Connect with us

ದಿನದ ಸುದ್ದಿ

ಮಲೇಬೆನ್ನೂರು ಪುರಸಭೆ | ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆಯಲು ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಲೇಬೆನ್ನೂರು ಪುರಸಭೆಯ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ ಮಿಷನ್ (ನ)-2.0 ಯೋಜನೆಯ ಮಾಹಿತಿ ಶಿಕ್ಷಣ ಮತ್ತು ಸಂವಹನ ಘಟಕದಡಿಯಲ್ಲಿ ಘನತ್ಯಾಜ್ಯ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯ ಕುರಿತಂತೆ ನಗರ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ವಿವಿಧ ಬಗೆಯ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವ-ಸಹಾಯ ಗುಂಪುಗಳ ಸದಸ್ಯೇತರ ನೇಮಕಾತಿ (ಘನತ್ಯಾಜ್ಯ, ಪಾರಂಪರಿಕ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಸಿಡಿ ತ್ಯಾಜ್ಯ ನಿರ್ವಹಣೆ ಸ್ವಚ್ಛ-ಸರ್ವೇಕ್ಷಣ, ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಓಡಿಎಫ್, ಓಡಿಎಫ್, ಸ್ಟಾರ್ ರೇಟಿಂಗ್ಸ್ ಮತ್ತು ಇತರೆ ವಿಷಯಗಳ ಕುರಿತು ಮನೆ ಮನೆಗೂ ಭೇಟಿ ನೀಡಿ ನೇರವಾಗಿ ಮಾತನಾಡುವುದರ ಮೂಲಕ ಐ.ಇ.ಸಿ ಚಟುವಟಿಕೆಗಳನ್ನು ಕೈಗೊಳ್ಳಲು ಮಹಿಳಾ ಸ್ವ-ಸಹಾಯ ಗುಂಪುಗಳಿಂದ 2 ಸದಸ್ಯರುಗಳನ್ನು ಮಾಸಿಕ ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಮಹಿಳಾ ಅಭ್ಯರ್ಥಿಗಳು ಅಗತ್ಯ ದಾಖಲಾತಿಯೊಂದಿಗೆ ಮೇ.23 ರೊಳಗಾಗಿ ನಿಗಧಿತ ಅರ್ಜಿ ನಮೂನೆಯನ್ನು ಕಚೇರಿಯಿಂದ ಪಡೆದು ಮುಖ್ಯಾಧಿಕಾರಿಗಳು, ಪುರಸಭೆ, ಮಲೇಬೆನ್ನೂರು ವಿಳಾಸಕ್ಕೆ ದ್ವಿ-ಪ್ರತಿಯಲ್ಲಿ ಸಲ್ಲಿಸಬೇಕೆಂದು ಮುಖ್ಯಾಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ

Published

on

ಸುದ್ದಿದಿನ,ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 23) ಮಧ್ಯಾಹ್ನ 12ಕ್ಕೆ ಪ್ರಕಟಿಸಲಾಗುತ್ತದೆ.

ಫಲಿತಾಂಶವನ್ನು ವೆಬ್‌ಸೈಟ್ (https://karresults.nic.in) ಲಿಂಕ್ ಮೂಲಕ ಹಾಗೂ KarnatakaOne mobile app ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ಗೆ ವಾಟ್ಸ್‌ಆ್ಯಪ್/ ಎಸ್‌ಎಂಎಸ್‌ ಮೂಲಕ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುತ್ತದೆ.

ಈ ವರ್ಷ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್‌ (https://www.digilocker.gov.in) ಮೂಲಕ ಲಭ್ಯಗೊಳಿಸಲಾಗುತ್ತದೆ. ಈ ಮೂಲಕವೂ ಡೌನ್‌ಲೋಡ್ ಮಾಡಿಕೊಳ್ಳಬಹುದು. ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಶಾಲೆಗಳಿಗೆ ಮಧ್ಯಾಹ್ನ 12 ಗಂಟೆಗೆ ಲಭ್ಯಗೊಳಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಮ್ಮ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಆದರೆ ತಮ್ಮ ಶ್ರೇಣಿಗಳ ಬಗ್ಗೆ ಅತೃಪ್ತರಾಗಿರುವ ವಿದ್ಯಾರ್ಥಿಗಳು ಮಂಡಳಿಯು ಏರ್ಪಡಿಸಿದ ಕರ್ನಾಟಕ SSLC ಸುಧಾರಣಾ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಹೊಂದಿರುತ್ತಾರೆ. ಇದು ನಿರ್ದಿಷ್ಟ ವಿಷಯಗಳಲ್ಲಿ ಅಂಕಗಳನ್ನು ಸುಧಾರಿಸಲು ಅವಕಾಶವನ್ನು ನೀಡುತ್ತದೆ.

ಒಂದು ಅಥವಾ ಹೆಚ್ಚಿನ ವಿಷಯಗಳಲ್ಲಿ ಒಬ್ಬ ವಿದ್ಯಾರ್ಥಿ ಅನುತ್ತೀರ್ಣನಾದರೆ, ಅವರು ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳದೆ ಪೂರಕ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ

Published

on

ಸುದ್ದಿದಿನ,ದಾವಣಗೆರೆ: ಉತ್ತಮ ಗುಣಮಟ್ಟದ ಜಿ-9 ತಳಿಯ ಅಂಗಾಂಶ ಕೃಷಿ ಬಾಳೆಗಳನ್ನು ಕೃಷಿ ಇಲಾಖೆ ಮಾರಾಟ ಮಾಡಲಾಗುತ್ತಿದೆ.

ಆಸಕ್ತ ರೈತರು ಸಹಾಯಕ ತೋಟಗಾರಿಕಾ ಅಧಿಕಾರಿ, ಅಂಗಾಂಶ ಕೃಷಿ ಬಾಳೆ, ಜೈವಿಕ ಕೇಂದ್ರ, ಎಪಿಎಂಸಿ ಈ ಬ್ಲಾಕ್, ಹಣ್ಣಿನ ಮಾರುಕಟ್ಟೆ ಹತ್ತಿರ ಮೊ.ಸಂ:6360950904, 8192296196 ಸಂಪರ್ಕಿಸಿ ಇಲಾಖೆ ದರದಲ್ಲಿ ಬಾಳೆಸಸಿಗಳನ್ನು ಕೊಂಡುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

Published

on

ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ ರೂಪಿಸಿತ್ತು. ಮಹಿಳಾ ಮೀಸಲಾತಿ ಮಸೂದೆಯನ್ನು ಈ ಬ್ರಾಂಡ್‌ನ ಸರ್ವೋಚ್ಚ ಸಾಧನೆಯಾಗಿ ಪ್ರಸ್ತುತಪಡಿಸಲಾಯಿತು. ಆದರೆ ಬಿಜೆಪಿ ಒಂದು ಅತ್ಯಂತ ವ್ಯವಸ್ಥಿತ ಮತ್ತು ಚಾಣಾಕ್ಷ ‘ಪಾಲಿಟಿಕಲ್ ಮಾರ್ಕೆಟಿಂಗ್’ ತಂತ್ರವಾಗಿ ಬಳಸಿಕೊಳ್ಳುವುದಕ್ಕೆಯತ್ನಿಸಿ ವಿಫಲವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.

ಗೃಹ ಕಚೇರಿಯಲ್ಲಿ ಇಂದು ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಪುನರ್‌ವಿಂಗಡಣೆಗೆ “ಬಲಿಪಶು” ಮಾಡುವುದು ಸರಿಯಲ್ಲ. ೨೦೨೩ರ ಕಾಯಿದೆಯಲ್ಲಿ ಜನಗಣತಿ ನಂತರ ಅನುಷ್ಠಾನ ಎಂದು ತಿಳಿಸಲಾಗಿದೆ. ಆದರೆ ಈಗ ೨೦೧೧ರ ಜನಗಣತಿ ಆಧಾರದಲ್ಲಿ ವೇಗಗೊಳಿಸುವುದು ಏಕೆ? ಜಾತಿ ಜನಗಣತಿಯನ್ನು ಸೇರಿಸದಿದ್ದರೆ ಪುನರ್‌ವಿಂಗಡಣೆಯು ಸಾಮಾಜಿಕ ನ್ಯಾಯಕ್ಕೆ ಹೊಂದುವುದಿಲ್ಲ. ದಕ್ಷಿಣ ರಾಜ್ಯಗಳಲ್ಲಿ ಕುಟುಂಬ ನಿಯಂತ್ರಣದ ಯಶಸ್ಸಿಗೆ ಶಿಕ್ಷೆ ನೀಡುವಂತಾಗಬಾರದು. ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಮಸೂದೆ ಜಾರಿಗಿದ್ದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿತ್ತು. ಬಿಜೆಪಿ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಮೂರನೇ ಎರಡರಷ್ಟು ಬಹುಮತ ಸಿಗಲಿಲ್ಲ ಎಂದರು.

ಮಸೂದೆಯನ್ನು ವೋಟ್ ಬ್ಯಾಂಕ್ ಆಗಿ ಬಳಕೆ ಮಾಡಿಕೊಂಡು ಮಹಿಳೆಯರ ಭಾವನೆಗಳೊಂದಿಗೆ ಆಟವಾಡಲು ಹೋಯಿತು. ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಅದು ನಡೆಯಲಿಲ್ಲ. ನಮ್ಮ ವಿರೋಧವೇನಿದ್ದರು ಪುನರ್ ವಿಂಗಡಣೆ ಮಸೂದೆ ತಿರಸ್ಕರಿಸಿದೆ ಹೊರತು ಮಹಿಳಾ ಮೀಸಲು ಮಸೂದೆ ಅಲ್ಲ ಎಂದರು.

ಪಂಚ ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಿದ್ದರೂ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದು ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳಬೇಕು. ಅವರು ಚುನಾವಣೆಯ ಸಂದರ್ಭದಲ್ಲಿ ದೇಶ ಉದ್ದೇಶಿಸಿ ಮಾಡಿದ ಭಾಷಣದಲ್ಲಿ ವಿರೋಧ ಪಕ್ಷಗಳನ್ನು ತೆಗಳಿಕೆ ಮಾಡಿದ್ದು ಸರಿಯಲ್ಲ. ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಮಾಡಿದರು.

ಮಸೂದೆ ಕುರಿತು ಸರ್ವ ಪಕ್ಷಗಳ ಸಭೆ ಕರೆಯುವಂತೆ ಮಾಡಿಕೊಂಡ ಮನವಿ ಉಪೇಕ್ಷೆ ಮಾಡಿತು ಕೇಂದ್ರ ಸರ್ಕಾರ. ಮಹಿಳಾ ಮೀಸಲಾತಿ ಮಸೂದೆ ಈಗಾಗಲೇ ಲೋಕಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕ್ಷೇತ್ರ ಪುನರ್ ವಿಂಗಡಣೆ ಬಗ್ಗೆ ಆತಂಕ ಇದೆ. ಎಲ್ಲರ ಒಪ್ಪಿಗೆ ಪಡೆದು ಮುಂದುವರೆದಿದ್ದರೆ ಅನುಕೂಲ ಆಗುತ್ತಿತ್ತು. ೨೦೨೪ರಲ್ಲಿ ಮಹಿಳಾ ಮೀಸಲು ಜಾರಿಗೆ ತರುವ ಅವಕಾಶ ಇತ್ರು. ಇದನ್ನು ಮಾಡಲು ಮುಂದಾಗಲಿಲ್ಲ. ಕ್ಷೇತ್ರ ಪುನರ್ ವಿಂಗಡಣೆ ಜಮ್ಮು ಮತ್ತು ಕಾಶ್ಮೀರ ಹಾಗೂ ಅಸ್ಸಾಂ ದಲ್ಲಿ ತಮ್ಮ ಅನುಕೂಲ, ರಾಜಕೀಯ ಲಾಭಕ್ಕೆ ಅನುಗುಣವಾಗಿ ಮಾಡಿ ತೋರಿಸಿದ್ದಾರೆ. ಈ ಬಗ್ಗೆ ಹೆಚ್ಚು ಆತಂಕ ಇದೆ. ಆಡಳಿತ ಪಕ್ಷಕ್ಕೆ ಈ ಮಸೂದೆ ಜಾರಿಗೆ ತರುವ ಬದ್ದತೆ ಇದ್ದಿದ್ದರೆ ಸರ್ವ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆಯುವ ಪ್ರಯತ್ನ ಮಾಡುತ್ತಿದ್ದರು. ರಾಜೀವ್ ಗಾಂಧಿ ಅವರು ಸ್ಥಳೀಯ ಸಂಸ್ಥೆಯಲ್ಲಿ ಶೇ ೫೦ ಜಾರಿಗೆ ತಂದಿದ್ದೇವೆ ಎಂದರು.

ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಜಾರಿಗೆ ತಂದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗಲಿದೆ. ಜನಗಣತಿಯಲ್ಲಿ ಜಾತಿ ಗಣತಿ ನಡೆಯುತ್ತಿದೆಯೇ ಎಂಹುದು ಇನ್ನೂ ಸ್ಪಷ್ಟವಾಗಿ ಹೇಳಿಲ್ಲ. ಉತ್ತರ ಪ್ರದೇಶ ಹಾಗೂ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ನಡುವೆ ಇರುವ ವ್ಯತ್ಯಾಸ ದೊಡ್ಡದು. ಉತ್ತರ ಭಾರತೀಯ ರಾಜ್ಯಗಳು ಹೆಚ್ಚು ಪ್ರಾಬಲ್ಯ ಸಾಧಿಸಿದರೆ ದಕ್ಷಿಣ ಭಾರತಕ್ಕೆ ತೊಂದರೆ ಆಗುತ್ತದೆ. ಮಸೂದೆ ಮಂಡನೆಗೆ ಇನ್ನೂ ಎರಡು ವರ್ಷಗಳ ಕಾಲಾವಕಾಶ ಇದೆಯಾವುದು ಒಳಿತು ಎಂಬುದು ಮಹಿಳೆಯರು ಆಲೋಚನೆ ಮಾಡಲಿ ಎಂದರು.

ಸುದ್ದಿಗೋಷ್ಟಿಯಲ್ಲಿ ‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಕಾಂಗ್ರೆಸ್ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಅನಿತಾಬಾಯಿ, ಮುಖಂಡರಾದ ಶಿವಕುಮಾರ್, ಅಯೂಬ್ ಪೈಲ್ವಾನ್, ಎ.ನಾಗರಾಜ್ ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending