Connect with us

ನಿತ್ಯ ಭವಿಷ್ಯ

ಸಂಕ್ರಾಂತಿ ಹಬ್ಬದ ಶುಭಾಶಯಗಳೊಂದಿಗೆ ಮಕರ ಸಂಕ್ರಾಂತಿಯ ವಿಶೇಷತೆಗಳು

Published

on

ಶ್ರೀ. ಕೇರಳ ಮಾಂತ್ರಿಕ ಜ್ಯೋತಿಷ್ಯ ಶಾಸ್ತ್ರಂ ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್:9964584883

ಜಗನ್ಮಾತೆ ಶ್ರೀ ಭಗವತಿ ಭದ್ರಕಾಳಿ ಅಮ್ಮನವರ ಸರ್ವಾಭಿಷ್ಟ ಸಿದ್ಧಿ ಪೂಜೆ ಶಕ್ತಿಯಿಂದ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ ನಂಬಿ ನಂಬದಿರಿ ಇದು ಸತ್ಯ ಕರೆ ಮಾಡಿ 9964584883

ಮಕರ ಸಂಕ್ರಾಂತಿಯ ವಿಶೇಷತೆಗಳು

ಶ್ರೀ ಶಕೆ 1941 ಶ್ರೀವಿಕಾರಿನಾಮ ಸಂವತ್ಸರ ಮಕರಸಂಕ್ರಾಂತಿ ಫಲ

ಶ್ರೀ ಶಾಲಿವಾಹನ ಶಕೆ 1941 ಶ್ರೀವಿಕಾರಿನಾಮ ಸಂವತ್ಸರ ಪುಷ್ಯ ಕೃಷ್ಣ ಚತುರ್ಥಿ ಬುಧವಾರ ದಿ.15-01-2020 ರಂದು 47 ಘಟಿ 50 ಫಳಕ್ಕೆ ಅಂದರೆ ಬುಧವಾರ ಬೆಳಿಗ್ಗೆ 06 ಘಂ 08 ನಿಮಿಷಕ್ಕೆ ಪೂರ್ವಾಫಾಲ್ಗುಣಿ ನಕ್ಷತ್ರ, ತೈತಿಲ ಕರಣದಲ್ಲಿ ಸೂರ್ಯನಾರಾಯಣನು ಧನು ರಾಶಿಯನ್ನು ಬಿಟ್ಟು ಮಕರ ರಾಶಿ ಪ್ರವೇಶ ಮಾಡುತ್ತಾನೆ.

ಪೂರ್ವಾಫಾಲ್ಗುಣಿ
ನಕ್ಷತ್ರನಾಮ-
ಘೋರಾ

ಬುಧವಾರ
ವಾರನಾಮ-
ಮಹೋದರಿ

ವಾಹನ: ಕತ್ತೆ,
ಉಪವಾಹನ: ಟಗರು

ಸಂಕ್ರಾಂತಿ ಪುಣ್ಯ ಕಾಲ : ಮಂಗಳವಾರ ಭೋಗಿ ಹಾಗೂ ಬುಧವಾರ ಹಬ್ಬದ ಆಚರಣೆ ಇದೆ. ಸಂಕ್ರಾಂತಿ ನಂತರದ 40ಘಟಿವರೆಗೆ ಅಂದರೆ 16ತಾಸು ಪುಣ್ಯಕಾಲವಿರುತ್ತದೆ. ಅಂದರೆ ಮರುದಿನ ಬುಧವಾರ ದಿನಾಂಕ 15ರಂದು ಸಾಯಂಕಾಲ 06 ಘ 08 ನಿಮಿಷದವರೆಗೂ ಪರ್ವಪುಣ್ಯಕಾಲದ ಆಚರಣೆಯನ್ನು ಮಾಡಬೇಕು. ಈ ಸಮಯದಲ್ಲಿ ಸ್ನಾನ,ದಾನ,ಪಿತೃತರ್ಪಣ ಮುಂತಾದ ಕಾರ್ಯವನ್ನು ಮಾಡಬೇಕು.

ಸಂಕ್ರಾಂತಿ ಸ್ವರೂಪ : ಯೌವನಾವಸ್ಥೆಯ ಪಕ್ಷಿಜಾತಿಯ ಸಂಕ್ರಾಂತಿ ದೇವಿಯು ಪೂರ್ವದಿಂದ ಬಂದು, ದಕ್ಷಿಣಕ್ಕೆ ಮುಖಮಾಡಿ, ವಾಯವ್ಯಕ್ಕೆ ದೃಷ್ಟಿನೆಟ್ಟು, ಪಶ್ಚಿಮದೆಡೆಗೆ ಹೊರಟಿದ್ದಾಳೆ. ಶ್ವೇತ ಬಣ್ಣದ ಹತ್ತಿ ಬಟ್ಟೆ ತೊಟ್ಟು, ದಂಡ ಆಯುಧ ಧರಿಸಿ, ಬೆಳ್ಳಿ ಪಾತ್ರೆಯಲ್ಲಿ ಅಪೂಪ (ಕರಿದ ಸಿಹಿ) ಉಂಡು, ವಜ್ರ, ಹವಳ, ಕೇದಿಗೆ ಪುಷ್ಪ, ಗೋಪಿಚಂದನದಿಂದ ಅಲಂಕೃತಳಾಗಿ ಕುಳಿತಿದ್ದಾಳೆ.

ಜನ್ಮ ನಕ್ಷತ್ರ ಮೇಲಿಂದ ಸಂಕ್ರಾಂತಿ ಫಲ

ಪಂಥಾಫಲ
ಮಘಾ
ಪೂರ್ವಾ
ಉತ್ತರಾ

ಭೋಗಫಲ
ಹಸ್ತಾ
ಚಿತ್ತಾ
ಸ್ವಾತಿ
ವಿಶಾಖಾ
ಅನುರಾಧಾ
ಜ್ಯೇಷ್ಠಾ

ಚಿಂತಾಫಲ
ಮೂಲಾ
ಪೂ,ಷಾ
ಉ,ಷಾ

ವಸ್ತ್ರಫಲ
ಶ್ರವಣಾ
ಧನಿಷ್ಠಾ
ಶತತಾರಾ
ಪೂ,ಭಾ
ಉ,ಭಾ
ರೇವತಿ

ಹಾನಿಫಲ
ಅಶ್ವಿನಿ
ಭರಣಿ
ಕೃತ್ತಿಕಾ

ವಿಪುಲಧನ ಫಲ
ರೋಹಿಣಿ
ಮೃಗಶಿರಾ
ಆದ್ರ್ರಾ
ಪುನರ್ವಸು
ಪುಷ್ಯ
ಆಶ್ಲೇಷಾ

ಶ್ಲೋಕ : ತೀಲಸ್ನಾಯಿ ತಿಲೋದ್ವರ್ತಿ ತಿಲಹೋಮಿ ತೀಲತರ್ಪಣ: |
ತಿಲಭುಕ್ ತಿಲದಾತಾಚ ಷಟ್‍ತಿಲಾಃ ಪಾಪನಾಶನಾ: ||

ಈ ಪರ್ವ ಕಾಲದಲ್ಲಿ ಯಾರು ಆರು ವಿಧದಲ್ಲಿ ಎಳ್ಳಿನ ಉಪಯೋಗವನ್ನು ಮಾಡುತ್ತಾರೋ ಅಂಥವರ ಪಾಪ ನಾಶವಾಗಿ ಪುಣ್ಯವನ್ನು ಸಂಪಾದಿಸುತ್ತಾರೆ. 1) ಎಳ್ಳು ಮಿಶ್ರಿತ ನೀರಿನಿಂದ ಸ್ನಾನ ಮಾಡುವುದು 2) ಎಳ್ಳಿನ ಕಲ್ಕದಿಂದ ಮೈ-ಕೈ ತಿಕ್ಕಿಕೊಳ್ಳುವದು 3) ಎಳ್ಳಿನ ಹೋಮ 4) ಎಳ್ಳು ಮಿಶ್ರಿತ ನೀರಿನ ಸೇವನೆ 5) ಎಳ್ಳನ್ನು ಗುರುಗಳಿಗೆ ಇಲ್ಲವೇ ಬ್ರಾಹ್ಮಣರಿಗೆ ದಾನ ಕೊಡುವದು. 6) ಎಳ್ಳನ್ನು ಸೇವಿಸುವದು, ಹೀಗೆ ಆರು ರೀತಿಯಲ್ಲಿ ಎಳ್ಳನ್ನು ಉಪಯೋಗಿಸಿದರೆ ಅವರಿಗೆ ಪುಣ್ಯ ಪ್ರಾಪ್ತಿ ಆಗುತ್ತದೆ.

ಮಕರ ಸಂಕ್ರಮಣ – ಸೂರ್ಯಆರಾಧನೆ

ಆದಿತ್ಯೋ ಹ ವೈ ಪ್ರಾಣೋ ರಯಿರೇವ ಚಂದ್ರಮಾಃ
ರಯಿರ್ವಾ ಏತತ್ಸರ್ವಂ ಯಃ ಮೂರ್ತಂ ಚ ಅಮೂರ್ತಂ ಚ
ತಸ್ಮಾತ್ ಮೂರ್ತಿರೇವ ರಯಿಃ ||
ವಿಶ್ವರೂಪಂ ಹರಿಣಂ ಜಾತವೇದಸಂ ಪರಾಯಣಂ
ಜ್ಯೋತಿರೇಕಂ ತಪನ್ತಂ ಸಹಸ್ರರಷ್ಮಿಃ ಶತಧಾ ವರ್ತಮಾನಃ
ಪ್ರಾಣಃ ಪ್ರಜಾನಾಂ ಉದಯತಿ ಏಷಃ ಸೂರ್ಯಃ || ( ಪ್ರಶ್ನೋಪನಿಷತ್ )

ವೇದೋಪನಿಷತ್ತುಗಳಲ್ಲಿ ವರ್ಣಿಸಿದಂತೆ ಸೂರ್ಯನೇ ಪ್ರಾಣ , ರಯಿ ಎಂದರೆ ಮೂರ್ತ-ಅಮೂರ್ತರೂಪವಾದ ಜೀವ ಜಗತ್ತು. ಜಗತ್ತಿನ ಚಲನೆಗೆ ಸೂರ್ಯನೇ ಕಾರಣ. ಅದ್ವಿತೀಯ ಶಕ್ತಿಸ್ವರೂಪಿ, ವಿಶ್ವರೂಪಿಯಾದ ಸೂರ್ಯನಾರಾಯಣನು ಸಹಸ್ರ ಕಿರಣ ಪ್ರಕಾಶದಿಂದ ಉದಯಿಸಿ ಸಕಲ ಜೀವರಾಶಿಗೆ ಚೇತನಾಶಕ್ತಿಯನ್ನು ತುಂಬುತ್ತಾನೆ.

ಖಗೋಳಶಾಸ್ರಜ್ಞ ಶ್ರೀಭಾಸ್ಕರಾಚಾರ್ಯರು,
ಯಸ್ಯೋದಯಾಸ್ತ ಸಮಯೇ ಸುರಮುಕುಟ ನಿಘೃಷ್ಠ ಚರಣ ಕಮಲೋಪಿ |
ಕುರುತೇಂಜಲಿಂ ತ್ರಿನೇತ್ರಃ ಸಜಯತಿ ಧಾಮ್ನಾಂ ನಿಧಿ ಸೂರ್ಯಃ ||

ಯಾವ ಸೂರ್ಯನ ಉದಯಾಸ್ತ ಕಾಲಕ್ಕೆ ದೇವತೆಗಳೂ ತೆಲೆಬಾಗಿ ನಮಿಸುತ್ತಾರೋ ಅಂತಹ ಸರ್ವಶಕ್ತನಾದ, ಮಹಾನಿಧಿಯಾದ ಸೂರ್ಯನು ವಿಶ್ವಕ್ಕೆ ಜಯವನ್ನು ತಂದು ಕೊಡಲಿ ಎಂದು ಕೊಂಡಾಡಿದ್ದಾರೆ.

ಗೋಚಾರದಿಂದ ಸೂರ್ಯನು ಪ್ರತಿ ತಿಂಗಳು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಪ್ರವೇಶಿಸುತ್ತಾನೆ ಈ ಸೂರ್ಯ ಪರಿಬ್ರಮಣೆಗೆ ಸಂಕ್ರಮಣ ಎಂದು ಕೆರೆಯುತ್ತಾರೆ. ಕರ್ಕರಾಶಿ ಪ್ರವೇಶದಿಂದ ದಕ್ಷಿಣಾಯನ ಮತ್ತು ಮಕರ ರಾಶಿ ಪ್ರವೇಶದಿಂದ ಉತ್ತರಾಯಣ ಆರಂಭವಾಗುತ್ತದೆ.

ದೃಕ್ ಸಿದ್ಧಾಂತದ ಪ್ರಕಾರ ಡಿಸೆಂಬರ್ 22ರಿಂದಲೇ ಉತ್ತರಾಯಣ. ಅಂದರೆ ಚಲನಶೀಲವಾದ ಭೂಮಿಯು ಉತ್ತರದೆಡೆಗೆ ವಾಲುತ್ತದೆ. ಚಾಂದ್ರಮಾನ ಪಂಚಾಂಗದ ನಿರಯನ ಗಣನೆಯಂತೆ ಜನವರಿ 15ರಂದು ರವಿಯ ಮಕರ ರಾಶಿ ಪ್ರವೇಶದಿಂದ ಉತ್ತರಾಯಣ ಪ್ರಾರಂಭವಾಗುತ್ತದೆ.

ಇದು ದೇವತೆಗಳಿಗೆ ಹಗಲು ಎಂದು ಪುರಾಣಗಳಲ್ಲಿ ಉಲ್ಲೇಖವಿದೆ. ಶ್ರೀಭೀಷ್ಮಾಚಾರ್ಯರು ಶರಶಯ್ಯೆಯ ಮೇಲೆ ಮಲಗಿ ಧರ್ಮೋಪದೇಶ ಮಾಡಲು ಹಾಗೂ ದೇಹತ್ಯಾಗ ಮಾಡಲು ಉತ್ತರಾಯಣಕ್ಕಾಗಿ ಕಾದಿದ್ದರು ಎಂಬ ಉಲ್ಲೇಖಗಳಿವೆ.

ಆದ್ದರಿಂದ ಸಂಕ್ರಮಣದ ಕಾಲದಲ್ಲಿ ಸ್ನಾನ-ದಾನ ಮತ್ತು ದೇವಋಷಿ-ಪಿತೃ ತರ್ಪಣಕ್ಕೆ ವಿಶೇಷ ಮಹತ್ವವಿದೆ. ದೃಷ್ಟ ಕರ್ಮಗಳನ್ನು ದೃಕ್ ಸಿದ್ಧಾಂತದಂತೆ ಹಾಗೂ ಅದೃಷ್ಟ ಕರ್ಮಗಳಾದ ಹಬ್ಬ,ಹರಿದಿನ,ಪರ್ವಕಾಲ,ವ್ರತಗಳ ಆಚರಣೆ,ಮೊದಲಾದ ಧಾರ್ಮಿಕ ಕಾರ್ಯಗಳನ್ನು ನಿರಯನ ಗಣನೆಯಂತೆ ಆಚರಿಸಬೇಕು.

ಆದ್ದರಿಂದ ಮಕರ ಸಂಕ್ರಮಣವು ಹಬ್ಬ-ಜಾತ್ರೆ-ಉತ್ಸವಗಳ ಕಾಲವಾಗಿದೆ. ಹಬ್ಬವನ್ನು ದೇಶಾದ್ಯಂತ ಆಚರಿಸಲಾಗುತ್ತದೆ. ಮಕರ ಸಂಕ್ರಾಂತಿಗೆ ಆಸ್ಸಾಂನಲ್ಲಿ ಮಾಘಬಿಹು ಎನ್ನುತ್ತಾರೆ. ದಕ್ಷಿಣ ಭಾರತದ ಕೇರಳ ಮುಂತಾದ ರಾಜ್ಯದಲ್ಲಿ ಪೊಂಗಲ್, ಮಾಟ್ಟು ಪೊಂಗಲ್, ತೈ ಪೊಂಗಲ್, ಮಕರ ವಾವು ಹಾಗೂ ಪಂಜಾಬನಲ್ಲಿ ಲೊಹರಿ ಎಂದು ಆಚರಿಸುತ್ತಾರೆ.

ಸಂಕ್ರಾಂತಿ ಕೃಷಿಕರ ಹಬ್ಬ ಆದ್ದರಿಂದ ದನಕರುಗಳಿಗೆ, ಹಸಿಧಾನ್ಯಗಳಗೆ, ಕೃಷಿ ಉಪಯುಕ್ತ ಉಪಕರಣಗಳಿಗೆ ಹೆಚ್ಚಿನ ಬೇಡಿಕೆ ಇರುತ್ತದೆ. ಜಾತ್ರೆ-ಉತ್ಸವಗಳು, ಸಾಸ್ಕøತಿಕ ಕಾರ್ಯಕ್ರಮಗಳ, ಶಕ್ತಿಪ್ರದರ್ಶನ, ಚಕ್ಕಡಿ ಓಟ, ಜಲ್ಲಿಕಟ್ಟು ಮುಂತಾದ ಆಟಗಳ ಆಯೋಜನೆ ಮಾಡಲಾಗುತ್ತದೆ.

ಹಬ್ಬವನ್ನು ಮೂರುದಿನ ಆಚರಿಸುವದು ರೂಢಿಯಲ್ಲಿದೆ. ಮೊದಲದಿನ ‘ಭೋಗಿ’ ಅಂದು ಬೆಳಗ್ಗೆ ಕಬ್ಬು,ಬಾರಿಹಣ್ಣು,ಬೆಳಸಿ,ಸುಲಗಾಯಿ, ಬದನೆ,ತಪ್ಪಲುಉಳ್ಳಾಗಡ್ಡಿ,ಬೆಣ್ಣೆ,ಬೆಲ್ಲ ಸಹಿತವಾಗಿ ಕಾಯಿ,ಸೀರೆ,ಕಾಡಿಗೆ,ಕನ್ನಡಿ,ಹಣಿಗೆ ಮುಂತಾದ ವಸ್ತುಗಳನ್ನಿಟ್ಟು ಸುಮಂಗಲಿಯರಿಗೆ ಮರದಬಾಗಿನ ಕೊಡುವರು. ಸಾಯಂಕಾಲ ಕಬ್ಬು, ಸಕ್ಕರೆ ಅಚ್ಚು, ಹಣ್ಣುಗಳಿಂದ ಹಣ್ಣೆರೆದು ಆರತಿ ಮಾಡುವರು ಅಲ್ಲದೇ ದಿನಬಳಕೆಯ ವಸ್ತುಗಳಾದ ಲೋಟ, ತಟ್ಟೆ, ಬಟ್ಟಲು, ಮುಂತಾದ ಪಾತ್ರೆಗಳನ್ನು ಹಾಗೂ ಮಕ್ಕಳಿಗೆ ಪೆನ್ನು, ಪುಸ್ತಕ, ಆಟದ ಸಾಮಾನುಗಳನ್ನು ಹಂಚುತ್ತಾರೆ ಇದನ್ನು ‘ಲುಟಾಯಿಸುವದು’ ಅಥವಾ ‘ಬೀರುವದು’ ಎನ್ನುವರು.

ಎರಡನೇ ದಿನ ಸಂಕ್ರಮಣ ಅಂದು ಪರ್ವಪುಣ್ಯಕಾಲ ಇರುತ್ತದೆ. ಸಂಕ್ರಾಂತಿಯ ನಂತರದ 16ತಾಸಿನವರೆಗೆ ಪುಣ್ಯಕಾಲ ಇರುತ್ತದೆ. ಈ ಸಮಯದಲ್ಲಿ ಸುಮುದ್ರ, ನದಿ, ಸಂಗಮ ಸ್ಥಳಗಳಲ್ಲಿ ಸ್ನಾನ ಮಾಡುವದು ವಿಶೇಷ.

‘ತಿಲಸ್ನಾಯೀ ತಿಲೋದ್ವರ್ತಿ ತಿಲಹೋಮಿ ತಿಲೋದಕಿ | ತಿಲಭುಕ್ ತಿಲದಾತಾ ಚ ಷಟ್ ತಿಲಾ ಪಾಪನಾಶನಾಃ ||’

ಪುಣ್ಯಕಾಲದಲ್ಲಿ ಎಳ್ಳಿನ ಚಟ್ಟನ್ನು ಹಚ್ಚಿಕೊಂಡು ಎಳ್ಳು ಮಿಶ್ರಿತ ನೀರಿನಿಂದ ಸ್ನಾನ ಮಾಡುವದು, ಎಳ್ಳಿನಿಂದ ಹೋಮ ಮಾಡುವದು, ಎಳ್ಳಿನಿಂದ ತರ್ಪಣ ಕೊಡುವದು, ಎಳ್ಳನ್ನು ಸೇವಿಸುವದು ಹಾಗೂ ಬಂಧುಮಿತ್ರರಿಗೂ ಕೊಡುವದು ಹೀಗೆ ಎಳ್ಳನ್ನು ಆರುವಿಧದಲ್ಲಿ ಉಪಯೋಗ ಮಾಡುವದರಿಂದ ಪಾಪನಾಶವಾಗುತ್ತದೆ. ಮನೆಮನೆಗೂ ಹೋಗಿ ಎಳ್ಳುಬೆಲ್ಲ ಕೊಟ್ಟು ಮಧುರವಾಗಿ ಮಾತನಾಡಿ ಹಬ್ಬದ ಶುಭಾಶಯ ಕೋರುವದು ಸಂಪ್ರದಾಯ.

ಕೊನೆಯದಿನಕ್ಕೆ ಸಂಕ್ರಮಣ ಕರಿ ಎನ್ನುತ್ತಾರೆ. ಇದನ್ನು ತೊಡಕು ಎನ್ನುವರು. ವಿಘ್ನ ಪರಿಹಾರಕ್ಕೆ ಈ ದಿನ ಶ್ರೇಷ್ಟವಾಗಿದೆ. ಹೊಸದಾಗಿ ಮದವೆಯಾದ ಮೊದಲಗಿತ್ತಿಗೆ ಕಪ್ಪು ಸೀರೆ, ಕಪ್ಪು ಬಳೆ, ಕಪ್ಪು ಬಣ್ಣದ ಆಭರಣದಿಂದ ಅಲಂಕರಿಸಿ ಆರತಿ ಮಾಡಿ ದೃಷ್ಟಿ ತೆಗೆಯುವ ವಿಶಿಷ್ಟ ಸಂಪ್ರದಾಯವಿದೆ. ಅದರಂತೆ ಹೊಸದಾಗಿ ಖರೀದಿಸಿದ ದನಕರುಗಳು, ಯಂತ್ರೋಪಕರಣಗಳು, ಆಸ್ತಿ, ವಸ್ತು, ವಾಹನಗಳಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ. ಈ ದಿನ ಶುಭಕಾರ್ಯ ಅಥವಾ ಮಹತ್ವದ ಕಾರ್ಯಗಳಿಗೆ ವಜ್ರ್ಯವಾಗಿದೆ.

ಶ್ರೀಕೃಷ್ಣಾರ್ಪಣಮಸ್ತು

ಶ್ರೀ. ಕೇರಳ ಮಾಂತ್ರಿಕ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯರು ಲಕ್ಷ್ಮಿಕಾಂತ್ ಭಟ್
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ. 
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ. 
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.  9964584883

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending