Connect with us

ದಿನದ ಸುದ್ದಿ

ಮಂಗಳೂರಿನ ಚರ್ಚ್ ಗಳನ್ನು ದ್ವಂಸ ಮಾಡಿದ್ದನೇ ಟಿಪ್ಪು? ಇತಿಹಾಸ ಏನು ಹೇಳುತ್ತೆ?

Published

on

  • ನವೀನ್ ಸೂರಿಂಜೆ

ಟಿಪ್ಪು ಕೊಡವರ ಹತ್ಯಾಕಾಂಡ ನಡೆಸಿರುವುದು ಸುಳ್ಳು ಎಂದು ಇತಿಹಾಸಕಾರರು ಹೇಳಿದ ನಂತರ ಇದೀಗ ಕರಾವಳಿ ಭಾಗದಲ್ಲಿ ಟಿಪ್ಪು ಕ್ರಿಶ್ಚಿಯನ್ನರ ಮರಣಹೋಮ ನಡೆಸಿದ್ದ ಎಂದು ಸುದ್ದಿ ಹರಿಬಿಡಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ 27 ಚರ್ಚುಗಳನ್ನು ಕೆಡವಿದ್ದ ಎಂದು ಸುದ್ದಿ ಹಬ್ಬಿಸಲಾಗ್ತಿದೆ. 1750 ರಲ್ಲಿ ಜನಿಸಿದ ಟಿಪ್ಪು ಸುಲ್ತಾನ್ ಕರಾವಳಿಯಲ್ಲಿ 1784 ರಿಂದ 1799 ರವರೆಗೆ ಅಧಿಪತ್ಯವನ್ನು ಸ್ಥಾಪಿಸಿದ್ದ.

ಈ ಸಂಧರ್ಭದಲ್ಲಿ ಕರಾವಳಿಯಲ್ಲಿ ಬ್ರಿಟೀಷರು ಹೆಚ್ಚು ಸಕ್ರೀಯಗೊಂಡಿದ್ದನ್ನು ಅರಿತಿದ್ದ. ಆ ಕಾರಣಕ್ಕಾಗಿ ಬ್ರಿಟೀಷರ ಪ್ರಾರ್ಥನಾ ಮಂದಿರಗಳ ಬಗ್ಗೆ ಒಂದು ರೀತಿಯ ಸಂಶಯದ ಗಮನವನ್ನು ಇಡುವುದು ಆಗಿನ ರಾಜನೀತಿಯಾಗಿತ್ತು. ಆದರೆ 27 ಚರ್ಚುಗಳನ್ನು ಕೆಡವಿದ್ದ ಎಂಬುದು ಸುಳ್ಳು ಇತಿಹಾಸ. ಅದಕ್ಕಾಗಿ 1784 ರಿಂದ ಟಿಪ್ಪು ಮರಣದವರೆಗೆ ಕರಾವಳಿಯಲ್ಲಿ ಇದ್ದ ಚರ್ಚುಗಳು ಯಾವುದು ಮತ್ತು ಅದರ ಇತಿಹಾಸ ಏನು ಹೇಳುತ್ತದೆ ಎಂಬುದನ್ನು ನೋಡಬೇಕು.

ಕರಾವಳಿಯ ಅತೀ ಪುರಾತನ ಚರ್ಚುಗಳಲ್ಲಿ ಮೊದಲನೆಯದಾಗಿ ಕಾಣುವುದು 1680 ರಲ್ಲಿ ಕಟ್ಟಲ್ಪಟ್ಟ ಹಂಪನಕಟ್ಟೆಯ ಮಿಲಾಗ್ರಿಸ್ ಚರ್ಚ್ ಮತ್ತು ಕಲ್ಯಾಣಪುರದ ಮಿಲಾಗ್ರಿಸ್ ಚರ್ಚ್. ಹಂಪನಕಟ್ಟೆಯ ಮಿಲಾಗ್ರಿಸ್ ಚರ್ಚನ್ನು ಟಿಪ್ಪು ಒಡೆದು ಹಾಕಿರೋ ಬಗ್ಗೆ ಎಲ್ಲೂ ಇತಿಹಾಸ ಹೇಳುವುದಿಲ್ಲ. ಟಿಪ್ಪು ಮರಣದ ನಂತರ ಬ್ರಿಟೀಷರು ಮಿಲಾಗ್ರಿಸ್ ಚರ್ಚನ್ನು ಹೆಚ್ಚು ದೊಡ್ಡದಾಗಿ ಕಟ್ಟಿದರು ಎಂದಷ್ಟೇ ಹೇಳುತ್ತದೆ.

ಅದಕ್ಕಿಂತಲೂ ಹೆಚ್ಚು ಕುತೂಹಲಕರವಾಗಿರೋದು ಮಿಲಾಗ್ರಿಸ್ ವ್ಯಾಪ್ತಿಯ ಸಾಲ್ವಡಾರ್ ಪಿಂಟೋ ಎಂಬ ಅಧಿಕಾರಿಯೇ ಟಿಪ್ಪುವಿನ ಕಾರ್ಯದರ್ಶಿ ಆಗಿದ್ದರು. ಟಿಪ್ಪು ಮರಣದ ನಂತರ ಫಾದರ್ ಮೆಂಡೇಝ್ ಮತ್ತು ಟಿಪ್ಪುವಿನ ಮಾಜಿ ಮುನ್ಶಿ(ಕಾರ್ಯದರ್ಶಿ) ಸಾಲ್ವಡಾರ್ ಪಿಂಟೋ ಜೊತೆ ಸೇರಿ 600 ರೂಪಾಯಿಗಳನ್ನು ಸಂಗ್ರಹಿಸಿ 1811 ರಲ್ಲಿ ವಿಶಾಲ ಮಿಲಾಗ್ರಿಸ್ ಚರ್ಚನ್ನು ಪುನರ್ ನಿರ್ಮಾಣ ಮಾಡಿದರು ಎಂದು ಇತಿಹಾಸ ಹೇಳುತ್ತದೆ. ಇಲ್ಲಿ ಮುಖ್ಯವಾದುದು ಟಿಪ್ಪುವಿನ ಕಾರ್ಯದರ್ಶಿ ಒಬ್ಬ ಕ್ರಿಶ್ಚಿಯನ್ ಆಗಿದ್ದರು ಮತ್ತು ಅವರು ಧರ್ಮಾಭಿಮಾನಿಯಾಗಿದ್ದರು ಎನ್ನುವುದು.

ಇನ್ನು ಉಡುಪಿಯ ಕಲ್ಯಾಣಪುರ ಚರ್ಚ್ ಕೂಡಾ 1680 ರಲ್ಲಿ ಪ್ರಾರಂಭವಾದರೂ ಟಿಪ್ಪುನಿಂದ ಕೆಡವಲ್ಪಟ್ಟಿಲ್ಲ. 1784 ರ ಅವಧಿಯಲ್ಲಿ ಟಿಪ್ಪು ಕರಾವಳಿಯ ಬ್ರಿಟೀಷರ ಆಶ್ರಯತಾಣವನ್ನು ಹುಡುಕಿಕೊಂಡು ಚರ್ಚುಗಳಿಗೆ ಬಂದಾಗ ಕಲ್ಯಾಣಪುರ ಚರ್ಚನ್ನು ಕೆಡವಿದ ಬಗ್ಗೆ ದಾಖಲೆಗಳು ಇಲ್ಲ.

ಇತಿಹಾಸ ಬದಿಗಿಟ್ಟು ಪವಾಡವನ್ನು ಗಮನಿಸಿದರೂ ಕಲ್ಯಾಣಪುರ ಮಿಲಾಗ್ರಿಸ್ ಚರ್ಚಿನ ಪವಾಡದ ಕತೆ ಹೀಗೆ ಹೇಳುತ್ತದೆ : ಟಿಪ್ಪು ಸುಲ್ತಾನ್ ಎಂಬ ರಾಜ ಬ್ರಿಟೀಷರನ್ನು ಹುಡುಕಿಕೊಂಡು ಕಲ್ಯಾಣಪುರ ಪವಾಡ ಮಾತೆಯ ಮಿಲಾಗ್ರಿಸ್ ಚರ್ಚಿಗೆ ದಾಳಿ ಮಾಡಲು ಬಂದ. ಆಗ ಎಲ್ಲೋ ಇದ್ದ ಜೇನು ನೊಣಗಳು ಟಿಪ್ಪುವಿನ ಸೈನ್ಯದ ಮೇಲೆ ಮುತ್ತಿಗೆ ಹಾಕಿದವು. ಸೈನಿಕರು ಓಡಿ ನದಿಯಲ್ಲಿ ಮುಳುಗಿದರೂ ಜೇನುನೊಣಗಳು ಬಿಡಲಿಲ್ಲ. ಕೊನೆಗೂ ಕಲ್ಯಾಣಪುರ ಪವಾಡ ಮಾತೆಯ ಚರ್ಚನ್ನು ಕೆಡವಲಾಗಲಿಲ್ಲ. ಇದು ಊರಿಡೀ ಪ್ರತೀತಿಯಾಗಿ ಹಿಂದೂಗಳು ಕೂಡಾ ಈ ಚರ್ಚನ್ನು ಮಿಲಾಗ್ರಿಯಮ್ಮನ ದೇವಸ್ಥಾನ ಎನ್ನಲಾರಂಬಿಸಿದ್ರು ಎಂಬುದು ಜನಪದೀಯ ಕತೆಯಾಗಿದೆ.

ಇದರ ಬಳಿಕ ಅತ್ಯಂತ ಪುರಾತನ ಚರ್ಚುಗಳ ಪೈಕಿ ನಮಗೆ ಕಾಣಸಿಗುವುದು ಮೂಡಬಿದ್ರೆಯ ಹೊಸಬೆಟ್ಟು ಚರ್ಚ್. 1761 ರಲ್ಲಿ ನಿರ್ಮಾಣಗೊಂಡ ಚರ್ಚಿನ ಇತಿಹಾಸವನ್ನು ಓದಿದಾಗ ಟಿಪ್ಪುವಿನ ಉಲ್ಲೇಖಗಳು ಬರುತ್ತದೆ. ಮೂಡಬಿದ್ರೆಯ ಜೈನ ಅರಸನ ವ್ಯಾಪ್ತಿಗೂ ಬರುತ್ತಿದ್ದ ಈ ಚರ್ಚು ಸ್ಥಳೀಯ ಅರಸನ ಕೆಂಗಣ್ಣಿಗೆ ಗುರಿಯಾಗಿತ್ತು. ಟಿಪ್ಪು ಹಲವು ಚರ್ಚುಗಳ ಬಗ್ಗೆ ಅಸಮಾದಾನ ಹೊಂದಿದ್ದರೂ ಈ ಚರ್ಚಿನ ಉಸಾಬರಿಗೆ ಬಂದಿಲ್ಲ ಎಂದು ಚರ್ಚ್ ಇತಿಹಾಸ ಸ್ಪಷ್ಟವಾಗಿ ಹೇಳುತ್ತದೆ.

1784 ಎಂಬುದು ಟಿಪ್ಪು ಇತಿಹಾಸದಲ್ಲಿ ಅತ್ಯಂತ ಪ್ರಮುಖ ಸಂಧರ್ಭ. ಇದೇ ಇಸವಿಯಲ್ಲಿ ಆತ ಬ್ರಿಟೀಷರನ್ನು ಹತ್ತಿಕ್ಕುವುದಕ್ಕಾಗಿ ಚರ್ಚ್ ಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ನಿರ್ಧಾರ ಮಾಡಿ ಕರಾವಳಿಯಾದ್ಯಂತ ಸೈನಿಕರ ಜೊತೆ ಪರ್ಯಟಣೆ ಮಾಡುತ್ತಾನೆ. ಇದೇ ಸಮಯದಲ್ಲಿ ಅಂದರೆ 1784 ರಲ್ಲಿಯೇ ಕಿನ್ನಿಗೋಳಿ ಸಮೀಪ ಐಕಳದಲ್ಲಿ ಕಿರೆಂ ಚರ್ಚ್ ಅನ್ನು ಕಟ್ಟಲಾಗುತ್ತದೆ. ಚರ್ಚ್ ಕಟ್ಟುತ್ತಿರೋ ಬಗ್ಗೆ ಟಿಪ್ಪು ಗಮನಕ್ಕೆ ಬಂದು ಚರ್ಚ್ ಸ್ಥಳಕ್ಕೆ ಟಿಪ್ಪು ಸೈನಿಕರ ಜೊತೆ ಬರುತ್ತಾನೆ.

ನೇರವಾಗಿ ಚರ್ಚಿಗೆ ದಾಳಿ ಮಾಡುವ ಎಲ್ಲಾ ಅವಕಾಶಗಳು ಟಿಪ್ಪುವಿನಂತಹ ರಾಜನಿದ್ದರೂ ಆತ ಅದನ್ನು ಮಾಡದೇ ಸ್ಥಳೀಯ ಆಡಳಿತವನ್ನು ನೋಡಿಕೊಳ್ಳುತ್ತಿದ್ದ ಐಕಳಬಾವ, ತಾಳಿಪಾಡಿ ಗುತ್ತು, ಏಳಿಂಜೆ ಗುತ್ತಿನ ಬಂಟ ಮನೆತನದವರನ್ನು ಕರೆಸಿ ಮಾತನಾಡುತ್ತಾನೆ. ಬಂಟ ಮನೆತನಗಳವರು ಚರ್ಚಿನ ಬಗ್ಗೆ ಉತ್ತಮ ಅಭಿಪ್ರಾಯವನ್ನು ವ್ಯಕ್ತಪಡಿಸುವುದಲ್ಲದೆ, ಈ ಚರ್ಚಿಗೆ ನಡೆದುಕೊಳ್ಳುವ ಕ್ರಿಶ್ಚಿಯನ್ನರು ಯಾರೂ ಕೂಡಾ ಬ್ರಿಟೀಷರ ಜೊತೆ ಕೈ ಜೋಡಿಸಿಲ್ಲ ಮತ್ತು ಇವರೂ ನಮ್ಮಂತೆ ಕೃಷಿಕರು ಎಂಬುದನ್ನು ಮನವರಿಕೆ ಮಾಡಿಕೊಡುತ್ತಾರೆ. ತನ್ನ ರಾಜ್ಯದ ಹಿತದೃಷ್ಟಿಯಿಂದ ತನಿಖೆ ನಡೆಸಿದ ಟಿಪ್ಪು, ಆ ಚರ್ಚಿಗೆ ಯಾವ ತೊಂದರೆಯನ್ನೂ ಮಾಡದೇ ಮರಳುತ್ತಾನೆ. ಅದರ ನೆನಪಿಗಾಗಿ ಈಗಲೂ ಪ್ರತೀ ವರ್ಷ ನವೆಂಬರ್ 25 ರಂದು ಈ ಗುತ್ತಿನ ಮನೆತನಗಳಿಗೆ ಬಾಳೆಗೊನೆಯನ್ನು ಇಲ್ಲಿನ ಧರ್ಮಗುರುಗಳು ನೀಡುತ್ತಾ ಬಂದಿದ್ದಾರೆ.

ಟಿಪ್ಪು ಕ್ರಿಶ್ಚಿಯನ್ ವಿರೋಧಿಯಾಗಿರಲಿಲ್ಲ ಎನ್ನುವುದಕ್ಕೆ ಮತ್ತೊಂದು ಉದಾಹರಣೆ ಜಮಲಾಬಾದ್ ಕೋಟೆ
ಮತ್ತು ಅದರ ಸನಿಹದಲ್ಲಿರುವ ಚರ್ಚ್. 1682 ರಲ್ಲಿ ಹಿಂದೂ ಮರಾಠ ರಾಜ ಸಾಂಭಾಜಿ ಗೋವಾವನ್ನು ಆಕ್ರಮಿಸಿದಾಗ ಕ್ರಿಶ್ಚಿಯನ್ನರು ನಿರಾಶ್ರಿತರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಗಡಾಯ್ ಕಲ್ಲು ಎಂಬಲ್ಲಿ ಆಶ್ರಯ ಪಡೆಯುತ್ತಾರೆ. ಅದೇ ಗಡಾಯಿಕಲ್ ಪ್ರದೇಶದಲ್ಲಿ ಟಿಪ್ಪು ಜಮಲಾಬಾದ್ ಕೋಟೆಯನ್ನು ಕಟ್ಟುತ್ತಾನೆ. ಆ ಕೋಟೆಯ ಸುತ್ತಮುತ್ತ ಹಳ್ಳಿಗಳಲ್ಲಿ ಕ್ರಿಶ್ಚಿಯನ್ನು ಇರುತ್ತಾರೆ. ಟಿಪ್ಪು ಕ್ರಿಶ್ಚಿಯನ್ ವಿರೋಧಿ ಆಗಿದ್ದಿದ್ರೆ ಜಮಲಾಬಾದ್ ಕೋಟೆಯ ಸುತ್ತಾಮುತ್ತ ಕ್ರಿಶ್ಚಿಯನ್ನರು ಯಾಕೆ ವಾಸವಾಗ್ತಿದ್ರು ಎಂಬ ಪ್ರಶ್ನೆ ಬರುತ್ತದೆ.

ಅಲ್ಲೇ ಸಣ್ಣ ಗುಡಿಸಲು ರೀತಿಯಲ್ಲಿ ಚರ್ಚ್ ಕೂಡಾ ನಿರ್ಮಿಸಿ ಪ್ರಾರ್ಥನೆ ನಡೆಸುತ್ತಿರುತ್ತಾರೆ. ಯಾವ ಯುದ್ದವೂ ಕ್ರಿಶ್ಚಿಯನ್ನರ ಮೇಲಾಗಲೀ, ಗುಡಿಸಲಿನ ಚರ್ಚಿನ ಮೇಲಾಗಲೀ ಪರಿಣಾಮ ಬೀರದಂತೆ ಟಿಪ್ಪು ನೋಡಿಕೊಳ್ಳುತ್ತಾನೆ. ಟಿಪ್ಪು 1799 ರಲ್ಲಿ ಮರಣ ಹೊಂದಿದ ಬಳಿಕವೂ ಚರ್ಚ್ ಅಲ್ಲೇ ಇರುತ್ತದೆ. 1885 ರ ವೇಳೆಗೆ ಜಮಲಾಬಾದ್ ಕೋಟೆಯ ಸುತ್ತ ಇದ್ದ ಪ್ರದೇಶದಲ್ಲಿ ಕಾಯಿಲೆ ವ್ಯಾಪಿಸಿದ್ದರಿಂದ ಚರ್ಚ್ ಅನ್ನು ಸ್ವಲ್ಪ ದೂರಕ್ಕೆ ಸ್ಥಳಾಂತರಿಸಲಾಯ್ತು.

1784 ರಿಂದ 1799 ರವರೆಗೆ ಕರಾವಳಿಯಲ್ಲಿದ್ದ ಚರ್ಚ್ ಗಳು ಮೂರ್ನಾಲ್ಕು ಮಾತ್ರ. ಉಳಿದಂತೆ ಹಳ್ಳಿಗಳಲ್ಲಿ ಇದ್ದ ಕ್ರಿಶ್ಚಿಯನ್ನರು ದೊಡ್ಡ ಮನೆಯನ್ನು ಆಯ್ಕೆಮಾಡಿಕೊಂಡು ಸಾಮೂಹಿಕ ಪ್ರಾರ್ಥನೆಗೆ ಒಂದೆಡೆ ಸೇರುತ್ತಿದ್ದರು. ಉದಾಹರಣೆಗೆ ಎಸ್ ಇ ಝಡ್ ವಿರೋಧಿ ಹೋರಾಟಗಾರ ಕಳವಾರಿನ ಗ್ರೆಗೋರಿ ಪತ್ರಾವೋ ಮನೆ.

ನಂತರದ ಚರ್ಚುಗಳಿಗೂ ಟಿಪ್ಪುವಿಗೂ ಸಂಬಂಧವೇ ಇಲ್ಲ. ಕಿನ್ನಿಗೋಳಿ ಚರ್ಚ್ 1804 ರಲ್ಲೂ, ಕುಲಶೇಖರ ಕೋರ್ಡೆಲ್ ಚರ್ಚ್ ಮತ್ತು ಬೋಂದೆಲ್ ಚರ್ಚ್ 1873 ರಲ್ಲೂ, ಬೆಳ್ಮನ್ ಚರ್ಚ್ 1894, ಪಾಲಡ್ಕ ಚರ್ಚ್ 1913, ಬಳ್ಕುಂಜೆ ಚರ್ಚ್ 1915, ನಿಡ್ಡೋಡಿ ಚರ್ಚ್ 1937, ನೀರುಡೆ ಚರ್ಚ್ 1945, ಬೋಳ ಚರ್ಚ್ 1964, ಕಟೀಲು ಚರ್ಚ್ 1971, ಮುಂಡ್ಕೂರು ಚರ್ಚ್ 1998 ರಲ್ಲೂ ಪ್ರಾರಂಭವಾಯ್ತು.

ಇದ್ಯಾವುದೂ ಟಿಪ್ಪು ಕಾಲಮಾನದಲ್ಲಿ ಸ್ಥಾಪನೆಯಾದ ಚರ್ಚುಗಳು ಅಲ್ಲ. ಟಿಪ್ಪು ಕಾಲಮಾನದ ಯಾವ ಚರ್ಚಿನ ಇತಿಹಾಸವೂ ಚರ್ಚು ಕೆಡವಿದ ಕತೆಯನ್ನು ಹೇಳುವುದಿಲ್ಲ. ಬದಲಾಗಿ ಬ್ರಿಟೀಷರ ಕಾರಣಕ್ಕಾಗಿ ಚರ್ಚುಗಳ ಪರಿಶೀಲನೆ ನಡೆಸಿದ್ದ ಮತ್ತು ಮನವರಿಕೆಯಾದ ನಂತರ ರಕ್ಷಣೆ ಮಾಡಿದ್ದ ಎಂದಷ್ಟೇ ಇತಿಹಾಸ ಮತ್ತು ಕ್ರಿಶ್ಚಿಯನ್ ಪ್ರಚಲಿತ ಪವಾಡದ ಕತೆಗಳು ಹೇಳುತ್ತದೆ. ಟಿಪ್ಪು ಚರ್ಚ್ ಗಳನ್ನು ಕೆಡವಿದ್ದ ಎನ್ನುವುದು ಇತಿಹಾಸಕ್ಕೂ, ಚರ್ಚಿನ ಪವಾಡಕ್ಕೂ ಮಾಡುವ ಅಪಚಾರವಾಗುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending