ರಾಜಕೀಯ
ಮಂಡ್ಯ ಲೋಕಸಭಾ ಉಪಚುನಾವಣೆ : ಮತಗಟ್ಟೆಗಳ ಕಡೆಗೆ ಸಿದ್ದರಾದ ಸಿಬ್ಬಂದಿಗಳು
ಸುದ್ದಿದಿನ,ಮದ್ದೂರು : ಮಂಡ್ಯ ಜಿಲ್ಲಾ ಲೋಕಸಭಾ ಉಪ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಯಾದ ಎನ್. ಸಿದ್ದೇಶ್ವರ ರವರು ಪತ್ರಿಕಾ ಗೋಷ್ಠಿ ನಡೆಸಿದರು ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 253 ಮತಗಟ್ಟೆಗಳು. ಇದ್ದು ಅದರಲ್ಲಿ 13 ಅತಿಹೆಚ್ಚು ಗಮನ ಅರಿಸಿಸುವ ಮತಗಟ್ಟೆ. 51ಅತೀ ಸೂಕ್ಷ್ಮ ಮತಗಟ್ಟೆಗಳು ಅ ಮತ ಕೇಂದ್ರ ಗಳಿಗೆ 18 ಸೆಕ್ಟರ್ ಗಳಿದ್ದು 18 ಸೆಕ್ಟರ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು
ಒಟ್ಟು ವಿಧಾನ ಸಭಾ ಕ್ಷೇತ್ರದ ಮತಗಳು 2.05.373.ಇದ್ದು ಅದರಲ್ಲಿ ಪುರುಷರು 1.01.392.
ಮಹಿಳೆಯರು 1.03.961.ಇತರೆ 20. ಹಾಗೂ ವಿಕಲಚೇತನರು. 491.ವಿಕಲಚೇತನರಿಗೆ ಈ ಬಾರಿ ವಿಶೇಷವಾಗಿ ಮನೆಯಿಂದ ಮತಗಟ್ಟೆಗೆ ಮತಗಟ್ಟೆಯಿಂದ ಮನೆಯವರೆಗೆ ಅವರನ್ನು ಹೋಗಿ ಬರಲು ವಾಹನದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು ಇದಲ್ಲದೇ ಎರಡು ಪಿಂಕ್ ಮತಗಟ್ಟೆಗಳನ್ನು ಮಾಡಿದ್ದು ಅದರಲ್ಲಿ ಪಟ್ಟಣದ ಮತಗಟ್ಟೆ ಸಂಖ್ಯೆ 97 ನೇ ಮತಗಟ್ಟೆ ಜವಹಾರ್ ಫ್ರೌಡಶಾಲೆ. ಸಂಖ್ಯೆ107 ಮತಗಟ್ಟೆ ಸರ್ಕಾರಿ ಉರ್ದು ಪ್ರಾಥಮಿಕ ಪಾಠಶಾಲೆ.ಮತಗಟ್ಟೆ 109 ರಲ್ಲಿ PWD.ಈ ಮತಗಟ್ಟೆಯಲ್ಲಿ ಚುನಾವಣಾಧಿಕಾರಿಯಿಂದ ಹಿಡಿದು ಎಲ್ಲರೂ ಸಹ ವಿಕಲಚೇತನರೇ ಆಗಿರುವುದು ಈ ಸಲದ ವಿಶೇಷ ಎಂದರು.
ಒಟ್ಟಾರೆ ಚುನಾವಣೆಗೆ 1395 ಅಧಿಕಾರಗಳನ್ನು ನೇಮಕ ಮಾಡಲಾಗಿದೆ ಇವರಿಗೆ 55 ವಾಹನದ ವ್ಯವಸ್ಥೆಯನ್ನು ಮಾಡಲಾಗಿದೆ ವಿವಿಧ ಮತಗಟ್ಟೆಗಳಿಗೆ ಚುನಾವಣಾ ಸಿಬ್ಬಂದಿಗಳು ಹೋಗಲು ಸರ್ಕಾರಿ ಬಸ್ಸು ಹಾಗೂ ಖಾಸಗಿ ಬಸ್ಸುಗಳನ್ನು ನೇಮಿಸಿದ್ದು ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದರು.
ಗುರುತಿಸಲ್ಪಟ್ಟ ಮತ ಕೇಂದ್ರಗಳಿಗೆ ಸಿ.ಸಿ. ಕ್ಯಾಮೆರಾ ಹಾಗೂ ವಿಡಿಯೋ ಚಿತ್ರೀಕರಣದ ವ್ಯವಸ್ಥೆ ಮಾಡಿಸಲಾಗುತ್ತಿದೆ ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ಹಾಗೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಸಿ.ಪಿ.ಐ.ಮಹೇಶ್ ನೇತೃತ್ವದಲ್ಲಿ ಮಾಡಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ
![](https://suddidina.com/wp-content/uploads/2024/07/kargil_vijay_divas_suddidina.jpg)
ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ ವೀರ ಯೋಧರಿಗೆ ಪ್ರಧಾನಿ ಗೌರವ ಸಮರ್ಪಣೆ ಮಾಡಲಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಶಿಂಕುನ್ ಲಾ ಸುರಂಗ ಮಾರ್ಗ ಯೋಜನೆಗೆ ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ.
ಈ ಯೋಜನೆಯಡಿ ನಿಮು-ಪದುಮ್-ಡಾರ್ಚಾ ರಸ್ತೆಯಿಂದ ಲೇಹ್ಗೆ ಎಲ್ಲಾ ಹವಾಮಾನಗಳಲ್ಲೂ ಸಂಪರ್ಕ ಕಲ್ಪಿಸಲು ಸುಮಾರು 15 ಸಾವಿರದ 800 ಅಡಿ ಎತ್ತರದಲ್ಲಿ 4.1 ಕಿಲೋಮೀಟರ್ ಉದ್ದದ ಜೋಡಿ ಸುರಂಗ ಮಾರ್ಗವನ್ನು ನಿರ್ಮಿಸಲಾಗುವುದು. ಈ ಕಾರ್ಯ ಪೂರ್ಣಗೊಂಡ ನಂತರ ವಿಶ್ವದಲ್ಲೇ ಇದು ಅತಿ ಎತ್ತರದ ಸುರಂಗ ಮಾರ್ಗವಾಗಲಿದೆ. ಸಶಸ್ತ್ರ ಪಡೆಗಳ ಸುಗಮ ಪ್ರಯಾಣಕ್ಕಷ್ಟೇ ಅಲ್ಲದೇ ಲಡಾಕ್ನಲ್ಲಿ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೂ ಈ ಸುರಂಗ ಮಾರ್ಗವು ಸಹಕಾರಿಯಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಕೇಂದ್ರ ಬಜೆಟ್ : ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ
![](https://suddidina.com/wp-content/uploads/2024/07/union_budget_2024_suddidina.jpg)
ಸುದ್ದಿದಿನಡೆಸ್ಕ್:ಕೇಂದ್ರದ ಮುಂಗಡ ಪತ್ರ ದೇಶದ ಅಭಿವೃದ್ಧಿಗೆ ಪೂರಕವಾಗಿದೆ ಎಂದು ತೆಲುಗು ದೇಶಂ ನಾಯಕ ಕೇಂದ್ರ ಸಚಿವ ಕಿಂಜರಪು ರಾಮಮೋಹನ ನಾಯ್ಡು ಹೇಳಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಬಜೆಟ್ ಎಲ್ಲರ ಕನಸಾಗಿದೆ ಎಂದು ಹೇಳಿದ್ದಾರೆ. ಈಶಾನ್ಯ ರಾಜ್ಯಗಳ ಬೆಳವಣಿಗೆಗೆ ಆಯ-ವ್ಯಯ ಪೂರಕವಾಗಿದೆ ಎಂದು ಹೇಳಿದರು.
ಬಿಜೆಪಿ ಹಿರಿಯ ನಾಯಕ ರವಿಶಂಕರ್ ಪ್ರಸಾದ್, ಉದ್ಯೋಗ ಹೆಚ್ಚಿಸುವ ಕಾರ್ಯಕ್ರಮವನ್ನು ಹಣಕಾಸು ಸಚಿವರು ಪ್ರಕಟಿಸಿರುವುದಾಗಿ ಹೇಳಿದ್ದಾರೆ. ಜೆಡಿಯು ಮುಖಂಡ ರಾಜೀವ್ ರಂಜನ್ ಸಿಂಗ್, ಆಯ-ವ್ಯಯ ಬಿಹಾರ ಜನತೆಗೆ ಹಾಗೂ ಪ್ರವಾಸೋದ್ಯಮಕ್ಕೆ ಒತ್ತು ನೀಡಿದೆ ಎಂದರು.
ಕಾಂಗ್ರೆಸ್ ಮುಖಂಡ ಶಶಿತರೂರ್ ಪ್ರತಿಕ್ರಿಯೆಸಿ, ಉದ್ಯೋಗ ಖಾತರಿ ಯೋಜನೆಯ ರಾಜ್ಯಗಳ ತಾರತಮ್ಯವನ್ನು ನಿಭಾಯಿಸಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಶಿವಸೇನಾ ನಾಯಕ ಪ್ರಿಯಾಂಕ ಚತುರ್ವೇದಿ, ಮಹಾರಾಷ್ಟ್ರ ರಾಜ್ಯಕ್ಕೆ ನಿರ್ಧಿಷ್ಟವಾದ ಯೋಜನೆಗಳನ್ನು ಪ್ರಕಟಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಡಿಎಂಕೆ ನಾಯಕ ಟಿ.ಆರ್.ಬಾಲು, ಟಿಎಂಸಿ ನಾಯಕಿ ಕಲ್ಯಾಣ ಬ್ಯಾನರ್ಜಿ ಅವರು, ಆಯ-ವ್ಯಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಕರ್ನಾಟಕದ ಸಂಸದರಾದ ಬಸವರಾಜ ಬೊಮ್ಮಾಯಿ, ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಜಗದೀಶ್ ಶೆಟ್ಟರ್, ಜನಪರ ಸಾಮಾನ್ಯವರ್ಗದವರ ಆಯ-ವ್ಯಯವಾಗಿದೆ ಎಂದರು. ಕೇಂದ್ರ ಸಚಿವರಾದ ಎಚ್.ಡಿ.ಕುಮಾರ್ಸ್ವಾಮಿ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಅವರುಗಳು ಆಯ-ವ್ಯಯವನ್ನು ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ. ಭಾರತೀಯ ಕೈಗಾರಿಕಾ ಒಕ್ಕೂಟದ ಅಧ್ಯಕ್ಷ ಅನಿಶ್ ಶಹಾ ಪ್ರತಿಕ್ರಿಯಿಸಿ, ದೇಶದ ಬೆಳವಣಿಗೆಗೆ ಪೂರಕ ಆಯ-ವ್ಯಯ ರೈತರು, ಯುವಕರು, ಮಹಿಳೆಯರಿಗೆ ಸಹಕಾರಿ ಎಂದು ಹೇಳಿದ್ದಾರೆ.
ಶಿಕ್ಷಣ, ಆರೋಗ್ಯ, ರಕ್ಷಣಾ ಕ್ಷೇತ್ರಗಳಿಗೆ ಅನುದಾನವನ್ನು ಗಣನೀಯವಾಗಿ ಖಡಿತ ಮಾಡಿದ್ದಾರೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಹಲವು ಯೋಜನೆಗಳ ಅನುಷ್ಠಾನಕ್ಕೆ ನೆರವು ಕೋರಿದ್ದೆವು. ಮಾಹಿತಿ ತಂತ್ರಜ್ಞಾನಕ್ಕೆ ನೀಡಿದ್ದ ಅನುದಾನವನ್ನು ಕಡಿಮೆ ಮಾಡಿರುವ ಕೇಂದ್ರ ಸರ್ಕಾರ, ಪರಿಶಿಷ್ಟ ಸಮುದಾಯ ಮತ್ತು ಅಲ್ಪ ಸಂಖ್ಯಾತರ ಅಭಿವೃದ್ಧಿಗೆ ಅನುದಾನವನ್ನು ಖಡಿತ ಮಾಡಿ, ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮೂಲ ಸೌಕರ್ಯ ಅನ್ವೇಷಣೆ ಹಾಗೂ ಅಭಿವೃದ್ಧಿಗೆ ಆಯ-ವ್ಯಯ ಪೂರಕವಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಹಾಗೂ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಆಯ-ವ್ಯಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ದೇಶದ ಉತ್ಪಾದನೆ ಹಾಗೂ ಬೆಳವಣಿಗೆಯ ಪ್ರಮಾಣದಲ್ಲಿ ಕೃಷಿ, ಉದ್ಯೋಗ, ಕೌಶಲ್ಯಾಭಿವೃದ್ಧಿ ಜೊತೆಗೆ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಾಗಿದೆ ಎಂದು ಅವರು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!