದ ಸೇತುವೆಯಾಗಿ ಕೆಲಸ ಮಾಡಬೇಕಾದ ತುರ್ತು ಅಗತ್ಯವಿದೆ ಎಂದರು.
ಕೃತಕ ಬುದ್ಧಿಮತ್ತೆಯು ರೋಗನಿರ್ಣಯವನ್ನು ಹೆಚ್ಚು ನಿಖರ ಹಾಗೂ ವೇಗವಾಗಿಸಲು ನೆರವಾದರೆ, ಡಿಜಿಟಲ್ ಆರೋಗ್ಯ ಸೇವೆಗಳು ದೂರದ ಊರುಗಳಿಗೂ ಚಿಕಿತ್ಸೆಯನ್ನು ತಲುಪಿಸಲು ಸಹಕಾರಿಯಾಗಿವೆ. ಆದ್ದರಿಂದ, ಹೊಸ ತಲೆಮಾರಿನ ವೈದ್ಯರು ಕೇವಲ ದಿನನಿತ್ಯದ ಕ್ಲಿನಿಕ್ ಅಥವಾ ಆಸ್ಪತ್ರೆಯ ಚಿಕಿತ್ಸೆಗೆ ಸೀಮಿತವಾಗದೆ, ತಂತ್ರಜ್ಞಾನದ ದತ್ತಾಂಶಗಳನ್ನು ಬಳಸಿಕೊಂಡು ಹೊಸ ರೋಗಗಳಿಗೆ ಪರಿಹಾರ ಕಂಡುಕೊಳ್ಳುವ ಉತ್ತಮ ಸಂಶೋಧಕರಾಗಬೇಕು. ಇದರೊಂದಿಗೆ, ಸಮಾಜದಲ್ಲಿ ತಂತ್ರಜ್ಞಾನ ಮತ್ತು ಆರೋಗ್ಯದ ಕುರಿತು ಇರುವ ತಪ್ಪು ಕಲ್ಪನೆಗಳನ್ನು ದೂರಾಗಿಸಿ, ಮಾನವೀಯ ಕಾಳಜಿಯೊಂದಿಗೆ ಜನರನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ ನೈಜ ಮಾರ್ಗದರ್ಶಕರಾಗಿ ಹೊರಹೊಮ್ಮಬೇಕಿದೆ ಎಂದು ತಿಳಿಸಿದರು.
ವೈದ್ಯಕೀಯ ಸೇವೆಯು ಅತ್ಯಂತ ಪವಿತ್ರವಾದ ಮಾನವೀಯ ಸೇವೆಯಾಗಿದೆ. ರೋಗಿಗಳಿಗೆ ಔಷಧಿಗಿಂತ ಮುಂಚಿತವಾಗಿ ವೈದ್ಯರ ಪ್ರೀತಿಯ ನುಡಿಗಳು ಹಾಗೂ ಸಕಾರಾತ್ಮಕ ನಡವಳಿಕೆಯ ಅಗತ್ಯವಿರುತ್ತದೆ. ಆದ್ದರಿಂದ ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು. ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯವು ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಗುಜರಾತ್ನ ಜಾಮ್ನಗರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಗ್ಲೋಬಲ್ ಟ್ರೆಡಿಷನಲ್ ಮೆಡಿಸಿನ್ ಸೆಂಟರ್’ ಸ್ಥಾಪಿಸುತ್ತಿದೆ ಎಂದು ತಿಳಿಸಿದರು.
ರಾಜ್ಯಸಭಾ ಸದಸ್ಯರಾದ ಶ್ರೀ ನಾರಾಯಣಸಾ ಭಾಂಡಗೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾಜಿ ಡೀನ್ ಡಾ: ಶ್ರೀನಿವಾಸ್ ಬನ್ನಿಗೊಳ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ಎಸ್.ವಿ.ಹಲಸೆ, ತಪೋವನ ಸಂಸ್ಥೆಯ ಅಧ್ಯಕ್ಷ ಡಾ. ಶಶಿಕುಮಾರ್ ವಿ.ಎಂ, ಆಯುರ್ವೇದ ಕಾಲೇಜಿನ ಪ್ರಾಚಾರ್ಯರಾದ ಡಾ. ಅಶ್ವಿನಿ ಕೆ.ಆರ್., ಡಾ.ಸುಮನ ಭಟ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ 2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246
ಸುದ್ದಿದಿನ.ಕಾಂ|ವಾಟ್ಸಾಪ್|9980346243


