ದಿನದ ಸುದ್ದಿ
ಕಾಂಗ್ರೆಸ್ ಪ್ರಣಾಳಿಕೆಯ ಪ್ರಮುಖಾಂಶಗಳು
ಸುದ್ದಿದಿನ,ದೆಹಲಿ : ಸಾರ್ವಕಾಲಿಕ ಶ್ರೇಷ್ಟ ಪ್ರಣಾಳಿಕೆಯನ್ನ ಅಳೆದು ತೂಗಿ ರೂಪಿಸಿದ್ದೇವೆ. ನಾವು ಆಡಿರುವ ಮಾತಿಗೆ ಬದ್ದರಿದ್ದೇವೆ. ನುಡಿದಂತೆ ನಡೆಯುತ್ತೇವೆ ಎಂದು ಕಾಂಗ್ರಸ್ ಮಂಗಳವಾರ ದೆಹಲಿಯಲ್ಲಿ ತನ್ನ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದೆ.
ಪ್ರಣಾಳಿಕೆಯ ಪ್ರಮುಖಾಂಶಗಳು ಹೀಗಿವೆ
- ನ್ಯಾಯ್ ಯೋಜನೆಯಿಂದ ಬಡತನ ರೇಖೆಗಿಂತ ಕೆಳಗಿರುವ ಜನರನ್ನ ಆರ್ಥಿಕ ಸಮಾನತೆಯತ್ತ ಕೊಂಡೊಯ್ಯಲಾಗುವದು.
- ಮಹಿಳೆಯ ಆರ್ಥಿಕ ಸ್ವಾತಂತ್ರ್ಯ ಮೂಡಿಸುವ ನಿಟ್ಟಿನಲ್ಲಿ #ನ್ಯಾಯ್ ಯೋಜನೆಯಡಿ ನೀಡಲಿರುವ 72,000/- ಕುಟುಂಬದ ಮಹಿಳೆಯ ಖಾತೆಗೆ ಜಮಾ ಮಾಡಲಾಗುವದು.
- ಜಲ ಸಂರಕ್ಷಣೆ, ಖರಾಬು ಜಮೀನು ಸುಧಾರಣೆ ಮಿಶನ್ ಅಡಿಯಲ್ಲಿ 3ವರ್ಷದಲ್ಲಿ 1ಕೋಟಿ ಉದ್ಯೋಗ ಸೃಷ್ಟಿಸಲಾಗುವದು.
- ‘ಮೇಕ್ ಪಾರ್ ದಿ ವರ್ಲ್ಡ್’
ರಪ್ತು ಹೆಚ್ಚಾಗಿಸುವ ನಿಟ್ಟಿನಲ್ಲಿ ರೂಪಿಸಲಿರುವ ಯೋಜನೆ. - ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಸದ್ಯದ 100 ದಿನ ಉದ್ಯೋಗವನ್ನ 150 ದಿನಕ್ಕೆ ಏರಿಸಲಾಗುವದು.
- ರೈಲ್ವೇಗೆ ಇರುವಂತೆ ಕೃಷಿ ಮತ್ತು ರೈತರಿಗಾಗಿ ವಿಶೇಷ ಬಜೆಟ್ ಮಂಡಿಸಲಾಗುವದು.
- 2020 ಮಾರ್ಚ್ ಒಳಗೆ ಕೇಂದ್ರಸರ್ಕಾರದಲ್ಲಿರುವ 4ಲಕ್ಷ ಹುದ್ದೆ,ಸ್ಥಳೀಯ ಸಂಸ್ಥೆಗಳಲ್ಲಿರುವ 10 ಲಕ್ಷ ಹುದ್ದೆ ಭರಿಸಲಾಗುವದು.
- ಸ್ಲಮ್ ಸುಧಾರಣೆ ಯೋಜನೆಯಡಿ ಶುದ್ದ ನೀರು, ವಿದ್ಯುತ್, ನೈರ್ಮಲ್ಯಕ್ಕೆ, ಪಕ್ಕಾ ಮನೆ ನಿರ್ಮಿಸಲಾಗುವದು.
- ‘ಮನರೇಗಾ’ ವನ್ನ ಸಾರ್ವಜನಿಕ ಆಸ್ತಿಗಳಾದ ಗ್ರಂಥಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ, ಶಾಲಾ ಕೊಠಡಿ ನಿರ್ಮಾಣಕ್ಕೆ ಬಳಸಲಾಗುವದು.
- ಮನರೇಗಾ 3.0, ಪ್ರಮುಖವಾಗಿ ರೈತರಿಗೆ ತಲೆನೋವಾಗಿರುವ ಜಲ ಸಂರಕ್ಷಣೆ, ಮಣ್ಣಿನ ಸಂರಕ್ಷಣೆಗಾಗಿ ಪರಿಚಯಿಸಲಾಗುವದು.
- ಸ್ವಂತ ಮನೆ ಹಕ್ಕಿನಡಿ ನಗರ ವಾಸಿ ಬಡವರ ಮೇಲೆ ನಡೆವ ಸ್ವೆಚ್ಚಾಚಾರದ ತೆರವುಗೊಳಿಸುವಿಕೆ ನಿಲ್ಲಿಸಲಾಗುವದು.
- ಸ್ಲಮ್ ಸುಧಾರಣೆ ಯೋಜನೆಯಡಿ ಶುದ್ದ ನೀರು, ವಿದ್ಯುತ್, ನೈರ್ಮಲ್ಯಕ್ಕೆ, ಪಕ್ಕಾ ಮನೆ ನಿರ್ಮಿಸಲಾಗುವದು.
- ಸ್ಥಳೀಯ ಸಂಸ್ಥೆಗಳ ಮೇಯರ್ ಮತ್ತು ಪ್ರತಿನಿಧಿಗಳಿಗೆ ಅಧಿಕಾರ ನೀಡುವ ಮೂಲಕ ನಗರಗಳ ಮೂಲಭೂತ ಸೌಕರ್ಯ ಸುಧಾರಣೆ.
- ಪ್ರಸ್ತುತ ಖಾಲಿ ಬಿದ್ದಿರುವ 22 ಲಕ್ಷ ಸರಕಾರಿ ಹುದ್ದೆಗಳನ್ನ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲಿ ತುಂಬಲಿದ್ದೇವೆ.
ಕಾಂಗ್ರೇಸ್ ಕೈ ಬಲಪಡಿಸಿ. - ಅಸಂಘಟಿತ ವಲಯದ ಕಾರ್ಮಿಕರಿಗೂ ಕನಿಷ್ಟ ವೇತನ ಸಿಗುವಂತೆ ನಿಯಮ ರೂಪಿಸಲಾಗುವದು.
- ‘ಸಣ್ಣ ಹಿಡಯವಳಿದಾರರು&ಕೃಷಿ ಕಾರ್ಮಿಕರ ಆಯೋಗ’ವನ್ನ ಸಂಪ್ರದಾಯಿಕ ಕೃಷಿಯೇತರ ಚಟುವಟಿಕೆದಾರರಿಗೆ ಅನುಕೂಲವಾಗುವಂತೆ ರೂಪಿಸಲಾಗುವದು.
- ‘ರಾಷ್ಟ್ರೀಯ ಕೃಷಿ ಬೆಳವಣಿಗೆ ಮತ್ತು ಯೋಜನಾ ಆಯೋಗ’ ವನ್ನು ರೈತರಿಗೆ ನೆರವಾಗಲು ರೂಪಿಸಲಾಗುವದು.
- ಕಾಂಗ್ರೇಸ್ ಅಧಿಕಾರಕ್ಕೆ ಏರುತ್ತಿದ್ದಂತೆ ರೈತರ ಸಾಲ ಮನ್ನಾ ಮಾಡಲಾಗುವದು.
- 3 ತಿಂಗಳಲ್ಲಿ ಹೂಡಿಕೆಗೆ ಅಡೆತಡೆಯಾಗಿರುವ ಎಲ್ಲ ಕಾಯಿದೆಗಳನ್ನು ತೆಗೆದಾಕಿ, ಹೂಡಿಕೆದಾರ ಸ್ನೇಹಿ ನೀತಿ ರೂಪಿಸಲಾಗುವದು.
- ವಿಮಾ ಕಂಪನಿಗಳನ್ನ ಬೆಳೆಸಿದ ಬಿಜೆಪಿಯ ‘ಫಸಲ್ ವಿಮಾ ಯೋಜನೆ’ಯನ್ನ, ತಿದ್ದುಪಡಿ ಮಾಡಿ ರೈತರಿಗೆ ಸಹಾಯ ಆಗುವಂತೆ ರೂಪಿಸಲಾಗುವದು.
- ಸಾಲದಿಂದ ಮುಕ್ತಿ’ ಯೋಜನೆಯಡಿಯಲ್ಲಿ ಅನ್ನದಾತನಿಗೆ ಉಳುಮೆಗೆ ಕಾಲಾನುಸಾರ ಬೇಕಾಗುವ ಅವಶ್ಯಕತೆ ನೀಡಲಾಗುವದು.
- 2500 ಕ್ಕೂ ಜನಸಂಖ್ಯೆ ಇರುವ ಗ್ರಾಮಗಳಿಗೆ ಕಡ್ಡಾಯವಾಗಿ ಆಶಾ ಕಾರ್ಯಕರ್ತೆಯರನ್ನ ನೇಮಿಸಲಾಗುವದು.
- ಎಲ್ಲ ಸರಕಾರಿ ಹುದ್ದೆಗಳ ಆಯ್ಕೆ ಪರೀಕ್ಷೆಗೆ ಇರುವ ಶುಲ್ಕವನ್ನು ಸಂಪೂರ್ಣವಾಗಿ ತೆಗೆಯಲಾಗುವದು
- ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಕಾರ್ಯಕರ್ತರ ಬಾಕಿ ಇರುವ ಸಂಬಳವನ್ನ ಅಧಿಕಾರಕ್ಕೆ ಬರುತ್ತಿದ್ದಂತೆ ನೀಡಲಾಗುವದು.
- ಜಿ ಎಸ್ ಟಿ 2.0- ಸರಳ ಸುಲಭ ಹೊರೆಯಾಗದಂತೆ ತೆರಿಗೆ ಪದ್ದತಿ ರೂಪಿಸಲಾಗುವದು.
- ಜಿ ಎಸ್ ಟಿ 2.0-ಅಡಿಯಲ್ಲಿ ಪೆಟ್ರೋಲ್ ಡೀಸೆಲ್, ತಂಬಾಕು ಉತ್ಪನ್ನ, ಸರಾಯಿ, ರಿಯಲ್ ಎಸ್ಟೇಟ್ ಗಳನ್ನ ತರಲಾಗುವದು.
- ರಫ್ತಾಗುವ ವಸ್ತು ತಯಾರಿಕೆ ಘಟಕಗಳಿಕೆ ತೆರಿಗೆ ವಿನಾಯ್ತಿ ಮೂಲಕ ಸರಕಾರದಿಂದ ನೆರವು.
- ಮೀನುಗಾರಿಕೆ ಮತ್ತು ಮೀನುಗಾರರ ಕಲ್ಯಾಣಕ್ಕೆ ಪ್ರತ್ಯೇಕ ಸಚಿವರನ್ನ ನೇಮಿಸಲಾಗುವದು.
- ಜಿ ಡಿ ಪಿಯ 2% ನ್ನು ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ವಿನಿಯೋಗಿಸಲಾಗುವದು.
- ನೊಂದಾಯಿತವಲ್ಲದ ಉದ್ಯಮಗಳ ಉತ್ಪನ್ನಗಳಿಗೆ ಖರೀದಿದಾರರ ತೆರಿಗೆ ಹಾಕಿದ್ದನ್ನು ತೆಗೆದು ಹಾಕಲಾಗುವದು.
- ರಫಾಲೆ ಡೀಲ್ ತನಿಖೆ, ಮತ್ತು 5 ವರ್ಷದಲ್ಲಿ ಬಿಜೆಪಿಯವರು ಮಾಡಿರುವ ಭ್ರಷ್ಟಾಚಾರದ ತನಿಖೆ ಮಾಡಲಾಗುವದು
- ನೊಂದಾಯಿತವಲ್ಲದ ಉದ್ಯಮಗಳ ಉತ್ಪನ್ನಗಳಿಗೆ ಖರೀದಿದಾರರ ತೆರಿಗೆ ಹಾಕಿದ್ದನ್ನು ತೆಗೆದು ಹಾಕಲಾಗುವದು.
- ಲೋಕಪಾಲ್ ನೇಮಕ ಮಾಡಲಾಗುವದು.
- ಐಪಿಸಿ ಸೆಕ್ಷನ್ 499ನ್ನು ತೆಗೆದು ಹಾಕಿ, ಮಾನನಷ್ಟ ಮೊಕದ್ದಮೆಯನ್ನು ಸಿವಿಲ್ ಅಪಕೃತ್ಯ ಎಂದು ಮಾಡಲಾಗುವದು.
- ಹಳಿ ತಪ್ಪಿಸಿರುವ ಗೊಂದಲಮಯ ‘ನೀತಿ ಆಯೋಗ’ ವನ್ನು ಕಿತ್ತೆಸೆದು ಹೊಸದಾದ ಯೋಜನಾ ಆಯೋಗವನ್ನ ರೂಪಿಸಲಾಗುವದು
- ಲೋಕಸಭೆ ಮತ್ತು ವಿಧಾನ ಸಭೆಗಳಲ್ಲಿ ಮಹಿಳಾ ಪ್ರಾತಿನಿದ್ಯ ಹೆಚ್ಚಿಸಲು ಮಹಿಳೆಯರಿಗೆ 33% ಮೀಸಲಾತಿಯನ್ನ ಮೊದಲ ಸಭೆಯಲ್ಲಿ ಮಂಡಿಸಲಾಗುವದು.
- ಕೇಂದ್ರ ಸರಕಾರದ ಹುದ್ದೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಲಾಗುವದು.
- ಪ.ಜಾ ಪ.ಪಂ & ಹಿಂದುಳಿದ ವರ್ಗಗಳ ಮೀಸಲಾತಿ ಸಂಬಂಧಿಸಿದಂತೆ ‘ಸಮಾನ ಅವಕಾಶಗಳ ಆಯೋಗ’ವನ್ನ ರಚಿಸಲಾಗುವದು.
- ಪ.ಜಾ ಪ.ಪಂ ಮತ್ತು ಹಿಂದುಳಿದ ವರ್ಗಗಳಿಗೆ ಖಾಸಗಿ ವಿದ್ಯಾ ಸಂಸ್ಥೆಗಳಲ್ಲು ಮೀಸಲಾತಿಯನ್ನ ಕಲ್ಪಿಸಲಾಗುವದು.
- ಸರಕಾರಿ ಟೆಂಡರುಗಳಲ್ಲಿ ಪ.ಜಾ ಪ.ಪಂ&ಹಿಂದುಳಿದವರಿಗೆ ನ್ಯಾಯಯುತ ಭಾಗ ನೀಡಲಾಗುವದು.
- ಸರಕಾರಿ ಟೆಂಡರುಗಳಲ್ಲಿ ಪ.ಜಾ ಪ.ಪಂ&ಹಿಂದುಳಿದವರಿಗೆ ನ್ಯಾಯಯುತ ಭಾಗ ನೀಡಲಾಗುವದು.
- ಅಲಿಗರ್, ಜಾಮಿಯಾ ಇಸ್ಲಮಿಯಾ ವಿಶ್ವವಿದ್ಯಾಲಯಗಳ ಮೂಲ ಉದ್ದೇಶವನ್ನ ರಕ್ಷಿಸಲಾಗುವದು.
- ವಕ್ಪ್ ಮಸೂದೆ 2014 ನ್ನು ಮತ್ತೊಮ್ಮೆ ಪರಿಚಯಿಸಿ, ವಕ್ಪ್ ಆಸ್ತಿಯನ್ನ ನ್ಯಾಯಯುತ ಟ್ರಸ್ಟಿಗಳಿಗೆ ನೀಡಲಾಗುವದು.
- ಮಾಬ್ ಲಿಂಚಿಂಗ್ ಮತ್ತು ಹೇಟ್ ಕ್ರೈಮ್ ತಡಗಟ್ಟಲು ಮೊದಲ ಸಭೆಯಲ್ಲಿಯೆ ಕಾಯಿದೆ ರೂಪಿಸಲಾಗುವದು.
Delhi: Congress party releases their election manifesto for #LokSabhaElections2019 pic.twitter.com/fccNKOuSqZ
— ANI (@ANI) April 2, 2019
Rahul Gandhi at Congress' election manifesto release: When we started this process about a year back, I spoke to Mr Chidamabaram, Mr Gowda & gave 2 instructions. I said this is not a manifesto to be made in closed rooms but this should reflect the wishes of the people of India. pic.twitter.com/gXII8TSHmx
— ANI (@ANI) April 2, 2019
Rahul Gandhi at Congress' election manifesto release: I also said that whatever is going to be in this manifesto has to be truthful, I do not want a single thing in this manifesto that is a lie because we have been hearing large number of lies spoken everyday by our PM. https://t.co/qpK73RZNal
— ANI (@ANI) April 2, 2019
Congress President Rahul Gandhi: PM had spoken about MGNREGA. He mocked and said it is a bogus and useless scheme. Today everyone knows how much it helped the country. So now we want to guarantee jobs for 150 days, instead of 100 days, under the scheme. pic.twitter.com/dgzAekiJ3y
— ANI (@ANI) April 2, 2019
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.
ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.
ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.
ಇಂಗ್ಲೀಷ್ ಮೇಜರ್ ನಲ್ಲಿ ರ್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು
ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.
ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.
ಯುವಕರು ಸ್ಕೂಲ್, ಕಾಲೇಜ್ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.
ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.
ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.
ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.
ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ.
ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ, 4 ಸದಸ್ಯರಿರುವ ಪ್ರತಿ ಕಾರ್ಡಿಗೆ 40 ಕೆ.ಜಿ ಅಕ್ಕಿ, 5 ಸದಸ್ಯರಿರುವ ಪ್ರತಿ ಕಾರ್ಡಿಗೆ 50 ಕೆ.ಜಿ ಅಕ್ಕಿ, 6 ಸದಸ್ಯರಿರುವ ಪ್ರತಿ ಕಾರ್ಡಿಗೆ 60 ಕೆ.ಜಿ ಅಕ್ಕಿ, 7 ಸದಸ್ಯರಿರುವ ಪ್ರತಿ ಕಾರ್ಡಿಗೆ 70 ಕೆ.ಜಿ ಅಕ್ಕಿ, 8 ಸದಸ್ಯರಿರುವ ಪ್ರತಿ ಕಾರ್ಡಿಗೆ 80 ಕೆ.ಜಿ ಅಕ್ಕಿ, 9 ಸದಸ್ಯರಿರುವ ಪ್ರತಿ ಕಾರ್ಡಿಗೆ 90 ಕೆ.ಜಿ, 10 ಸದಸ್ಯರಿರುವ ಪ್ರತಿ ಕಾರ್ಡಿಗೆ 100 ಕೆ.ಜಿ ಅಕ್ಕಿಯನ್ನು ನೀಡಲಾಗುವುದು.
ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಅಂತರ್ ರಾಜ್ಯ ಅಥವಾ ಜಿಲ್ಲೆಯ ಪಡಿತರ ಚೀಟಿಗಳಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡೆಯಲು ಅವಕಾಶವಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


