ದಿನದ ಸುದ್ದಿ
ಕಾಂಗ್ರೆಸ್ ಪ್ರಣಾಳಿಕೆಯ ಪ್ರಮುಖಾಂಶಗಳು
ಸುದ್ದಿದಿನ,ದೆಹಲಿ : ಸಾರ್ವಕಾಲಿಕ ಶ್ರೇಷ್ಟ ಪ್ರಣಾಳಿಕೆಯನ್ನ ಅಳೆದು ತೂಗಿ ರೂಪಿಸಿದ್ದೇವೆ. ನಾವು ಆಡಿರುವ ಮಾತಿಗೆ ಬದ್ದರಿದ್ದೇವೆ. ನುಡಿದಂತೆ ನಡೆಯುತ್ತೇವೆ ಎಂದು ಕಾಂಗ್ರಸ್ ಮಂಗಳವಾರ ದೆಹಲಿಯಲ್ಲಿ ತನ್ನ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದೆ.
ಪ್ರಣಾಳಿಕೆಯ ಪ್ರಮುಖಾಂಶಗಳು ಹೀಗಿವೆ
- ನ್ಯಾಯ್ ಯೋಜನೆಯಿಂದ ಬಡತನ ರೇಖೆಗಿಂತ ಕೆಳಗಿರುವ ಜನರನ್ನ ಆರ್ಥಿಕ ಸಮಾನತೆಯತ್ತ ಕೊಂಡೊಯ್ಯಲಾಗುವದು.
- ಮಹಿಳೆಯ ಆರ್ಥಿಕ ಸ್ವಾತಂತ್ರ್ಯ ಮೂಡಿಸುವ ನಿಟ್ಟಿನಲ್ಲಿ #ನ್ಯಾಯ್ ಯೋಜನೆಯಡಿ ನೀಡಲಿರುವ 72,000/- ಕುಟುಂಬದ ಮಹಿಳೆಯ ಖಾತೆಗೆ ಜಮಾ ಮಾಡಲಾಗುವದು.
- ಜಲ ಸಂರಕ್ಷಣೆ, ಖರಾಬು ಜಮೀನು ಸುಧಾರಣೆ ಮಿಶನ್ ಅಡಿಯಲ್ಲಿ 3ವರ್ಷದಲ್ಲಿ 1ಕೋಟಿ ಉದ್ಯೋಗ ಸೃಷ್ಟಿಸಲಾಗುವದು.
- ‘ಮೇಕ್ ಪಾರ್ ದಿ ವರ್ಲ್ಡ್’
ರಪ್ತು ಹೆಚ್ಚಾಗಿಸುವ ನಿಟ್ಟಿನಲ್ಲಿ ರೂಪಿಸಲಿರುವ ಯೋಜನೆ. - ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಸದ್ಯದ 100 ದಿನ ಉದ್ಯೋಗವನ್ನ 150 ದಿನಕ್ಕೆ ಏರಿಸಲಾಗುವದು.
- ರೈಲ್ವೇಗೆ ಇರುವಂತೆ ಕೃಷಿ ಮತ್ತು ರೈತರಿಗಾಗಿ ವಿಶೇಷ ಬಜೆಟ್ ಮಂಡಿಸಲಾಗುವದು.
- 2020 ಮಾರ್ಚ್ ಒಳಗೆ ಕೇಂದ್ರಸರ್ಕಾರದಲ್ಲಿರುವ 4ಲಕ್ಷ ಹುದ್ದೆ,ಸ್ಥಳೀಯ ಸಂಸ್ಥೆಗಳಲ್ಲಿರುವ 10 ಲಕ್ಷ ಹುದ್ದೆ ಭರಿಸಲಾಗುವದು.
- ಸ್ಲಮ್ ಸುಧಾರಣೆ ಯೋಜನೆಯಡಿ ಶುದ್ದ ನೀರು, ವಿದ್ಯುತ್, ನೈರ್ಮಲ್ಯಕ್ಕೆ, ಪಕ್ಕಾ ಮನೆ ನಿರ್ಮಿಸಲಾಗುವದು.
- ‘ಮನರೇಗಾ’ ವನ್ನ ಸಾರ್ವಜನಿಕ ಆಸ್ತಿಗಳಾದ ಗ್ರಂಥಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ, ಶಾಲಾ ಕೊಠಡಿ ನಿರ್ಮಾಣಕ್ಕೆ ಬಳಸಲಾಗುವದು.
- ಮನರೇಗಾ 3.0, ಪ್ರಮುಖವಾಗಿ ರೈತರಿಗೆ ತಲೆನೋವಾಗಿರುವ ಜಲ ಸಂರಕ್ಷಣೆ, ಮಣ್ಣಿನ ಸಂರಕ್ಷಣೆಗಾಗಿ ಪರಿಚಯಿಸಲಾಗುವದು.
- ಸ್ವಂತ ಮನೆ ಹಕ್ಕಿನಡಿ ನಗರ ವಾಸಿ ಬಡವರ ಮೇಲೆ ನಡೆವ ಸ್ವೆಚ್ಚಾಚಾರದ ತೆರವುಗೊಳಿಸುವಿಕೆ ನಿಲ್ಲಿಸಲಾಗುವದು.
- ಸ್ಲಮ್ ಸುಧಾರಣೆ ಯೋಜನೆಯಡಿ ಶುದ್ದ ನೀರು, ವಿದ್ಯುತ್, ನೈರ್ಮಲ್ಯಕ್ಕೆ, ಪಕ್ಕಾ ಮನೆ ನಿರ್ಮಿಸಲಾಗುವದು.
- ಸ್ಥಳೀಯ ಸಂಸ್ಥೆಗಳ ಮೇಯರ್ ಮತ್ತು ಪ್ರತಿನಿಧಿಗಳಿಗೆ ಅಧಿಕಾರ ನೀಡುವ ಮೂಲಕ ನಗರಗಳ ಮೂಲಭೂತ ಸೌಕರ್ಯ ಸುಧಾರಣೆ.
- ಪ್ರಸ್ತುತ ಖಾಲಿ ಬಿದ್ದಿರುವ 22 ಲಕ್ಷ ಸರಕಾರಿ ಹುದ್ದೆಗಳನ್ನ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲಿ ತುಂಬಲಿದ್ದೇವೆ.
ಕಾಂಗ್ರೇಸ್ ಕೈ ಬಲಪಡಿಸಿ. - ಅಸಂಘಟಿತ ವಲಯದ ಕಾರ್ಮಿಕರಿಗೂ ಕನಿಷ್ಟ ವೇತನ ಸಿಗುವಂತೆ ನಿಯಮ ರೂಪಿಸಲಾಗುವದು.
- ‘ಸಣ್ಣ ಹಿಡಯವಳಿದಾರರು&ಕೃಷಿ ಕಾರ್ಮಿಕರ ಆಯೋಗ’ವನ್ನ ಸಂಪ್ರದಾಯಿಕ ಕೃಷಿಯೇತರ ಚಟುವಟಿಕೆದಾರರಿಗೆ ಅನುಕೂಲವಾಗುವಂತೆ ರೂಪಿಸಲಾಗುವದು.
- ‘ರಾಷ್ಟ್ರೀಯ ಕೃಷಿ ಬೆಳವಣಿಗೆ ಮತ್ತು ಯೋಜನಾ ಆಯೋಗ’ ವನ್ನು ರೈತರಿಗೆ ನೆರವಾಗಲು ರೂಪಿಸಲಾಗುವದು.
- ಕಾಂಗ್ರೇಸ್ ಅಧಿಕಾರಕ್ಕೆ ಏರುತ್ತಿದ್ದಂತೆ ರೈತರ ಸಾಲ ಮನ್ನಾ ಮಾಡಲಾಗುವದು.
- 3 ತಿಂಗಳಲ್ಲಿ ಹೂಡಿಕೆಗೆ ಅಡೆತಡೆಯಾಗಿರುವ ಎಲ್ಲ ಕಾಯಿದೆಗಳನ್ನು ತೆಗೆದಾಕಿ, ಹೂಡಿಕೆದಾರ ಸ್ನೇಹಿ ನೀತಿ ರೂಪಿಸಲಾಗುವದು.
- ವಿಮಾ ಕಂಪನಿಗಳನ್ನ ಬೆಳೆಸಿದ ಬಿಜೆಪಿಯ ‘ಫಸಲ್ ವಿಮಾ ಯೋಜನೆ’ಯನ್ನ, ತಿದ್ದುಪಡಿ ಮಾಡಿ ರೈತರಿಗೆ ಸಹಾಯ ಆಗುವಂತೆ ರೂಪಿಸಲಾಗುವದು.
- ಸಾಲದಿಂದ ಮುಕ್ತಿ’ ಯೋಜನೆಯಡಿಯಲ್ಲಿ ಅನ್ನದಾತನಿಗೆ ಉಳುಮೆಗೆ ಕಾಲಾನುಸಾರ ಬೇಕಾಗುವ ಅವಶ್ಯಕತೆ ನೀಡಲಾಗುವದು.
- 2500 ಕ್ಕೂ ಜನಸಂಖ್ಯೆ ಇರುವ ಗ್ರಾಮಗಳಿಗೆ ಕಡ್ಡಾಯವಾಗಿ ಆಶಾ ಕಾರ್ಯಕರ್ತೆಯರನ್ನ ನೇಮಿಸಲಾಗುವದು.
- ಎಲ್ಲ ಸರಕಾರಿ ಹುದ್ದೆಗಳ ಆಯ್ಕೆ ಪರೀಕ್ಷೆಗೆ ಇರುವ ಶುಲ್ಕವನ್ನು ಸಂಪೂರ್ಣವಾಗಿ ತೆಗೆಯಲಾಗುವದು
- ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಕಾರ್ಯಕರ್ತರ ಬಾಕಿ ಇರುವ ಸಂಬಳವನ್ನ ಅಧಿಕಾರಕ್ಕೆ ಬರುತ್ತಿದ್ದಂತೆ ನೀಡಲಾಗುವದು.
- ಜಿ ಎಸ್ ಟಿ 2.0- ಸರಳ ಸುಲಭ ಹೊರೆಯಾಗದಂತೆ ತೆರಿಗೆ ಪದ್ದತಿ ರೂಪಿಸಲಾಗುವದು.
- ಜಿ ಎಸ್ ಟಿ 2.0-ಅಡಿಯಲ್ಲಿ ಪೆಟ್ರೋಲ್ ಡೀಸೆಲ್, ತಂಬಾಕು ಉತ್ಪನ್ನ, ಸರಾಯಿ, ರಿಯಲ್ ಎಸ್ಟೇಟ್ ಗಳನ್ನ ತರಲಾಗುವದು.
- ರಫ್ತಾಗುವ ವಸ್ತು ತಯಾರಿಕೆ ಘಟಕಗಳಿಕೆ ತೆರಿಗೆ ವಿನಾಯ್ತಿ ಮೂಲಕ ಸರಕಾರದಿಂದ ನೆರವು.
- ಮೀನುಗಾರಿಕೆ ಮತ್ತು ಮೀನುಗಾರರ ಕಲ್ಯಾಣಕ್ಕೆ ಪ್ರತ್ಯೇಕ ಸಚಿವರನ್ನ ನೇಮಿಸಲಾಗುವದು.
- ಜಿ ಡಿ ಪಿಯ 2% ನ್ನು ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ವಿನಿಯೋಗಿಸಲಾಗುವದು.
- ನೊಂದಾಯಿತವಲ್ಲದ ಉದ್ಯಮಗಳ ಉತ್ಪನ್ನಗಳಿಗೆ ಖರೀದಿದಾರರ ತೆರಿಗೆ ಹಾಕಿದ್ದನ್ನು ತೆಗೆದು ಹಾಕಲಾಗುವದು.
- ರಫಾಲೆ ಡೀಲ್ ತನಿಖೆ, ಮತ್ತು 5 ವರ್ಷದಲ್ಲಿ ಬಿಜೆಪಿಯವರು ಮಾಡಿರುವ ಭ್ರಷ್ಟಾಚಾರದ ತನಿಖೆ ಮಾಡಲಾಗುವದು
- ನೊಂದಾಯಿತವಲ್ಲದ ಉದ್ಯಮಗಳ ಉತ್ಪನ್ನಗಳಿಗೆ ಖರೀದಿದಾರರ ತೆರಿಗೆ ಹಾಕಿದ್ದನ್ನು ತೆಗೆದು ಹಾಕಲಾಗುವದು.
- ಲೋಕಪಾಲ್ ನೇಮಕ ಮಾಡಲಾಗುವದು.
- ಐಪಿಸಿ ಸೆಕ್ಷನ್ 499ನ್ನು ತೆಗೆದು ಹಾಕಿ, ಮಾನನಷ್ಟ ಮೊಕದ್ದಮೆಯನ್ನು ಸಿವಿಲ್ ಅಪಕೃತ್ಯ ಎಂದು ಮಾಡಲಾಗುವದು.
- ಹಳಿ ತಪ್ಪಿಸಿರುವ ಗೊಂದಲಮಯ ‘ನೀತಿ ಆಯೋಗ’ ವನ್ನು ಕಿತ್ತೆಸೆದು ಹೊಸದಾದ ಯೋಜನಾ ಆಯೋಗವನ್ನ ರೂಪಿಸಲಾಗುವದು
- ಲೋಕಸಭೆ ಮತ್ತು ವಿಧಾನ ಸಭೆಗಳಲ್ಲಿ ಮಹಿಳಾ ಪ್ರಾತಿನಿದ್ಯ ಹೆಚ್ಚಿಸಲು ಮಹಿಳೆಯರಿಗೆ 33% ಮೀಸಲಾತಿಯನ್ನ ಮೊದಲ ಸಭೆಯಲ್ಲಿ ಮಂಡಿಸಲಾಗುವದು.
- ಕೇಂದ್ರ ಸರಕಾರದ ಹುದ್ದೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಲಾಗುವದು.
- ಪ.ಜಾ ಪ.ಪಂ & ಹಿಂದುಳಿದ ವರ್ಗಗಳ ಮೀಸಲಾತಿ ಸಂಬಂಧಿಸಿದಂತೆ ‘ಸಮಾನ ಅವಕಾಶಗಳ ಆಯೋಗ’ವನ್ನ ರಚಿಸಲಾಗುವದು.
- ಪ.ಜಾ ಪ.ಪಂ ಮತ್ತು ಹಿಂದುಳಿದ ವರ್ಗಗಳಿಗೆ ಖಾಸಗಿ ವಿದ್ಯಾ ಸಂಸ್ಥೆಗಳಲ್ಲು ಮೀಸಲಾತಿಯನ್ನ ಕಲ್ಪಿಸಲಾಗುವದು.
- ಸರಕಾರಿ ಟೆಂಡರುಗಳಲ್ಲಿ ಪ.ಜಾ ಪ.ಪಂ&ಹಿಂದುಳಿದವರಿಗೆ ನ್ಯಾಯಯುತ ಭಾಗ ನೀಡಲಾಗುವದು.
- ಸರಕಾರಿ ಟೆಂಡರುಗಳಲ್ಲಿ ಪ.ಜಾ ಪ.ಪಂ&ಹಿಂದುಳಿದವರಿಗೆ ನ್ಯಾಯಯುತ ಭಾಗ ನೀಡಲಾಗುವದು.
- ಅಲಿಗರ್, ಜಾಮಿಯಾ ಇಸ್ಲಮಿಯಾ ವಿಶ್ವವಿದ್ಯಾಲಯಗಳ ಮೂಲ ಉದ್ದೇಶವನ್ನ ರಕ್ಷಿಸಲಾಗುವದು.
- ವಕ್ಪ್ ಮಸೂದೆ 2014 ನ್ನು ಮತ್ತೊಮ್ಮೆ ಪರಿಚಯಿಸಿ, ವಕ್ಪ್ ಆಸ್ತಿಯನ್ನ ನ್ಯಾಯಯುತ ಟ್ರಸ್ಟಿಗಳಿಗೆ ನೀಡಲಾಗುವದು.
- ಮಾಬ್ ಲಿಂಚಿಂಗ್ ಮತ್ತು ಹೇಟ್ ಕ್ರೈಮ್ ತಡಗಟ್ಟಲು ಮೊದಲ ಸಭೆಯಲ್ಲಿಯೆ ಕಾಯಿದೆ ರೂಪಿಸಲಾಗುವದು.
Delhi: Congress party releases their election manifesto for #LokSabhaElections2019 pic.twitter.com/fccNKOuSqZ
— ANI (@ANI) April 2, 2019
Rahul Gandhi at Congress' election manifesto release: When we started this process about a year back, I spoke to Mr Chidamabaram, Mr Gowda & gave 2 instructions. I said this is not a manifesto to be made in closed rooms but this should reflect the wishes of the people of India. pic.twitter.com/gXII8TSHmx
— ANI (@ANI) April 2, 2019
Rahul Gandhi at Congress' election manifesto release: I also said that whatever is going to be in this manifesto has to be truthful, I do not want a single thing in this manifesto that is a lie because we have been hearing large number of lies spoken everyday by our PM. https://t.co/qpK73RZNal
— ANI (@ANI) April 2, 2019
Congress President Rahul Gandhi: PM had spoken about MGNREGA. He mocked and said it is a bogus and useless scheme. Today everyone knows how much it helped the country. So now we want to guarantee jobs for 150 days, instead of 100 days, under the scheme. pic.twitter.com/dgzAekiJ3y
— ANI (@ANI) April 2, 2019
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಡಾ. ಶಾಮನೂರು ಶಿವಶಂಕರಪ್ಪ ನಿಧನ ; ವೀರಶೈವ ವಿಧಿವಿಧಾನದಂತೆ ಕಲ್ಲೇಶ್ವರ ಮಿಲ್ನಲ್ಲಿ ಅಂತ್ಯ ಸಂಸ್ಕಾರ
ಸುದ್ದಿದಿನ,ದಾವಣಗೆರೆ:ಮಾಜಿ ಸಚಿವರು ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪನವರು ನಿಧನರಾಗಿದ್ದು ಅವರ ಅಂತ್ಯ ಸಂಸ್ಕಾರವು ಸರ್ಕಾರಿ ಸಕಲ ಗೌರವಗಳೊಂದಿಗೆ ಹಾಗೂ ವೀರಶೈವ ಸಂಪ್ರದಾಯದಂತೆ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಅಪಾರ ಜನಸ್ತೋಮದೊಂದಿಗೆ ಸೋಮವಾರ ಸಂಜೆ ಜರುಗಿತು.
ಡಾ; ಶಾಮನೂರು ಶಿವಶಂಕರಪ್ಪನವರಿಗೆ 95 ವರ್ಷವಾಗಿದ್ದು ವಯೋಸಹಜ ಅನಾರೋಗ್ಯದಿಂದ ಡಿಸೆಂಬರ್ 14 ರಂದು ನಿಧನ ಹೊಂದಿದ್ದರು. 6 ಭಾರಿ ಶಾಸಕರಾಗಿ, ಒಮ್ಮೆ ಸಂಸದರಾಗಿ ಸುಧೀರ್ಘ ರಾಜಕೀಯ ಸೇವೆಯಲ್ಲಿದ್ದ ಇವರು ರಾಜ್ಯ ಸೇರಿದಂತೆ ದಾವಣಗೆರೆಗೆ ಹೊಸ ರೂಪಕೊಟ್ಟಿದ್ದರು.
ಸೋಮವಾರ ಬೆಳಗ್ಗೆ 7.30 ಗಂಟೆಯಿಂದ ಪಾರ್ಥಿವ ಶರೀರಕ್ಕೆ ಸ್ವಗೃಹದಲ್ಲಿ ಕುಟುಂಬಸ್ಥರ ವಿವಿಧ ಪೂಜೆ ಪುನಸ್ಕಾರಗಳೊಂದಿಗೆ ವಿಧಿ ವಿಧಾನಗಳು ನಡೆದು, ಮಧ್ಯಾಹ್ನದಿಂದ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇಡಲಾಗಿತ್ತು. ಸಾವಿರಾರು ಜನರು ಆಗಮಿಸಿ ಸರತಿ ಸಾಲಿನಲ್ಲಿ ಅಂತಿಮ ದರ್ಶನ ಪಡೆದರು.
ಮಧ್ಯಾಹ್ನ 3.30 ರಿಂದ ಹೈಸ್ಕೂಲ್ ಮೈದಾನದಿಂದ ಹೊರಟು ಹಳೇ ದಾವಣಗೆರೆ ಮಂಡಿಪೇಟೆ, ಕಾಯಿಪೇಟೆ, ಅರಳಿವೃತ್ತದ ಮೂಲಕ ಕಲ್ಲೇಶ್ವರ ಮಿಲ್ಗೆ ಪಾರ್ಥಿವ ಶರೀರ ತಲುಪಿತು. ಸಂಜೆ 4.30 ರಿಂದ ಅಂತಿಮ ವಿಧಿ ವಿಧಾನಗಳು ನಡೆದವು.
ಅಂತಿಮ ಸಂಸ್ಕಾರದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ರಾಜ್ಯಸಭೆ ವಿರೋಧ ಪಕ್ಷದ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, ಉಪ ಮುಖ್ಯಮಂತ್ರಿಯವರಾದ ಡಿ.ಕೆ.ಶಿವಕುಮಾರ್ ಅವರು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ಬೃಹತ್ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ಅವರು, ಇಂಧನ ಸಚಿವರಾದ ಕೆ.ಜೆ.ಜಾರ್ಜ್ರವರು, ಸಮಾಜ ಕಲ್ಯಾಣ ಸಚಿವರಾದ ಡಾ; ಹೆಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ, ಅಲ್ಪಸಂಖ್ಯಾತರ ಕಲ್ಯಾಣ, ವಸತಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ ಪಾಟೀಲ, ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ.ಎಸ್.ಪಾಟೀಲ, ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ.ಸುಧಾಕರ್ ಸೇರಿದಂತೆ ಶಾಸಕರು ಸೇರಿದಂತೆ ವಿವಿಧ ಮಠಾಧೀಶರು ಭಾಗವಹಿಸಿ ಪುಷ್ಪ ನಮನ ಸಲ್ಲಿಸಿ ಅಂತಿಮ ದರ್ಶನ ಪಡೆದರು.
ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ರಾಷ್ಟ್ರಧ್ವಜವನ್ನು ಪಾರ್ಥಿವ ಶರೀರಕ್ಕೆ ಹೊದಿಸಿ ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರಗೀತೆ ನುಡಿಸಿ ಗೌರವ ಸಲ್ಲಿಸಲಾಯಿತು. ನಂತರ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಿ ಅಂತಿಮವಾಗಿ ಶೋಕ ವ್ಯಕ್ತಪಡಿಸಲಾಯಿತು. ರಾಷ್ಟ್ರಧ್ವಜವನ್ನು ಅವರ ಪುತ್ರರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಸ್ತಾಂತರಿಸಿದರು. ನಂತರ ಸಾಂಪ್ರದಾಯಿಕ ಪೂಜೆ, ವಿಧಿ, ವಿಧಾನಗಳೊಂದಿಗೆ ಪಾರ್ಥಿವ ಶರೀರವನ್ನು ಐಕ್ಯ ಮಂಟಪದಲ್ಲಿ ಇಡಲಾಯಿತು.
ಡಾ; ಶಾಮನೂರು ಶಿವಶಂಕರಪ್ಪನವರ ಪುತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಸೊಸೆ ಹಾಗೂ ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್, ಇನ್ನಿಬ್ಬರು ಪುತ್ರರಾದ ಎಸ್.ಎಸ್.ಬಕ್ಕೇಶ್, ಎಸ್.ಎಸ್.ಗಣೇಶ್ ಸೇರಿದಂತೆ ಶಾಮನೂರು ಶಿವಶಂಕರಪ್ಪನವರ ಕುಟುಂಬಸ್ಥರು ಅಂತಿಮ ವಿಧಿ ವಿಧಾನದಲ್ಲಿ ಭಾಗವಹಿಸಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಎಸ್.ಆರ್.ಬೊಮ್ಮಾಯಿ, ಗೃಹ ಸಚಿವರಾದ ಜಿ.ಪರಮೇಶ್ವರ್, ಕಂದಾಯ ಸಚಿವರಾದ ಕೃಷ್ಣಬೈರೇಗೌಡ, ಕೃಷಿ ಸಚಿವರಾದ ಚಲುವರಾಯಸ್ವಾಮಿ, ಬಿ.ಜೆ.ಪಿ.ಪಕ್ಷದ ರಾಜ್ಯಾದ್ಯಕ್ಷರಾದ ಬಿ.ವೈ.ವಿಜಯೇಂದ್ರ ಸೇರಿದಂತೆ ಅನೇಕ ಶಾಸಕರು, ವಿಧಾನ ಪರಿಷತ್ ಸದಸ್ಯರು ಅಂತಿಮ ದರ್ಶನ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ
ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.
ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.
ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್ಪಿಯನ್ನು ಕ್ವಿಂಟಲ್ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.
ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.
ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್ಆರ್ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.
ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ
-
ದಿನದ ಸುದ್ದಿ7 days agoಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ
-
ದಿನದ ಸುದ್ದಿ5 days agoಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
-
ದಿನದ ಸುದ್ದಿ4 days agoಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
-
ದಿನದ ಸುದ್ದಿ3 days agoಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
-
ದಿನದ ಸುದ್ದಿ3 days ago2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ
-
ದಿನದ ಸುದ್ದಿ4 hours agoಡಾ. ಶಾಮನೂರು ಶಿವಶಂಕರಪ್ಪ ನಿಧನ ; ವೀರಶೈವ ವಿಧಿವಿಧಾನದಂತೆ ಕಲ್ಲೇಶ್ವರ ಮಿಲ್ನಲ್ಲಿ ಅಂತ್ಯ ಸಂಸ್ಕಾರ

