Connect with us

ರಾಜಕೀಯ

ಮಹಾರಾಷ್ಟ್ರ ಸರ್ಕಾರ ಉರುಳಲು ಬಿಜೆಪಿ ಕುತಂತ್ರ ಕಾರಣ, ಇದು ದೇಶಕ್ಕೆ ಮಾರಕ : ಮಲ್ಲಿಕಾರ್ಜುನ ಖರ್ಗೆ

Published

on

mallikarjun kharge_suddidina
ಸಾಂದರ್ಭಿಕ ಚಿತ್ರ

ಸುದ್ದಿದಿನ,ಕಲಬುರಗಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್-ಶಿವಸೇನೆ ಸರ್ಕಾರ ಪತನಕ್ಕೆ ಬಿಜೆಪಿಯ ಕುತಂತ್ರ ಕಾರಣ ಅನ್ನೋದು ಎಲ್ಲರಿಗೂ ಗೋತ್ತಿದೆ. ನಾವು ಜನರಿಂದ ಅಧಿಕಾರಿ ಕಳೆದುಕೊಂಡಿಲ್ಲ ಬಿಜೆಪಿ ಕುತಂತ್ರದಿಂದ ಅಧಿಕಾರ ಕಳೆದುಕೊಂಡಿದ್ದೇವೆ ಎಂದು ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರ ಒಂದೇ ಅಲ್ಲ. ಬಹುತೇಕ ಕಡೆ ಕುತಂತ್ರದಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಇದು ಡೆಮೋಕ್ರಾಸಿಗೆ ಬಹುದೊಡ್ಡ ಹೊಡೆತವಾಗಲಿದೆ‌. ಮೋದಿಜಿಯವರಿಗೆ 330 ರ ಮೇಲೂ ಸೀಟು ಬಂದ್ರು. ಅನೇಕ ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದರು ತೃಪ್ತಿಯಿಲ್ಲ, ಇಂತಹ ಕೆಲಸ ಮಾಡಬಾರದು ಇಂದಿಲ್ಲ ನಾಳೆ ದೇಶಕ್ಕೆ ಇದು ದೊಡ್ಡ ಹೊಡೆತ ಬಿಳುತ್ತೆ ಎಂದು ಕಳವಳ ವ್ಯಕ್ತಪಡಿಸಿದರು.

ಪಕ್ಷಾಂತರ ನಿಷೇದ ಕಾಯ್ದೆ ವಿಚಾರ

ಪಕ್ಷಾಂತರ ಕಾಯ್ದೆ ನಿಷೇಧ ಕಾಯ್ದೆ ಕಠೀಣ ಮಾಧರಿಯಲ್ಲಿ ಹೊರತರಬೇಕಿದೆ. ಇದು‌ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಾಗಿ ಮಾಡಬೇಕಾದ ಕೆಲಸವಾಗಿದೆ. ಯಾರೇ ಪಕ್ಷದ ರೂಲ್ಸ್‌ಗಳನ್ನ ಉಲ್ಲಂಘಿಸಿದ್ರೆ ಐದು ವರ್ಷ ಸ್ಪರ್ಧಿಸದಂತೆ ಕಾಯ್ದೆ ಜಾರಿಯಾಗಬೇಕು.ಸಂದರ್ಭ ಬಂದಾಗ ಲೋಕಸಭೆಯಲ್ಲಿ ಈ ವಿಚಾರ ಪ್ರಸ್ತಾಪ ಮಾಡುತ್ತೇನೆ ಅಂತ ಹೇಳಿದ ಖರ್ಗೆ, ಮಹಾರಾಷ್ಟ್ರ ಸರ್ಕಾರ ಬಿಳುವ ಬಗ್ಗೆ ನಮಗೆನು ಇಂಟಲಿಜೆನ್ಸ್ ಮಾಹಿತಿ‌ ಇದ್ದಿರಲಿಲ್ಲ, ಆದರೆ ಈ ಚಟುವಟಿಕೆಗಳು ಮೊದಲಿನಿಂದಲೂ ನಡೆಯುತ್ತಾ ಬಂದಿದೆ. ಬಿಜೆಪಿ ಸರ್ಕಾರದ ಹ್ಯಾಬಿಟ್ ಒಂದೇ. ಏನಾದರು ಮಾಡಿ ನಡೆಯೋ ಸರ್ಕಾರ ಉರುಳಿಸುವುದು ಎಂದರು.

ಮಹಾರಾಷ್ಟ್ರದಲ್ಲಿ ಕ್ಲಚ್ ಒಬ್ರ ಕಡೆ. ಬ್ರೇಕ್ ಒಬ್ರ ಕಡೆ. ಎಕ್ಸ್‌ಲೇಟರ್ ಇಬ್ರ ಕಡೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಖರ್ಗೆ, ಇದು ಅವರ ಕಲ್ಪನೆ ಇರಬಹುದು.‌‌ ಅವರ ಹತ್ರ ಹೋಗಿ ಕುಡೋಕೆ ಏನ್ ಬ್ರೇಕ್ ಸರಿಯಾಗಿದೆಯಾ? ಎಂದು ಬಿಜೆಪಿ ವಿರುದ್ಧ ಕೈ ನಾಯಕ ಮಲ್ಲಿಕಾರ್ಜುನ ಖರ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ರಾಜಸ್ಥಾನ ಕನ್ಹಯ್ಯಲಾಲ್ ಹತ್ಯೆ ಪ್ರಕರಣ

ರಾಜಸ್ಥಾನದ ಕನ್ಹಯ್ಯಲಾಲ್ ಹತ್ಯೆ ಘಟನೆ ನಾವೆಲ್ಲರೂ ತೀವ್ರವಾಗಿ ಖಂಡಿಸಿದ್ದೇವೆ. ಯಾರು ತಪ್ಪು ಮಾಡಲಿ. ಯಾವ ಪಂಗಡದವನೆ ಆಗಿರಲಿ. ಅವರಿಗೆ ಕಾನೂನಿನ ಪ್ರಕಾರ ಶಿಕ್ಷೆ ಕೊಡಲೆಬೇಕು.ಘಟನೆ ನಂತರ ಅಲ್ಲಿಯ ಸಿಎಂ ಆರೋಪಿಗಳನ್ನ ತಕ್ಷಣ ಬಂಧಿಸಲು ಕ್ರಮ ಕೈಗೊಂಡಿದ್ದಾರೆ. ಜೊತೆಗೆ ಸಿಎಂ ಕೊಲೆಯಾದ ವ್ಯಕ್ತಿ ಮನೆಗೆ ಹೋಗಿ ಸಾಂತ್ವನ ಹೇಳಿದ್ದಾರೆ. ಹೀಗಾಗಿ ಸಿಎಂರನ್ನ ವಜಾ ಮಾಡುವ ಅವಶ್ಯಕತೆ ಇಲ್ಲ. ಹತ್ಯೆಗೆ ಸಂಬಂಧಿಸಿದ ಈಗಾಗಲೇ ಉನ್ನತಮಟ್ಟದ ತನಿಖೆಗೆ ಆದೇಶಿಸಲಾಗಿದೆ.

ಇನ್ನು ಆರೋಪಿಗಳು ಪಾಕಿಸ್ಥಾನದ ಜೊತೆ ನಂಟಿದೆ ಎಂಬ ಬಿಜೆಪಿ ಆರೋಪಕ್ಕೆ ಇಂತಹ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಬಾರದು. ಎಲ್ಲಾ ವಿಚಾರದಲ್ಲಿ ರಾಜಕೀಯ ಮಾಡಿನೇ ದೇಶವನ್ನ ಹಾಳು ಮಾಡುತ್ತಿದ್ದಾರೆ.ಇಂತಹ ಘಟನೆಗಳ ಕುರಿತು ಮಾತಾಡಿ ಅಂದರೆ ಮೋದಿ ಬಾಯಿನೇ ತೆರಯಂಗಿಲ್ಲ.ಕಾಂಗ್ರೆಸ್ ಬಗ್ಗೆ ವಿದೇಶದಲ್ಲಿ ಪ್ರಧಾನಿ ಮೋದಿ ಮಾತಾಡುತ್ತಾರೆ ಎಂದು ಕಿಡಿ ಕಾರಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಚನ್ನಗಿರಿ | ಕೆ ಹೊಸಳ್ಳಿ ಗ್ರಾಮದ ಶಾಲೆ ಎದುರೇ ಕೆರೆ ; ಸಾವಿನ ಸನಿಹ ಮಕ್ಕಳ‌ ಕಲಿಕೆ : ಕಾಂಪೌಂಡ್ ನಿರ್ಮಿಸಲು ಗ್ರಾಮಸ್ಥರ ಮನವಿಗೆ ಕಿವಿಗೊಡದ ಅಧಿಕಾರಿಗಳು

Published

on

ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆ ಹೊಸಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ತಡೆಗೋಡೆ (ಕಾಂಪೌಂಡ್) ಕಾಣದೇ ಇಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಪ್ರತಿ ದಿನವೂ ಅಪಾಯದ ನಡುವೆಯೇ ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಆಟ-ಪಾಠ ಕಾಣುವಂತಾಗಿದೆ ಎಂಬ ಆರೋಪದ ಜೊತೆಗೆ ಕಾಳಜಿಯ ಒತ್ತಾಯ ಕೇಳಿ ಬರುತ್ತಿದೆ.

ಶಾಲೆಯ ಎದುರೇ ಕೆರೆ ಮತ್ತು ಗ್ರಾಮದ ಸಂಪರ್ಕಿಸುವ ರಸ್ತೆ ಜೊತೆಗೆ ವಿದ್ಯುತ್ ಸಂಪರ್ಕವುಳ್ಳ ಟ್ರ್ಯಾನ್ಫರ್ಮರ್ ಹಾಗೂ ಬೋರ್ವೆಲ್ ಇದೆ. ಅಲ್ಲದೇ ತೆರೆದ ಒಳಚರಂಡಿ ಸಹ ಇದೆ. ಹೀಗೆ ಅಪಾಯಕ್ಕೆ ಕಾದು ಕುಳಿತು ಜೀವ ಬಲಿ ಪಡೆಯುವಂತಹ ಪರಿಸ್ಥಿತಿ ಇದ್ದು, ಶಾಲೆಗೆ ತಡೆಗೋಡೆ ಇಲ್ಲದೇ ಮಕ್ಕಳ ಜೀವಕ್ಕೆ ರಕ್ಷಣೆ ಇಲ್ಲದಂತಾಗಿ 20 ರಿಂದ 30 ವಿದ್ಯಾರ್ಥಿಗಳ ಜೀವದ ಪ್ರಶ್ನೆಯಾಗಿ ಉಳಿದಿದೆ.

ಹೀಗೆ ವಿದ್ಯಾರ್ಥಿಗಳು ಆಟದ ವೇಳೆಯಲ್ಲಾಗಲೀ ಅಥವಾ ಶಾಲೆಗೆ ಬರುವಾಗ, ಮನೆಗೆ ಹೋಗುವಾಗ ಈ ಯಾವುದಾದರೂ ಅಪಾಯಕ್ಕೆ ಸಿಲುಕಿದರೆ ಅಮೂಲ್ಯ ಜೀವ ಬಲಿಯಾಗಲಿದೆ. ಅಕ್ಷರ ಜ್ಞಾನ ಪಡೆಯಲು ಬರುವ ವಿದ್ಯಾರ್ಥಿಗಳಿಗೆ ಶಾಲೆಯೇ ಭವಿಷ್ಯ ಕಟ್ಟಿಕೊಡುವ ಬದಲು ಜೀವ ಬಲಿಪಡೆಯುವ ವಾತಾವರಣ ನಿರ್ಮಾಣವಾಗಿದ್ದು, ಇದಕ್ಕೆ ಹೊಸದಾಗಿ ನಿರ್ಮಾಣವಾಗಬೇಕಿರುವ ಶಾಲಾ ಕಾಂಪೌಂಡ್ 4 ವರ್ಷಗಳೇ ಕಳೆದರೂ ನಿರ್ಮಾಣ ಕಾಣದಂತಾಗಿದೆ ಎಂಬುದು ಈ ಶಾಲೆಯ ಕೆಲ ಹಳೇ ವಿದ್ಯಾರ್ಥಿಗಳ ಮುತುವರ್ಜಿಯಾಗಿದೆ.

ಈ ಶಾಲೆಗೆ ಹಿಂದೆ ಶಾಲಾ ಕಾಂಪೌಂಡ್ ದುರಸ್ತಿಯಲ್ಲಿದ್ದ ಕಾರಣ ಹೊಸ ಕಾಂಪೌಂಡ್ ನಿರ್ಮಾಣಕ್ಕಾಗಿ 2021-22ರ ವರ್ಷದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಅಧಿನಿಯಮ -2005 ರ ಮಹಾತ್ಮ ಗಾಂಧಿ ನರೇಗಾ ಕಾಮಗಾರಿಯಡಿ 4 ಲಕ್ಷ ರೂ. ಮಂಜೂರು ಆಗಿತ್ತು. ಸುಮಾರು ನಾಲ್ಕು ವರ್ಷಗಳೇ ಕಳೆದರೂ ಇನ್ನೂ ಈ ಶಾಲೆಗೆ ಕಾಂಪೌಂಡ್ ಮರೀಚಿಕೆಯಾಗಿದೆ ಎನ್ನುತ್ತಾರೆ ಹಳೇ ವಿದ್ಯಾರ್ಥಿ ಮಂಜುನಾಥ್ ಆರ್.

“ರಸ್ತೆಯ ಸಂಪರ್ಕಕ್ಕೆ ಹತ್ತಿರವಾಗಿದ್ದು, ಮಕ್ಕಳಿಗೆ ಅಪಘಾತ ಆಗುವ ಸಂದರ್ಭ ಇದೆ ಮತ್ತು ಶಾಲೆಯ ಮುಂಭಾಗದಲ್ಲಿ ಗ್ರಾಮದ ಕೆರೆ ಇದ್ದು ಕೆರೆವು ಸಂಪೂರ್ಣವಾಗಿ ನೀರಿನಿಂದ ತುಂಬಿದೆ ಇದರಿಂದ ಮಕ್ಕಳ ಜೀವಕ್ಕೆ ತೊಂದರೆ ಆಗುವ ಸಂಭವ ಸಹ ಇದೆ. ಈ ಎಲ್ಲ ತೊಂದರೆಗಳಿಗೂ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ನಿರ್ಲಕ್ಷತನ ಎಂದು ಹೇಳಬಹುದು. ಶಾಸಕರು ಸಹ ಇದರ ಬಗ್ಗೆ ಹೆಚ್ಚಿನ ಗಮನವಹಿಸಬೇಕಾಗಿದೆ.”

|ಹಳೇ ವಿದ್ಯಾರ್ಥಿ ಮಂಜುನಾಥ್

“ಶಾಲೆಯ ಕಾಂಪೌಂಡ್ ನಿರ್ಮಾಣ ವಿಚಾರವಾಗಿ ನಾನೂ ಸಹ ಪಿಡಿಓಗೆ ಸಾಕಷ್ಟು ಮನವಿ ಸಾಕಾಗಿದೆ. ಯಾವುದೇ ಸರಿಯಾದ ಸ್ಪಂದನೆ ಇಲ್ಲ. ಕಾಂಪೌಂಡ್ ನಿರ್ಮಾಣ ವಿಚಾರದಲ್ಲಿ ಹಿಂದೆ ಅಡೆ-ತಡೆಯೂ ಉಂಟಾಯಿತು. ಹೀಗಾಗಿ ನರೇಗಾ ಯೋಜನೆಯ ಕಾರ್ಮಿಕರು ನಿರ್ಮಾಣಕ್ಕೆ ಮುಂದಾಗದಂತಾಯಿತು. ಶಾಲೆಗೆ ಕಾಂಪೌಂಡ್ ಇಲ್ಲದೇ ಅಪಾಯದ ವಾತಾವರಣವಿರುವ ಕಾರಣ ಯಾವುದೇ ಪಠ್ಯೇತರ ಚಟುವಟಿಕೆಗಳು ನಡೆಸಲು ಆಗುತ್ತಿಲ್ಲ. ಮಕ್ಕಳ ಜೀವವನ್ನು ನಾನು ಕಾವಲುಗಾರನಾಗಿ ಕಾಯುತ್ತಿದ್ದೇನೆ. ಶಾಲೆಗೆ ಕಾಂಪೌಂಡ್ ಇಲ್ಲದೇ ತೆರೆದ ಪ್ರದೇಶವಾಗಿರುವ ಕಾರಣ ಮದ್ಯ ವ್ಯಸನಿಗಳ ತಾಣವಾಗಿದ್ದು, ದಿನವೂ ಮದ್ಯದ ಬಾಟಲ್, ಪೌಚ್ಗಳ ಸ್ವಚ್ಚಗೊಳಿಸಿ ಶಾಲೆಯೊಳಗೆ ಕರ್ತವ್ಯಕ್ಕೆ ತೆರಳುವಂತಾಗಿದೆ.”

| ಜಯರಾಜ್, ಮುಖ್ಯೋಪಾದ್ಯಾಯರು

“ಇನ್ನೆರಡು ದಿನಗಳಲ್ಲಿ ನಿರ್ಮಾಣ ಕಾರ್ಯ ಪ್ರಗತಿಗೆ
ನರೇಗಾ ಯೋಜನೆಯಡಿಯ ಈ ಕಾಮಗಾರಿ ಕೈಗೊಳ್ಳಲು ಉದ್ಯೋಗ ಖಾತ್ರಿ ಕಾರ್ಡ್ವುಳ್ಳ ಕಾರ್ಮಿಕರು ಮುಂದಾಗುತ್ತಿಲ್ಲ. ಕಾಂಪೌಂಡ್ ನಿರ್ಮಾಣದಲ್ಲಿ ತಡವಾಗುತ್ತಿರುವುದಾಗಲೀ, ಅಡೆ-ತಡೆ ಬಗ್ಗೆಯಾಗಲೀ ನನಗೆ ಯಾವುದೇ ಮಾಹಿತಿ ಇಲ್ಲ. ಇದೀಗ ಶಾಲೆಯ ಹಳೇ ವಿದ್ಯಾರ್ಥಿಗಳು ಸಹಕಾರ ನೀಡಲು ಮುಂದಾಗಿದ್ದು, ಇನ್ನೆರಡು ದಿನಗಳಲ್ಲಿ ನಿರ್ಮಾಣ ಕಾರ್ಯ ಪ್ರಗತಿಗೆ ಬರಲಿದೆ”

| ರಶ್ಮಿ, ಪ್ರಭಾರ ಪಿಡಿಓ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ತವ್ಯ ಲೋಪ | ಆಯುಕ್ತೆ ಮಂಜುಶ್ರೀ, ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ದಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇಲ್ಲಿ ನಡೆದಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ತಕರಾರು ಅರ್ಜಿ ಸಲ್ಲಿಸಿ 5 ತಿಂಗಳಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತೆ ಮಂಜುಶ್ರೀ ಎನ್ ಹಾಗೂ ಮಂಗಳೂರು ಪ್ರಾದೇಶಿಕ ಕಛೇರಿಯ ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಡಾ.ಕೆ.ಎ.ಓಬಳಪ್ಪ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಡಾ.ಕೆ.ಎ.ಓಬಳಪ್ಪ ಇವರು ದಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇಲ್ಲಿ ಅಧಿಸೂಚನೆ ಹೊರಡಿಸಿರುವ ಕನ್ನಡ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದು, ಸಂದರ್ಶನಕ್ಕೂ ಹಾಜರಾಗಿರುತ್ತಾರೆ. ಆದರೆ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪಾರದರ್ಶಕವಾಗಿ ಪ್ರಕಟಿಸದೆ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿರುತ್ತಾರೆ.

ಮಾಹಿತಿಹಕ್ಕು ಅಡಿಯಲ್ಲಿ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ದೃಢೀಕರಿಸಿ ನೀಡುವಂತೆ ಕೋರಿದಾಗಲೂ ಮಾಹಿತಿ ನೀಡದೆ ನಿರಾಕರಿಸಿರುತ್ತಾರೆ. ಯು.ಜಿ.ಸಿ ನಿಯಮಾವಳಿ ಪ್ರಕಾರ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಆಹ್ವಾನಿಸದೆ ವಿಷಯವಾರು ಮತ್ತು ಮೀಸಲಾತಿವಾರು 1:10, 1:15 ಅನುಪಾತದವರೆಗೂ ಮನಸ್ಸಿಚ್ಚೆಯಂತೆ ಸಂದರ್ಶನಕ್ಕೆ ಆಹ್ವಾನ ನೀಡಿ, ಕಾನೂನುಬಾಹಿರವಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿರುತ್ತಾರೆ.

ಹೀಗಾಗಿ ಅಂತಿಮ ಆಯ್ಕೆ ಪಟ್ಟಿಯನ್ನು ಪಾರದರ್ಶಕವಾಗಿ ಪ್ರಕಟಿಸುವರೆಗೂ ಈ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ಕಾಲೇಜು ಶಿಕ್ಷಣ ಆಯುಕ್ತರು ಹಾಗೂ ಪ್ರಾದೇಶಿಕ ಜಂಟಿ ನಿರ್ದೇಶಕರುಗಳಿಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಆದರೆ ತಕರಾರು ಅರ್ಜಿ ಸಲ್ಲಿಸಿ 5 ತಿಂಗಳು ಕಳೆದರೂ ಯಾವುದೇ ಸ್ಪಷ್ಟನೆ ನೀಡದೆ ನಿಯಮಬಾಹಿರವಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಲಾಗಿರುತ್ತದೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನರೇಗಾ ಕಾರ್ಮಿಕ ಕೆಲಸದ ಸ್ಥಳದಲ್ಲಿ ನಿಧನ : ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ

Published

on

ಸುದ್ದಿದಿನ,ದಾವಣಗೆರೆ:ನವೆಂಬರ್ 10 ರ ಬೆಳಿಗ್ಗೆ 10 ಗಂಟೆ ಸುಮಾರಿಗೆ, ಹೊನ್ನಾಳಿ ತಾಲ್ಲೂಕು ಹಿರೇಗೋಣಿಗೆರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಇರುವ ಸರ್ವೆ ನಂ 67ರಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ ಕಂದಕ ನಿರ್ಮಾಣ ಕೆಲಸದ ಕೂಲಿ ಕೆಲಸದಲ್ಲಿ ನಿರತರಾಗಿದ್ದ ಜಿಕ್ರಿಯಾ ಸಬಾದ್ ಬಿನ್ ನಿಯಾಸಾಬ್ ಸುಮಾರು ವಯಸ್ಸು 61, ಜಾಬ್ ಕಾರ್ಡ್ ಸಂಖ್ಯೆ ಕೆಎನ್ -12-005-037-004/396, ಹಠಾತ್ತನೆ ಕುಸಿದು ಬಿದ್ದು ಸ್ಥಳದಲ್ಲೇ ನಿಧನರಾಗಿರುವರು.

ಘಟನಾ ಸ್ಥಳಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಭೇಟಿ ನೀಡಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ಕಾಮಗಾರಿ ಸ್ಥಳಗಳಲ್ಲಿ ನಿಯಮಿತ ಆರೋಗ್ಯ ತಪಾಸಣೆ ಮತ್ತು ಸುರಕ್ಷತೆಯ ಮಹತ್ವವನ್ನು ಒತ್ತಿ ಹೇಳಿದರು. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮತ್ತು ಅವರಿಗೆ ಎಲ್ಲಾ ಸರ್ಕಾರಿ ಸವಲತ್ತುಗಳು ಮತ್ತು ಸಹಾಯವನ್ನು ಆದಷ್ಟು ಬೇಗ ನೀಡಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಹೊನ್ನಾಳಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಹೊನ್ನಾಳಿ ವಲಯ ಅರಣ್ಯ ಅಧಿಕಾರಿ ಮತ್ತು ಹಿರೇಗೋಣಿಗೆರೆ ಗ್ರಾಮ ಪಂಚಾಯತ್ ಪಿಡಿಓ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending