ಲೈಫ್ ಸ್ಟೈಲ್
ಲೈಂಗಿಕ ಕ್ರಿಯೆ ಮುಗಿದ ತಕ್ಷಣ ಹೊಟ್ಟೆ ಒಡೆದು ಸಾಯುವ ಗಂಡು ಇರುವೆಗಳು; ತಮ್ಮ ಸಂತಾನಕ್ಕಾಗಿ, ಪ್ರಾಣ ತ್ಯಜಿಸಲು ಹಿಂಜರಿಯುವುದಿಲ್ಲ…!
ಈ ಭೂಮಿಯ ಮೇಲೆ ಇರುವೆಗಳಿಲ್ಲದ ಜಾಗವಿಲ್ಲ. ಎಲ್ಲೇ ಒಂದು ಬಿರುಕು ಕಾಣಿಸಿದರೂ ಅಲ್ಲಿ ಇರುವೆಗಳು ಸೇರಿಕೊಂಡು ಬಿಡುತ್ತವೆ. ಪ್ರತಿಯೊಂದು ಜೀವಿಯೂ ತನ್ನ ಸಂತಾನ ಅಭಿವೃದ್ಧಿ ನಡೆಸುವುದು ಸಾಮಾನ್ಯ ಪ್ರಕ್ರಿಯೆ. ನಮ್ಮ ಕಣ್ಣಿಗೆ ಕಾಣುವ ಅತಿ ಸಣ್ಣದಾದ ಇರುವೆಯೂ ಸಹ ತನ್ನ ಸಂತಾನ ಅಭಿವೃದ್ಧಿಗಾಗಿ ಲೈಂಗಿಕ ಕ್ರಿಯೆ ನಡೆಸುತ್ತದೆ ಎಂದರೆ ಅಚ್ಚರಿಯಾಗುತ್ತದಲ್ಲವೇ.ಬನ್ನಿ ಇದರ ಬಗ್ಗೆ ತಿಳಿಯೋಣ….
ಇರುವೆಗಳು ಮಾನವನ ಹುಟ್ಟಿಗಿಂತಲೂ ಮೊದಲೇ ಅಸ್ಥಿತ್ವದಲ್ಲಿ ಇದ್ದವೆಂದು ಹೇಳಲಾಗಿದೆ. ಡೈನೋಸಾರ್ ಕಾಲದಿಂದಲೇ ಇರುವೆಗಳು ಇದ್ದವಂತೆ. ಈ ವಿಶ್ವದಲ್ಲಿ 12,500 ಪ್ರಬೇಧಗಳ ಇರುವೆಗಳು ಇವೆಯಂತೆ ಅವುಗಳಲ್ಲಿ 2,500 ಪ್ರಬೇಧಗಳನ್ನು ಮಾತ್ರ ಗುರುತಿಸಲಾಗಿದೆಯಂತೆ. ಅತಿ ಶೀತ ಪ್ರದೇಶಗಳಲ್ಲಿ ಇರುವೆಗಳು ವಾಸಿಸುವುದಿಲ್ಲ. 5 ಸೆಂಟಿಮೀಟರ್ ಉದ್ದದ ಇರುವೆಗಳನ್ನೂ ನಾವು ನೊಡ ಬಹುದು.
ಅತ್ಯಂತ ದೊಡ್ಡ ಗಾತ್ರದ ಇರುವೆಗಳನ್ನು’ ಕ್ವೀನ್ಸ್’ ಎಂದು ಕರೆಯುತ್ತಾರೆ. ಇವು 5 ರಿಂದ 6 ಸೆಂಟಿ ಮೀಟರ್ ಉದ್ದವಾಗಿರುತ್ತವೆ. ಇರುವೆಗಳು ಯಾವಾಗಲೂ ಗುಂಪುಗಳಲ್ಲಿ ವಾಸಿಸುತ್ತವೆ. ಈ ಗುಂಪುಗಳನ್ನು ಕಾಲೊನೀಸ್ ಎಂದು ಕರೆಯುತ್ತಾರೆ.ಪ್ರತೀ ಗುಂಪಿನಲ್ಲಿ ಲೈಂಗಿಕ ಸಾಮರ್ಥ್ಯವಿರುವ ಗಂಡು ಹಾಗೂ ಹೆಣ್ಣು ಇರುವೆಗಳಿರುತ್ತವೆ. ಗಂಡು ಇರುವೆಗಳನ್ನು ‘ಡ್ರೋಮ್ಸ್ ‘ಎಂದು ಹೆಣ್ಣು ಇರುವೆಗಳನ್ನು ‘ಕ್ವೀನ್ಸ್’ ಎಂದು ಕರೆಯುತ್ತಾರೆ. ಇರುವೆಗಳ ಲೈಂಗಿಕ ಕ್ರಿಯೆ ಬಹಳ ಆಕರ್ಷಕವಾಗಿರುತ್ತದೆ. ಇರುವೆಗಳು ಗಾಳಿಯಲ್ಲಿ ಲೈಂಗಿಕ ಕ್ರಿಯೆಯನ್ನು ನಡೆಸುತ್ತವೆ. ಇರುವೆಗಳು ಹಾರುತ್ತವೆಂದರೆ… ಅಚ್ಚರಿಯಾಗುತ್ತದಲ್ಲವೇ? ಹೌದು. ಡ್ರೋಮ್ಸ್ ಹಾಗು ಕ್ವೀನ್ಸ್ ಇರುವೆಗಳು ರೆಕ್ಕೆಗಳನ್ನು ಹೊಂದಿರುತ್ತವೆ. ಇವು ಗುಂಪಿನಲ್ಲಿರುವಾಗ ಲೈಂಗಿಕ ಕ್ರಿಯೆಯನ್ನು ನಡೆಸುವುದಿಲ್ಲ. ಲೈಂಗಿಕ ಕ್ರಿಯೆ ನಡೆಸುವಾಗ ಗಂಡು ತನ್ನ ವೀರ್ಯಾಣುಗಳನ್ನು ಬಿಡುಗಡೆ ಮಾಡುತ್ತದೆ .
ನಂತರ ಸುಮಾರು 25-30 ವರ್ಷಗಳ ಅವಧಿಗೆ, ಸಂತಾನ ಅಭಿವೃದ್ಧಿಪಡಿಸಲು ಹೆಣ್ಣಿಗೆ ವೀರ್ಯಾಣುಗಳ ಅವಶ್ಯಕತೆ ಇರುವುದಿಲ್ಲ. ವೀರ್ಯವನ್ನು ಸ್ಖಲಿಸಿದ ನಂತರ ಗಂಡು ಇರುವೆಗಳ ಹೊಟ್ಟೆಯೊಳಗಿನ ಅವಯವಗಳು ಸಿಡಿದು ,ಗಂಡು ಇರುವೆ ಮರಣ ಹೊಂದುತ್ತದೆ. ನಂತರದ ದಿನಗಳಲ್ಲಿ ಹೆಣ್ಣು ಇರುವೆ ಒಂದು ಗೂಡಿನಲ್ಲಿ ಮೊಟ್ಟೆಗಳನ್ನು ಇರಿಸುತ್ತದೆ. ಈ ಮೊಟ್ಟೆಗಳನ್ನು ಸೈನಿಕ ಇರುವೆಗಳು ಕಾಪಾಡುತ್ತವೆ. ಮೊಟ್ಟೆಗಳು ಒಡೆದು ಇರುವೆಗಳು ಹೊರ ಬಂದ ನಂತರ ಅವುಗಳಲ್ಲಿ ಕೆಲವೇ ಕೆಲವು ಇರುವೆಗಳು ಮಾತ್ರ ಲೈಂಗಿಕ ಸಾಮರ್ಥ್ಯ ಹೊಂದಿರುವ ಗಂಡು ಹಾಗು ಹೆಣ್ಣು ಇರುವೆಗಳು ಇರುತ್ತವೆ.
ಇರುವೆಗಳ ಲೈಂಗಿಕ ಕ್ರಿಯೆ ನಿಗಧಿತ ವಾತವರಣದಲ್ಲಿ ಮಾತ್ರ ನಡೆಯುತ್ತದೆನ್ನುವುದು ಗಮನಾರ್ಹ ವಿಷಯ. ಆ ಸಮಯದಲ್ಲಿ ಹೆಣ್ಣು ಹಾಗೂ ಗಂಡು ಇರುವೆಗಳು ಸೂಕ್ತ ಸ್ಥಳವನ್ನು ಹುಡುಕಿಕೊಂಡು ಹಾರಾಡುತ್ತಿರುತ್ತವೆ 2009 ರಲ್ಲಿ ಆಫ್ರಿಕಾ ದಲ್ಲಿ ಕ್ರಿಕೆಟ್ ಪಂದ್ಯ ನಡೆಯುತ್ತಿದ್ದ ಸಮಯದಲ್ಲಿ, ಹೀಗೆ ಹಾರಾಡುತ್ತಿದ್ದ ಇರುವೆಗಳ ಗುಂಪಿನಿಂದಾಗಿ ಪಂದ್ಯಕ್ಕೆ ಅಡಚಣೆ ಉಂಟಾಗಿದ್ದು ನಿಮಗೆ ನೆನಪು ಇದ್ದೇ ಇರುತ್ತದೆ.
(ಸಂಗ್ರಹ)

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ
ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ **”ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ – 2026″**ಕ್ಕೆ ದಾವಣಗೆರೆಯ ಕವಿ ಹಾಗೂ ಪತ್ರಕರ್ತ ಪಾಪು ಗುರು ಅವರ “ಈ ಹೊತ್ತಿಗೆ ಇಷ್ಟು ಸಾಕು” ಕವನ ಹಸ್ತ ಪ್ರತಿ ಆಯ್ಕೆಯಾಗಿದೆ.
ಪ್ರಶಸ್ತಿಗೆ ಈ ಬಾರಿ ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 53 ಕವನ ಹಸ್ತಪ್ರತಿಗಳು ಬಂದಿದ್ದು, ಅಂತಿಮ ಆಯ್ಕೆ ಪ್ರಕ್ರಿಯೆಯಲ್ಲಿ ಪಾಪು ಗುರು ಅವರ ಕೃತಿ ಪ್ರಶಸ್ತಿಗೆ ಪಾತ್ರವಾಗಿದೆ.
ಪ್ರಶಸ್ತಿಯು ₹5,000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ನವೆಂಬರ್ ತಿಂಗಳಲ್ಲಿ ಕೊಪ್ಪಳದಲ್ಲಿ ನಡೆಯಲಿರುವ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಸಾಹಿತ್ಯೋತ್ಸವದ ಸಂಚಾಲಕ ಮಹೇಶ್ ಬಳ್ಳಾರಿ ತಿಳಿಸಿದ್ದಾರೆ.
ಈಗಾಗಲೇ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಪಾಪು ಗುರು ಅವರ ‘ಮುಳ್ಳೆಲೆಯ ಮದ್ದು’, ‘ಮಣ್ಣೇ ಮೊದಲು’ ಕವನ ಸಂಕಲನಗಳು ಹಾಗೂ ‘ಸೂಜಿ’ ಕಾದಂಬರಿ ಪ್ರಕಟವಾಗಿವೆ. ಅಲ್ಲದೆ ‘ಕೆಂಪು ಕಾಂಡದ ಹೂ’ ಮತ್ತು ‘ಹಸಿರು ಹಾದಿಯ ಹೆಜ್ಜೆಗಳು’ ಕೃತಿಗಳನ್ನು ಸಂಪಾದನೆ ಮಾಡಿದ್ದಾರೆ. ಅವರ ಸೂಳೆಕೆರೆಯ ಇತಿಹಾಸದ ಹಿನ್ನೆಲೆ ಇರುವ ‘ಶಾಂತದೇವಿ’ ಕಾದಂಬರಿ ಮುದ್ರಣ ಹಂತದಲ್ಲಿದೆ.
ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸೃಜನಶೀಲ ಬರವಣಿಗೆಯ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವ ಪಾಪು ಗುರು ಅವರಿಗೆ ದೊರೆತಿರುವ ಈ ಪ್ರಶಸ್ತಿ ಸಾಹಿತ್ಯ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ. ಇವರಿಗೆ ಜಿಲ್ಲೆಯ ಅಭಿಮಾನಿಗಳು, ಪತ್ರಕರ್ತರು ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಸಾಹಿತಿ ಸಂತೆಬೆನ್ನೂರು ಫೈಜ್ನಟ್ರಾಜ್ ಹಾಗೂ ಹೆಚ್ ಬಿ. ಇಂದ್ರಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ
-
ದಿನದ ಸುದ್ದಿ4 days agoಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ
-
ದಿನದ ಸುದ್ದಿ4 days agoವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
-
ದಿನದ ಸುದ್ದಿ2 days agoದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

