ರಾಜಕೀಯ
ಮಂಡ್ಯ ಲೋಕಸಭಾ ಉಪ ಚುನಾವಣೆ: ಕಣದಲ್ಲಿರುವ 9 ಅಭ್ಯರ್ಥಿಗಳು ಯಾರ್ಯಾರು ಗೊತ್ತಾ..?
ಸುದ್ದಿದಿನ,ಮಂಡ್ಯ : ಮಂಡ್ಯ ಲೋಕಸಭಾ ಉಪಚುನಾವಣೆಗೆ ನಾಮಪತ್ರ ಹಿಂತೆಗೆಯಲು ಕಡೆಯ ದಿನವಾದ ಇಂದು ಯಾವ ಅಭ್ಯರ್ಥಿಯು ನಾಮಪತ್ರ ಹಿಂಪಡೆದಿರುವುದಿಲ್ಲ. ಅಂತಿಮವಾಗಿ ಚುನಾವಣಾ ಕಣದಲ್ಲಿ 9 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ.
ಜಾತ್ಯಾತೀತ ಜನತಾ ದಳ ಪಕ್ಷದಿಂದ ಎಲ್.ಆರ್.ಶಿವರಾಮೇಗೌಡ, ಭಾರತೀಯ ಜನತಾ ಪಕ್ಷದಿಂದ ಡಾ. ಸಿದ್ದರಾಮಯ್ಯ, ಪಕ್ಷೇತರ ಅಭ್ಯರ್ಥಿಗಳಾಗಿ ನಂದೀಶ್ ಕುಮಾರ್, ಎಂ.ಹೊಣ್ಣೇಗೌಡ, ಕೌಡ್ಲೆ ಚನ್ನಪ್ಪ, ಬಿ.ಎಸ್.ಗೌಡ, ಶಂಭುಲಿಂಗೇಗೌಡ (ಗಾಂಧೀವಾದಿ), ನವೀನ್ ಕುಮಾರ್ ಹಾಗೂ ಕೆ.ಎಸ್.ರಾಜಣ್ಣ ಅವರುಗಳು ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುಶ್ರೀ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401