ದಿನದ ಸುದ್ದಿ
ಟಿ.ನರಸೀಪುರ | ಮನೀಷಾ ವಾಲ್ಮೀಕಿ ಯುವತಿ ಮೇಲೆ ಅತ್ಯಾಚಾರ – ಹತ್ಯೆ : ಜಯ ಕರ್ನಾಟಕ ಮಹಿಳಾ ವಿಭಾಗ ಪ್ರತಿಭಟನೆ
ಸುದ್ದಿದಿನ,ಟಿ.ನರಸೀಪುರ: ಮನೀಷಾ ವಾಲ್ಮೀಕಿ ಯುವತಿ ಮೇಲೆ ಅತ್ಯಾಚಾರ ಮಾಡಿ ಭೀಕರವಾಗಿ ಹತ್ಯೆ ಮಾಡಿರುವ ಕಾಮಾಂದರನ್ನು ನೇಣಿಗೇರಿಸಿ ಮಹಿಳೆ ಮತ್ತು ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡಲಾಗದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕೆಂದು, ಜಯ ಕರ್ನಾಟಕ ಮಹಿಳಾ ವಿಭಾಗದ ಜಿಲ್ಲಾಧ್ಯಕ್ಷೆ ಎಲ್.ಪಿ.ರೇವತಿ ಆಗ್ರಹಿಸಿದರು.
ಪಟ್ಟಣದ ತಹಶಿಲ್ದಾರ್ ಕಚೇರಿ ಮುಂಭಾಗ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ರೈತ ಸಂಘ, ಜಯ ಕರ್ನಾಟಕ, ವಾಲ್ಮೀಕಿ ನಾಯಕರ ಸಂಘ, ಮುಸ್ಲಿಂ ಯೂತ್ ವಾಯ್ಸ್ ಫೆಡರೇಶನ್ ಒಕ್ಕೂಟದ ವತಿಯಿಂದ ಉತ್ತರ ಪ್ರದೇಶದಲ್ಲಿ ಮನೀಷಾ ವಾಲ್ಮೀಕಿ ಯುವತಿ ಮೇಲೆ ನಡೆದ ಅತ್ಯಾಚಾರ ಹಾಗೂ ಭೀಕರ ಹತ್ಯೆಯನ್ನು ಖಂಡಿಸಿ ಪ್ರತಿಭಟನಾ ಧರಣಿ ನಡೆಸಿತು.
ಈ ಸಂದರ್ಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ಉತ್ತರ ಪ್ರದೇಶ ಹಾಥರಸ್ ನಲ್ಲಿ ಮನೀಷಾ ವಾಲ್ಮೀಕಿ 19 ವರ್ಷದ ಯುವತಿ ಮೇಲೆ ಠಾಕೂರ್ ಸಮುದಾಯದ ಕಾಮಾಂಧರು ಅತ್ಯಾಚಾರ ಮಾಡಿ ಆನಂತರ ನಾಲಿಗೆ ಕತ್ತರಿಸಿ,ಬೆನ್ನು, ಕಾಲು ಮೂಳೆಗಳನ್ನು ಮುರಿದು ಕ್ರೂರವಾಗಿ ಕೊಲೆ ಮಾಡಿರುವ ಅಮಾನವೀಯ ಘೋರ ಕೃತ್ಯವನ್ನು ಸಂಘಟನೆಗಳು ಉಗ್ರವಾಗಿ ಖಂಡಿಸುತ್ತವೆ.
ಮಹಿಳೆ ಮೇಲಿನ ದೌರ್ಜನ್ಯ ನಿಯಂತ್ರ ಕಾಯಿದೆ, ಪೋಕ್ಷೋ ಕಾಯಿದೆ, ಪರಿಣಾಮಕಾರಿಯಾಗಿ ಜಾರಿಯಲ್ಲಿದ್ದರೂ ಕಾನೂನನ್ನು ಲೆಕ್ಕಿಸದೆ ರಾಜಾರೋಷವಾಗಿ, ನಿರ್ಭಯವಾಗಿ ಅತ್ಯಾಚಾರ ಹತ್ಯೆ ಮಾಡುವ ದುಷ್ಕರ್ಮಿಗಳ ಪರ ನ್ಯಾಯಾವಾದಿಗಳು ವಕಾಲತ್ತು ವಹಿಸಬಾರದಂದು ಸಂಘಟನೆಗಳ ಮನವಿ ಮಾಡಿಕೊಳ್ಳುತ್ತವೆ. ಮಾನವೀಯ ಮತ್ತು ಮನಿಸತ್ವಕ್ಕೆ ಬೆಲೆ ನೀಡದೆ ಪೈಶಾಚಿಕ ಕೃತ್ಯವೆಸಗುವ ವ್ಯಕ್ತಿಗಳನ್ನು ಯಾವುದೇ ಕ್ಷಮಾಪಣೆ ನೀಡದೆ ಗಲ್ಲಿಗೇರಿಸುವಂತಹ ನಿಯಮವನ್ನು ಜಾರಿಗೊಳಿಸಬೇಕಿದೆ.
ದಸಂಸ ಜಿಲ್ಲಾ ಸಂಚಾಲಕ ಡಾ.ಆಲಗೂಡು ಎಸ್. ಚಂದ್ರಶೇಖರ್, ಜನಜಾಗೃತಿ ವೇದಿಕೆ ಜಿಲ್ಲಾ ಸದಸ್ಯ ಕೆ.ಎನ್.ಪ್ರಭುಸ್ವಾಮಿ, ಮು.ಯೂ.ವಾ.ಫೆಡರೇಶನ್ ಜಿಲ್ಲಾಧ್ಯಕ್ಷ ಅಮ್ ಜದ್ ಖಾನ್, ಕರ್ನಾಟಕ ರಾಜ್ಯ ರೈತ ಸಂಘ ಸಂಚಾಲಕ ಕಳ್ಳೀಪುರ ಮಹದೇವಸ್ವಾಮಿ ಮಾತನಾಡಿ ಅತ್ಯಾಚಾರ ಕೊಳಗಾಗಿ ಸಾವನಪ್ಪಿದ ಯುವತಿ ಪರ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವ ಭೀಮ್ ಆರ್ಮಿ ಸೇನೆಯ ಮುಖ್ಯಸ್ಥ ಚಂದ್ರಶೇಖರ್ ಅಝಾದ್ ಸಹಿತ ಐನೂರು ವ್ಯಕ್ತಿಗಳ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿರುವುದನ್ನು ಕೂಡಲೇ ರದ್ದು ಪಡಿಸಿ ರಾತ್ರೋರಾತ್ರಿ ಮನೀಷಾಳ ದೇಹವನ್ನು ಸುಟ್ಟು ಹಾಕಿ ಸತ್ಯ ಸಾಕ್ಷಿ ನಾಶ ಮಾಡಿರುವ ಪೊಲೀಸರ ಗೂಂಡಾ ಕ್ರಮವನ್ನು ಮತ್ತು ಕಾನೂನು ವಿರೋಧಿ ನಡವಳಿಕೆಯನ್ನು ಖಂಡಿಸುತ್ತೇವೆಂದರು.
ಈ ಕೃತ್ಯದಲ್ಲಿ ಭಾಗಿಯಾಗಿರುವ ಪೊಲೀಸರನ್ನು ಕೆಲಸದಿಂದ ವಜಾ ಮಾಡಿ ದೇಶದಿಂದ ಗಡಿಪಾರು ಮಾಡಬೇಕೆಂದು ಒತ್ತಾಯಿಸುತ್ತ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ವತ್ತರ ಕಳವಳ ವ್ಯಕ್ತಪಡಿಸಿದ್ದು ಉತ್ತರ ಪ್ರದೇಶ ಆಡಳಿತ ಸರ್ಕಾರ ಪ್ರಸ್ತುತ ಅತ್ಯಾಚಾರ, ಕೊಲೆಗಡುಕ ಹಾಗೂ ಸಂವಿಧಾನ ನಾಶ ಪಡಿಸುವಂತಹ ಸಾಮ್ರಾಜ್ಯವಾಗಿದ್ದು ಮತ್ತು ಸಂಪೂರ್ಣ ಕಾನೂನು ಸುವ್ಯವಸ್ಥೆ ಹಾಳಾಗಿದೆ.
ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಶೋಷಿತ ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಅತ್ಯಾಚಾರ ಹತ್ಯೆ ನಿಯಂತ್ರಿಸುವಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ಜನಸಾಮಾನ್ಯರು ಭಯದ ವಾತಾವರಣದಲ್ಲಿ ಬದುಕಬೇಕಾದಂದಹ ಪರಿಸ್ಥಿತಿ ಇರುವ ಹಿನ್ನಲೆಯಲ್ಲಿ ರಾಷ್ಟ್ರ ಪತಿಗಳು ಉತ್ತರ ಪ್ರದೇಶದ ಬಿಜೆಪಿ ಸರ್ಕಾರವನ್ನು ವಜಾ ಮಾಡಿ ಪ್ರಜಾಪ್ರಭುತ್ವ ಉಳಿವು ಮತ್ತು ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಮನವಿ ಮಾಡುತ್ತ ಮನವಿ ಪತ್ರವನ್ನು ತಹಶಿಲ್ದಾರ್ ಡಿ.ನಾಗೇಶ್ ರವರೆಗೆ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಕೆ.ಜಿ.ಶಿವಪ್ರಸಾದ್, ಪ್ರದೀಪ್, ರಾಜು, ಗಿರೀಶ್, ಮರಿಸ್ವಾಮಿ , ಎಸ್.ಕೃಷ್ಣ ಮೂರ್ತಿ, ಸ್ವಾಮಿರಾಜ್, ಮನೋಜ್ ಕುಮಾರ್, ರಾಜಪ್ಪ, ಪ್ರಭಾಕರ್, ಕುಮಾರ್, ಪರಶುರಾಮ್, ಜಯಣ್ಣ, ದೇವರಾಜು, ಚಂದ್ರಪ್ಪ, ಗೋವಿಂದ ರಾಜು, ಗೋಪಿಕೃಷ್ಣ, ಪುಟ್ಟರಾಜು, ಚಿನ್ನಸ್ವಾಮಿ, ಸಿದ್ದರಾಜು, ಪುಟ್ಟಸ್ವಾಮಿ, ಮಹದೇವಸ್ವಾಮಿ, ಕೇಶವ ಮೂರ್ತಿ, ರಾಜುಗೌಡ ಹಾಗೂ ಇತರರು ಭಾಗವಹಿಸಿದ್ದರು.
ವರದಿ : ಎಂ. ನಾಗೇಂದ್ರ ಕುಮಾರ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


