ದಿನದ ಸುದ್ದಿ
ಮಂಡ್ಯ| ನಾಲೆಗೆ ಉರುಳಿದ ಬಸ್ : ಬಸ್ಸಲ್ಲಿದ್ದವರೆಲ್ಲರ ಸಾವು..!
ಸುದ್ದಿದಿನ,ಮಂಡ್ಯ: ಪಾಂಡವಪುರದಿಂದ ಮಂಡ್ಯ ಕಡೆಗೆ ಹೊರಟಿದ್ದ ಖಾಸಗಿ ಬಸ್ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಪಾಂಡವಪುರದ ತಾಲ್ಲೂಕಿನ ಕನಗನಮರಡಿ ಗ್ರಾಮದ ಬಳಿ ವಿಸಿ ನಾಲೆಗೆ ಉರುಳಿ ದುರ್ಘಟನೆ ನಡೆದಿದೆ.
ಚಾಲಕನ ನಿರ್ಲಕ್ಷ್ಯದಿಂದ ಖಾಸಗಿ ಬಸ್ ಉರುಳಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಚಾಲಕ ಬಸ್ ಉರುಳುತ್ತಿದ್ದಂತೆ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ 35 ಮಂದಿ ಮೃತ ಪಟ್ಟಿದ್ದು, ಇದುವರೆಗೆ 25 ಶವಗಳನ್ನು ಹೊರತೆಗೆಯಲಾಗಿದೆ.ಶವಗಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401