ರಾಜಕೀಯ

ರಾಜ್ಯಸಭಾ ಚುನಾವಣೆಗೆ ಖರ್ಗೆ : ಸಿದ್ದರಾಮಯ್ಯ ಅಭಿನಂದನೆ

Published

on

ಸುದ್ದಿದಿನ,ಕಲಬುರಗಿ: ಜೂನ್-18ರಂದು ರಾಜ್ಯದಲ್ಲಿ ಖಾಲಿಯಾಗಲಿವರುವ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.ಇನ್ನು ಕರ್ನಾಟಕ ರಾಜ್ಯ ಕಾಂಗ್ರೆಸ್ ನಿಂದ ಕಾಂಗ್ರೆಸ್ ಹಿರಿಯ ಮುಖಂಡರಾದ ಡಾ.ಮಲ್ಲಿಕಾರ್ಜುನ ಖರ್ಗೆಯವರ ಹೆಸರು ಹೈಕಮಾಂಡ್ ಅಂತಿಮಗೊಳಿಸಿದೆ.

ಈ ಕುರಿತಂತೆ ಆದೇಶ ಹೊರಡಿಸಿರುವ ಎಐಸಿಸಿಯ ಜನರಲ್ ಸೆಕ್ರೇಟರಿ ಮುಖುಲ್ ವಾಷ್ನಿಕ್, ಕಾಂಗ್ರೆಸ್ ನ ಅಧಿನಾಯಕಿ ಸೋನಿಯಾ ಗಾಂಧಿಯವರ ನಿರ್ದೇಶನದಂತೆ ಡಾ.ಮಲ್ಲಿಕಾರ್ಜುನ ಖರ್ಗೆ ಅವರನ್ನ, ಕರ್ನಾಟಕದಿಂದ ರಾಜ್ಯಸಭೆ ಸ್ಥಾನಕ್ಕೆ ಅಭ್ಯರ್ಥಿಯಾಗಿ ಘೋಷಣೆ ಮಾಡುತ್ತಿರುವುದಾಗಿ ಪತ್ರಿಕೆ ಪ್ರಕಟಣೆ ಮೂಲಕ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ದಿನಾಂಕ 25-06-2020ರಂದು ರಾಜ್ಯಸಭೆಗೆ ಆಯ್ಕೆಯಾಗಿದ್ದಂತ ಡಿ.ಕುಪೇಂದ್ರ ರೆಡ್ಡಿ, ಪ್ರಭಾಕರ್ ಕೋರೆ, ರಾಜೀವ್ ಗೌಡ ಎಂ ವಿ ಮತ್ತು ಬಿಕೆ ಹರಿಪ್ರಸಾದ್ ಅವರ ಅವಧಿ ಮುಕ್ತಾಯಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಈ ತೆರವಾಗುತ್ತಿರುವ ಸ್ಥಾನಗಳಿಗೆ ದಿನಾಂಕ 19-06-2020ರಂದು ಚುನಾವಣೆ ನೆಡಸುವುದಾಗಿ ಘೋಷಣೆ ಮಾಡಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version