ದಿನದ ಸುದ್ದಿ
ದೇಶಾದ್ಯಂತ ಇಂದು ಮಹಾವೀರ ಜಯಂತಿ ಆಚರಣೆ ; ಗಣ್ಯರ ಶುಭಾಶಯ
ಸುದ್ದಿದಿನಡೆಸ್ಕ್:ದೇಶಾದ್ಯಂತ ಇಂದು ಮಹಾವೀರ ಜಯಂತಿಯನ್ನು ಆಚರಿಸಲಾಗುತ್ತಿದೆ. ಇಂದು 24ನೇ ಹಾಗೂ ಕೊನೆಯ ಜೈನ ತೀರ್ಥಂಕರ ಮಹಾವೀರ ಅವರ ಜನ್ಮದಿನ. ಜೈನ ಸಮುದಾಯಕ್ಕೆ ಇದು ಅತ್ಯಂತ ಪವಿತ್ರ ದಿನವಾಗಿದೆ.
ಭಗವಾನ್ ಮಹಾವೀರನ ಅನುಯಾಯಿಗಳು ಇಂದು ವಿಶೇಷ ಪ್ರಾರ್ಥನೆ, ಮಂತ್ರ ಪಠಣ ಮಾಡುವುದಲ್ಲದೇ ಪ್ರಸಾದವನ್ನು ವಿತರಿಸುವುದು ಹಾಗೂ ಮೆರವಣಿಗೆ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಮಹಾವೀರ ಜಯಂತಿ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ. ರಾಷ್ಟ್ರಪತಿ ಅವರು, ತಮ್ಮ ಸಂದೇಶದಲ್ಲಿ ಭಗವಾನ್ ಮಹಾವೀರ್ ಅವರು, ಅಹಿಂಸೆ ಮತ್ತು ಅನುಕಂಪದ ಸಂಕೇತವಾಗಿದ್ದಾರೆ.
ಅವರು, ಅಹಿಂಸಾ ಪರಮೊ ಧರ್ಮ ಎಂಬ ಸಂದೇಶದ ಮೂಲಕ ಮನುಕುಲಕ್ಕೆ ಹೊಸ ಹಾದಿಯನ್ನು ತೋರಿಸಿಕೊಟ್ಟಿದ್ದಾರೆ. ಅಲ್ಲದೇ ಮಹಾವೀರ ಅವರ ಸರಳತೆ, ದಯೆ, ತತ್ವಗಳನ್ನು ಪ್ರತಿಪಾದಿಸಿದ್ದರು ಎಂದು ಹೇಳಿದ್ದಾರೆ.
ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ತಮ್ಮ ಸಂದೇಶದಲ್ಲಿ ಭಗವಾನ್ ಮಹಾವೀರರ ಬೋದನೆಗಳು ಹೆಚ್ಚಿನ ಸಹಾನುಬೂತಿ ಮತ್ತು ಸಾಮರಸ್ಯದ ಜಗತ್ತಿನತ್ತ ನಮ್ಮ ಹಾದಿಯನ್ನು ಬೆಳಗಿಸುತ್ತಿವೆ. ಎಲ್ಲ ಜೀವಿಗಳಿಗೆ ಸಮಾನತೆ ಮತ್ತು ವಿಭಿನ್ನ ದೃಷ್ಟಿಕೋನದಲ್ಲಿ ನೋಡುವ ಸಂದೇಶವನ್ನು ಸಾರಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಮಹಾವೀರ ಜಯಂತಿ ಅಂಗವಾಗಿ ಜೈನ ಸಮುದಾಯಕ್ಕೆ ಶುಭಾಶಯ ಕೋರಿದ್ದಾರೆ. ಅವರು ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ಭಗವಾನ್ ಮಹಾವೀರರ ಆದರ್ಶಗಳು ಜಗತ್ತಿನೆಲ್ಲೆಡೆ ಅಸಖ್ಯಾಂತ ಜನರಿಗೆ ಶಕ್ತಿಯನ್ನು ನೀಡಿದೆ. ಅವರ ಬೋಧನೆಗಳನ್ನು ಜೈನ ಸಮುದಾಯ ಸುಂದರವಾಗಿ ಸಂರಕ್ಷಿಸಿ ಅವುಗಳನ್ನು ಪ್ರಚುರಪಡಿಸುತ್ತಿದೆ. ಭಗವಾನ್ ಮಹಾವೀರರ ಕನಸುಗಳನ್ನು ಸಾಕಾರಗೊಳಿಸಲು ಸರ್ಕಾರ ಬದ್ಧವಿದೆ. ಸರ್ಕಾರ ಪ್ರಾಕೃತ್ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡುವ ಮೂಲಕ ಮಹಾವೀರರ ಬೋಧನೆಗಳನ್ನು ಮತ್ತಷ್ಟು ಜನಪ್ರಿಯಗೊಳಿಸಲಾಗುತ್ತಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243