ಸಿನಿ ಸುದ್ದಿ
ಸ್ನೇಹ, ಪ್ರೀತಿಗಿಲ್ಲ ಅಂತರದ ಭೇದಭಾವ
ಸುದ್ದಿದಿನ ಡೆಸ್ಕ್ “ಅಂಕಲ್” ಕಾಲಿವುಡ್ ನಲ್ಲಿ ಸದ್ಯ ಸದ್ದು ಮಾಡುತ್ತಿರುವ ಮಮ್ಮುಟ್ಟಿ ನಟನೆಯ ಚಿತ್ರ. ಪ್ರಸ್ತುತ ಸಾಮಾಜಿಕ ವ್ಯವಸ್ಥೆ ಪ್ರತಿಬಿಂಬಿಸುವ ಉತ್ತಮ ನಿದರ್ಶನದ ಚಿತ್ರ. ಈ ಚಿತ್ರದಲ್ಲಿ ಒಬ್ಬ ಯುವತಿ ತನ್ನ ತಂದೆಯ ಸ್ನೇಹಿತನ ಜತೆಗಿನ ಸಂಬಂಧದ ಬಗ್ಗೆ ಹರಡುವ ಗಾಸಿಪ್ ಕುರಿತಾಗಿದೆ.
ಮನುಷ್ಯ ಜೀವನದಲ್ಲಿ ಸ್ನೇಹ, ಪ್ರೀತಿ ಎಂಬುದು ಎಲ್ಲ ಎಲ್ಲೆಗಳ ಮೀರಿ ನಿಂತಿರುವಂಥ. ಇದಕ್ಕೆ ಧರ್ಮ, ಜಾತಿ, ವಯಸ್ಸು ಎಲ್ಲವೂ ಅಗಣಿತ. ಇಂತಹ ಸಂಬಂಧವನ್ನು ತೆರೆದಿಡುವ ಪ್ರಯತ್ನ ಮಾಡುತ್ತಿರುವ ಚಿತ್ರ (ಬಿಡುಗಡೆ ಆಗಿಲ್ಲ) ಇದಾಗಿರಬಹುದೆಂಬ ಪರಿಕಲ್ಪನೆ ನಮ್ಮದು. ಇದರಲ್ಲಿ ಈ ಲೇಖನದ ಉದ್ದೇಶ ಬೇರೆಯದು.
ಈಚೆಗಷ್ಟೇ ಖಾತ್ಯ ನಟ ಮಿಲಿಂದ್ ಸೋಮನ್ ಮದುವೆಯಾಗಿದ್ದಾರೆ. ಅದು ತಮಗಿಂತ ೨೫ ಸಣ್ಣ ವಯಸ್ಸಿನ ಯುವತಿಯನ್ನ. ಇವರಿಬ್ಬರ ಸ್ನೇಹವಾಗಿದ್ದು ಕೆಲ ವರ್ಷಗಳ ಹಿಂದೆಯಷ್ಟೆ. ಪರಸ್ಪರ ಪ್ರೀತಿಸುವ ಇಬ್ಬರ ನಡುವೆ ದೈಹಿಕ, ಮಾನಸಿಕವಾಗಿ ಅಜಗಜ ಅಂತರವಿದೆ. ಆದರೆ, ಈ ಅಂತರ ಅವರಿಬ್ಬರ ಸ್ನೇಹ, ಪ್ರೀತಿಯಲ್ಲಿ ಶೂನ್ಯವಾಗಿದೆ.
27ವರ್ಷದ ಯುವತಿಯೊಂದಿಗೆ ಮದುವೆಯಾದ 54 ವರ್ಷದ ಮಿಲಿಂದ್: 54 ವರ್ಷಗಳ ಮಾಡೆಲ್ ಮಿಲಿಂದ್ ಸೋಮನ್ ತಮಗಿಂತ 27 ವರ್ಷದ ಅಸ್ಸಾಂನ ಯುವತಿ, ಗಗನಸಖಿ ಅಂಕಿತಾ ಕೊನ್ವಾರ್ ಭಾನುವಾರ ಮದುವೆಯಾಗಿದ್ದಾರೆ.
ಮಿಲಿಂದ್- ಅಂಕಿತಾದ್ದು ಫಸ್ಟ್ ಸೈಟ್ ಅಟ್ ಲವ್:
ಮಿಲಿಂದ್ ಅಂಕಿತಾ ಅವರನ್ನು ನೋಡಿದ್ದು ಚೆನ್ನೈನ ನೈಟ್ ಕ್ಲಬ್ ಒಂದರಲ್ಲಿ. ಮೊದಲ ನೋಟದಲ್ಲೇ ಪ್ರೇಮಾಂಕುರವಾಗಿತ್ತು. ಕೂಡಲೇ ಮಿಲಿಂದ್ ತಮ್ಮ ಮೊಬೈಲ್ ನಂಬರ್ ನ್ನು ಅಂಕಿತಾ ಅವರೊಂದಿಗೆ ಶೇರ್ ಮೊಡಿಕೊಂಡಿದ್ದರು. ಚಾಟಿಂಗ್, ಡೇಟಿಂಗ್ ಅಂಥ ಅನೇಕ ವರ್ಷಗಳ ಮುಂದುವರಿತ್ತು. ಇದು ಏಪ್ರಿಲ್ 22ರಂದು ವೈವಾಹಿಕ ಸಂಬಂಧದೊಂದಿಗೆ ಗಟ್ಟಿಕೊಂಡಿತು.
ಯಾರೀ ಅಂಕಿತಾ ಕೋನ್ವಾರ್: ಅಸ್ಸಾಂ ನ ಗುವಾಹತಿ ನಗರದವರಾದ ಅಂಕಿತಾ ಕೋನ್ವಾರ್ ಅವರ ಮೊದಲ ಹೆಸರು ಸುನ್ಕುಸ್ಮಿತಾ. ಇವರ ತಂದೆ ನಿರಂಜನ ಕೋನ್ವಾರ್. ತಾಯಿ ನಾಗೇನ್ ಕೋನ್ವಾರ್. ಜಾರ್ಣ ಕೋನ್ವಾರ್ ಬರುಹ.
2013ರಲ್ಲಿ ಏರ್ ಏಷ್ಯಾ ನಾಗರಿಕ ವಿಮಾನಯಾನ ಕಂಪನಿಯಲ್ಲಿ ಕ್ಯಾಬಿನ್ ಕ್ರೂ ಎಕ್ಸಿಕ್ಯುಟಿವ್ ಆಗಿ ವೃತ್ತಿ ಆರಂಭಿಸಿದ ಅಂಕಿತಾ, ಅಸ್ಸಾಮಿ, ಹಿಂದಿ, ಇಂಗ್ಲಿಷ್, ಫ್ರೆಂಚ್ ಭಾಷೆಗಳನ್ನು ಬಲ್ಲವರು.
2015ರ ನವೆಂಬರ್ನಲ್ಲಿ 10k ಮ್ಯಾರಥಾನ್ ನ್ನು ಮಿಲಿಂದ್ ಜತೆ ಓಡಿದ್ದಾರೆ. ಪ್ರಯಾಣವನ್ನು ಇಷ್ಟಪಡುವ ಕೋನ್ವಾರ್, 2018 ಫೆಬ್ರವರಿಯಲ್ಲಿ ಸೀನಿಯರ್ ಫ್ಲೈಟ್ ಅಟೆಂಡೆಂಟ್ ಹುದ್ದೆಗೆ ರಾಜೀನಾಮೆ ಕೊಟ್ಟರು.
ಮಿಲಿಂದ್ ಹುಟ್ಟಿದ್ದು ಎಲ್ಲಿ ಗೊತ್ತಾ? ಸೋಮನ್ ಹುಟ್ಟಿದ್ದು ಸ್ಕಾಟ್ಲೆಂಡಿನ ಗ್ಲ್ಯಾಸ್ಗೋದಲ್ಲಿ. ನಂತರ ಅವರ ಪಾಲಕರು ಇಂಗ್ಲೆಂಡ್, ನಂತರ ಭಾರತಕ್ಕೆ ಮರಳಿದರು. 1973ರಲ್ಲಿ ಮುಂಬೈನ ದಾದರ್ ನಲ್ಲಿ ನೆಲೆಯೂರಿದರು. ಎಂಎಚ್ ಸಾಬೂ ಸಿದ್ದಿಕ್ ಪಾಲಿಟೆಕ್ನಿಕ್ ನಲ್ಲಿ ಡಿಪ್ಲೋಮಾ (ಎಲೆಕ್ಟ್ರಿಕಲ್ ಇಂಜಿನಿಯರಿಂಗ್) ಪಡೆದಿದ್ದಾರೆ.
ಮಿಲಿಂದ್ ವೃತ್ತಿ ಯಾವುದು ಗೊತ್ತಾ? ಡಿಪ್ಲೋಮಾ ಇಂಜಿನಿಯರಿಂಗ್ ಪಡೆದಿದ್ದರೂ ಆ ವೃತ್ತಿ ಆಯ್ಕೆ ಮಾಡಿಕೊಳ್ಳದೇ ಮಾಡೆಲ್ ಆಗಿ, ಮ್ಯಾರಥಾನ್ ಓಟಗಾರ ಆಗಿ ಪ್ರಸಿದ್ಧಿ ಪಡೆದಿದ್ದಾರೆ. 62000 ಮಹಿಳೆಯರು ಸಂಘದ ಸದಸ್ಯರಿರುವ ಮ್ಯಾರಥಾನ್ ಸಂಘದಲ್ಲಿ ಮಿಲಿಂದ್ ಸಕ್ರಿಯರಾಗಿದ್ದಾರೆ.
ಮಿಲಿಂದ್ ಅವರು ಐರನ್ ಮ್ಯಾನ್ ಮತ್ತು ಅಲ್ಟ್ರಾಮ್ಯಾನ್ ನಂತಹ ಜಗತ್ತಿನ ಪ್ರತಿಷ್ಠಿತ ಮ್ಯಾರಥಾನ್ ಮತ್ತು ಟ್ರಯಥ್ಲಾನ್ಗಳನ್ನು ಯಶಸ್ವಿಯಾಗಿ ಪೂರೈಸಿದ್ದಾರೆ.
ಮಧು ಸಪ್ರೆ ಅವರ ಜತೆಗಿತ್ತು ಲಿವಿಂಗ್ ಟುಗೆದರ್ ಸಂಬಂಧ: ಮಿಲಿಂದ್ ಅವರು ಮೊದಲು ಮಧು ಸಪ್ರೆ ಅವರ ಜತೆಗೆ 1995ರವರೆಗೆ ಲಿವಿಂಗ್ ಟುಗೆದರ್ ಸಂಬಂಧ ಹೊಂದಿದ್ದರು. 1992ರ ಮಿಸ್ ಯೂನಿವರ್ಸ್ ಸ್ಪರ್ಧೆಯ ಎರಡನೇ ರನ್ನರ್-ಅಪ್ ಆಗಿ ಕಿರೀಟ ಮುಡಿಗೇರಿಸಿಕೊಂಡವರು.
ಜಾಹಿರಾತಿಗಾಗಿ ಬೆತ್ತಲಾಗಿದ್ದರು: ಮಿಲಿಂದ್ ಸೋಮನ್ ಕೆಲ ವರ್ಷಗಳ ಹಿಂದೆ ರೂಪದರ್ಶಿ, ನಟಿ ಮಧು ಸಪ್ರಯೊಂದಿಗೆ ಬೆತ್ತಲೆಯಾಗಿ ಜಾಹೀರಾತಿನಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು. ಇವರ ವಿರುದ್ಧ ಮುಂಬೈ ಪೊಲೀಸರು ದೂರು ದಾಖಲಿಸಿದ್ದರು.
ಮಿಲಿಂದ್ ಅವರ ಮೊದಲ ಪತ್ನಿ ಯಾರು?: ಮಿಲಿಂದ್ ಸೋಮನ್ ಮತ್ತು ಅಂಕಿತಾ ಕೋನ್ವಾರ್ ಎರಡನೇ ಪತ್ನಿ. ಮಿಲಿಂದ್ ಫ್ರೆಂಚ್ ನಟಿ ಮೈಲೆನೆ ಜಂಪನಾಯ್ ಅವರೊಂದಿಗೆ ಮದುವೆ ಆಗಿದ್ದರು. ವ್ಯಾಲಿ ಆಫ್ ಫ್ಲವರ್ ಚಿತ್ರದಲ್ಲಿ ನಟಿಸಿದ್ದರು. 2008ರಲ್ಲಿ ಮಿಲಿಂದ್ ಮತ್ತು ಮೈಲೆನೆ ಬೇರೆಯಾದರು. 2009ರಲ್ಲಿ ದಂಪತಿ ವಿಚ್ಛೇದನ ಪಡೆದರು. ಇದಾದ 9 ವರ್ಷಗಳ ನಂತರ ಮದುವೆಯಾಗಿದ್ದಾರೆ.


ದಿನದ ಸುದ್ದಿ
ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.
ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.
ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.
ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.
ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್ಬೌನ್ಸ್ ಕೇಸ್ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?

ಸುದ್ದಿದಿನಡೆಸ್ಕ್:ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
ಗುರುಪ್ರಸಾದ್ ಮೇಲೆ ಸಾಲು ಸಾಲು ಚೆಕ್ಬೌನ್ಸ್ ಕೇಸ್ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್ ಕೂಡ ಆಗಿತ್ತು. ಗುರುಪ್ರಸಾದ್ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್ ಗೌಡ.
ಹಣ ವಾಪಸ್ ಕೊಡಲಾಗದೇ ಕಿರಿಕ್ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್ ಅವರು. ಈ ಬಗ್ಗೆ ಕೋರ್ಟ್ ಮೆಟ್ಟಿಲೇರಿದ್ದ, ಗುರುಪ್ರಸಾದ್ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್ 24ರಂದು ಇದ್ದ ಕೋರ್ಟ್ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್. ಮೆಡಿಕಲ್ ರಿಪೋರ್ಟ್ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.
ನಿನ್ನೆ ಅಂದರೆ ನವೆಂಬರ್ 2ಕ್ಕೆ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್ ರೀಚಬಲ್ ಬಂದಿತ್ತು ಮೊಬೈಲ್.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!

ಸುದ್ದಿದಿನಡೆಸ್ಕ್:ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
52 ವರ್ಷದ ಕನಕಪುರ ಮೂಲದ ಗುರುಪ್ರಸಾದ್ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್ಮೆಂಟ್ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್ ಚಿತ್ರದ ಮೂಲಕ ಮನೆಮಾತಾಗಿದ್ದರು.
ನಿರ್ದೇಶಕ ʻಮಠʼ ಗುರುಪ್ರಸಾದ್ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್ ಡೇ ವಿಶ್ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್ ಅವರ ಮೊಬೈಲ್ ನಾಟ್ ರೀಚಬಲ್ ಆಗಿತ್ತು, ಗುರುಪ್ರಸಾದ್ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ ; ಸಂಜೆ ಬಿಐಇಟಿ ಸಾಂಸ್ಕೃತಿಕ ಕೇಂದ್ರದಲ್ಲಿ ಸಂಗೀತ ಪ್ರಭ
-
ದಿನದ ಸುದ್ದಿ7 days ago
ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ
-
ದಿನದ ಸುದ್ದಿ7 days ago
ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ಖಾತ್ರಿ ಯೋಜನೆಯ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ6 days ago
ದಾವಣಗೆರೆ | ಮನೆ ಬೋರ್ ವೆಲ್ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ ; ಕ್ರಮ ಕೈಗೊಳ್ಳಲು ಸರಸ್ವತಿ ಬಡಾವಣೆ ನಿವಾಸಿಗಳ ಆಗ್ರಹ
-
ದಿನದ ಸುದ್ದಿ7 days ago
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’
-
ದಿನದ ಸುದ್ದಿ6 days ago
2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ
-
ದಿನದ ಸುದ್ದಿ7 days ago
ದಾವಣಗೆರೆ | ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ