ದಿನದ ಸುದ್ದಿ
ಆಧುನಿಕ ತಂತ್ರಜ್ಞಾನದ ಸದ್ಬಳಕೆಯಿಂದ ಆರೋಗ್ಯಕರ ಜೀವನ ಶೈಲಿಯನ್ನು ರೂಢಿಸಿಕೊಳ್ಳಿ : ಸಚಿವ ಮನ್ಸೂಖ್ ಮಾಂಡವೀಯ
ಸುದ್ದಿದಿನ,ದೆಹಲಿ : ಆಧುನಿಕ ತಂತ್ರಜ್ಞಾನವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಆರೋಗ್ಯಕರ ಜೀವನ ಶೈಲಿಯನ್ನು ರೂಢಿಸಿಕೊಳ್ಳಲು ಜನತೆ ಮುಂದಾಗಬೇಕು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸೂಖ್ ಮಾಂಡವೀಯ ಹೇಳಿದ್ದಾರೆ.
ಬೊಜ್ಜು, ಸ್ಥೂಲಕಾಯ ಸಮಸ್ಯೆಗಳ ಕುರಿತು ಗುರುವಾರದಿಂದ ನಗರದಲ್ಲಿ ಆರಂಭವಾಗಿರುವ ಮೂರು ದಿನಗಳ ಅಂತಾರಾಷ್ಟ್ರೀಯ ತಜ್ಞ ವೈದ್ಯರ “ಒಸಿಕಾನ್ 2022” ಸಮ್ಮೇಳನವನ್ನು ವರ್ಚುವಲ್ ಮೂಲಕ ಉದ್ಘಾಟಿಸಿ ಸಚಿವರು ಮಾತನಾಡಿದರು.
ತಂತ್ರಜ್ಞಾನದಲ್ಲಿ ವ್ಯಾಪಕ ಅಭಿವೃದ್ಧಿಯಾಗುತ್ತಿದ್ದು, ದಿನನಿತ್ಯ ಬಗೆ ಬಗೆಯ ಸಂಶೋಧನೆಗಳು ನಡೆಯುತ್ತಿವೆ. ಇದರ ಜತೆ ಅನಾರೋಗ್ಯಕರ ಜೀವನ ಶೈಲಿಯೂ ಸಹ ಹೆಚ್ಚಾಗುತ್ತಿದೆ. ಹೀಗಿರುವಾಗ ತಂತ್ರಜ್ಞಾನ ಆರೋಗ್ಯಪೂರ್ಣ ಬದುಕಿಗೆ ನಾಂದಿಯಾಗಬೇಕು ಎಂದರು.
ಕೋವಿಡ್ ಸಂದರ್ಭದಲ್ಲಿ ಸ್ಥೂಲಕಾಯದವರಿಗೆ ಹೆಚ್ಚಿನ ಸಮಸ್ಯೆಗಳು ಎದುರಾಗಿತ್ತು. ಇದನ್ನು ಅಂಕಿ ಅಂಶಗಳೇ ದೃಢಪಡಿಸುತ್ತವೆ. ಹೀಗಾಗಿಯೇ ನಾವು ಸೂಕ್ತ ಆರೋಗ್ಯ ನಿರ್ವಹಣೆ, ಜೀವನ ಪದ್ಧತಿಯಲ್ಲಿ ಬದಲಾವಣೆ ಹೊಂದಬೇಕಾಗಿದೆ. ದಿನನಿತ್ಯ ವ್ಯಾಯಾಮಕ್ಕೆ ಒತ್ತು ನೀಡಬೇಕು. ಕಳವಳಕಾರಿ ಸಂಗತಿ ಎಂದರೆ ದೇಶದಲ್ಲಿ ಶೇಕಡ 31.6ರಷ್ಟು ಮಂದಿ ಸ್ಥೂಲಕಾಯದಿಂದ ಬಳಲುತ್ತಿದ್ದು, ಇದನ್ನು ನೋಡಿದರೆ ನಮ್ಮ ಮುಂದೆ ಇದು ಬಹುದೊಡ್ಡ ಸಮಸ್ಯೆಯಾಗಿ ನಿಂತಿದೆ. ಅಪಾಯದ ಗಂಟೆ ಬಾರಿಸುತ್ತಿದೆ ಎಂದು ಹೇಳಿದರು.
Addressing the 19th National Conference of Obesity & Metabolic Surgery Society of India https://t.co/P6q8BD1w5X
— Dr Mansukh Mandaviya (@mansukhmandviya) April 21, 2022
Addressed 19th National Conference of Obesity & Metabolic Surgery Society of India.
Highlighted need to stay healthy amid rising instances of lifestyle disorders & non-communicable diseases.
Let's follow PM @NarendraModi Ji's mantra of 'Fit 🇮🇳, Healthy 🇮🇳' to control obesity. pic.twitter.com/ENl9onITYW
— Dr Mansukh Mandaviya (@mansukhmandviya) April 21, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346253
ದಿನದ ಸುದ್ದಿ
ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.
ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡಂಬೋಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕೇವಲ 4 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ!! 1/2#ಜನರಿಗಿಲ್ಲ_ನೆಮ್ಮದಿಯ_ಗ್ಯಾರಂಟಿ pic.twitter.com/iu3tqqEYZ3
— Janata Dal Secular (@JanataDal_S) May 18, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್
ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.
ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಆತ್ಮಕತೆ | ಕೋರಿನ ತೋಟ ಮತ್ತು ನಮ್ಮೂರ ದೇವರ ಗುಡಿಯಲ್ಲಿ ಪಂಚಾಯ್ತಿ
-
ದಿನದ ಸುದ್ದಿ3 days ago
ವಿಧಾನಪರಿಷತ್ ಚುನಾವಣೆ ; ಇಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನ
-
ದಿನದ ಸುದ್ದಿ3 days ago
ಪೌರತ್ವ ಪ್ರಮಾಣಪತ್ರ ಹಸ್ತಾಂತರ
-
ದಿನದ ಸುದ್ದಿ2 days ago
ಸಂಗೀತಗಾರರ ಹುದ್ದೆಗಳಿಗೆ ನೇಮಕಾತಿ
-
ದಿನದ ಸುದ್ದಿ4 days ago
ದಾವಣಗೆರೆ | ಶಿಕ್ಷಕರ ಹುದ್ದೆಗೆ ನೇರ ಸಂದರ್ಶನ
-
ದಿನದ ಸುದ್ದಿ4 days ago
ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿ ಪ್ರಾರಂಭ
-
ದಿನದ ಸುದ್ದಿ3 days ago
ಮೊರಾರ್ಜಿ ದೇಸಾಯಿ ವಿಜ್ಞಾನ ಕಾಲೇಜು ; ಪಿಯುಸಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಪ್ರಜ್ವಲ್ ಪೆನ್ಡ್ರೈವ್ ಪ್ರಕರಣ | ಎಸ್ಐಟಿ ಸೂಕ್ತ ತನಿಖೆ ನಡೆಸುತ್ತಿಲ್ಲ : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ