ದಿನದ ಸುದ್ದಿ
ಕಾಂಗ್ರೆಸ್ ಪ್ರಣಾಳಿಕೆಯ ಪ್ರಮುಖಾಂಶಗಳು
ಸುದ್ದಿದಿನ,ದೆಹಲಿ : ಸಾರ್ವಕಾಲಿಕ ಶ್ರೇಷ್ಟ ಪ್ರಣಾಳಿಕೆಯನ್ನ ಅಳೆದು ತೂಗಿ ರೂಪಿಸಿದ್ದೇವೆ. ನಾವು ಆಡಿರುವ ಮಾತಿಗೆ ಬದ್ದರಿದ್ದೇವೆ. ನುಡಿದಂತೆ ನಡೆಯುತ್ತೇವೆ ಎಂದು ಕಾಂಗ್ರಸ್ ಮಂಗಳವಾರ ದೆಹಲಿಯಲ್ಲಿ ತನ್ನ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದೆ.
ಪ್ರಣಾಳಿಕೆಯ ಪ್ರಮುಖಾಂಶಗಳು ಹೀಗಿವೆ
- ನ್ಯಾಯ್ ಯೋಜನೆಯಿಂದ ಬಡತನ ರೇಖೆಗಿಂತ ಕೆಳಗಿರುವ ಜನರನ್ನ ಆರ್ಥಿಕ ಸಮಾನತೆಯತ್ತ ಕೊಂಡೊಯ್ಯಲಾಗುವದು.
- ಮಹಿಳೆಯ ಆರ್ಥಿಕ ಸ್ವಾತಂತ್ರ್ಯ ಮೂಡಿಸುವ ನಿಟ್ಟಿನಲ್ಲಿ #ನ್ಯಾಯ್ ಯೋಜನೆಯಡಿ ನೀಡಲಿರುವ 72,000/- ಕುಟುಂಬದ ಮಹಿಳೆಯ ಖಾತೆಗೆ ಜಮಾ ಮಾಡಲಾಗುವದು.
- ಜಲ ಸಂರಕ್ಷಣೆ, ಖರಾಬು ಜಮೀನು ಸುಧಾರಣೆ ಮಿಶನ್ ಅಡಿಯಲ್ಲಿ 3ವರ್ಷದಲ್ಲಿ 1ಕೋಟಿ ಉದ್ಯೋಗ ಸೃಷ್ಟಿಸಲಾಗುವದು.
- ‘ಮೇಕ್ ಪಾರ್ ದಿ ವರ್ಲ್ಡ್’
ರಪ್ತು ಹೆಚ್ಚಾಗಿಸುವ ನಿಟ್ಟಿನಲ್ಲಿ ರೂಪಿಸಲಿರುವ ಯೋಜನೆ. - ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಸದ್ಯದ 100 ದಿನ ಉದ್ಯೋಗವನ್ನ 150 ದಿನಕ್ಕೆ ಏರಿಸಲಾಗುವದು.
- ರೈಲ್ವೇಗೆ ಇರುವಂತೆ ಕೃಷಿ ಮತ್ತು ರೈತರಿಗಾಗಿ ವಿಶೇಷ ಬಜೆಟ್ ಮಂಡಿಸಲಾಗುವದು.
- 2020 ಮಾರ್ಚ್ ಒಳಗೆ ಕೇಂದ್ರಸರ್ಕಾರದಲ್ಲಿರುವ 4ಲಕ್ಷ ಹುದ್ದೆ,ಸ್ಥಳೀಯ ಸಂಸ್ಥೆಗಳಲ್ಲಿರುವ 10 ಲಕ್ಷ ಹುದ್ದೆ ಭರಿಸಲಾಗುವದು.
- ಸ್ಲಮ್ ಸುಧಾರಣೆ ಯೋಜನೆಯಡಿ ಶುದ್ದ ನೀರು, ವಿದ್ಯುತ್, ನೈರ್ಮಲ್ಯಕ್ಕೆ, ಪಕ್ಕಾ ಮನೆ ನಿರ್ಮಿಸಲಾಗುವದು.
- ‘ಮನರೇಗಾ’ ವನ್ನ ಸಾರ್ವಜನಿಕ ಆಸ್ತಿಗಳಾದ ಗ್ರಂಥಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ, ಶಾಲಾ ಕೊಠಡಿ ನಿರ್ಮಾಣಕ್ಕೆ ಬಳಸಲಾಗುವದು.
- ಮನರೇಗಾ 3.0, ಪ್ರಮುಖವಾಗಿ ರೈತರಿಗೆ ತಲೆನೋವಾಗಿರುವ ಜಲ ಸಂರಕ್ಷಣೆ, ಮಣ್ಣಿನ ಸಂರಕ್ಷಣೆಗಾಗಿ ಪರಿಚಯಿಸಲಾಗುವದು.
- ಸ್ವಂತ ಮನೆ ಹಕ್ಕಿನಡಿ ನಗರ ವಾಸಿ ಬಡವರ ಮೇಲೆ ನಡೆವ ಸ್ವೆಚ್ಚಾಚಾರದ ತೆರವುಗೊಳಿಸುವಿಕೆ ನಿಲ್ಲಿಸಲಾಗುವದು.
- ಸ್ಲಮ್ ಸುಧಾರಣೆ ಯೋಜನೆಯಡಿ ಶುದ್ದ ನೀರು, ವಿದ್ಯುತ್, ನೈರ್ಮಲ್ಯಕ್ಕೆ, ಪಕ್ಕಾ ಮನೆ ನಿರ್ಮಿಸಲಾಗುವದು.
- ಸ್ಥಳೀಯ ಸಂಸ್ಥೆಗಳ ಮೇಯರ್ ಮತ್ತು ಪ್ರತಿನಿಧಿಗಳಿಗೆ ಅಧಿಕಾರ ನೀಡುವ ಮೂಲಕ ನಗರಗಳ ಮೂಲಭೂತ ಸೌಕರ್ಯ ಸುಧಾರಣೆ.
- ಪ್ರಸ್ತುತ ಖಾಲಿ ಬಿದ್ದಿರುವ 22 ಲಕ್ಷ ಸರಕಾರಿ ಹುದ್ದೆಗಳನ್ನ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲಿ ತುಂಬಲಿದ್ದೇವೆ.
ಕಾಂಗ್ರೇಸ್ ಕೈ ಬಲಪಡಿಸಿ. - ಅಸಂಘಟಿತ ವಲಯದ ಕಾರ್ಮಿಕರಿಗೂ ಕನಿಷ್ಟ ವೇತನ ಸಿಗುವಂತೆ ನಿಯಮ ರೂಪಿಸಲಾಗುವದು.
- ‘ಸಣ್ಣ ಹಿಡಯವಳಿದಾರರು&ಕೃಷಿ ಕಾರ್ಮಿಕರ ಆಯೋಗ’ವನ್ನ ಸಂಪ್ರದಾಯಿಕ ಕೃಷಿಯೇತರ ಚಟುವಟಿಕೆದಾರರಿಗೆ ಅನುಕೂಲವಾಗುವಂತೆ ರೂಪಿಸಲಾಗುವದು.
- ‘ರಾಷ್ಟ್ರೀಯ ಕೃಷಿ ಬೆಳವಣಿಗೆ ಮತ್ತು ಯೋಜನಾ ಆಯೋಗ’ ವನ್ನು ರೈತರಿಗೆ ನೆರವಾಗಲು ರೂಪಿಸಲಾಗುವದು.
- ಕಾಂಗ್ರೇಸ್ ಅಧಿಕಾರಕ್ಕೆ ಏರುತ್ತಿದ್ದಂತೆ ರೈತರ ಸಾಲ ಮನ್ನಾ ಮಾಡಲಾಗುವದು.
- 3 ತಿಂಗಳಲ್ಲಿ ಹೂಡಿಕೆಗೆ ಅಡೆತಡೆಯಾಗಿರುವ ಎಲ್ಲ ಕಾಯಿದೆಗಳನ್ನು ತೆಗೆದಾಕಿ, ಹೂಡಿಕೆದಾರ ಸ್ನೇಹಿ ನೀತಿ ರೂಪಿಸಲಾಗುವದು.
- ವಿಮಾ ಕಂಪನಿಗಳನ್ನ ಬೆಳೆಸಿದ ಬಿಜೆಪಿಯ ‘ಫಸಲ್ ವಿಮಾ ಯೋಜನೆ’ಯನ್ನ, ತಿದ್ದುಪಡಿ ಮಾಡಿ ರೈತರಿಗೆ ಸಹಾಯ ಆಗುವಂತೆ ರೂಪಿಸಲಾಗುವದು.
- ಸಾಲದಿಂದ ಮುಕ್ತಿ’ ಯೋಜನೆಯಡಿಯಲ್ಲಿ ಅನ್ನದಾತನಿಗೆ ಉಳುಮೆಗೆ ಕಾಲಾನುಸಾರ ಬೇಕಾಗುವ ಅವಶ್ಯಕತೆ ನೀಡಲಾಗುವದು.
- 2500 ಕ್ಕೂ ಜನಸಂಖ್ಯೆ ಇರುವ ಗ್ರಾಮಗಳಿಗೆ ಕಡ್ಡಾಯವಾಗಿ ಆಶಾ ಕಾರ್ಯಕರ್ತೆಯರನ್ನ ನೇಮಿಸಲಾಗುವದು.
- ಎಲ್ಲ ಸರಕಾರಿ ಹುದ್ದೆಗಳ ಆಯ್ಕೆ ಪರೀಕ್ಷೆಗೆ ಇರುವ ಶುಲ್ಕವನ್ನು ಸಂಪೂರ್ಣವಾಗಿ ತೆಗೆಯಲಾಗುವದು
- ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಕಾರ್ಯಕರ್ತರ ಬಾಕಿ ಇರುವ ಸಂಬಳವನ್ನ ಅಧಿಕಾರಕ್ಕೆ ಬರುತ್ತಿದ್ದಂತೆ ನೀಡಲಾಗುವದು.
- ಜಿ ಎಸ್ ಟಿ 2.0- ಸರಳ ಸುಲಭ ಹೊರೆಯಾಗದಂತೆ ತೆರಿಗೆ ಪದ್ದತಿ ರೂಪಿಸಲಾಗುವದು.
- ಜಿ ಎಸ್ ಟಿ 2.0-ಅಡಿಯಲ್ಲಿ ಪೆಟ್ರೋಲ್ ಡೀಸೆಲ್, ತಂಬಾಕು ಉತ್ಪನ್ನ, ಸರಾಯಿ, ರಿಯಲ್ ಎಸ್ಟೇಟ್ ಗಳನ್ನ ತರಲಾಗುವದು.
- ರಫ್ತಾಗುವ ವಸ್ತು ತಯಾರಿಕೆ ಘಟಕಗಳಿಕೆ ತೆರಿಗೆ ವಿನಾಯ್ತಿ ಮೂಲಕ ಸರಕಾರದಿಂದ ನೆರವು.
- ಮೀನುಗಾರಿಕೆ ಮತ್ತು ಮೀನುಗಾರರ ಕಲ್ಯಾಣಕ್ಕೆ ಪ್ರತ್ಯೇಕ ಸಚಿವರನ್ನ ನೇಮಿಸಲಾಗುವದು.
- ಜಿ ಡಿ ಪಿಯ 2% ನ್ನು ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ವಿನಿಯೋಗಿಸಲಾಗುವದು.
- ನೊಂದಾಯಿತವಲ್ಲದ ಉದ್ಯಮಗಳ ಉತ್ಪನ್ನಗಳಿಗೆ ಖರೀದಿದಾರರ ತೆರಿಗೆ ಹಾಕಿದ್ದನ್ನು ತೆಗೆದು ಹಾಕಲಾಗುವದು.
- ರಫಾಲೆ ಡೀಲ್ ತನಿಖೆ, ಮತ್ತು 5 ವರ್ಷದಲ್ಲಿ ಬಿಜೆಪಿಯವರು ಮಾಡಿರುವ ಭ್ರಷ್ಟಾಚಾರದ ತನಿಖೆ ಮಾಡಲಾಗುವದು
- ನೊಂದಾಯಿತವಲ್ಲದ ಉದ್ಯಮಗಳ ಉತ್ಪನ್ನಗಳಿಗೆ ಖರೀದಿದಾರರ ತೆರಿಗೆ ಹಾಕಿದ್ದನ್ನು ತೆಗೆದು ಹಾಕಲಾಗುವದು.
- ಲೋಕಪಾಲ್ ನೇಮಕ ಮಾಡಲಾಗುವದು.
- ಐಪಿಸಿ ಸೆಕ್ಷನ್ 499ನ್ನು ತೆಗೆದು ಹಾಕಿ, ಮಾನನಷ್ಟ ಮೊಕದ್ದಮೆಯನ್ನು ಸಿವಿಲ್ ಅಪಕೃತ್ಯ ಎಂದು ಮಾಡಲಾಗುವದು.
- ಹಳಿ ತಪ್ಪಿಸಿರುವ ಗೊಂದಲಮಯ ‘ನೀತಿ ಆಯೋಗ’ ವನ್ನು ಕಿತ್ತೆಸೆದು ಹೊಸದಾದ ಯೋಜನಾ ಆಯೋಗವನ್ನ ರೂಪಿಸಲಾಗುವದು
- ಲೋಕಸಭೆ ಮತ್ತು ವಿಧಾನ ಸಭೆಗಳಲ್ಲಿ ಮಹಿಳಾ ಪ್ರಾತಿನಿದ್ಯ ಹೆಚ್ಚಿಸಲು ಮಹಿಳೆಯರಿಗೆ 33% ಮೀಸಲಾತಿಯನ್ನ ಮೊದಲ ಸಭೆಯಲ್ಲಿ ಮಂಡಿಸಲಾಗುವದು.
- ಕೇಂದ್ರ ಸರಕಾರದ ಹುದ್ದೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಲಾಗುವದು.
- ಪ.ಜಾ ಪ.ಪಂ & ಹಿಂದುಳಿದ ವರ್ಗಗಳ ಮೀಸಲಾತಿ ಸಂಬಂಧಿಸಿದಂತೆ ‘ಸಮಾನ ಅವಕಾಶಗಳ ಆಯೋಗ’ವನ್ನ ರಚಿಸಲಾಗುವದು.
- ಪ.ಜಾ ಪ.ಪಂ ಮತ್ತು ಹಿಂದುಳಿದ ವರ್ಗಗಳಿಗೆ ಖಾಸಗಿ ವಿದ್ಯಾ ಸಂಸ್ಥೆಗಳಲ್ಲು ಮೀಸಲಾತಿಯನ್ನ ಕಲ್ಪಿಸಲಾಗುವದು.
- ಸರಕಾರಿ ಟೆಂಡರುಗಳಲ್ಲಿ ಪ.ಜಾ ಪ.ಪಂ&ಹಿಂದುಳಿದವರಿಗೆ ನ್ಯಾಯಯುತ ಭಾಗ ನೀಡಲಾಗುವದು.
- ಸರಕಾರಿ ಟೆಂಡರುಗಳಲ್ಲಿ ಪ.ಜಾ ಪ.ಪಂ&ಹಿಂದುಳಿದವರಿಗೆ ನ್ಯಾಯಯುತ ಭಾಗ ನೀಡಲಾಗುವದು.
- ಅಲಿಗರ್, ಜಾಮಿಯಾ ಇಸ್ಲಮಿಯಾ ವಿಶ್ವವಿದ್ಯಾಲಯಗಳ ಮೂಲ ಉದ್ದೇಶವನ್ನ ರಕ್ಷಿಸಲಾಗುವದು.
- ವಕ್ಪ್ ಮಸೂದೆ 2014 ನ್ನು ಮತ್ತೊಮ್ಮೆ ಪರಿಚಯಿಸಿ, ವಕ್ಪ್ ಆಸ್ತಿಯನ್ನ ನ್ಯಾಯಯುತ ಟ್ರಸ್ಟಿಗಳಿಗೆ ನೀಡಲಾಗುವದು.
- ಮಾಬ್ ಲಿಂಚಿಂಗ್ ಮತ್ತು ಹೇಟ್ ಕ್ರೈಮ್ ತಡಗಟ್ಟಲು ಮೊದಲ ಸಭೆಯಲ್ಲಿಯೆ ಕಾಯಿದೆ ರೂಪಿಸಲಾಗುವದು.
Delhi: Congress party releases their election manifesto for #LokSabhaElections2019 pic.twitter.com/fccNKOuSqZ
— ANI (@ANI) April 2, 2019
Rahul Gandhi at Congress' election manifesto release: When we started this process about a year back, I spoke to Mr Chidamabaram, Mr Gowda & gave 2 instructions. I said this is not a manifesto to be made in closed rooms but this should reflect the wishes of the people of India. pic.twitter.com/gXII8TSHmx
— ANI (@ANI) April 2, 2019
Rahul Gandhi at Congress' election manifesto release: I also said that whatever is going to be in this manifesto has to be truthful, I do not want a single thing in this manifesto that is a lie because we have been hearing large number of lies spoken everyday by our PM. https://t.co/qpK73RZNal
— ANI (@ANI) April 2, 2019
Congress President Rahul Gandhi: PM had spoken about MGNREGA. He mocked and said it is a bogus and useless scheme. Today everyone knows how much it helped the country. So now we want to guarantee jobs for 150 days, instead of 100 days, under the scheme. pic.twitter.com/dgzAekiJ3y
— ANI (@ANI) April 2, 2019
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.
ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.
ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು
ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.
ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.
ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.
ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ
ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.
ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.
ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.
“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”
ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ5 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ6 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ7 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
-
ದಿನದ ಸುದ್ದಿ24 hours agoಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

