ಬಹಿರಂಗ
ನಮ್ಮ ಸಮಾಜವು ಅತಿಬುದ್ಧಿವಂತರ ಮತ್ತು ಅತಿನಾಯಕತ್ವದ ಭಾರದಲ್ಲಿ ನರಳುತ್ತಿದೆ..!
- ಹ.ರಾ.ಮಹಿಶ ಬೌದ್ಧ
ಒಂದು ದೃಷ್ಟಾಂತ: ಸಮೂಹ ನೃತ್ಯ ಅಭ್ಯಾಸದ ಸಂದರ್ಭದಲ್ಲಿ ತಂಡದವರೆಲ್ಲಾ ಮೊದಲು ಬಲಗಾಲ ಬಲಕ್ಕಿಟ್ಟು ಎಡಗಾಲೆತ್ತಿ ಕುಣಿಯಬೇಕೆಂದು ಅಭ್ಯಾಸ ಮಾಡಿದ್ದೆವು ಎಂದಿಟ್ಟುಕೊಳ್ಳಿ ವೇದಿಕೆಯ ಮೇಲೆ ಪ್ರದರ್ಶನ ಮಾಡುವಾಗ ಮರೆತು ಅಕಸ್ಮಾತ್ ತಂಡದ ಎಲ್ಲರೂ ಬಲಗಾಲಿನ ಬದಲು ಎಡಗಾಲ ಎಡಕ್ಕಿಟ್ಟು ಬಲಗಾಲೆತ್ತಿ ಕುಣಿದರೂ ನೃತ್ಯವು ಕೆಡುವುದಿಲ್ಲ..! ತಂಡದವರೂ ಕಸಿವಿಸಿಗೊಳ್ಳದೇ ನಕ್ಕು ನೃತ್ಯ ಮುಂದುವರಿಸುತ್ತಾರೆ ಪ್ರೇಕ್ಷಕರಿಗೂ ಅಲ್ಲಿ ತಪ್ಪಾಯಿತು ಎನಿಸುವುದಿಲ್ಲ..!!
ಆದರೆ, ಆ ತಪ್ಪನ್ನು (?) ತಂಡದ ಎಲ್ಲರೂ ಮಾಡಬೇಕು..! ಒಂದಿಬ್ಬರು ಅಭ್ಯಾಸದಂತೆಯೇ ಬಲಗಾಲು ಬಲಕ್ಕಿಟ್ಟು ಸರಿಯಾಗಿ ಮಾಡಿ ಇನ್ನೆಲ್ಲರೂ ಎಡಗಾಲ ಎಡಕ್ಕಿಟ್ಟರೂ ಅಥವಾ ಎಲ್ಲರೂ ಅಭ್ಯಾಸದಂತೆಯೇ ಬಲಗಾಲ ಬಲಕ್ಕಿಟ್ಟು ಸರಿಯಾಗಿ ಮಾಡಿ ಒಂದಿಬ್ಬರು ಮಾತ್ರ ಎಡಗಾಲ ಎಡಕ್ಕಿಟ್ಟರೆ ನೃತ್ಯ ಕೆಡುತ್ತದೆ..! ತಪ್ಪು ಮಾಡಿದವರಿಗೂ ಸರಿ ಮಾಡಿದವರಿಗೂ ವೇದಿಕೆಯ ಮೇಲೆಯೇ ಒಂಥರಾ ಕಸಿವಿಸಿಯಾಗುತ್ತದೆ. ಮತ್ತು ಆ ತಪ್ಪು ಪ್ರೇಕ್ಷಕರಿಗೂ ಎದ್ದು ಕಾಣುತ್ತದೆ..!
ಬಂಧುಗಳೇ, ಅನೇಕ ವಿಚಾರಗಳಲ್ಲಿ ಈಗ ಆಗುತ್ತಿರುವುದು ಇದೇ. ನಾನು ಅಥವಾ ನಾವು ಮಾಡುವುದು ಬರೆಯುವುದು ಅರಿತಿರುವುದು ಮಾತ್ರ ಸರಿ ಆದರೆ ನಮ್ಮದೇ ಗುರಿಯಿರುವ ಇನ್ನೊಬ್ಬರು ಮಾಡುತ್ತಿರುವುದು ತಿಳಿದಿರುವುದು ಬರೆದಿರುವುದು ತಪ್ಪು. ಅದು ಸರಿಯಲ್ಲ ಸಮಂಜಸವಲ್ಲ..!! ಎಂಬ ಮನಸ್ಥಿತಿ..!
ಯಾಕೆ ಹೀಗೆ….!? ಯಾಕೆ, ಶತಮಾನಗಳಿಂದಲೂ ಸರ್ವವಿದ್ಯೆಗಳ ಗುತ್ತಿಗೆ ಹಿಡಿದು ಬಂದಿರುವ ಬ್ರಾಹ್ಮಣ ಪುರಯಷ ವಿದ್ಯಾವಂತ ಬುದ್ಧಿವಂತರಿಗೆ ಈ ದೇವರು-ಗೀವರೆಲ್ಲಾ ಸುಳ್ಳು ಶಾಸ್ತ್ರ ಪುರಾಣಗಳೆಲ್ಲಾ ಪೊಳ್ಳು ಎಂದು ಗೊತ್ತಿಲ್ಲವೇ..!? ಆದರೂ ಅವರು ಹಾಗೆ ಹೇಳುವರೇ..!? ತಾವೂ ನಂಬುವಂತೆ ನಟಿಸಿ ಇತರಕೋಟಿಕೋಟಿಜನರನ್ನೂ ನಿಜವಾಗಿಯೂ ನಂಬಿಸಿ ಲಾಭ ಮಾಡಿಕೊಳ್ಳುತ್ತಿಲ್ಲವೇ.. ನಿರಾಯಾಸವಾಗಿ ಗೌರವ ಪಡೆಯುತ್ತಿಲ್ಲವೇ ಅದೇ ಧರ್ಮದೇವರೆಂಬ ಸುಳ್ಳುಗಳ ಸೌಧದ ಮೇಲೆ ದೇಶ ಆಳುತ್ತಿಲ್ಲವೇ..!? ಅವರಿಗೆ ಗೊತ್ತಿಲ್ಲವೇ
“ಈ ದೇಶದಲ್ಲಿ ನಮ್ಮವರು ಇತಿಹಾಸವನ್ನು ತಮಗೆ ಬೇಕಾದಂತೆ ತಿರುಚಿಬರೆದಿದ್ದಾರೆ ಎಂದು..!? ಎಲ್ಲಿಯಾದರೂ ಅವರು ಹೇಳುತ್ತಾರೆಯೇ…!? ಆ ಸುಳ್ಳು ಇತಿಹಾಸವನ್ನೇ ಸತ್ಯವೆಂದು ಪ್ರತಿಪಾದಿಸಲು ಸಾವಿರಾರು ಆಕರ ಗ್ರಂಥಗಳನ್ನು ಸೃಷ್ಟಿಸಿ ತಮಗೆ ಗೊತ್ತಿರುವ ಸತ್ಯವನ್ನು ಎದೆಯೊಳಗಿಟ್ಟುಕೊಂಡು ಪಠ್ಯದ ಮೂಲಕವೇ ದೇಶದ ಜನರ ಮೆದುಳಿಗೆ ಸುಳ್ಳುಗಳನ್ನೇ ತುರುಕಿ ತುಂಬಿ ಅಜ್ಞಾನದಿಂದ ಬೆಳೆದ ಬೆಳೆಯನ್ನು ಭರಪೂರ ಉಣ್ಣುತ್ತಿಲ್ಲವೇ..
ಇಡೀ ದೇಶದ ಸಂಪತ್ತಿನ ಒಡೆಯರಾಗಿಲ್ಲವೇ..!? ತನ್ನವರ ಒಂದು ಕೂದಲೂ ಕೊಂಕದಂತೆ ನೋಡಿಕೊಳ್ಳತ್ತಿಲ್ಲವೇ ದೇಶ ಆಳುತ್ತಿಲ್ಲವೇ..!? ಇದು ತಂತ್ರಗಾರಿಕೆ ಅಲ್ಲವೇ…!? ಅವರು ಸುಳ್ಳು ಮೋಸ ಸ್ವಾರ್ಥಕ್ಕಾಗಿ ತಂತ್ರಗಾರಿಕೆ ಮಾಡುತ್ತಾ ಯಶಸ್ವಿಯಾಗಿರಬೇಕಾದರೆ ನಾವು ಬಹುಜನ ಸಮಾಜವರು ಸತ್ಯಸ್ಥಾಪನೆಗಾಗಿ ಯಾಕೆ ಪ್ರತಿತಂತ್ರಗಾರಿಕೆ ಮಾಡಬಾರದು..!? ಅವರು ಒಡೆಯಲು ಒಡೆದು ಆಳಲು ಸಾವಿರ ಸುಳ್ಳು ಹೇಳುತ್ತಾ ನಂಬಿಸುತ್ತಾ ಬೇರುಬಿಡಿಸಿರಬೇಕಾದರೆ ನಾವು ಕಟ್ಟಲು ಕಟ್ಟಿಆಳಲು ನೂರು ಸತ್ಯಗಳನ್ನು ಯಾಕೆ ಗಟ್ಟಿಯಾಗಿ ಹೇಳಬಾರದು..!?
ಬಾಬಾಸಾಹೇಬರು ಹೋರಾಟ ಆರಂಭಿಸಿದ ಆ ದಿನಗಳಲ್ಲಿ (1918) ಸೌತ್ ಬರೋ ಆಯೋಗ ಮುಂದೆ ಭಾರತದ ಶೋಷಿತರಿಗೆ ವಿಶೇಷ ಹಕ್ಕುಗಳನ್ನು ಕೊಡಿಸಿಕೊಡಲು ಅವರು ಗಟ್ಟಿದನಿ ಎತ್ತಿ ಒತ್ತಿಹೇಳಿದ ಮಾತು
“ಶೋಷಿತರು/ಅಸ್ಪೃಶ್ಯರು ಹಿಂದೂಗಳಲ್ಲ”
ಅವರು (1927) ಚೌಡರ್ ಕೆರೆ ನೀರು ಮುಟ್ಟವ ಚಳವಳಿ ಮಾಡಿದ್ದು (1930) ಕಾಳಾರಾಂ ದೇವಾಲಯ ಪ್ರವೇಶ ಚಳವಳಿ ಮಾಡಿದ್ದು “ಶೋಷಿತರು/ಅಸ್ಪೃಶ್ಯರು ಹಿಂದೂಗಳಲ್ಲ” ಎಂದು ಮರುಸಾಬೀತುಪಡಿಸಲು..! 1930-31 ರ ದುಂಡುಮೇಜಿನ ಸಭೆಯಲ್ಲಿ ಗಟ್ಟಿಯಾಗಿ ವಾದ ಮಂಡಿಸಿ ಎಲ್ಲಾ ಹಕ್ಕುಅಧಿಕಾರಗಳನ್ನು ಗಳಿಸಿ ತಂದ್ದದ್ದು ಸಹ ಇದೇ “ಶೋಷಿತರು/ಅಸ್ಪೃಶ್ಯರು ಹಿಂದೂಗಳಲ್ಲ” ಎಂಬ ವಿಚಾರದಿಂದಲೇ…!! ಆದರೆ ಇದೇ ಬಾಬಾಸಾಹೇಬರಿಗೆ ತಾನು ತನ್ನ ಸಮುದಾಯ ಅಷ್ಟೇ ಅಲ್ಲದೇ ಇಡಿ ದೇಶದ SC ST/OBC ಗಳು ಮುಲತಃ ಹಿಂದೂಗಳಲ್ಲ ಎಂಬ ಸತ್ಯ ಆ ಮಟ್ಟದ ಐತಿಹಾಸಿಕ ಆಧಾರಸಹಿತ ಸ್ಪಷ್ಟತೆ ಇದ್ದರೂ 1935 ರ ಯವೋಲಾ ಅಧಿವೇಶನದಲ್ಲಿ “ನಾನು ಹಿಂದುವಾಗಿ ಹುಟ್ಟಿದ್ದೇನೆ” ಎಂದು ಯಾಕೆ ಹೇಳಿದರು…!? ಇದು ತನ್ನ ಸಮುದಾಯದೊಂದಿಗೆ ಇಡೀ ದೇಶದ ಶೋಷಿತ ಮೂಲನಿವಾಸಿ ಸಮುದಾಯಗಳನ್ನು ವಿಮೋಚನೆ ಮಾಡುವ ತಂತ್ರಗಾರಿಕೆಯಲ್ಲವೇ…!? ಬಾಬಾಸಾಹೇಬರನ್ನು ಓದಿಕೊಂಡು ಬರೆಯುತ್ತಿರುವ ಬುದ್ಧಿವಂತರಿಗೆಲ್ಲಾ ಎಲ್ಲವನ್ನೂ ಬಿಡಿಸಿ ಹೇಳಬೇಕೆ..!? ಯಾಕೆ ಈ ಕೂದಲು ಸೀಳುವ ಸಾಹಸ..!? ಯಾಕೀ ಅತಿಬುದ್ಧಿವಂತಿಕೆ..!?
“ಮಹಿಶ ದಸರ” ದ ಹೆಸರಿನಲ್ಲಿ ಒಂದಷ್ಟು OBC/SC/ST/RM ಮೂಲನಿವಾಸಿ ಬಂಧುಗಳು ಕಳೆದ ಕೆಲವು ವರ್ಷಗಳಿಂದ ಮೂಲನಿವಾಸಿ ಪ್ರಜ್ಞೆಯನ್ನು ಜಾಗೃತಗೊಳಿಸುತ್ತಿದ್ದಾರೆ. ಮಾಡಲಿ ಬಿಡಿ..! ಸಾಧ್ಯವಾದರೆ ಭಾಗವಹಿಸೋಣ ಇಲ್ಲದಿದ್ದರೆ ಸುಮ್ಮನಿರೋಣ..! ನಮ್ಮ ವಿರೋಧಿಗಳೆನಿಸಿಕೊಂಡಿರುವ ಮನುವಾದಿಗಳನ್ನಾದರೂ ನೋಡಿ ಕಲಿಯೋಣ ಎಂಬುದು ನನ್ನ ವಿನಮ್ರ ಮನವಿ..! ಯಾವುದಾದರೂ ನೆಪದಲ್ಲಿ ಯಾರ ಮೂಲಕವಾದರೂ ಸಾಮಾಜಿಕ ಪರಿವರ್ತನಾ ಚಳವಳಿ ಮುನ್ನಡೆದರೆ ಎಲ್ಲರೂ ಮನದಲ್ಲೇ ಖುಷಿಪಡೋಣ ಭಾಗಿಯಾಗೋಣ..! ವಿರೋಧಿಸಲೆಂದೇ ಹಾಳುಗೆಡವಲೆಂದೇ ಮನುವಾದಿಗಳಿದ್ದಾರೆ..! ನಾವು ಒಬ್ಬರನ್ನೊಬ್ಬರು ಒಪ್ಪೋಣ ಒಟ್ಟಿಗೆ ಸೇರಿ ಕಟ್ಟೋಣ..!
ಮಹಿಷದಸರಾವನ್ನು ಇನ್ನು ಮುಂದೆ ಮನೆಮನೆಯಲ್ಲಿಯೂ ಆಚರಿಸೋಣ…!
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ
ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.
ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.
ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್ಷಾ |
|
http://Visit : www.suddidina.com
ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ
ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.
9 ಆನೆಗಳ ತೂಕದ ಆಧಾರದಲ್ಲೇ ಆಹಾರ
ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.
ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.
ಅಂಬಾರಿ ಆನೆ ಯಾರು? ಕುತೂಹಲ
ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.
ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.
ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ
ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”
– ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್
ದಸರಾ ಗಜಪಡೆಯ ತೂಕದ ವಿವರ
- ಶ್ರೀಕಂಠ: 5,790 ಕೆಜಿ
- ಏಕಲವ್ಯ: 5,600 ಕೆಜಿ
- ಧನಂಜಯ: 5,530 ಕೆಜಿ
- ಮಹೇಂದ್ರ: 5,490 ಕೆಜಿ
- ಪ್ರಶಾಂತ: 5,205 ಕೆಜಿ
- ಗೋಪಿ: 5,170 ಕೆಜಿ
- ಶ್ರೀರಾಮ: 4,820 ಕೆಜಿ
- ಲಕ್ಷ್ಮೀ: 3,990 ಕೆಜಿ
- ಕಾವೇರಿ: 3,075 ಕೆಜಿ

ದಿನದ ಸುದ್ದಿ
ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
ಕೂಡ್ಲುಗೇಟ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ
ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್ನ ಎಸ್ಎನ್ಎನ್ ಎಸ್ಟೇಟ್ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್ಎನ್ಎನ್ ರಾಜ್ ಕಾರ್ಪ್ ಸಂಸ್ಥೆಯು ಎಚ್ಎಸ್ಆರ್ ಲೇಔಟ್ನಲ್ಲಿರುವ ತನ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್ಮೆಂಟ್ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.
₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ
ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ
ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್ಎನ್ಎನ್ ಅಪಾರ್ಟ್ಮೆಂಟ್ ನಿರ್ದೇಶಕ ಅನೂಜ್ ತಿಳಿಸಿದ್ದಾರೆ. ಫ್ಲ್ಯಾಟ್ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.
ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಾಣ
ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್ಗಳು ಮುಂಗಡವಾಗಿ ಬುಕ್ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.
ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

ದಿನದ ಸುದ್ದಿ
ಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.
ಹೈಲೈಟ್ಸ್ |
|
http://Visit : www.suddidina.com
ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್
ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.
3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ
ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.
ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.
ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ
ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಹೆಚ್ಚಿದ ಕಣ್ಗಾವಲು
ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.
ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

-
ದಿನದ ಸುದ್ದಿ6 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ7 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ6 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ7 days ago₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
-
ದಿನದ ಸುದ್ದಿ7 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ6 days agoಡಾಲಿಯ ಕನಸು ಒಂದೇ ಹೀರೋ ಆಗೋದು
-
ದಿನದ ಸುದ್ದಿ7 days agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ


