Connect with us

ದಿನದ ಸುದ್ದಿ

ಟಿ.ನರಸೀಪುರ | ಮನೀಷಾ ವಾಲ್ಮೀಕಿ ಯುವತಿ ಮೇಲೆ ಅತ್ಯಾಚಾರ – ಹತ್ಯೆ : ಜಯ ಕರ್ನಾಟಕ ಮಹಿಳಾ ವಿಭಾಗ ಪ್ರತಿಭಟನೆ

Published

on

ಸುದ್ದಿದಿನ,ಟಿ.ನರಸೀಪುರ: ಮನೀಷಾ ವಾಲ್ಮೀಕಿ ಯುವತಿ ಮೇಲೆ ಅತ್ಯಾಚಾರ ಮಾಡಿ ಭೀಕರವಾಗಿ ಹತ್ಯೆ ಮಾಡಿರುವ ಕಾಮಾಂದರನ್ನು ನೇಣಿಗೇರಿಸಿ ಮಹಿಳೆ ಮತ್ತು ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡಲಾಗದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕೆಂದು, ಜಯ ಕರ್ನಾಟಕ ಮಹಿಳಾ ವಿಭಾಗದ ಜಿಲ್ಲಾಧ್ಯಕ್ಷೆ  ಎಲ್.ಪಿ.ರೇವತಿ ಆಗ್ರಹಿಸಿದರು.

ಪಟ್ಟಣದ ತಹಶಿಲ್ದಾರ್ ಕಚೇರಿ ಮುಂಭಾಗ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ರೈತ ಸಂಘ, ಜಯ ಕರ್ನಾಟಕ, ವಾಲ್ಮೀಕಿ ನಾಯಕರ ಸಂಘ, ಮುಸ್ಲಿಂ ಯೂತ್ ವಾಯ್ಸ್ ಫೆಡರೇಶನ್ ಒಕ್ಕೂಟದ ವತಿಯಿಂದ ಉತ್ತರ ಪ್ರದೇಶದಲ್ಲಿ ಮನೀಷಾ ವಾಲ್ಮೀಕಿ ಯುವತಿ ಮೇಲೆ ನಡೆದ ಅತ್ಯಾಚಾರ ಹಾಗೂ ಭೀಕರ ಹತ್ಯೆಯನ್ನು ಖಂಡಿಸಿ ಪ್ರತಿಭಟನಾ ಧರಣಿ ನಡೆಸಿತು.

ಈ ಸಂದರ್ಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ಉತ್ತರ ಪ್ರದೇಶ ಹಾಥರಸ್ ನಲ್ಲಿ ಮನೀಷಾ ವಾಲ್ಮೀಕಿ 19 ವರ್ಷದ ಯುವತಿ ಮೇಲೆ ಠಾಕೂರ್ ಸಮುದಾಯದ ಕಾಮಾಂಧರು ಅತ್ಯಾಚಾರ ಮಾಡಿ ಆನಂತರ ನಾಲಿಗೆ ಕತ್ತರಿಸಿ,ಬೆನ್ನು, ಕಾಲು ಮೂಳೆಗಳನ್ನು ಮುರಿದು ಕ್ರೂರವಾಗಿ ಕೊಲೆ ಮಾಡಿರುವ ಅಮಾನವೀಯ ಘೋರ ಕೃತ್ಯವನ್ನು ಸಂಘಟನೆಗಳು ಉಗ್ರವಾಗಿ ಖಂಡಿಸುತ್ತವೆ.

ಮಹಿಳೆ ಮೇಲಿನ ದೌರ್ಜನ್ಯ ನಿಯಂತ್ರ ಕಾಯಿದೆ, ಪೋಕ್ಷೋ ಕಾಯಿದೆ, ಪರಿಣಾಮಕಾರಿಯಾಗಿ ಜಾರಿಯಲ್ಲಿದ್ದರೂ ಕಾನೂನನ್ನು ಲೆಕ್ಕಿಸದೆ ರಾಜಾರೋಷವಾಗಿ, ನಿರ್ಭಯವಾಗಿ ಅತ್ಯಾಚಾರ ಹತ್ಯೆ ಮಾಡುವ ದುಷ್ಕರ್ಮಿಗಳ ಪರ ನ್ಯಾಯಾವಾದಿಗಳು ವಕಾಲತ್ತು ವಹಿಸಬಾರದಂದು ಸಂಘಟನೆಗಳ ಮನವಿ ಮಾಡಿಕೊಳ್ಳುತ್ತವೆ. ಮಾನವೀಯ ಮತ್ತು ಮನಿಸತ್ವಕ್ಕೆ ಬೆಲೆ ನೀಡದೆ ಪೈಶಾಚಿಕ ಕೃತ್ಯವೆಸಗುವ ವ್ಯಕ್ತಿಗಳನ್ನು ಯಾವುದೇ ಕ್ಷಮಾಪಣೆ ನೀಡದೆ ಗಲ್ಲಿಗೇರಿಸುವಂತಹ ನಿಯಮವನ್ನು ಜಾರಿಗೊಳಿಸಬೇಕಿದೆ.

ದಸಂಸ ಜಿಲ್ಲಾ ಸಂಚಾಲಕ ಡಾ.ಆಲಗೂಡು ಎಸ್. ಚಂದ್ರಶೇಖರ್, ಜನಜಾಗೃತಿ ವೇದಿಕೆ ಜಿಲ್ಲಾ ಸದಸ್ಯ ಕೆ.ಎನ್‌.ಪ್ರಭುಸ್ವಾಮಿ, ಮು.ಯೂ.ವಾ.ಫೆಡರೇಶನ್ ಜಿಲ್ಲಾಧ್ಯಕ್ಷ ಅಮ್ ಜದ್ ಖಾನ್, ಕರ್ನಾಟಕ ರಾಜ್ಯ ರೈತ ಸಂಘ ಸಂಚಾಲಕ ಕಳ್ಳೀಪುರ ಮಹದೇವಸ್ವಾಮಿ ಮಾತನಾಡಿ ಅತ್ಯಾಚಾರ ಕೊಳಗಾಗಿ ಸಾವನಪ್ಪಿದ ಯುವತಿ ಪರ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವ ಭೀಮ್ ಆರ್ಮಿ ಸೇನೆಯ ಮುಖ್ಯಸ್ಥ ಚಂದ್ರಶೇಖರ್ ಅಝಾದ್ ಸಹಿತ ಐನೂರು ವ್ಯಕ್ತಿಗಳ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿರುವುದನ್ನು ಕೂಡಲೇ ರದ್ದು ಪಡಿಸಿ ರಾತ್ರೋರಾತ್ರಿ ಮನೀಷಾಳ ದೇಹವನ್ನು ಸುಟ್ಟು ಹಾಕಿ ಸತ್ಯ ಸಾಕ್ಷಿ ನಾಶ ಮಾಡಿರುವ ಪೊಲೀಸರ ಗೂಂಡಾ ಕ್ರಮವನ್ನು ಮತ್ತು ಕಾನೂನು ವಿರೋಧಿ ನಡವಳಿಕೆಯನ್ನು ಖಂಡಿಸುತ್ತೇವೆಂದರು.

ಈ ಕೃತ್ಯದಲ್ಲಿ ಭಾಗಿಯಾಗಿರುವ ಪೊಲೀಸರನ್ನು ಕೆಲಸದಿಂದ ವಜಾ ಮಾಡಿ ದೇಶದಿಂದ ಗಡಿಪಾರು ಮಾಡಬೇಕೆಂದು ಒತ್ತಾಯಿಸುತ್ತ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ವತ್ತರ ಕಳವಳ ವ್ಯಕ್ತಪಡಿಸಿದ್ದು ಉತ್ತರ ಪ್ರದೇಶ ಆಡಳಿತ ಸರ್ಕಾರ ಪ್ರಸ್ತುತ ಅತ್ಯಾಚಾರ, ಕೊಲೆಗಡುಕ ಹಾಗೂ ಸಂವಿಧಾನ ನಾಶ ಪಡಿಸುವಂತಹ ಸಾಮ್ರಾಜ್ಯವಾಗಿದ್ದು ಮತ್ತು ಸಂಪೂರ್ಣ ಕಾನೂನು ಸುವ್ಯವಸ್ಥೆ ಹಾಳಾಗಿದೆ‌.

ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಶೋಷಿತ ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಅತ್ಯಾಚಾರ ಹತ್ಯೆ ನಿಯಂತ್ರಿಸುವಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ಜನಸಾಮಾನ್ಯರು ಭಯದ ವಾತಾವರಣದಲ್ಲಿ ಬದುಕಬೇಕಾದಂದಹ ಪರಿಸ್ಥಿತಿ ಇರುವ ಹಿನ್ನಲೆಯಲ್ಲಿ ರಾಷ್ಟ್ರ ಪತಿಗಳು ಉತ್ತರ ಪ್ರದೇಶದ ಬಿಜೆಪಿ ಸರ್ಕಾರವನ್ನು ವಜಾ ಮಾಡಿ ಪ್ರಜಾಪ್ರಭುತ್ವ ಉಳಿವು ಮತ್ತು ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಮನವಿ ಮಾಡುತ್ತ ಮನವಿ ಪತ್ರವನ್ನು ತಹಶಿಲ್ದಾರ್ ಡಿ.ನಾಗೇಶ್ ರವರೆಗೆ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಕೆ.ಜಿ.ಶಿವಪ್ರಸಾದ್, ಪ್ರದೀಪ್, ರಾಜು, ಗಿರೀಶ್, ಮರಿಸ್ವಾಮಿ , ಎಸ್.ಕೃಷ್ಣ ಮೂರ್ತಿ, ಸ್ವಾಮಿರಾಜ್, ಮನೋಜ್ ಕುಮಾರ್, ರಾಜಪ್ಪ, ಪ್ರಭಾಕರ್, ಕುಮಾರ್, ಪರಶುರಾಮ್, ಜಯಣ್ಣ, ದೇವರಾಜು, ಚಂದ್ರಪ್ಪ, ಗೋವಿಂದ ರಾಜು, ಗೋಪಿಕೃಷ್ಣ, ಪುಟ್ಟರಾಜು, ಚಿನ್ನಸ್ವಾಮಿ, ಸಿದ್ದರಾಜು, ಪುಟ್ಟಸ್ವಾಮಿ, ಮಹದೇವಸ್ವಾಮಿ, ಕೇಶವ ಮೂರ್ತಿ, ರಾಜುಗೌಡ ಹಾಗೂ ಇತರರು ಭಾಗವಹಿಸಿದ್ದರು.

ವರದಿ : ಎಂ. ನಾಗೇಂದ್ರ ಕುಮಾರ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.

ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending