ದಿನದ ಸುದ್ದಿ
ಕಾಂಗ್ರೆಸ್ ಪ್ರಣಾಳಿಕೆಯ ಪ್ರಮುಖಾಂಶಗಳು
ಸುದ್ದಿದಿನ,ದೆಹಲಿ : ಸಾರ್ವಕಾಲಿಕ ಶ್ರೇಷ್ಟ ಪ್ರಣಾಳಿಕೆಯನ್ನ ಅಳೆದು ತೂಗಿ ರೂಪಿಸಿದ್ದೇವೆ. ನಾವು ಆಡಿರುವ ಮಾತಿಗೆ ಬದ್ದರಿದ್ದೇವೆ. ನುಡಿದಂತೆ ನಡೆಯುತ್ತೇವೆ ಎಂದು ಕಾಂಗ್ರಸ್ ಮಂಗಳವಾರ ದೆಹಲಿಯಲ್ಲಿ ತನ್ನ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದೆ.
ಪ್ರಣಾಳಿಕೆಯ ಪ್ರಮುಖಾಂಶಗಳು ಹೀಗಿವೆ
- ನ್ಯಾಯ್ ಯೋಜನೆಯಿಂದ ಬಡತನ ರೇಖೆಗಿಂತ ಕೆಳಗಿರುವ ಜನರನ್ನ ಆರ್ಥಿಕ ಸಮಾನತೆಯತ್ತ ಕೊಂಡೊಯ್ಯಲಾಗುವದು.
- ಮಹಿಳೆಯ ಆರ್ಥಿಕ ಸ್ವಾತಂತ್ರ್ಯ ಮೂಡಿಸುವ ನಿಟ್ಟಿನಲ್ಲಿ #ನ್ಯಾಯ್ ಯೋಜನೆಯಡಿ ನೀಡಲಿರುವ 72,000/- ಕುಟುಂಬದ ಮಹಿಳೆಯ ಖಾತೆಗೆ ಜಮಾ ಮಾಡಲಾಗುವದು.
- ಜಲ ಸಂರಕ್ಷಣೆ, ಖರಾಬು ಜಮೀನು ಸುಧಾರಣೆ ಮಿಶನ್ ಅಡಿಯಲ್ಲಿ 3ವರ್ಷದಲ್ಲಿ 1ಕೋಟಿ ಉದ್ಯೋಗ ಸೃಷ್ಟಿಸಲಾಗುವದು.
- ‘ಮೇಕ್ ಪಾರ್ ದಿ ವರ್ಲ್ಡ್’
ರಪ್ತು ಹೆಚ್ಚಾಗಿಸುವ ನಿಟ್ಟಿನಲ್ಲಿ ರೂಪಿಸಲಿರುವ ಯೋಜನೆ. - ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಸದ್ಯದ 100 ದಿನ ಉದ್ಯೋಗವನ್ನ 150 ದಿನಕ್ಕೆ ಏರಿಸಲಾಗುವದು.
- ರೈಲ್ವೇಗೆ ಇರುವಂತೆ ಕೃಷಿ ಮತ್ತು ರೈತರಿಗಾಗಿ ವಿಶೇಷ ಬಜೆಟ್ ಮಂಡಿಸಲಾಗುವದು.
- 2020 ಮಾರ್ಚ್ ಒಳಗೆ ಕೇಂದ್ರಸರ್ಕಾರದಲ್ಲಿರುವ 4ಲಕ್ಷ ಹುದ್ದೆ,ಸ್ಥಳೀಯ ಸಂಸ್ಥೆಗಳಲ್ಲಿರುವ 10 ಲಕ್ಷ ಹುದ್ದೆ ಭರಿಸಲಾಗುವದು.
- ಸ್ಲಮ್ ಸುಧಾರಣೆ ಯೋಜನೆಯಡಿ ಶುದ್ದ ನೀರು, ವಿದ್ಯುತ್, ನೈರ್ಮಲ್ಯಕ್ಕೆ, ಪಕ್ಕಾ ಮನೆ ನಿರ್ಮಿಸಲಾಗುವದು.
- ‘ಮನರೇಗಾ’ ವನ್ನ ಸಾರ್ವಜನಿಕ ಆಸ್ತಿಗಳಾದ ಗ್ರಂಥಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ, ಶಾಲಾ ಕೊಠಡಿ ನಿರ್ಮಾಣಕ್ಕೆ ಬಳಸಲಾಗುವದು.
- ಮನರೇಗಾ 3.0, ಪ್ರಮುಖವಾಗಿ ರೈತರಿಗೆ ತಲೆನೋವಾಗಿರುವ ಜಲ ಸಂರಕ್ಷಣೆ, ಮಣ್ಣಿನ ಸಂರಕ್ಷಣೆಗಾಗಿ ಪರಿಚಯಿಸಲಾಗುವದು.
- ಸ್ವಂತ ಮನೆ ಹಕ್ಕಿನಡಿ ನಗರ ವಾಸಿ ಬಡವರ ಮೇಲೆ ನಡೆವ ಸ್ವೆಚ್ಚಾಚಾರದ ತೆರವುಗೊಳಿಸುವಿಕೆ ನಿಲ್ಲಿಸಲಾಗುವದು.
- ಸ್ಲಮ್ ಸುಧಾರಣೆ ಯೋಜನೆಯಡಿ ಶುದ್ದ ನೀರು, ವಿದ್ಯುತ್, ನೈರ್ಮಲ್ಯಕ್ಕೆ, ಪಕ್ಕಾ ಮನೆ ನಿರ್ಮಿಸಲಾಗುವದು.
- ಸ್ಥಳೀಯ ಸಂಸ್ಥೆಗಳ ಮೇಯರ್ ಮತ್ತು ಪ್ರತಿನಿಧಿಗಳಿಗೆ ಅಧಿಕಾರ ನೀಡುವ ಮೂಲಕ ನಗರಗಳ ಮೂಲಭೂತ ಸೌಕರ್ಯ ಸುಧಾರಣೆ.
- ಪ್ರಸ್ತುತ ಖಾಲಿ ಬಿದ್ದಿರುವ 22 ಲಕ್ಷ ಸರಕಾರಿ ಹುದ್ದೆಗಳನ್ನ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲಿ ತುಂಬಲಿದ್ದೇವೆ.
ಕಾಂಗ್ರೇಸ್ ಕೈ ಬಲಪಡಿಸಿ. - ಅಸಂಘಟಿತ ವಲಯದ ಕಾರ್ಮಿಕರಿಗೂ ಕನಿಷ್ಟ ವೇತನ ಸಿಗುವಂತೆ ನಿಯಮ ರೂಪಿಸಲಾಗುವದು.
- ‘ಸಣ್ಣ ಹಿಡಯವಳಿದಾರರು&ಕೃಷಿ ಕಾರ್ಮಿಕರ ಆಯೋಗ’ವನ್ನ ಸಂಪ್ರದಾಯಿಕ ಕೃಷಿಯೇತರ ಚಟುವಟಿಕೆದಾರರಿಗೆ ಅನುಕೂಲವಾಗುವಂತೆ ರೂಪಿಸಲಾಗುವದು.
- ‘ರಾಷ್ಟ್ರೀಯ ಕೃಷಿ ಬೆಳವಣಿಗೆ ಮತ್ತು ಯೋಜನಾ ಆಯೋಗ’ ವನ್ನು ರೈತರಿಗೆ ನೆರವಾಗಲು ರೂಪಿಸಲಾಗುವದು.
- ಕಾಂಗ್ರೇಸ್ ಅಧಿಕಾರಕ್ಕೆ ಏರುತ್ತಿದ್ದಂತೆ ರೈತರ ಸಾಲ ಮನ್ನಾ ಮಾಡಲಾಗುವದು.
- 3 ತಿಂಗಳಲ್ಲಿ ಹೂಡಿಕೆಗೆ ಅಡೆತಡೆಯಾಗಿರುವ ಎಲ್ಲ ಕಾಯಿದೆಗಳನ್ನು ತೆಗೆದಾಕಿ, ಹೂಡಿಕೆದಾರ ಸ್ನೇಹಿ ನೀತಿ ರೂಪಿಸಲಾಗುವದು.
- ವಿಮಾ ಕಂಪನಿಗಳನ್ನ ಬೆಳೆಸಿದ ಬಿಜೆಪಿಯ ‘ಫಸಲ್ ವಿಮಾ ಯೋಜನೆ’ಯನ್ನ, ತಿದ್ದುಪಡಿ ಮಾಡಿ ರೈತರಿಗೆ ಸಹಾಯ ಆಗುವಂತೆ ರೂಪಿಸಲಾಗುವದು.
- ಸಾಲದಿಂದ ಮುಕ್ತಿ’ ಯೋಜನೆಯಡಿಯಲ್ಲಿ ಅನ್ನದಾತನಿಗೆ ಉಳುಮೆಗೆ ಕಾಲಾನುಸಾರ ಬೇಕಾಗುವ ಅವಶ್ಯಕತೆ ನೀಡಲಾಗುವದು.
- 2500 ಕ್ಕೂ ಜನಸಂಖ್ಯೆ ಇರುವ ಗ್ರಾಮಗಳಿಗೆ ಕಡ್ಡಾಯವಾಗಿ ಆಶಾ ಕಾರ್ಯಕರ್ತೆಯರನ್ನ ನೇಮಿಸಲಾಗುವದು.
- ಎಲ್ಲ ಸರಕಾರಿ ಹುದ್ದೆಗಳ ಆಯ್ಕೆ ಪರೀಕ್ಷೆಗೆ ಇರುವ ಶುಲ್ಕವನ್ನು ಸಂಪೂರ್ಣವಾಗಿ ತೆಗೆಯಲಾಗುವದು
- ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಕಾರ್ಯಕರ್ತರ ಬಾಕಿ ಇರುವ ಸಂಬಳವನ್ನ ಅಧಿಕಾರಕ್ಕೆ ಬರುತ್ತಿದ್ದಂತೆ ನೀಡಲಾಗುವದು.
- ಜಿ ಎಸ್ ಟಿ 2.0- ಸರಳ ಸುಲಭ ಹೊರೆಯಾಗದಂತೆ ತೆರಿಗೆ ಪದ್ದತಿ ರೂಪಿಸಲಾಗುವದು.
- ಜಿ ಎಸ್ ಟಿ 2.0-ಅಡಿಯಲ್ಲಿ ಪೆಟ್ರೋಲ್ ಡೀಸೆಲ್, ತಂಬಾಕು ಉತ್ಪನ್ನ, ಸರಾಯಿ, ರಿಯಲ್ ಎಸ್ಟೇಟ್ ಗಳನ್ನ ತರಲಾಗುವದು.
- ರಫ್ತಾಗುವ ವಸ್ತು ತಯಾರಿಕೆ ಘಟಕಗಳಿಕೆ ತೆರಿಗೆ ವಿನಾಯ್ತಿ ಮೂಲಕ ಸರಕಾರದಿಂದ ನೆರವು.
- ಮೀನುಗಾರಿಕೆ ಮತ್ತು ಮೀನುಗಾರರ ಕಲ್ಯಾಣಕ್ಕೆ ಪ್ರತ್ಯೇಕ ಸಚಿವರನ್ನ ನೇಮಿಸಲಾಗುವದು.
- ಜಿ ಡಿ ಪಿಯ 2% ನ್ನು ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ವಿನಿಯೋಗಿಸಲಾಗುವದು.
- ನೊಂದಾಯಿತವಲ್ಲದ ಉದ್ಯಮಗಳ ಉತ್ಪನ್ನಗಳಿಗೆ ಖರೀದಿದಾರರ ತೆರಿಗೆ ಹಾಕಿದ್ದನ್ನು ತೆಗೆದು ಹಾಕಲಾಗುವದು.
- ರಫಾಲೆ ಡೀಲ್ ತನಿಖೆ, ಮತ್ತು 5 ವರ್ಷದಲ್ಲಿ ಬಿಜೆಪಿಯವರು ಮಾಡಿರುವ ಭ್ರಷ್ಟಾಚಾರದ ತನಿಖೆ ಮಾಡಲಾಗುವದು
- ನೊಂದಾಯಿತವಲ್ಲದ ಉದ್ಯಮಗಳ ಉತ್ಪನ್ನಗಳಿಗೆ ಖರೀದಿದಾರರ ತೆರಿಗೆ ಹಾಕಿದ್ದನ್ನು ತೆಗೆದು ಹಾಕಲಾಗುವದು.
- ಲೋಕಪಾಲ್ ನೇಮಕ ಮಾಡಲಾಗುವದು.
- ಐಪಿಸಿ ಸೆಕ್ಷನ್ 499ನ್ನು ತೆಗೆದು ಹಾಕಿ, ಮಾನನಷ್ಟ ಮೊಕದ್ದಮೆಯನ್ನು ಸಿವಿಲ್ ಅಪಕೃತ್ಯ ಎಂದು ಮಾಡಲಾಗುವದು.
- ಹಳಿ ತಪ್ಪಿಸಿರುವ ಗೊಂದಲಮಯ ‘ನೀತಿ ಆಯೋಗ’ ವನ್ನು ಕಿತ್ತೆಸೆದು ಹೊಸದಾದ ಯೋಜನಾ ಆಯೋಗವನ್ನ ರೂಪಿಸಲಾಗುವದು
- ಲೋಕಸಭೆ ಮತ್ತು ವಿಧಾನ ಸಭೆಗಳಲ್ಲಿ ಮಹಿಳಾ ಪ್ರಾತಿನಿದ್ಯ ಹೆಚ್ಚಿಸಲು ಮಹಿಳೆಯರಿಗೆ 33% ಮೀಸಲಾತಿಯನ್ನ ಮೊದಲ ಸಭೆಯಲ್ಲಿ ಮಂಡಿಸಲಾಗುವದು.
- ಕೇಂದ್ರ ಸರಕಾರದ ಹುದ್ದೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಲಾಗುವದು.
- ಪ.ಜಾ ಪ.ಪಂ & ಹಿಂದುಳಿದ ವರ್ಗಗಳ ಮೀಸಲಾತಿ ಸಂಬಂಧಿಸಿದಂತೆ ‘ಸಮಾನ ಅವಕಾಶಗಳ ಆಯೋಗ’ವನ್ನ ರಚಿಸಲಾಗುವದು.
- ಪ.ಜಾ ಪ.ಪಂ ಮತ್ತು ಹಿಂದುಳಿದ ವರ್ಗಗಳಿಗೆ ಖಾಸಗಿ ವಿದ್ಯಾ ಸಂಸ್ಥೆಗಳಲ್ಲು ಮೀಸಲಾತಿಯನ್ನ ಕಲ್ಪಿಸಲಾಗುವದು.
- ಸರಕಾರಿ ಟೆಂಡರುಗಳಲ್ಲಿ ಪ.ಜಾ ಪ.ಪಂ&ಹಿಂದುಳಿದವರಿಗೆ ನ್ಯಾಯಯುತ ಭಾಗ ನೀಡಲಾಗುವದು.
- ಸರಕಾರಿ ಟೆಂಡರುಗಳಲ್ಲಿ ಪ.ಜಾ ಪ.ಪಂ&ಹಿಂದುಳಿದವರಿಗೆ ನ್ಯಾಯಯುತ ಭಾಗ ನೀಡಲಾಗುವದು.
- ಅಲಿಗರ್, ಜಾಮಿಯಾ ಇಸ್ಲಮಿಯಾ ವಿಶ್ವವಿದ್ಯಾಲಯಗಳ ಮೂಲ ಉದ್ದೇಶವನ್ನ ರಕ್ಷಿಸಲಾಗುವದು.
- ವಕ್ಪ್ ಮಸೂದೆ 2014 ನ್ನು ಮತ್ತೊಮ್ಮೆ ಪರಿಚಯಿಸಿ, ವಕ್ಪ್ ಆಸ್ತಿಯನ್ನ ನ್ಯಾಯಯುತ ಟ್ರಸ್ಟಿಗಳಿಗೆ ನೀಡಲಾಗುವದು.
- ಮಾಬ್ ಲಿಂಚಿಂಗ್ ಮತ್ತು ಹೇಟ್ ಕ್ರೈಮ್ ತಡಗಟ್ಟಲು ಮೊದಲ ಸಭೆಯಲ್ಲಿಯೆ ಕಾಯಿದೆ ರೂಪಿಸಲಾಗುವದು.
Delhi: Congress party releases their election manifesto for #LokSabhaElections2019 pic.twitter.com/fccNKOuSqZ
— ANI (@ANI) April 2, 2019
Rahul Gandhi at Congress' election manifesto release: When we started this process about a year back, I spoke to Mr Chidamabaram, Mr Gowda & gave 2 instructions. I said this is not a manifesto to be made in closed rooms but this should reflect the wishes of the people of India. pic.twitter.com/gXII8TSHmx
— ANI (@ANI) April 2, 2019
Rahul Gandhi at Congress' election manifesto release: I also said that whatever is going to be in this manifesto has to be truthful, I do not want a single thing in this manifesto that is a lie because we have been hearing large number of lies spoken everyday by our PM. https://t.co/qpK73RZNal
— ANI (@ANI) April 2, 2019
Congress President Rahul Gandhi: PM had spoken about MGNREGA. He mocked and said it is a bogus and useless scheme. Today everyone knows how much it helped the country. So now we want to guarantee jobs for 150 days, instead of 100 days, under the scheme. pic.twitter.com/dgzAekiJ3y
— ANI (@ANI) April 2, 2019
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.
ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.
ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.
ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.
ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.
ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ
ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.
ಶುಕ್ರವಾರ ಜೂನ್(19) ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.
ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್ಲೀನೋ, ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


