ದಿನದ ಸುದ್ದಿ
ಮಾವಿನಕಾಯಿ ಕೀಳಲು ಮರ ಹತ್ತಿದ್ದ ಯುವಕ ವಿದ್ಯುತ್’ಗೆ ಬಲಿ
ಸುದ್ದಿದಿನ,ಮಂಗಳೂರು: ಮಾವಿನಕಾಯಿ ಕೀಳಲು ಮರ ಹತ್ತಿದ್ದ ಯುವಕನೋರ್ವ ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜಲಾಲ್ ಬಾಗ್ ನಲ್ಲಿ ನಡೆದಿದೆ.
ಮಹಮ್ಮದ್ ಇಲಿಯಾಸ್ (21) ಮೃತ ಯುವಕನಾಗಿದ್ದಾನೆ. ಸಂಜೆ ವೇಳೆ ಮನೆ ಸಮೀಪದ ಕಾಂಪೌಂಡಿನಲ್ಲಿರುವ ಮಾವಿನಮರಕ್ಕೆ ಕಾಯಿ ಕೀಳಲೆಂದು ತೆರಳಿದ ವೇಳೆಯಲ್ಲಿ ಈ ಘಟನೆ ನಡೆದಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243