ದಿನದ ಸುದ್ದಿ
ಮಂಡ್ಯದ ‘ಐದು ರೂಪಾಯಿ ಡಾಕ್ಟ್ರು’ ಬಗ್ಗೆ ಸಂಸದೆ ಸುಮಲತಾ ಹೇಳಿದ್ದೇನು ಗೊತ್ತಾ..?
- ಸುಮಲತಾ ಅಂಬರೀಶ್, ಲೋಕ ಸಭಾ ಸದಸ್ಯೆ, ಮಂಡ್ಯ
ನನ್ನ ಮಂಡ್ಯ ನನ್ನ ಹೆಮ್ಮೆ
ಎಲ್ಲರಿಗೂ ಮಣ್ಣಿನ ಗುಣ ಇರುತ್ತಂತೆ. ಅಂತ ಮಂಡ್ಯದ ಮಣ್ಣಿನ ಗುಣ ಇರೋ ಒಬ್ಬ ವ್ಯಕ್ತಿ ಇವರು. ಇವರ ಬಗ್ಗೆ ನೀವು ಕೇಳಿರಬಹುದು.
ಥಟ್ಟಂತೆ ನೋಡಿದರೆ ಅವರು ಸಾಮಾನ್ಯರಲ್ಲಿ ಸಾಮಾನ್ಯ. ಆದರೆ, ಅವರ ಮುಂದೆ ಸಾಲುಗಟ್ಟಿ ನಿಲ್ಲುವ ಜನ, ಇವರು ತಪಾಸಣೆ ಮಾಡಿ ಬರೆದು ಕೊಡುವ ಔಷದಿ ಚೀಟಿ, ಇವೆಲ್ಲ ಕಣ್ಣಿಗೆ ಕಟ್ಟಿದಂತೆ ಬರುತ್ತೆ, ಇವರ ಹೆಸರು ಕೇಳಿದರೆ. ಅವರೇ ನಮ್ಮ ಡಾ. ಶಂಕರೇಗೌಡರು. ಇಂಗ್ಲಿಷ್ ಪತ್ರಿಕೆಗಳಲ್ಲಿ, ನ್ಯಾಷನಲ್ ಮೀಡಿಯಾದಲ್ಲಿ ಕೂಡ ಇವರ ಬಗ್ಗೆ ವರದಿಗಳು ಬಂದಿವೆ. ಅವೆಲಕ್ಕೂ ಮೀರಿದ ಸಹಜ ಪ್ರಾಮಾಣಿಕ ಸಂಬಂಧ ಇವರಿಗೆ ನಮ್ಮ ಮಂಡ್ಯ ಜನರ ಜೊತೆ ಇದೆ.
ನಮ್ಮ ಮಂಡ್ಯ ಕ್ಷೇತ್ರದ ರಿಯಲ್ ಹೀರೋಗಳಲ್ಲಿ ಒಬ್ಬರು ಇವರು. ವೈದ್ಯಕೀಯ ಕ್ಷೇತ್ರದಲ್ಲಿ ದುಡ್ಡೇ ಮಾಡಬೇಕು ಅಂತಿದ್ದರೆ, ಬಂಗಲೆಯಲ್ಲಿ ವಾಸ, ದುಬಾರಿ ಕಾರು, ದೊಡ್ಡದೊಂದು ಆಸ್ಪತ್ರೆ ಕಟ್ಟಬಹುದಿತ್ತು. ಆದರೆ, ವೈದ್ಯ ವೃತ್ತಿಯನ್ನು ಅವರು ಬಳಕೆ ಮಾಡಿಕೊಂಡಿದ್ದು ಕೇವಲ ಕಾಯಿಲೆಯನ್ನು ಗುಣಪಡಿಸುವುದಕ್ಕಾಗಿ. ಅದರಲ್ಲೂ ಬಡವರ, ನಿರ್ಗತಿಕರ ಸೇವೆಗಾಗಿ.
ಈಗಲೂ ಅವರು ಎರಡು ಕೋಣೆಯ ಚಿಕ್ಕ ಮನೆಯಲ್ಲಿ ವಾಸ. ಸಣ್ಣದೊಂದು ಆಸ್ಪತ್ರೆ ಕಟ್ಟಲು ಕೋಟ್ಯಾಂತರ ರೂಪಾಯಿ ಬೇಕು. ಚಿಕ್ಕದೊಂದು ಕೋಣೆ ನಿರ್ಮಿಸಲೂ ಲಕ್ಷಾಂತರ ರೂಪಾಯಿ ಬೇಕು. ಅದನ್ನು ತರಲು ರೋಗಿಯನ್ನೇ ಅವಲಂಬಿಸಬೇಕು. ಈ ಹೊರೆಯನ್ನು ರೋಗಿಗಳ ಮೇಲೆ ಹಾಕದೇ, ಒಂದು ಅಂಗಡಿ ಮುಂದಿನ ಕಟ್ಟೆಯಲ್ಲೇ ಕೂತು ರೋಗಿಯನ್ನು ನೋಡುತ್ತಾರೆ. ಅಗ್ಗದ ಔಷಧಿ ಚೀಟಿಗಳನ್ನು ಬರೆದು ಕೊಡುತ್ತಾರೆ.
ಬೆಳಗ್ಗೆ 8 ಗಂಟೆಯಿಂದ ಶುರುವಾಗುವ ಈ ಕಾಯಕ ಮಧ್ಯಾಹ್ನದವರೆಗೆ ಮತ್ತು ಸಾಯಂಕಾಲ ಕೂಡ ನಿರಂತರವಾಗಿ ಇರುತ್ತದೆ. ನಿತ್ಯವೂ ನೂರಾರು ರೋಗಿಗಳಿಗೆ ಇವರು ಚಿಕಿತ್ಸೆ ನೀಡುತ್ತಾರೆ. ಹೆಚ್ಚಾಗಿ ಚರ್ಮರೋಗಕ್ಕೆ ಸಂಬಂಧಿಸಿದಂತೆ ಔಷಧಿ ನೀಡುತ್ತಾರೆ. ಕೇವಲ ಮಂಡ್ಯದ ಜನರು ಮಾತ್ರವಲ್ಲ, ರಾಜ್ಯದ ನಾನಾ ಭಾಗಗಳಿಂದಲೂ ಜನರು ಬರುತ್ತಾರೆ. ಹಲವು ರಾಜ್ಯಗಳಿಂದಲೂ ಬಂದಿದ್ದು ಉಂಟು. ಆಚೆ ದುಬಾರಿ ಅನಿಸುವ ಈ ಚಿಕಿತ್ಸೆಗೆ ಶಂಕರೇಗೌಡರು ಪಡೆಯುವ ಹಣವೆಷ್ಟು ಗೊತ್ತಾ? ಕೇವಲ ಐದು ರೂಪಾಯಿ ಮಾತ್ರ! ಹಾಗಾಗಿ ಇವರನ್ನು ಪ್ರೀತಿಯಿಂದ ಜನರು “ಐದು ರೂಪಾಯಿ ಡಾಕ್ಟ್ರು” ಅಂತ ಕರೀತಾರೆ.
ಎಂಡಿ ಮಾಡಿರುವ ವೈದ್ಯರೊಬ್ಬರು ಕೇವಲ ಐದು ರೂಪಾಯಿಗೆ ಚಿಕಿತ್ಸೆ ಕೊಡುತ್ತಾರೆ ಎಂದರೆ ಅಚ್ಚರಿ ಆಗೋದು ನಿಜ. ಇಂಥದ್ದೊಂದು ಅಚ್ಚರಿಯ ಕೆಲಸವನ್ನು ನಿತ್ಯ ಮಾಡುವ ಶಂಕರೇಗೌಡರಿಗೆ ನನ್ನದೊಂದು ನಮಸ್ಕಾರ. ಇಂತಹ ಮಹನೀಯರ ಸಂಖ್ಯೆ ಇನ್ನೂ ಹೆಚ್ಚಾಗಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.
ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡಂಬೋಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕೇವಲ 4 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ!! 1/2#ಜನರಿಗಿಲ್ಲ_ನೆಮ್ಮದಿಯ_ಗ್ಯಾರಂಟಿ pic.twitter.com/iu3tqqEYZ3
— Janata Dal Secular (@JanataDal_S) May 18, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್
ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.
ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಆತ್ಮಕತೆ | ಕೋರಿನ ತೋಟ ಮತ್ತು ನಮ್ಮೂರ ದೇವರ ಗುಡಿಯಲ್ಲಿ ಪಂಚಾಯ್ತಿ
-
ದಿನದ ಸುದ್ದಿ3 days ago
ವಿಧಾನಪರಿಷತ್ ಚುನಾವಣೆ ; ಇಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನ
-
ದಿನದ ಸುದ್ದಿ3 days ago
ಪೌರತ್ವ ಪ್ರಮಾಣಪತ್ರ ಹಸ್ತಾಂತರ
-
ದಿನದ ಸುದ್ದಿ2 days ago
ಸಂಗೀತಗಾರರ ಹುದ್ದೆಗಳಿಗೆ ನೇಮಕಾತಿ
-
ದಿನದ ಸುದ್ದಿ3 days ago
ದಾವಣಗೆರೆ | ಶಿಕ್ಷಕರ ಹುದ್ದೆಗೆ ನೇರ ಸಂದರ್ಶನ
-
ದಿನದ ಸುದ್ದಿ3 days ago
ಮೊರಾರ್ಜಿ ದೇಸಾಯಿ ವಿಜ್ಞಾನ ಕಾಲೇಜು ; ಪಿಯುಸಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಪ್ರಜ್ವಲ್ ಪೆನ್ಡ್ರೈವ್ ಪ್ರಕರಣ | ಎಸ್ಐಟಿ ಸೂಕ್ತ ತನಿಖೆ ನಡೆಸುತ್ತಿಲ್ಲ : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ
-
ದಿನದ ಸುದ್ದಿ3 days ago
ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿ ಪ್ರಾರಂಭ