Connect with us

ದಿನದ ಸುದ್ದಿ

ಮಂಗಳೂರಿನ ಚರ್ಚ್ ಗಳನ್ನು ದ್ವಂಸ ಮಾಡಿದ್ದನೇ ಟಿಪ್ಪು? ಇತಿಹಾಸ ಏನು ಹೇಳುತ್ತೆ?

Published

on

  • ನವೀನ್ ಸೂರಿಂಜೆ

ಟಿಪ್ಪು ಕೊಡವರ ಹತ್ಯಾಕಾಂಡ ನಡೆಸಿರುವುದು ಸುಳ್ಳು ಎಂದು ಇತಿಹಾಸಕಾರರು ಹೇಳಿದ ನಂತರ ಇದೀಗ ಕರಾವಳಿ ಭಾಗದಲ್ಲಿ ಟಿಪ್ಪು ಕ್ರಿಶ್ಚಿಯನ್ನರ ಮರಣಹೋಮ ನಡೆಸಿದ್ದ ಎಂದು ಸುದ್ದಿ ಹರಿಬಿಡಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ 27 ಚರ್ಚುಗಳನ್ನು ಕೆಡವಿದ್ದ ಎಂದು ಸುದ್ದಿ ಹಬ್ಬಿಸಲಾಗ್ತಿದೆ. 1750 ರಲ್ಲಿ ಜನಿಸಿದ ಟಿಪ್ಪು ಸುಲ್ತಾನ್ ಕರಾವಳಿಯಲ್ಲಿ 1784 ರಿಂದ 1799 ರವರೆಗೆ ಅಧಿಪತ್ಯವನ್ನು ಸ್ಥಾಪಿಸಿದ್ದ.

ಈ ಸಂಧರ್ಭದಲ್ಲಿ ಕರಾವಳಿಯಲ್ಲಿ ಬ್ರಿಟೀಷರು ಹೆಚ್ಚು ಸಕ್ರೀಯಗೊಂಡಿದ್ದನ್ನು ಅರಿತಿದ್ದ. ಆ ಕಾರಣಕ್ಕಾಗಿ ಬ್ರಿಟೀಷರ ಪ್ರಾರ್ಥನಾ ಮಂದಿರಗಳ ಬಗ್ಗೆ ಒಂದು ರೀತಿಯ ಸಂಶಯದ ಗಮನವನ್ನು ಇಡುವುದು ಆಗಿನ ರಾಜನೀತಿಯಾಗಿತ್ತು. ಆದರೆ 27 ಚರ್ಚುಗಳನ್ನು ಕೆಡವಿದ್ದ ಎಂಬುದು ಸುಳ್ಳು ಇತಿಹಾಸ. ಅದಕ್ಕಾಗಿ 1784 ರಿಂದ ಟಿಪ್ಪು ಮರಣದವರೆಗೆ ಕರಾವಳಿಯಲ್ಲಿ ಇದ್ದ ಚರ್ಚುಗಳು ಯಾವುದು ಮತ್ತು ಅದರ ಇತಿಹಾಸ ಏನು ಹೇಳುತ್ತದೆ ಎಂಬುದನ್ನು ನೋಡಬೇಕು.

ಕರಾವಳಿಯ ಅತೀ ಪುರಾತನ ಚರ್ಚುಗಳಲ್ಲಿ ಮೊದಲನೆಯದಾಗಿ ಕಾಣುವುದು 1680 ರಲ್ಲಿ ಕಟ್ಟಲ್ಪಟ್ಟ ಹಂಪನಕಟ್ಟೆಯ ಮಿಲಾಗ್ರಿಸ್ ಚರ್ಚ್ ಮತ್ತು ಕಲ್ಯಾಣಪುರದ ಮಿಲಾಗ್ರಿಸ್ ಚರ್ಚ್. ಹಂಪನಕಟ್ಟೆಯ ಮಿಲಾಗ್ರಿಸ್ ಚರ್ಚನ್ನು ಟಿಪ್ಪು ಒಡೆದು ಹಾಕಿರೋ ಬಗ್ಗೆ ಎಲ್ಲೂ ಇತಿಹಾಸ ಹೇಳುವುದಿಲ್ಲ. ಟಿಪ್ಪು ಮರಣದ ನಂತರ ಬ್ರಿಟೀಷರು ಮಿಲಾಗ್ರಿಸ್ ಚರ್ಚನ್ನು ಹೆಚ್ಚು ದೊಡ್ಡದಾಗಿ ಕಟ್ಟಿದರು ಎಂದಷ್ಟೇ ಹೇಳುತ್ತದೆ.

ಅದಕ್ಕಿಂತಲೂ ಹೆಚ್ಚು ಕುತೂಹಲಕರವಾಗಿರೋದು ಮಿಲಾಗ್ರಿಸ್ ವ್ಯಾಪ್ತಿಯ ಸಾಲ್ವಡಾರ್ ಪಿಂಟೋ ಎಂಬ ಅಧಿಕಾರಿಯೇ ಟಿಪ್ಪುವಿನ ಕಾರ್ಯದರ್ಶಿ ಆಗಿದ್ದರು. ಟಿಪ್ಪು ಮರಣದ ನಂತರ ಫಾದರ್ ಮೆಂಡೇಝ್ ಮತ್ತು ಟಿಪ್ಪುವಿನ ಮಾಜಿ ಮುನ್ಶಿ(ಕಾರ್ಯದರ್ಶಿ) ಸಾಲ್ವಡಾರ್ ಪಿಂಟೋ ಜೊತೆ ಸೇರಿ 600 ರೂಪಾಯಿಗಳನ್ನು ಸಂಗ್ರಹಿಸಿ 1811 ರಲ್ಲಿ ವಿಶಾಲ ಮಿಲಾಗ್ರಿಸ್ ಚರ್ಚನ್ನು ಪುನರ್ ನಿರ್ಮಾಣ ಮಾಡಿದರು ಎಂದು ಇತಿಹಾಸ ಹೇಳುತ್ತದೆ. ಇಲ್ಲಿ ಮುಖ್ಯವಾದುದು ಟಿಪ್ಪುವಿನ ಕಾರ್ಯದರ್ಶಿ ಒಬ್ಬ ಕ್ರಿಶ್ಚಿಯನ್ ಆಗಿದ್ದರು ಮತ್ತು ಅವರು ಧರ್ಮಾಭಿಮಾನಿಯಾಗಿದ್ದರು ಎನ್ನುವುದು.

ಇನ್ನು ಉಡುಪಿಯ ಕಲ್ಯಾಣಪುರ ಚರ್ಚ್ ಕೂಡಾ 1680 ರಲ್ಲಿ ಪ್ರಾರಂಭವಾದರೂ ಟಿಪ್ಪುನಿಂದ ಕೆಡವಲ್ಪಟ್ಟಿಲ್ಲ. 1784 ರ ಅವಧಿಯಲ್ಲಿ ಟಿಪ್ಪು ಕರಾವಳಿಯ ಬ್ರಿಟೀಷರ ಆಶ್ರಯತಾಣವನ್ನು ಹುಡುಕಿಕೊಂಡು ಚರ್ಚುಗಳಿಗೆ ಬಂದಾಗ ಕಲ್ಯಾಣಪುರ ಚರ್ಚನ್ನು ಕೆಡವಿದ ಬಗ್ಗೆ ದಾಖಲೆಗಳು ಇಲ್ಲ.

ಇತಿಹಾಸ ಬದಿಗಿಟ್ಟು ಪವಾಡವನ್ನು ಗಮನಿಸಿದರೂ ಕಲ್ಯಾಣಪುರ ಮಿಲಾಗ್ರಿಸ್ ಚರ್ಚಿನ ಪವಾಡದ ಕತೆ ಹೀಗೆ ಹೇಳುತ್ತದೆ : ಟಿಪ್ಪು ಸುಲ್ತಾನ್ ಎಂಬ ರಾಜ ಬ್ರಿಟೀಷರನ್ನು ಹುಡುಕಿಕೊಂಡು ಕಲ್ಯಾಣಪುರ ಪವಾಡ ಮಾತೆಯ ಮಿಲಾಗ್ರಿಸ್ ಚರ್ಚಿಗೆ ದಾಳಿ ಮಾಡಲು ಬಂದ. ಆಗ ಎಲ್ಲೋ ಇದ್ದ ಜೇನು ನೊಣಗಳು ಟಿಪ್ಪುವಿನ ಸೈನ್ಯದ ಮೇಲೆ ಮುತ್ತಿಗೆ ಹಾಕಿದವು. ಸೈನಿಕರು ಓಡಿ ನದಿಯಲ್ಲಿ ಮುಳುಗಿದರೂ ಜೇನುನೊಣಗಳು ಬಿಡಲಿಲ್ಲ. ಕೊನೆಗೂ ಕಲ್ಯಾಣಪುರ ಪವಾಡ ಮಾತೆಯ ಚರ್ಚನ್ನು ಕೆಡವಲಾಗಲಿಲ್ಲ. ಇದು ಊರಿಡೀ ಪ್ರತೀತಿಯಾಗಿ ಹಿಂದೂಗಳು ಕೂಡಾ ಈ ಚರ್ಚನ್ನು ಮಿಲಾಗ್ರಿಯಮ್ಮನ ದೇವಸ್ಥಾನ ಎನ್ನಲಾರಂಬಿಸಿದ್ರು ಎಂಬುದು ಜನಪದೀಯ ಕತೆಯಾಗಿದೆ.

ಇದರ ಬಳಿಕ ಅತ್ಯಂತ ಪುರಾತನ ಚರ್ಚುಗಳ ಪೈಕಿ ನಮಗೆ ಕಾಣಸಿಗುವುದು ಮೂಡಬಿದ್ರೆಯ ಹೊಸಬೆಟ್ಟು ಚರ್ಚ್. 1761 ರಲ್ಲಿ ನಿರ್ಮಾಣಗೊಂಡ ಚರ್ಚಿನ ಇತಿಹಾಸವನ್ನು ಓದಿದಾಗ ಟಿಪ್ಪುವಿನ ಉಲ್ಲೇಖಗಳು ಬರುತ್ತದೆ. ಮೂಡಬಿದ್ರೆಯ ಜೈನ ಅರಸನ ವ್ಯಾಪ್ತಿಗೂ ಬರುತ್ತಿದ್ದ ಈ ಚರ್ಚು ಸ್ಥಳೀಯ ಅರಸನ ಕೆಂಗಣ್ಣಿಗೆ ಗುರಿಯಾಗಿತ್ತು. ಟಿಪ್ಪು ಹಲವು ಚರ್ಚುಗಳ ಬಗ್ಗೆ ಅಸಮಾದಾನ ಹೊಂದಿದ್ದರೂ ಈ ಚರ್ಚಿನ ಉಸಾಬರಿಗೆ ಬಂದಿಲ್ಲ ಎಂದು ಚರ್ಚ್ ಇತಿಹಾಸ ಸ್ಪಷ್ಟವಾಗಿ ಹೇಳುತ್ತದೆ.

1784 ಎಂಬುದು ಟಿಪ್ಪು ಇತಿಹಾಸದಲ್ಲಿ ಅತ್ಯಂತ ಪ್ರಮುಖ ಸಂಧರ್ಭ. ಇದೇ ಇಸವಿಯಲ್ಲಿ ಆತ ಬ್ರಿಟೀಷರನ್ನು ಹತ್ತಿಕ್ಕುವುದಕ್ಕಾಗಿ ಚರ್ಚ್ ಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ನಿರ್ಧಾರ ಮಾಡಿ ಕರಾವಳಿಯಾದ್ಯಂತ ಸೈನಿಕರ ಜೊತೆ ಪರ್ಯಟಣೆ ಮಾಡುತ್ತಾನೆ. ಇದೇ ಸಮಯದಲ್ಲಿ ಅಂದರೆ 1784 ರಲ್ಲಿಯೇ ಕಿನ್ನಿಗೋಳಿ ಸಮೀಪ ಐಕಳದಲ್ಲಿ ಕಿರೆಂ ಚರ್ಚ್ ಅನ್ನು ಕಟ್ಟಲಾಗುತ್ತದೆ. ಚರ್ಚ್ ಕಟ್ಟುತ್ತಿರೋ ಬಗ್ಗೆ ಟಿಪ್ಪು ಗಮನಕ್ಕೆ ಬಂದು ಚರ್ಚ್ ಸ್ಥಳಕ್ಕೆ ಟಿಪ್ಪು ಸೈನಿಕರ ಜೊತೆ ಬರುತ್ತಾನೆ.

ನೇರವಾಗಿ ಚರ್ಚಿಗೆ ದಾಳಿ ಮಾಡುವ ಎಲ್ಲಾ ಅವಕಾಶಗಳು ಟಿಪ್ಪುವಿನಂತಹ ರಾಜನಿದ್ದರೂ ಆತ ಅದನ್ನು ಮಾಡದೇ ಸ್ಥಳೀಯ ಆಡಳಿತವನ್ನು ನೋಡಿಕೊಳ್ಳುತ್ತಿದ್ದ ಐಕಳಬಾವ, ತಾಳಿಪಾಡಿ ಗುತ್ತು, ಏಳಿಂಜೆ ಗುತ್ತಿನ ಬಂಟ ಮನೆತನದವರನ್ನು ಕರೆಸಿ ಮಾತನಾಡುತ್ತಾನೆ. ಬಂಟ ಮನೆತನಗಳವರು ಚರ್ಚಿನ ಬಗ್ಗೆ ಉತ್ತಮ ಅಭಿಪ್ರಾಯವನ್ನು ವ್ಯಕ್ತಪಡಿಸುವುದಲ್ಲದೆ, ಈ ಚರ್ಚಿಗೆ ನಡೆದುಕೊಳ್ಳುವ ಕ್ರಿಶ್ಚಿಯನ್ನರು ಯಾರೂ ಕೂಡಾ ಬ್ರಿಟೀಷರ ಜೊತೆ ಕೈ ಜೋಡಿಸಿಲ್ಲ ಮತ್ತು ಇವರೂ ನಮ್ಮಂತೆ ಕೃಷಿಕರು ಎಂಬುದನ್ನು ಮನವರಿಕೆ ಮಾಡಿಕೊಡುತ್ತಾರೆ. ತನ್ನ ರಾಜ್ಯದ ಹಿತದೃಷ್ಟಿಯಿಂದ ತನಿಖೆ ನಡೆಸಿದ ಟಿಪ್ಪು, ಆ ಚರ್ಚಿಗೆ ಯಾವ ತೊಂದರೆಯನ್ನೂ ಮಾಡದೇ ಮರಳುತ್ತಾನೆ. ಅದರ ನೆನಪಿಗಾಗಿ ಈಗಲೂ ಪ್ರತೀ ವರ್ಷ ನವೆಂಬರ್ 25 ರಂದು ಈ ಗುತ್ತಿನ ಮನೆತನಗಳಿಗೆ ಬಾಳೆಗೊನೆಯನ್ನು ಇಲ್ಲಿನ ಧರ್ಮಗುರುಗಳು ನೀಡುತ್ತಾ ಬಂದಿದ್ದಾರೆ.

ಟಿಪ್ಪು ಕ್ರಿಶ್ಚಿಯನ್ ವಿರೋಧಿಯಾಗಿರಲಿಲ್ಲ ಎನ್ನುವುದಕ್ಕೆ ಮತ್ತೊಂದು ಉದಾಹರಣೆ ಜಮಲಾಬಾದ್ ಕೋಟೆ
ಮತ್ತು ಅದರ ಸನಿಹದಲ್ಲಿರುವ ಚರ್ಚ್. 1682 ರಲ್ಲಿ ಹಿಂದೂ ಮರಾಠ ರಾಜ ಸಾಂಭಾಜಿ ಗೋವಾವನ್ನು ಆಕ್ರಮಿಸಿದಾಗ ಕ್ರಿಶ್ಚಿಯನ್ನರು ನಿರಾಶ್ರಿತರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಗಡಾಯ್ ಕಲ್ಲು ಎಂಬಲ್ಲಿ ಆಶ್ರಯ ಪಡೆಯುತ್ತಾರೆ. ಅದೇ ಗಡಾಯಿಕಲ್ ಪ್ರದೇಶದಲ್ಲಿ ಟಿಪ್ಪು ಜಮಲಾಬಾದ್ ಕೋಟೆಯನ್ನು ಕಟ್ಟುತ್ತಾನೆ. ಆ ಕೋಟೆಯ ಸುತ್ತಮುತ್ತ ಹಳ್ಳಿಗಳಲ್ಲಿ ಕ್ರಿಶ್ಚಿಯನ್ನು ಇರುತ್ತಾರೆ. ಟಿಪ್ಪು ಕ್ರಿಶ್ಚಿಯನ್ ವಿರೋಧಿ ಆಗಿದ್ದಿದ್ರೆ ಜಮಲಾಬಾದ್ ಕೋಟೆಯ ಸುತ್ತಾಮುತ್ತ ಕ್ರಿಶ್ಚಿಯನ್ನರು ಯಾಕೆ ವಾಸವಾಗ್ತಿದ್ರು ಎಂಬ ಪ್ರಶ್ನೆ ಬರುತ್ತದೆ.

ಅಲ್ಲೇ ಸಣ್ಣ ಗುಡಿಸಲು ರೀತಿಯಲ್ಲಿ ಚರ್ಚ್ ಕೂಡಾ ನಿರ್ಮಿಸಿ ಪ್ರಾರ್ಥನೆ ನಡೆಸುತ್ತಿರುತ್ತಾರೆ. ಯಾವ ಯುದ್ದವೂ ಕ್ರಿಶ್ಚಿಯನ್ನರ ಮೇಲಾಗಲೀ, ಗುಡಿಸಲಿನ ಚರ್ಚಿನ ಮೇಲಾಗಲೀ ಪರಿಣಾಮ ಬೀರದಂತೆ ಟಿಪ್ಪು ನೋಡಿಕೊಳ್ಳುತ್ತಾನೆ. ಟಿಪ್ಪು 1799 ರಲ್ಲಿ ಮರಣ ಹೊಂದಿದ ಬಳಿಕವೂ ಚರ್ಚ್ ಅಲ್ಲೇ ಇರುತ್ತದೆ. 1885 ರ ವೇಳೆಗೆ ಜಮಲಾಬಾದ್ ಕೋಟೆಯ ಸುತ್ತ ಇದ್ದ ಪ್ರದೇಶದಲ್ಲಿ ಕಾಯಿಲೆ ವ್ಯಾಪಿಸಿದ್ದರಿಂದ ಚರ್ಚ್ ಅನ್ನು ಸ್ವಲ್ಪ ದೂರಕ್ಕೆ ಸ್ಥಳಾಂತರಿಸಲಾಯ್ತು.

1784 ರಿಂದ 1799 ರವರೆಗೆ ಕರಾವಳಿಯಲ್ಲಿದ್ದ ಚರ್ಚ್ ಗಳು ಮೂರ್ನಾಲ್ಕು ಮಾತ್ರ. ಉಳಿದಂತೆ ಹಳ್ಳಿಗಳಲ್ಲಿ ಇದ್ದ ಕ್ರಿಶ್ಚಿಯನ್ನರು ದೊಡ್ಡ ಮನೆಯನ್ನು ಆಯ್ಕೆಮಾಡಿಕೊಂಡು ಸಾಮೂಹಿಕ ಪ್ರಾರ್ಥನೆಗೆ ಒಂದೆಡೆ ಸೇರುತ್ತಿದ್ದರು. ಉದಾಹರಣೆಗೆ ಎಸ್ ಇ ಝಡ್ ವಿರೋಧಿ ಹೋರಾಟಗಾರ ಕಳವಾರಿನ ಗ್ರೆಗೋರಿ ಪತ್ರಾವೋ ಮನೆ.

ನಂತರದ ಚರ್ಚುಗಳಿಗೂ ಟಿಪ್ಪುವಿಗೂ ಸಂಬಂಧವೇ ಇಲ್ಲ. ಕಿನ್ನಿಗೋಳಿ ಚರ್ಚ್ 1804 ರಲ್ಲೂ, ಕುಲಶೇಖರ ಕೋರ್ಡೆಲ್ ಚರ್ಚ್ ಮತ್ತು ಬೋಂದೆಲ್ ಚರ್ಚ್ 1873 ರಲ್ಲೂ, ಬೆಳ್ಮನ್ ಚರ್ಚ್ 1894, ಪಾಲಡ್ಕ ಚರ್ಚ್ 1913, ಬಳ್ಕುಂಜೆ ಚರ್ಚ್ 1915, ನಿಡ್ಡೋಡಿ ಚರ್ಚ್ 1937, ನೀರುಡೆ ಚರ್ಚ್ 1945, ಬೋಳ ಚರ್ಚ್ 1964, ಕಟೀಲು ಚರ್ಚ್ 1971, ಮುಂಡ್ಕೂರು ಚರ್ಚ್ 1998 ರಲ್ಲೂ ಪ್ರಾರಂಭವಾಯ್ತು.

ಇದ್ಯಾವುದೂ ಟಿಪ್ಪು ಕಾಲಮಾನದಲ್ಲಿ ಸ್ಥಾಪನೆಯಾದ ಚರ್ಚುಗಳು ಅಲ್ಲ. ಟಿಪ್ಪು ಕಾಲಮಾನದ ಯಾವ ಚರ್ಚಿನ ಇತಿಹಾಸವೂ ಚರ್ಚು ಕೆಡವಿದ ಕತೆಯನ್ನು ಹೇಳುವುದಿಲ್ಲ. ಬದಲಾಗಿ ಬ್ರಿಟೀಷರ ಕಾರಣಕ್ಕಾಗಿ ಚರ್ಚುಗಳ ಪರಿಶೀಲನೆ ನಡೆಸಿದ್ದ ಮತ್ತು ಮನವರಿಕೆಯಾದ ನಂತರ ರಕ್ಷಣೆ ಮಾಡಿದ್ದ ಎಂದಷ್ಟೇ ಇತಿಹಾಸ ಮತ್ತು ಕ್ರಿಶ್ಚಿಯನ್ ಪ್ರಚಲಿತ ಪವಾಡದ ಕತೆಗಳು ಹೇಳುತ್ತದೆ. ಟಿಪ್ಪು ಚರ್ಚ್ ಗಳನ್ನು ಕೆಡವಿದ್ದ ಎನ್ನುವುದು ಇತಿಹಾಸಕ್ಕೂ, ಚರ್ಚಿನ ಪವಾಡಕ್ಕೂ ಮಾಡುವ ಅಪಚಾರವಾಗುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

Published

on

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.

ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.

ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.

ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.

ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.

ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

Published

on

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.

ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.

ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.

ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

Published

on

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.

ಶುಕ್ರವಾರ ಜೂನ್(19) ‌ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್‌ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್‌ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್‌ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್‌ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.

ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್‌ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್‌ಲೀನೋ, ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending