ದಿನದ ಸುದ್ದಿ
ಮಂಗಳೂರಿನ ಚರ್ಚ್ ಗಳನ್ನು ದ್ವಂಸ ಮಾಡಿದ್ದನೇ ಟಿಪ್ಪು? ಇತಿಹಾಸ ಏನು ಹೇಳುತ್ತೆ?
- ನವೀನ್ ಸೂರಿಂಜೆ
ಟಿಪ್ಪು ಕೊಡವರ ಹತ್ಯಾಕಾಂಡ ನಡೆಸಿರುವುದು ಸುಳ್ಳು ಎಂದು ಇತಿಹಾಸಕಾರರು ಹೇಳಿದ ನಂತರ ಇದೀಗ ಕರಾವಳಿ ಭಾಗದಲ್ಲಿ ಟಿಪ್ಪು ಕ್ರಿಶ್ಚಿಯನ್ನರ ಮರಣಹೋಮ ನಡೆಸಿದ್ದ ಎಂದು ಸುದ್ದಿ ಹರಿಬಿಡಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ 27 ಚರ್ಚುಗಳನ್ನು ಕೆಡವಿದ್ದ ಎಂದು ಸುದ್ದಿ ಹಬ್ಬಿಸಲಾಗ್ತಿದೆ. 1750 ರಲ್ಲಿ ಜನಿಸಿದ ಟಿಪ್ಪು ಸುಲ್ತಾನ್ ಕರಾವಳಿಯಲ್ಲಿ 1784 ರಿಂದ 1799 ರವರೆಗೆ ಅಧಿಪತ್ಯವನ್ನು ಸ್ಥಾಪಿಸಿದ್ದ.
ಈ ಸಂಧರ್ಭದಲ್ಲಿ ಕರಾವಳಿಯಲ್ಲಿ ಬ್ರಿಟೀಷರು ಹೆಚ್ಚು ಸಕ್ರೀಯಗೊಂಡಿದ್ದನ್ನು ಅರಿತಿದ್ದ. ಆ ಕಾರಣಕ್ಕಾಗಿ ಬ್ರಿಟೀಷರ ಪ್ರಾರ್ಥನಾ ಮಂದಿರಗಳ ಬಗ್ಗೆ ಒಂದು ರೀತಿಯ ಸಂಶಯದ ಗಮನವನ್ನು ಇಡುವುದು ಆಗಿನ ರಾಜನೀತಿಯಾಗಿತ್ತು. ಆದರೆ 27 ಚರ್ಚುಗಳನ್ನು ಕೆಡವಿದ್ದ ಎಂಬುದು ಸುಳ್ಳು ಇತಿಹಾಸ. ಅದಕ್ಕಾಗಿ 1784 ರಿಂದ ಟಿಪ್ಪು ಮರಣದವರೆಗೆ ಕರಾವಳಿಯಲ್ಲಿ ಇದ್ದ ಚರ್ಚುಗಳು ಯಾವುದು ಮತ್ತು ಅದರ ಇತಿಹಾಸ ಏನು ಹೇಳುತ್ತದೆ ಎಂಬುದನ್ನು ನೋಡಬೇಕು.
ಕರಾವಳಿಯ ಅತೀ ಪುರಾತನ ಚರ್ಚುಗಳಲ್ಲಿ ಮೊದಲನೆಯದಾಗಿ ಕಾಣುವುದು 1680 ರಲ್ಲಿ ಕಟ್ಟಲ್ಪಟ್ಟ ಹಂಪನಕಟ್ಟೆಯ ಮಿಲಾಗ್ರಿಸ್ ಚರ್ಚ್ ಮತ್ತು ಕಲ್ಯಾಣಪುರದ ಮಿಲಾಗ್ರಿಸ್ ಚರ್ಚ್. ಹಂಪನಕಟ್ಟೆಯ ಮಿಲಾಗ್ರಿಸ್ ಚರ್ಚನ್ನು ಟಿಪ್ಪು ಒಡೆದು ಹಾಕಿರೋ ಬಗ್ಗೆ ಎಲ್ಲೂ ಇತಿಹಾಸ ಹೇಳುವುದಿಲ್ಲ. ಟಿಪ್ಪು ಮರಣದ ನಂತರ ಬ್ರಿಟೀಷರು ಮಿಲಾಗ್ರಿಸ್ ಚರ್ಚನ್ನು ಹೆಚ್ಚು ದೊಡ್ಡದಾಗಿ ಕಟ್ಟಿದರು ಎಂದಷ್ಟೇ ಹೇಳುತ್ತದೆ.
ಅದಕ್ಕಿಂತಲೂ ಹೆಚ್ಚು ಕುತೂಹಲಕರವಾಗಿರೋದು ಮಿಲಾಗ್ರಿಸ್ ವ್ಯಾಪ್ತಿಯ ಸಾಲ್ವಡಾರ್ ಪಿಂಟೋ ಎಂಬ ಅಧಿಕಾರಿಯೇ ಟಿಪ್ಪುವಿನ ಕಾರ್ಯದರ್ಶಿ ಆಗಿದ್ದರು. ಟಿಪ್ಪು ಮರಣದ ನಂತರ ಫಾದರ್ ಮೆಂಡೇಝ್ ಮತ್ತು ಟಿಪ್ಪುವಿನ ಮಾಜಿ ಮುನ್ಶಿ(ಕಾರ್ಯದರ್ಶಿ) ಸಾಲ್ವಡಾರ್ ಪಿಂಟೋ ಜೊತೆ ಸೇರಿ 600 ರೂಪಾಯಿಗಳನ್ನು ಸಂಗ್ರಹಿಸಿ 1811 ರಲ್ಲಿ ವಿಶಾಲ ಮಿಲಾಗ್ರಿಸ್ ಚರ್ಚನ್ನು ಪುನರ್ ನಿರ್ಮಾಣ ಮಾಡಿದರು ಎಂದು ಇತಿಹಾಸ ಹೇಳುತ್ತದೆ. ಇಲ್ಲಿ ಮುಖ್ಯವಾದುದು ಟಿಪ್ಪುವಿನ ಕಾರ್ಯದರ್ಶಿ ಒಬ್ಬ ಕ್ರಿಶ್ಚಿಯನ್ ಆಗಿದ್ದರು ಮತ್ತು ಅವರು ಧರ್ಮಾಭಿಮಾನಿಯಾಗಿದ್ದರು ಎನ್ನುವುದು.
ಇನ್ನು ಉಡುಪಿಯ ಕಲ್ಯಾಣಪುರ ಚರ್ಚ್ ಕೂಡಾ 1680 ರಲ್ಲಿ ಪ್ರಾರಂಭವಾದರೂ ಟಿಪ್ಪುನಿಂದ ಕೆಡವಲ್ಪಟ್ಟಿಲ್ಲ. 1784 ರ ಅವಧಿಯಲ್ಲಿ ಟಿಪ್ಪು ಕರಾವಳಿಯ ಬ್ರಿಟೀಷರ ಆಶ್ರಯತಾಣವನ್ನು ಹುಡುಕಿಕೊಂಡು ಚರ್ಚುಗಳಿಗೆ ಬಂದಾಗ ಕಲ್ಯಾಣಪುರ ಚರ್ಚನ್ನು ಕೆಡವಿದ ಬಗ್ಗೆ ದಾಖಲೆಗಳು ಇಲ್ಲ.
ಇತಿಹಾಸ ಬದಿಗಿಟ್ಟು ಪವಾಡವನ್ನು ಗಮನಿಸಿದರೂ ಕಲ್ಯಾಣಪುರ ಮಿಲಾಗ್ರಿಸ್ ಚರ್ಚಿನ ಪವಾಡದ ಕತೆ ಹೀಗೆ ಹೇಳುತ್ತದೆ : ಟಿಪ್ಪು ಸುಲ್ತಾನ್ ಎಂಬ ರಾಜ ಬ್ರಿಟೀಷರನ್ನು ಹುಡುಕಿಕೊಂಡು ಕಲ್ಯಾಣಪುರ ಪವಾಡ ಮಾತೆಯ ಮಿಲಾಗ್ರಿಸ್ ಚರ್ಚಿಗೆ ದಾಳಿ ಮಾಡಲು ಬಂದ. ಆಗ ಎಲ್ಲೋ ಇದ್ದ ಜೇನು ನೊಣಗಳು ಟಿಪ್ಪುವಿನ ಸೈನ್ಯದ ಮೇಲೆ ಮುತ್ತಿಗೆ ಹಾಕಿದವು. ಸೈನಿಕರು ಓಡಿ ನದಿಯಲ್ಲಿ ಮುಳುಗಿದರೂ ಜೇನುನೊಣಗಳು ಬಿಡಲಿಲ್ಲ. ಕೊನೆಗೂ ಕಲ್ಯಾಣಪುರ ಪವಾಡ ಮಾತೆಯ ಚರ್ಚನ್ನು ಕೆಡವಲಾಗಲಿಲ್ಲ. ಇದು ಊರಿಡೀ ಪ್ರತೀತಿಯಾಗಿ ಹಿಂದೂಗಳು ಕೂಡಾ ಈ ಚರ್ಚನ್ನು ಮಿಲಾಗ್ರಿಯಮ್ಮನ ದೇವಸ್ಥಾನ ಎನ್ನಲಾರಂಬಿಸಿದ್ರು ಎಂಬುದು ಜನಪದೀಯ ಕತೆಯಾಗಿದೆ.
ಇದರ ಬಳಿಕ ಅತ್ಯಂತ ಪುರಾತನ ಚರ್ಚುಗಳ ಪೈಕಿ ನಮಗೆ ಕಾಣಸಿಗುವುದು ಮೂಡಬಿದ್ರೆಯ ಹೊಸಬೆಟ್ಟು ಚರ್ಚ್. 1761 ರಲ್ಲಿ ನಿರ್ಮಾಣಗೊಂಡ ಚರ್ಚಿನ ಇತಿಹಾಸವನ್ನು ಓದಿದಾಗ ಟಿಪ್ಪುವಿನ ಉಲ್ಲೇಖಗಳು ಬರುತ್ತದೆ. ಮೂಡಬಿದ್ರೆಯ ಜೈನ ಅರಸನ ವ್ಯಾಪ್ತಿಗೂ ಬರುತ್ತಿದ್ದ ಈ ಚರ್ಚು ಸ್ಥಳೀಯ ಅರಸನ ಕೆಂಗಣ್ಣಿಗೆ ಗುರಿಯಾಗಿತ್ತು. ಟಿಪ್ಪು ಹಲವು ಚರ್ಚುಗಳ ಬಗ್ಗೆ ಅಸಮಾದಾನ ಹೊಂದಿದ್ದರೂ ಈ ಚರ್ಚಿನ ಉಸಾಬರಿಗೆ ಬಂದಿಲ್ಲ ಎಂದು ಚರ್ಚ್ ಇತಿಹಾಸ ಸ್ಪಷ್ಟವಾಗಿ ಹೇಳುತ್ತದೆ.
1784 ಎಂಬುದು ಟಿಪ್ಪು ಇತಿಹಾಸದಲ್ಲಿ ಅತ್ಯಂತ ಪ್ರಮುಖ ಸಂಧರ್ಭ. ಇದೇ ಇಸವಿಯಲ್ಲಿ ಆತ ಬ್ರಿಟೀಷರನ್ನು ಹತ್ತಿಕ್ಕುವುದಕ್ಕಾಗಿ ಚರ್ಚ್ ಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ನಿರ್ಧಾರ ಮಾಡಿ ಕರಾವಳಿಯಾದ್ಯಂತ ಸೈನಿಕರ ಜೊತೆ ಪರ್ಯಟಣೆ ಮಾಡುತ್ತಾನೆ. ಇದೇ ಸಮಯದಲ್ಲಿ ಅಂದರೆ 1784 ರಲ್ಲಿಯೇ ಕಿನ್ನಿಗೋಳಿ ಸಮೀಪ ಐಕಳದಲ್ಲಿ ಕಿರೆಂ ಚರ್ಚ್ ಅನ್ನು ಕಟ್ಟಲಾಗುತ್ತದೆ. ಚರ್ಚ್ ಕಟ್ಟುತ್ತಿರೋ ಬಗ್ಗೆ ಟಿಪ್ಪು ಗಮನಕ್ಕೆ ಬಂದು ಚರ್ಚ್ ಸ್ಥಳಕ್ಕೆ ಟಿಪ್ಪು ಸೈನಿಕರ ಜೊತೆ ಬರುತ್ತಾನೆ.
ನೇರವಾಗಿ ಚರ್ಚಿಗೆ ದಾಳಿ ಮಾಡುವ ಎಲ್ಲಾ ಅವಕಾಶಗಳು ಟಿಪ್ಪುವಿನಂತಹ ರಾಜನಿದ್ದರೂ ಆತ ಅದನ್ನು ಮಾಡದೇ ಸ್ಥಳೀಯ ಆಡಳಿತವನ್ನು ನೋಡಿಕೊಳ್ಳುತ್ತಿದ್ದ ಐಕಳಬಾವ, ತಾಳಿಪಾಡಿ ಗುತ್ತು, ಏಳಿಂಜೆ ಗುತ್ತಿನ ಬಂಟ ಮನೆತನದವರನ್ನು ಕರೆಸಿ ಮಾತನಾಡುತ್ತಾನೆ. ಬಂಟ ಮನೆತನಗಳವರು ಚರ್ಚಿನ ಬಗ್ಗೆ ಉತ್ತಮ ಅಭಿಪ್ರಾಯವನ್ನು ವ್ಯಕ್ತಪಡಿಸುವುದಲ್ಲದೆ, ಈ ಚರ್ಚಿಗೆ ನಡೆದುಕೊಳ್ಳುವ ಕ್ರಿಶ್ಚಿಯನ್ನರು ಯಾರೂ ಕೂಡಾ ಬ್ರಿಟೀಷರ ಜೊತೆ ಕೈ ಜೋಡಿಸಿಲ್ಲ ಮತ್ತು ಇವರೂ ನಮ್ಮಂತೆ ಕೃಷಿಕರು ಎಂಬುದನ್ನು ಮನವರಿಕೆ ಮಾಡಿಕೊಡುತ್ತಾರೆ. ತನ್ನ ರಾಜ್ಯದ ಹಿತದೃಷ್ಟಿಯಿಂದ ತನಿಖೆ ನಡೆಸಿದ ಟಿಪ್ಪು, ಆ ಚರ್ಚಿಗೆ ಯಾವ ತೊಂದರೆಯನ್ನೂ ಮಾಡದೇ ಮರಳುತ್ತಾನೆ. ಅದರ ನೆನಪಿಗಾಗಿ ಈಗಲೂ ಪ್ರತೀ ವರ್ಷ ನವೆಂಬರ್ 25 ರಂದು ಈ ಗುತ್ತಿನ ಮನೆತನಗಳಿಗೆ ಬಾಳೆಗೊನೆಯನ್ನು ಇಲ್ಲಿನ ಧರ್ಮಗುರುಗಳು ನೀಡುತ್ತಾ ಬಂದಿದ್ದಾರೆ.
ಟಿಪ್ಪು ಕ್ರಿಶ್ಚಿಯನ್ ವಿರೋಧಿಯಾಗಿರಲಿಲ್ಲ ಎನ್ನುವುದಕ್ಕೆ ಮತ್ತೊಂದು ಉದಾಹರಣೆ ಜಮಲಾಬಾದ್ ಕೋಟೆ
ಮತ್ತು ಅದರ ಸನಿಹದಲ್ಲಿರುವ ಚರ್ಚ್. 1682 ರಲ್ಲಿ ಹಿಂದೂ ಮರಾಠ ರಾಜ ಸಾಂಭಾಜಿ ಗೋವಾವನ್ನು ಆಕ್ರಮಿಸಿದಾಗ ಕ್ರಿಶ್ಚಿಯನ್ನರು ನಿರಾಶ್ರಿತರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಗಡಾಯ್ ಕಲ್ಲು ಎಂಬಲ್ಲಿ ಆಶ್ರಯ ಪಡೆಯುತ್ತಾರೆ. ಅದೇ ಗಡಾಯಿಕಲ್ ಪ್ರದೇಶದಲ್ಲಿ ಟಿಪ್ಪು ಜಮಲಾಬಾದ್ ಕೋಟೆಯನ್ನು ಕಟ್ಟುತ್ತಾನೆ. ಆ ಕೋಟೆಯ ಸುತ್ತಮುತ್ತ ಹಳ್ಳಿಗಳಲ್ಲಿ ಕ್ರಿಶ್ಚಿಯನ್ನು ಇರುತ್ತಾರೆ. ಟಿಪ್ಪು ಕ್ರಿಶ್ಚಿಯನ್ ವಿರೋಧಿ ಆಗಿದ್ದಿದ್ರೆ ಜಮಲಾಬಾದ್ ಕೋಟೆಯ ಸುತ್ತಾಮುತ್ತ ಕ್ರಿಶ್ಚಿಯನ್ನರು ಯಾಕೆ ವಾಸವಾಗ್ತಿದ್ರು ಎಂಬ ಪ್ರಶ್ನೆ ಬರುತ್ತದೆ.
ಅಲ್ಲೇ ಸಣ್ಣ ಗುಡಿಸಲು ರೀತಿಯಲ್ಲಿ ಚರ್ಚ್ ಕೂಡಾ ನಿರ್ಮಿಸಿ ಪ್ರಾರ್ಥನೆ ನಡೆಸುತ್ತಿರುತ್ತಾರೆ. ಯಾವ ಯುದ್ದವೂ ಕ್ರಿಶ್ಚಿಯನ್ನರ ಮೇಲಾಗಲೀ, ಗುಡಿಸಲಿನ ಚರ್ಚಿನ ಮೇಲಾಗಲೀ ಪರಿಣಾಮ ಬೀರದಂತೆ ಟಿಪ್ಪು ನೋಡಿಕೊಳ್ಳುತ್ತಾನೆ. ಟಿಪ್ಪು 1799 ರಲ್ಲಿ ಮರಣ ಹೊಂದಿದ ಬಳಿಕವೂ ಚರ್ಚ್ ಅಲ್ಲೇ ಇರುತ್ತದೆ. 1885 ರ ವೇಳೆಗೆ ಜಮಲಾಬಾದ್ ಕೋಟೆಯ ಸುತ್ತ ಇದ್ದ ಪ್ರದೇಶದಲ್ಲಿ ಕಾಯಿಲೆ ವ್ಯಾಪಿಸಿದ್ದರಿಂದ ಚರ್ಚ್ ಅನ್ನು ಸ್ವಲ್ಪ ದೂರಕ್ಕೆ ಸ್ಥಳಾಂತರಿಸಲಾಯ್ತು.
1784 ರಿಂದ 1799 ರವರೆಗೆ ಕರಾವಳಿಯಲ್ಲಿದ್ದ ಚರ್ಚ್ ಗಳು ಮೂರ್ನಾಲ್ಕು ಮಾತ್ರ. ಉಳಿದಂತೆ ಹಳ್ಳಿಗಳಲ್ಲಿ ಇದ್ದ ಕ್ರಿಶ್ಚಿಯನ್ನರು ದೊಡ್ಡ ಮನೆಯನ್ನು ಆಯ್ಕೆಮಾಡಿಕೊಂಡು ಸಾಮೂಹಿಕ ಪ್ರಾರ್ಥನೆಗೆ ಒಂದೆಡೆ ಸೇರುತ್ತಿದ್ದರು. ಉದಾಹರಣೆಗೆ ಎಸ್ ಇ ಝಡ್ ವಿರೋಧಿ ಹೋರಾಟಗಾರ ಕಳವಾರಿನ ಗ್ರೆಗೋರಿ ಪತ್ರಾವೋ ಮನೆ.
ನಂತರದ ಚರ್ಚುಗಳಿಗೂ ಟಿಪ್ಪುವಿಗೂ ಸಂಬಂಧವೇ ಇಲ್ಲ. ಕಿನ್ನಿಗೋಳಿ ಚರ್ಚ್ 1804 ರಲ್ಲೂ, ಕುಲಶೇಖರ ಕೋರ್ಡೆಲ್ ಚರ್ಚ್ ಮತ್ತು ಬೋಂದೆಲ್ ಚರ್ಚ್ 1873 ರಲ್ಲೂ, ಬೆಳ್ಮನ್ ಚರ್ಚ್ 1894, ಪಾಲಡ್ಕ ಚರ್ಚ್ 1913, ಬಳ್ಕುಂಜೆ ಚರ್ಚ್ 1915, ನಿಡ್ಡೋಡಿ ಚರ್ಚ್ 1937, ನೀರುಡೆ ಚರ್ಚ್ 1945, ಬೋಳ ಚರ್ಚ್ 1964, ಕಟೀಲು ಚರ್ಚ್ 1971, ಮುಂಡ್ಕೂರು ಚರ್ಚ್ 1998 ರಲ್ಲೂ ಪ್ರಾರಂಭವಾಯ್ತು.
ಇದ್ಯಾವುದೂ ಟಿಪ್ಪು ಕಾಲಮಾನದಲ್ಲಿ ಸ್ಥಾಪನೆಯಾದ ಚರ್ಚುಗಳು ಅಲ್ಲ. ಟಿಪ್ಪು ಕಾಲಮಾನದ ಯಾವ ಚರ್ಚಿನ ಇತಿಹಾಸವೂ ಚರ್ಚು ಕೆಡವಿದ ಕತೆಯನ್ನು ಹೇಳುವುದಿಲ್ಲ. ಬದಲಾಗಿ ಬ್ರಿಟೀಷರ ಕಾರಣಕ್ಕಾಗಿ ಚರ್ಚುಗಳ ಪರಿಶೀಲನೆ ನಡೆಸಿದ್ದ ಮತ್ತು ಮನವರಿಕೆಯಾದ ನಂತರ ರಕ್ಷಣೆ ಮಾಡಿದ್ದ ಎಂದಷ್ಟೇ ಇತಿಹಾಸ ಮತ್ತು ಕ್ರಿಶ್ಚಿಯನ್ ಪ್ರಚಲಿತ ಪವಾಡದ ಕತೆಗಳು ಹೇಳುತ್ತದೆ. ಟಿಪ್ಪು ಚರ್ಚ್ ಗಳನ್ನು ಕೆಡವಿದ್ದ ಎನ್ನುವುದು ಇತಿಹಾಸಕ್ಕೂ, ಚರ್ಚಿನ ಪವಾಡಕ್ಕೂ ಮಾಡುವ ಅಪಚಾರವಾಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಿಎಂ ಸ್ವನಿಧಿ ಯೋಜನೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಕೇಂದ್ರ ಪುರಸ್ಕøತ ಯೋಜನೆಯಾದ ಡೇ-ನಲ್ಮ್ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಉಪಘಟಕವಾದ ಪಿ.ಎಂ. ಸ್ವನಿಧಿ ಯೋಜನೆಯಡಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬೀದಿ ಬದಿ ವ್ಯಾಪಾರಸ್ಥರು, ಸಾರ್ವಜನಿಕ ಸ್ಥಳಗಳಲ್ಲಿ ಹಾಲು ಮಾರಾಟಗಾರರು, ದಿನಪತ್ರಿಕೆ ಹಾಕುವವರು, ಅಸಕ್ತ ಸಾರ್ವಜನಿಕರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಹಾಗೂ ಪಾನ್ ಕಾರ್ಡ್ ದಾಖಲಾತಿಗಳೊಂದಿಗೆ ಪಾಲಿಕೆಯ ನಗರ ಬಡತನ ನಿವಾರಣಾ ಕೋಶ, ನಲ್ಮ್ ಶಾಖೆ(ಎಸ್.ಜೆ.ಎಸ್.ಆರ್.ವೈ ಕೆಂಪು ಕಟ್ಟಡ) ಮಹಾಪಾಲಿಕೆ ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿ ವಾಸವಿದ್ದರೆ ಮಾಹಿತಿ ಕೊಡಿ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳ ಉಪಟಳ ತಡೆಯಲು ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಮತ್ತು ಸರ್ಕಾರಿ ಆಸ್ಪತೆಗಳು, ಕ್ರೀಡಾ ಸಂಕೀರ್ಣ, ಬಸ್ ನಿಲ್ದಾಣ, ರೈಲ್ವೇ ನಿಲ್ದಾಣಗಳಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಮಾಹಿತಿಯನ್ನು ಹರಿಹರ ಪೌರಾಯುಕ್ತರಿಗೆ ನೀಡಲು ತಿಳಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖರೀದಿಸಿದ ಸಾಮಾಗ್ರಿಗಳ ಬಿಲ್ಲಿನ ದಿನಾಂಕಕ್ಕೂ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಇರುವ ವ್ಯತ್ಯಾಸಕ್ಕೆ ಸ್ಪಷ್ಟನೆ ಕೋರಿ 3 ತಿಂಗಳು ಕಳೆದರೂ ಯಾವುದೇ ಸ್ಪಷ್ಟನೆ ನೀಡದೆ ಕರ್ತವ್ಯ ಲೋಪ ಎಸಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಕೆ.ಎ.ಓಬಳೇಶ್ ದೂರು ನೀಡಿದ್ದಾರೆ.
ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2020-21 ರಿಂದ 2024-25ನೇ ಸಾಲಿನ ಅವಧಿಯ ದಾಸ್ತಾನು ವಹಿಯನ್ನು ಮಾಹಿತಿಹಕ್ಕು ಅಧಿನಿಯಮ ಅಡಿಯಲ್ಲಿ ಪಡೆದು ಪರಿಶಿಲನೆ ಮಾಡಿದಾಗ ಸಾಮಾಗ್ರಿಗಳು ಖರೀದಿ ದಿನಾಂಕ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಸಾಕಷ್ಟು ವ್ಯತ್ಯಾಸ ಕಂಡು ಬಂದಿದ್ದು, ಈ ಬಗ್ಗೆ ಸ್ಪಷ್ಟತೆ ನೀಡುವಂತೆ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿಯವರಿಗೆ ಅರ್ಜಿ ಸಲ್ಲಿಸಿರುತ್ತಾರೆ. ನಿಗದಿತ ಅವಧಿಯಲ್ಲಿ ಯಾವುದೇ ಸ್ಪಷ್ಟನೆ ನೀಡದ ಕಾರಣ ಜ್ಞಾಪನವನ್ನು ನೀಡಲಾಗಿತ್ತು. ಜ್ಞಾಪನ ಪತ್ರ ನೀಡಿ ನಿಗದಿತ ಅವಧಿ ಮುಕ್ತಾಯವಾದರೂ ಯಾವುದೇ ಸ್ಪಷ್ಟನೆ ನೀಡದೆ ನಿರ್ಲಕ್ಷö್ಯ ತೋರಿದ ರೇಣುಕಾ ದೇವಿಯವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಕರ್ತವ್ಯ ಲೋಪ | ಆಯುಕ್ತೆ ಮಂಜುಶ್ರೀ, ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಕರ್ತವ್ಯ ಲೋಪ ; ಪಿ.ಮಣಿವಣ್ಣನ್, ಕ್ರೈಸ್ ಇ.ಡಿ ಕಾಂತರಾಜು ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoಸಚಿವ ಪ್ರಿಯಾಂಕ ಖರ್ಗೆ ಪಂಚಾಯತ್ ರಾಜ್ ಇಲಾಖೆ ನಿರ್ಲಕ್ಷ್ಯ | ದೂರು ನೀಡಿ 6 ತಿಂಗಳಾದರೂ ಯಾವುದೇ ಕ್ರಮವಿಲ್ಲ ; ವಕೀಲ ಡಾ.ಕೆ.ಎ.ಓಬಳಪ್ಪ ಆರೋಪ
-
ದಿನದ ಸುದ್ದಿ6 days agoಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ | 8 ಕುಲಸಚಿವರು, 10 ಹಣಕಾಸು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು
-
ದಿನದ ಸುದ್ದಿ6 days agoಹೊಳಲ್ಕೆರೆ | ಕೆ.ಟಿ.ಪಿ.ಪಿ ನಿಯಮ ಉಲ್ಲಂಘನೆ ; ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಖರೀದಿ ವ್ಯವಹಾರ ಪ್ರಾಂಶುಪಾಲ ಡಾ ಎಸ್.ಪಿ ರವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಓಬಳೇಶ್ ದೂರು
-
ದಿನದ ಸುದ್ದಿ3 days agoಕರ್ತವ್ಯ ಲೋಪ | ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ಕೆ ವಿರುದ್ಧ ಲೋಕಾಯುಕ್ತಕ್ಕೆ ದೂರು
-
ದಿನದ ಸುದ್ದಿ5 days agoನರೇಗಾ ಕಾರ್ಮಿಕ ಕೆಲಸದ ಸ್ಥಳದಲ್ಲಿ ನಿಧನ : ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ
-
ದಿನದ ಸುದ್ದಿ5 days agoಇದೇ 15 ರಂದು ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

