ದಿನದ ಸುದ್ದಿ
ಪೊಲೀಸರಿಂದ ಕಾನೂನಿನ ಅತ್ಯಾಚಾರ
- ದಿನೇಶ್ ಅಮಿನ್ ಮಟ್ಟು
ಹತ್ರಾಸ್ ನಲ್ಲಿ ಮೇಲ್ಜಾತಿಯ ದುರುಳರಿಂದ ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಯುವತಿಯ ಅಂತ್ಯಕ್ರಿಯೆಯನ್ನು ಪೊಲೀಸರು ತಂದೆ-ತಾಯಿಗೆ ಮಗಳ ಮುಖವನ್ನೂ ನೋಡಲು ಅವಕಾಶ ನೀಡದೆ ಅವಸರದಲ್ಲಿ ನಡುರಾತ್ರಿಯೇ ಅಂತ್ಯಕ್ರಿಯೆಯನ್ನು ಮುಗಿಸಿದರು. ಯಾಕೆ?
ನಮ್ಮ ಭವ್ಯಭಾರತದಲ್ಲಿ ಅತ್ಯಾಚಾರದ ನೂರು ಪ್ರಕರಣಗಳಲ್ಲಿ ಕೇವಲ 27 ಪ್ರಕರಣಗಳಲ್ಲಿ ಮಾತ್ರ ಅಪರಾಧಿಗಳಿಗೆ ಶಿಕ್ಷೆಯಾಗುತ್ತದೆ. 2018ರಲ್ಲಿ ಪೊಲೀಸ್ ಇಲಾಖೆಯಲ್ಲಿ ದಾಖಲಾಗಿದ್ದು 1,56,327 ರೇಪ್ ಪ್ರಕರಣಗಳು.
ಅವುಗಳಲ್ಲಿ ವಿಚಾರಣೆ ಪೂರ್ಣಗೊಂಡ ಪ್ರಕರಣಗಳು 17,313 ಮಾತ್ರ. ಇವುಗಳಲ್ಲಿ 11,133 ಪ್ರಕರಣಗಳ ಆರೋಪ ಪಟ್ಟಿ ಸಲ್ಲಿಕೆಯಾಗುವ ಮೊದಲೇ ಆರೋಪಿಗಳು ಬಿಡುಗಡೆಯಾಗಿದ್ದರು, 1472 ಪ್ರಕರಣಗಳಲ್ಲಿ ಆರೋಪಿಗಳು ವಿಚಾರಣೆ ನಡೆದು ದೋಷಮುಕ್ತರಾಗಿದ್ದರು.
ಆರೋಪಿಗಳು ದೋಷಮುಕ್ತರಾಗಲು ಒಂದು ಕಾರಣ ಏನೆನ್ನುವುದು ಬುಧವಾರ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ನೋಡಿದವರಿಗೆ ಮನವರಿಕೆಯಾಗಿರಬಹುದು. ಇನ್ನೊಂದು ಪ್ರಮುಖ ಕಾರಣ ನ್ಯಾಯಾಲಯಕ್ಕೆ ಪೊಲೀಸರು ಸಲ್ಲಿಸುವ ಆರೋಪಪಟ್ಟಿಯಲ್ಲಿನ ದೋಷಗಳು.
ಅತ್ಯಾಚಾರದಂತಹ ಪ್ರಕರಣಗಳಲ್ಲಿ ಶೇಕಡಾ 90ರಷ್ಟು ಪ್ರಕರಣಗಳು ಪೊಲೀಸ್ ಇಲಾಖೆಯಲ್ಲಿ ಎಫ್ ಐ ಆರ್ ದಾಖಲಾಗಿ ಆರೋಪ ಪಟ್ಟಿ ಸಿದ್ದಗೊಂಡು ನ್ಯಾಯಾಲಯಕ್ಕೆ ಸಲ್ಲಿಸುವ ಹಂತದಲ್ಲಿ ಸತ್ತು ಹೋಗಿರುತ್ತವೆ.
ಸರ್ಕಾರ ವಿಶೇಷ ಆಸಕ್ತಿ ವಹಿಸಿದರೆ, ಪಬ್ಲಿಕ್ ಪ್ರಾಸಿಕ್ಯೂಟರ್ ಗಳೇನಾದರೂ ಕಸಬುದಾರ ವಕೀಲರಂತೆ ವೃತ್ತಿನಿಷ್ಠೆಯಿಂದ ಕಾರ್ಯನಿರ್ವಹಿಸಿದರೆ ಸತ್ತುಹೋಗಿರುವ ಒಂದಷ್ಟು ಪ್ರಕರಣಗಳಿಗೆ ಜೀವ ತುಂಬಬಹುದು. ಅವರೂ ವ್ಯವಸ್ಥೆಯ ಜೊತೆ ಷಾಮೀಲಾಗಿದ್ದರೆ ಆತನೂ ಸೇರ್ಕೊಂಡು ಉಳಿದ ಪ್ರಕರಣಗಳನ್ನು ಮುಗಿಸಿಬಿಡುತ್ತಾರೆ.
ಅಪರಾಧಿಗಳನ್ನು ರಕ್ಷಿಸಲು ಪೊಲೀಸರು ನಿರ್ಧರಿಸಿದರೆ ಅವರು ಮೊದಲು ಸಾಕ್ಷ್ಯ ನಾಶಕ್ಕೆ ಇಳಿಯುತ್ತಾರೆ. ಹತ್ರಾಸ್ ನಲ್ಲಿ ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ದಲಿತ ಯುವತಿಯ ಪ್ರಕರಣವನ್ನು ಸೂಕ್ಷ್ಮವಾಗಿ ಗಮನಿಸಿದರೆ ಇದು ಸ್ಪಷ್ಟವಾಗುತ್ತದೆ.
ಸೆಪ್ಟೆಂಬರ್ ಹದಿನಾಲ್ಕರಂದು ತನ್ನ ಮನೆ ಸಮೀಪದ ಕಾಡಲ್ಲಿ ಈ ದಲಿತ ಯುವತಿಯ ಮೇಲೆ ಊರಿನ ಮೇಲ್ಜಾತಿಯ ನಾಲ್ವರು ದುಷ್ಕರ್ಮಿಗಳು ಅತ್ಯಾಚಾರ ಎಸಗುತ್ತಾರೆ.
ಅಲ್ಲಿಂದಲೇ ಸಾಕ್ಷ್ಯ ನಾಶದ ಕೆಲಸ ಪ್ರಾರಂಭವಾಗುತ್ತದೆ. ಆ ಯುವತಿ ಒಂದೆರಡು ವರ್ಷ ಮಾತ್ರ ಶಾಲೆಗೆ ಹೋಗಿದ್ದಳಂತೆ. ಓದಲು ಬರೆಯಲು ಗೊತ್ತಿದ್ದ ಹಾಗೆ ಕಾಣುತ್ತಿಲ್ಲ. ಇದರಿಂದಾಗಿ ಮೌಖಿಕ ಹೇಳಿಕೆಯನ್ನಷ್ಟೇ ನೀಡಲು ಸಾಧ್ಯವಿತ್ತು. ಅದಕ್ಕಾಗಿ ನಾಲಗೆಯನ್ನು ಕತ್ತರಿಸಲಾಗಿತ್ತು.
ಅಲ್ಲಿಂದ ಪೊಲೀಸರ ಪ್ರವೇಶವಾಗುತ್ತದೆ. ಅಷ್ಟರಲ್ಲಿ ಯುವತಿ ಅಪರಾಧಿಗಳ ಹೆಸರನ್ನು ಹೇಳಿರುತ್ತಾಳೆ, ನಾಲ್ವರ ಬಂಧನವೂ ಆಗಿರುತ್ತದೆ. ಮಾಧ್ಯಮಗಳಲ್ಲಿ ವರದಿ ಬರತೊಡಗುತ್ತದೆ. ಇದೇನು ಕೈಮೀರಿ ಹೋಗುತ್ತಿದೆ ಎಂದನಿಸಿದಾಗ ಹೆತ್ತವರಿಗೆ ಮನವರಿಕೆ ಮಾಡಿ ಸ್ಥಳೀಯ ಆಸ್ಪತ್ರೆಯಲ್ಲಿದ್ದ ಆಕೆಯನ್ನು ದಿಡೀರನೆ ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಗೆ ಸಾಗಿಸುತ್ತಾರೆ. ಹೋಗುವ ಮೊದಲು ಆಕೆ ತಾಯಿಯ ಜೊತೆ, ಹುಷಾರಾಗಿ ಬರ್ತೇನೆ ಎಂದು ಹೇಳಿ ಹೋಗಿದ್ದಳಂತೆ.
ಹದಿನಾಲ್ಕು ದಿನ ಆಸ್ಪತ್ರೆಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದ ಯುವತಿ ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆ ಸೇರಿದ ಹದಿನೈದು ಗಂಟೆಗಳಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆಯುತ್ತಾಳೆ. ತಕ್ಷಣ ಹತ್ರಾಸ್ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಸ್ಪತ್ರೆಗೆ ಧಾವಿಸುತ್ತಾರೆ. ಹೆತ್ತವರಿಗೆ ಸಾವಿನ ಸುದ್ದಿ ತಿಳಿಸಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಅದರ ನಂತರ ಹೆತ್ತವರನ್ನು ದೂರ ಇಟ್ಟು ಯುವತಿಯ ಅಂತ್ಯಕ್ರಿಯೆ ನಡೆಸಲಾಗುತ್ತದೆ.
ಗಮನಿಸಬೇಕಾದ ಸಂಗತಿ ಎಂದರೆ ಇಲ್ಲಿಯ ವರೆಗೆ ಪೊಲೀಸರು ಹೆತ್ತವರಿಗೆ ಯುವತಿಯ ಮೃತದೇಹದ ಮರಣೋತ್ತರ ಪರೀಕ್ಷೆಯ ವರದಿಯನ್ನು ನೀಡಿಲ್ಲ. ಇಷ್ಟೆಲ್ಲ ತಂತ್ರ-ಕುತಂತ್ರಗಳನ್ನು ನಡೆಸಿದವರು ತ ಮರಣೋತ್ತರ ಪರೀಕ್ಷೆಯಲ್ಲಿಯೂ ಕೈಯಾಡಿಸಿರುವ ಸಾಧ್ಯತೆಗಳು ಖಂಡಿತ ಇದೆ. ಸಂಶಯಗೊಂಡು ಹೆತ್ತವರು ಮರು ಮರಣೋತ್ತರ ಪರೀಕ್ಷೆಗೆ ಒತ್ತಾಯಿಸಬಾರದೆಂದೇ ಅವಸರದಲ್ಲಿ ಅಂತ್ಯಕ್ರಿಯೆ ನಡೆಸಿ ಅಳಿದುಳಿದ ಸಾಕ್ಷ್ಯಗಳನ್ನು ನಾಶ ಮಾಡಲಾಗಿದೆ.
ಸಾಮಾನ್ಯವಾಗಿ ಮೆಡಿಕೋ-ಲೀಗಲ್ ಪ್ರಕರಣಗಳಲ್ಲಿ ಮೃತದೇಹದ ಅಂತ್ಯಕ್ರಿಯೆಯನ್ನು ಹೇಗೆ ಮಾಡಬೇಕೆಂಬುದನ್ನು ಹೆತ್ತವರು/ಪೋಷಕರು ನಿರ್ಧರಿಸಬೇಕು. ಈ ಪ್ರಕರಣದಲ್ಲಿ ಮರಣೋತ್ತರ ಪರೀಕ್ಷೆಗೆ ಮೊದಲು ಪೊಲೀಸರು ಒಂದಷ್ಟು ಕಾಗದಪತ್ರಗಳಿಗೆ ಯುವತಿಯ ತಂದೆಯ ಸಹಿಹಾಕಿಸಿದ್ದಾರೆ.
ಅನಕ್ಷರಸ್ಥ ತಂದೆ ಹೇಳಿಕೆಯನ್ನು ಖಂಡಿತ ಓದಿರುವುದಿಲ್ಲ, ಪೊಲೀಸರು ಓದಿ ಹೇಳಿದ್ದನ್ನು ಒಪ್ಪಿಕೊಂಡಿರಬಹುದು. ಅದರಲ್ಲಿ ಮಗಳ ಮೃತದೇಹವನ್ನು ಸುಡಲು ಒಪ್ಪಿಗೆ ನೀಡಿದ್ದ ಪತ್ರಕ್ಕೂ ಅವರು ಸಹಿಹಾಕಿರಬಹುದು. ಅದನ್ನೇ ಪೊಲೀಸರು ಈಗ ‘’ ತಂದೆಯ ಒಪ್ಪಿಗೆಯ ಮೇಲೆಯೇ ಮೃತದೇಹದ ಅಂತ್ಯಕ್ರಿಯೆ ನಡೆಸಲಾಗಿದೆ’ ಎಂದು ಹೇಳುತ್ತಿರುವುದು.
ಈಗಾಗಲೇ ಪೊಲೀಸರ ಹೇಳಿಕೆಗಳ ಧಾಟಿ ಬದಲಾಗಿದೆ. ಮೊದಲನೆಯದಾಗಿ ಯುವತಿಯ ಮೇಲೆ ರೇಪ್ ನಡೆದಿಲ್ಲ, ರೇಪ್ ಗೆ ಪ್ರಯತ್ನಿಸಲಾಗಿದೆ ಎಂದು ಹೇಳತೊಡಗಿದ್ದಾರೆ, ಇದರ ಜೊತೆಗೆ ಯುವತಿಯ ನಾಲಗೆ ಕತ್ತರಿಸಲಾಗಿಲ್ಲ ಎಂದೂ ಹೇಳತೊಡಗಿದ್ದಾರೆ. ಪೊಲೀಸರು ನಾಳೆ ಅಧಿಕೃತವಾಗಿ ಈ ಹೇಳಿಕೆ ನೀಡಿದರೆ ಇದು ಸುಳ್ಳೆಂದು ಸಾಬೀತುಪಡಿಸುವುದು ಹೇಗೆ? ಮೃತದೇಹ ಸುಟ್ಟು ಬೂದಿಯಾಗಿದೆ.
ಇದನ್ನೇ “ ಪೊಲೀಸರಿಂದ ಕಾನೂನಿನ ಅತ್ಯಾಚಾರ” ಎಂದು ಹೇಳಲಾಗುತ್ತಿದೆ.ಯುಪಿ ಪೊಲೀಸರು ಈ ಕಲೆಯಲ್ಲಿ ವರ್ಷದಿಂದ ಪಳಗಿ ಬಿಟ್ಟಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ