ರಾಜಕೀಯ

ಮಹಾರಾಷ್ಟ್ರ ಸರ್ಕಾರ ಉರುಳಲು ಬಿಜೆಪಿ ಕುತಂತ್ರ ಕಾರಣ, ಇದು ದೇಶಕ್ಕೆ ಮಾರಕ : ಮಲ್ಲಿಕಾರ್ಜುನ ಖರ್ಗೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಕಲಬುರಗಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್-ಶಿವಸೇನೆ ಸರ್ಕಾರ ಪತನಕ್ಕೆ ಬಿಜೆಪಿಯ ಕುತಂತ್ರ ಕಾರಣ ಅನ್ನೋದು ಎಲ್ಲರಿಗೂ ಗೋತ್ತಿದೆ. ನಾವು ಜನರಿಂದ ಅಧಿಕಾರಿ ಕಳೆದುಕೊಂಡಿಲ್ಲ ಬಿಜೆಪಿ ಕುತಂತ್ರದಿಂದ ಅಧಿಕಾರ ಕಳೆದುಕೊಂಡಿದ್ದೇವೆ ಎಂದು ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರ ಒಂದೇ ಅಲ್ಲ. ಬಹುತೇಕ ಕಡೆ ಕುತಂತ್ರದಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಇದು ಡೆಮೋಕ್ರಾಸಿಗೆ ಬಹುದೊಡ್ಡ ಹೊಡೆತವಾಗಲಿದೆ‌. ಮೋದಿಜಿಯವರಿಗೆ 330 ರ ಮೇಲೂ ಸೀಟು ಬಂದ್ರು. ಅನೇಕ ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದರು ತೃಪ್ತಿಯಿಲ್ಲ, ಇಂತಹ ಕೆಲಸ ಮಾಡಬಾರದು ಇಂದಿಲ್ಲ ನಾಳೆ ದೇಶಕ್ಕೆ ಇದು ದೊಡ್ಡ ಹೊಡೆತ ಬಿಳುತ್ತೆ ಎಂದು ಕಳವಳ ವ್ಯಕ್ತಪಡಿಸಿದರು.

ಪಕ್ಷಾಂತರ ನಿಷೇದ ಕಾಯ್ದೆ ವಿಚಾರ

ಪಕ್ಷಾಂತರ ಕಾಯ್ದೆ ನಿಷೇಧ ಕಾಯ್ದೆ ಕಠೀಣ ಮಾಧರಿಯಲ್ಲಿ ಹೊರತರಬೇಕಿದೆ. ಇದು‌ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಾಗಿ ಮಾಡಬೇಕಾದ ಕೆಲಸವಾಗಿದೆ. ಯಾರೇ ಪಕ್ಷದ ರೂಲ್ಸ್‌ಗಳನ್ನ ಉಲ್ಲಂಘಿಸಿದ್ರೆ ಐದು ವರ್ಷ ಸ್ಪರ್ಧಿಸದಂತೆ ಕಾಯ್ದೆ ಜಾರಿಯಾಗಬೇಕು.ಸಂದರ್ಭ ಬಂದಾಗ ಲೋಕಸಭೆಯಲ್ಲಿ ಈ ವಿಚಾರ ಪ್ರಸ್ತಾಪ ಮಾಡುತ್ತೇನೆ ಅಂತ ಹೇಳಿದ ಖರ್ಗೆ, ಮಹಾರಾಷ್ಟ್ರ ಸರ್ಕಾರ ಬಿಳುವ ಬಗ್ಗೆ ನಮಗೆನು ಇಂಟಲಿಜೆನ್ಸ್ ಮಾಹಿತಿ‌ ಇದ್ದಿರಲಿಲ್ಲ, ಆದರೆ ಈ ಚಟುವಟಿಕೆಗಳು ಮೊದಲಿನಿಂದಲೂ ನಡೆಯುತ್ತಾ ಬಂದಿದೆ. ಬಿಜೆಪಿ ಸರ್ಕಾರದ ಹ್ಯಾಬಿಟ್ ಒಂದೇ. ಏನಾದರು ಮಾಡಿ ನಡೆಯೋ ಸರ್ಕಾರ ಉರುಳಿಸುವುದು ಎಂದರು.

ಮಹಾರಾಷ್ಟ್ರದಲ್ಲಿ ಕ್ಲಚ್ ಒಬ್ರ ಕಡೆ. ಬ್ರೇಕ್ ಒಬ್ರ ಕಡೆ. ಎಕ್ಸ್‌ಲೇಟರ್ ಇಬ್ರ ಕಡೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಖರ್ಗೆ, ಇದು ಅವರ ಕಲ್ಪನೆ ಇರಬಹುದು.‌‌ ಅವರ ಹತ್ರ ಹೋಗಿ ಕುಡೋಕೆ ಏನ್ ಬ್ರೇಕ್ ಸರಿಯಾಗಿದೆಯಾ? ಎಂದು ಬಿಜೆಪಿ ವಿರುದ್ಧ ಕೈ ನಾಯಕ ಮಲ್ಲಿಕಾರ್ಜುನ ಖರ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ರಾಜಸ್ಥಾನ ಕನ್ಹಯ್ಯಲಾಲ್ ಹತ್ಯೆ ಪ್ರಕರಣ

ರಾಜಸ್ಥಾನದ ಕನ್ಹಯ್ಯಲಾಲ್ ಹತ್ಯೆ ಘಟನೆ ನಾವೆಲ್ಲರೂ ತೀವ್ರವಾಗಿ ಖಂಡಿಸಿದ್ದೇವೆ. ಯಾರು ತಪ್ಪು ಮಾಡಲಿ. ಯಾವ ಪಂಗಡದವನೆ ಆಗಿರಲಿ. ಅವರಿಗೆ ಕಾನೂನಿನ ಪ್ರಕಾರ ಶಿಕ್ಷೆ ಕೊಡಲೆಬೇಕು.ಘಟನೆ ನಂತರ ಅಲ್ಲಿಯ ಸಿಎಂ ಆರೋಪಿಗಳನ್ನ ತಕ್ಷಣ ಬಂಧಿಸಲು ಕ್ರಮ ಕೈಗೊಂಡಿದ್ದಾರೆ. ಜೊತೆಗೆ ಸಿಎಂ ಕೊಲೆಯಾದ ವ್ಯಕ್ತಿ ಮನೆಗೆ ಹೋಗಿ ಸಾಂತ್ವನ ಹೇಳಿದ್ದಾರೆ. ಹೀಗಾಗಿ ಸಿಎಂರನ್ನ ವಜಾ ಮಾಡುವ ಅವಶ್ಯಕತೆ ಇಲ್ಲ. ಹತ್ಯೆಗೆ ಸಂಬಂಧಿಸಿದ ಈಗಾಗಲೇ ಉನ್ನತಮಟ್ಟದ ತನಿಖೆಗೆ ಆದೇಶಿಸಲಾಗಿದೆ.

ಇನ್ನು ಆರೋಪಿಗಳು ಪಾಕಿಸ್ಥಾನದ ಜೊತೆ ನಂಟಿದೆ ಎಂಬ ಬಿಜೆಪಿ ಆರೋಪಕ್ಕೆ ಇಂತಹ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಬಾರದು. ಎಲ್ಲಾ ವಿಚಾರದಲ್ಲಿ ರಾಜಕೀಯ ಮಾಡಿನೇ ದೇಶವನ್ನ ಹಾಳು ಮಾಡುತ್ತಿದ್ದಾರೆ.ಇಂತಹ ಘಟನೆಗಳ ಕುರಿತು ಮಾತಾಡಿ ಅಂದರೆ ಮೋದಿ ಬಾಯಿನೇ ತೆರಯಂಗಿಲ್ಲ.ಕಾಂಗ್ರೆಸ್ ಬಗ್ಗೆ ವಿದೇಶದಲ್ಲಿ ಪ್ರಧಾನಿ ಮೋದಿ ಮಾತಾಡುತ್ತಾರೆ ಎಂದು ಕಿಡಿ ಕಾರಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version