ದಿನದ ಸುದ್ದಿ
ನನ್ನ ಅಕ್ಕನನ್ನು ಎರಡು ಬಾರಿ ಸಾಯಿಸಿದರು : ಅತ್ಯಾಚಾರ ಸಂತ್ರಸ್ತೆ ಮನಿಷಾಳ ತಮ್ಮನ ನೋವಿನ ನುಡಿ
ಸುದ್ದಿದಿನ ಡೆಸ್ಕ್ : ‘’ ನನ್ನ ಅಕ್ಕನನ್ನು ಎರಡು ಬಾರಿ ಸಾಯಿಸಿದರು, ಮೊದಲು ದುಷ್ಕರ್ಮಿಗಳು ರೇಪ್ ಮಾಡಿ ಸಾಯಿಸಿದರು, ಘನತೆಯಿಂದ ಆಕೆಯ ಅಂತ್ಯಸಂಸ್ಕಾರಕ್ಕೆ ಅವಕಾಶವನ್ನು ನೀಡದೆ ಸರ್ಕಾರ ಆಕೆಯನ್ನು ಮತ್ತೊಮ್ಮೆ ಸಾಯಿಸಿತು” ಎಂದು ಹಾಥರಸ್ ನಲ್ಲಿ ಅತ್ಯಾಚಾರಕ್ಕೀಡಾಗಿ ಸಾವಿಗೀಡಾದ ಯುವತಿಯ ತಮ್ಮ ಹೇಳಿದ್ದಾನೆ.
ಘಟನೆ ವಿವರ
ಅತ್ಯಾಚಾರದ ನಂತರ ಕತ್ತುಹಿಸುಕಿ, ನಾಲಗೆ ಕತ್ತರಿಸಿ ಸಾಯಿಸಲು ಪ್ರಯತ್ನಿಸಿದ ನಂತರ ಬಿಟ್ಟು ಓಡಿಹೋಗಿದ್ದ ಕಾರಣ ಆಕೆಯ ಗೋಣು ಮುರಿದಿತ್ತು, ಬೆನ್ನುಮೂಳೆಗೆ ಹಾನಿಯಾಗಿತ್ತು. ಅರೆಪ್ರಜ್ಞೆಯಲ್ಲಿದ್ದ ಆಕೆಯನ್ನು ಮನೆಗೆ ಹೊತ್ತುತರುತ್ತಾರೆ. ಅಲ್ಲಿಂದ ಮೋಟಾರ್ ಸೈಕಲ್ ನಲ್ಲಿ ಕೂರಿಸಿ ಸಮೀಪದ ಠಾಣೆಗೆ ಕರೆದೊಯ್ದು ಕಲ್ಲುಚಪ್ಪಡಿ ಮೇಲೆ ಮಲಗಿಸುತ್ತಾರೆ.
ಪೊಲೀಸರು ದೂರು ದಾಖಲಿಸಿಕೊಳ್ಳಲು ನೂರೆಂಟು ಪ್ರಶ್ನೆ ಕೇಳಿ ಸತಾಯಿಸಿ ಸಮಯ ಕೊಲ್ಲುತ್ತಾರೆ. ಅಲ್ಲಿಂದ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಅಟೋ ರಿಕ್ಷಾದಲ್ಲಿ ಕಳಿಸುತ್ತಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನಿರಾಕರಿಸಿದ ಕಾರಣ ಆಕೆಯನ್ನು ಆಲಿಗಡ್ ಗೆ ಕೊಂಡೊಯ್ಯಲು ಕುಟುಂಬದ ಸದಸ್ಯರು ಅಂಬ್ಯುಲೆನ್ಸ್ ಗೆ ಪೋನ್ ಮಾಡ್ತಾರೆ. ಎರಡು ಗಂಟೆ ನಂತರ ಅಂಬ್ಯುಲೆನ್ಸ್ ಬರುತ್ತದೆ. ಅಲ್ಲಿಂದ ಆಲಿಗಡ್ ಆಸ್ಪತ್ರೆಗೆ ಸಾಗಿಸುತ್ತಾರೆ. ಅಲ್ಲಿ ಹದಿನಾಲ್ಕು ದಿನಗಳ ಕಾಲ ಚಿಕಿತ್ಸೆ ನೀಡಿ ಕೊನೆಗೆ ದೆಹಲಿ ಸಫ್ದರ್ ಜಂಗ್ ಆಸ್ಪತ್ರೆಗೆ ಕೊಂಡೊಯ್ಯುತ್ತಾರೆ. ಅಲ್ಲಿ 24 ಗಂಟೆಗಳ ಕಳೆಯುವುದರಲ್ಲಿ ಯುವತಿ ಪ್ರಾಣ ಬಿಡುತ್ತಾಳೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಶಿವರಾಮ ಕಾರಂತ ಬಡಾವಣೆಗೆ ಮುಹೂರ್ತ: ಆ.31ಕ್ಕೆ 18 ಸಾವಿರ ನಿವೇಶನ ಹಂಚಿಕೆ?
ಸುದ್ದಿದಿನ,ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಹತ್ವಾಕಾಂಕ್ಷೆಯ ಡಾ. ಕೆ. ಶಿವರಾಮ ಕಾರಂತ ಬಡಾವಣೆಯ ನಿವೇಶನ ಹಂಚಿಕೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ದೀರ್ಘಕಾಲದ ಕಾನೂನು ವಿವಾದಗಳ ಬಳಿಕ ಹೈಕೋರ್ಟ್ ಅನುಮತಿ ದೊರೆತಿರುವ ಹಿನ್ನೆಲೆಯಲ್ಲಿ, ಆ.31ರಂದು ಭೂಮಿ ನೀಡಿದ ರೈತರು ಹಾಗೂ ಭೂಮಾಲೀಕರಿಗೆ 18 ಸಾವಿರ ನಿವೇಶನ ಹಂಚಿಕೆ ಮಾಡುವ ಮೂಲಕ ಪ್ರಕ್ರಿಯೆಗೆ ಸಾಂಕೇತಿಕ ಚಾಲನೆ ನೀಡುವ ಸಾಧ್ಯತೆ ಇದೆ.
ಹೈಲೈಟ್ಸ್: |
|
ಕಾನೂನು ತೊಡಕು ನಿವಾರಣೆ
ಉತ್ತರ ಬೆಂಗಳೂರಿನಲ್ಲಿ ರೂಪುಗೊಂಡಿರುವ ಡಾ. ಕೆ. ಶಿವರಾಮ ಕಾರಂತ ಬಡಾವಣೆ ಹಲವು ವರ್ಷಗಳಿಂದ ಕಾನೂನು ವಿವಾದಗಳಿಂದಾಗಿ ಸ್ಥಗಿತಗೊಂಡಿತ್ತು. ಇದೀಗ ಹೈಕೋರ್ಟ್ ನಿವೇಶನ ಹಂಚಿಕೆ ಹಾಗೂ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸುವ ಪ್ರಕ್ರಿಯೆಗೆ ಹಸಿರು ನಿಶಾನೆ ತೋರಿಸಿರುವ ಹಿನ್ನೆಲೆಯಲ್ಲಿ ಬಡಾವಣೆಗೆ ಹೊಸ ಚೈತನ್ಯ ಬಂದಿದೆ.
ಸುಮಾರು 3,069 ಎಕರೆ ಪ್ರದೇಶದಲ್ಲಿ, ಆವಲಹಳ್ಳಿ, ರಾಮಗೊಂಡನಹಳ್ಳಿ, ಜಾರಕಬಂಡೆ ಕಾವಲ್ ಸೇರಿದಂತೆ 17 ಹಳ್ಳಿಗಳನ್ನು ಒಳಗೊಂಡಿರುವ ಈ ಬಡಾವಣೆ ದಶಕಕ್ಕೂ ಹೆಚ್ಚು ಕಾಲ ವಿವಿಧ ಕಾನೂನು ತೊಡಕುಗಳನ್ನು ಎದುರಿಸಿತ್ತು. ಸಮಸ್ಯೆ ಪರಿಹಾರಕ್ಕಾಗಿ ಸುಪ್ರೀಂ ಕೋರ್ಟ್ ವಿಶೇಷ ಮೂವರು ಸದಸ್ಯರ ಸಮಿತಿಯನ್ನೂ ರಚಿಸಿತ್ತು.
http://Visit : www.suddidina.com
3,200 ಭೂಮಾಲೀಕರಿಗೆ 18 ಸಾವಿರ ಸೈಟ್
ಬಡಾವಣೆ ನಿರ್ಮಾಣಕ್ಕಾಗಿ ಸುಮಾರು 3,200 ರೈತರು ಮತ್ತು ಭೂಮಾಲೀಕರು ತಮ್ಮ ಜಮೀನು ನೀಡಿದ್ದಾರೆ. ಅವರ ತ್ಯಾಗಕ್ಕೆ ಪ್ರತಿಫಲವಾಗಿ ಸುಮಾರು 18 ಸಾವಿರ ನಿವೇಶನಗಳನ್ನು ಮೀಸಲಿಡಲಾಗಿದೆ. ಒಟ್ಟಾರೆ ಬಡಾವಣೆಯಲ್ಲಿ ವಿವಿಧ ಅಳತೆಯ 34,992 ನಿವೇಶನಗಳನ್ನು ರಚಿಸಲಾಗಿದೆ ಎಂದು ಬಿಡಿಎ ಮೂಲಗಳು ತಿಳಿಸಿವೆ.
ಆ.31ರಂದು ನಡೆಯುವ ಸಾಧ್ಯತೆಯಿರುವ ಕಾರ್ಯಕ್ರಮದಲ್ಲಿ 600ರಿಂದ 1,000 ಮಂದಿ ಭೂಮಾಲೀಕರಿಗೆ ಮುಖ್ಯಮಂತ್ರಿಗಳಿಂದ ಸಾಂಕೇತಿಕವಾಗಿ ನಿವೇಶನ ಹಂಚಿಕೆ ಮಾಡುವ ನಿರೀಕ್ಷೆಯಿದೆ. ಉಳಿದ ಫಲಾನುಭವಿಗಳಿಗೆ ಪ್ರತ್ಯೇಕ ಕೌಂಟರ್ಗಳ ಮೂಲಕ ಹಂಚಿಕೆ ಮಾಡುವ ವ್ಯವಸ್ಥೆ ಕಲ್ಪಿಸುವ ಉದ್ದೇಶವಿದೆ.
ಸಾರ್ವಜನಿಕರಿಗೂ ಅರ್ಜಿ ಸಲ್ಲಿಕೆಗೆ ಅವಕಾಶ
ಭೂಮಾಲೀಕರಿಗೆ ನಿವೇಶನ ಹಂಚಿಕೆಯ ಜೊತೆಗೆ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸುವ ಪ್ರಕ್ರಿಯೆಗೂ ಚಾಲನೆ ನೀಡಲು ಬಿಡಿಎ ಮುಂದಾಗಿದೆ. ಇದರಿಂದ ಹಲವು ವರ್ಷಗಳಿಂದ ಕಾರಂತ ಬಡಾವಣೆಯಲ್ಲಿ ನಿವೇಶನ ಪಡೆಯುವ ನಿರೀಕ್ಷೆಯಲ್ಲಿದ್ದ ಸಾರ್ವಜನಿಕರಿಗೂ ಅವಕಾಶ ದೊರೆಯಲಿದೆ.
ಚದರ ಅಡಿಗೆ ₹6,000 ದರ
ಕಾರಂತ ಬಡಾವಣೆಯ ವಸತಿ ನಿವೇಶನಗಳ ಬೆಲೆಯನ್ನು ಚದರ ಅಡಿಗೆ ₹6,000 ಎಂದು ನಿಗದಿಪಡಿಸಲಾಗಿದೆ. ಮೂರು ವರ್ಷಗಳ ಹಿಂದೆ ಚದರ ಅಡಿಗೆ ₹5,000 ದರ ಪ್ರಸ್ತಾಪಿಸಲಾಗಿತ್ತು. ಇದೀಗ ₹1,000 ಹೆಚ್ಚಳ ಮಾಡಲಾಗಿದೆ.
ಪರಿಷ್ಕೃತ ದರದಂತೆ 30×40 ಅಡಿ, ಅಂದರೆ 1,200 ಚದರ ಅಡಿ ನಿವೇಶನಕ್ಕೆ ಸುಮಾರು ₹72 ಲಕ್ಷ ವೆಚ್ಚವಾಗಲಿದೆ.
ಹಲವು ವರ್ಷಗಳ ನಿರೀಕ್ಷೆಗೆ ತೆರೆ?
ನ್ಯಾಯಾಲಯದ ತೀರ್ಪು ಹಾಗೂ ಆಡಳಿತಾತ್ಮಕ ಪ್ರಕ್ರಿಯೆಗಳು ವೇಗ ಪಡೆದಿರುವ ಹಿನ್ನೆಲೆಯಲ್ಲಿ ಕಾರಂತ ಬಡಾವಣೆಯ ನಿವೇಶನ ಹಂಚಿಕೆ ಇದೀಗ ನಿರ್ಣಾಯಕ ಹಂತ ತಲುಪಿದೆ. ಆ.31ರ ಕಾರ್ಯಕ್ರಮ ಯಶಸ್ವಿಯಾಗಿ ನಡೆದರೆ, ಭೂಮಿ ನೀಡಿದ ಸಾವಿರಾರು ಕುಟುಂಬಗಳ ಹಲವು ವರ್ಷಗಳ ನಿರೀಕ್ಷೆಗೆ ತೆರೆ ಬೀಳುವುದರ ಜೊತೆಗೆ ಸಾರ್ವಜನಿಕರಿಗೂ ನಿವೇಶನ ಪಡೆಯುವ ದಾರಿ ಮತ್ತಷ್ಟು ಸ್ಪಷ್ಟವಾಗಲಿದೆ.

ದಿನದ ಸುದ್ದಿ
ಗೃಹಜ್ಯೋತಿ ಮರುಸಮೀಕ್ಷೆಗೆ ಕೌಂಟ್ಡೌನ್: 1.17 ಲಕ್ಷ ಫಲಾನುಭವಿಗಳಿಗೆ ಇನ್ನೂ 5 ದಿನ ಮಾತ್ರ!
ಸುದ್ದಿದಿನ, ಮೈಸೂರು: ನೈಜ ಫಲಾನುಭವಿಗಳಿಗೆ ಮಾತ್ರ ಗೃಹಜ್ಯೋತಿ ಯೋಜನೆಯ ಸಬ್ಸಿಡಿ ತಲುಪಿಸುವ ಉದ್ದೇಶದಿಂದ ರಾಜ್ಯಾದ್ಯಂತ ನಡೆಯುತ್ತಿರುವ ಮರುಸಮೀಕ್ಷೆ ಅಂತಿಮ ಹಂತಕ್ಕೆ ಬಂದಿದೆ. ಮೈಸೂರು ಜಿಲ್ಲೆಯಲ್ಲಿ ಶೇ.84ರಷ್ಟು ಪರಿಶೀಲನೆ ಪೂರ್ಣಗೊಂಡಿದ್ದು, ಇನ್ನೂ 1.17 ಲಕ್ಷ ಫಲಾನುಭವಿಗಳು ದಾಖಲೆಗಳೊಂದಿಗೆ ಪರಿಶೀಲನೆಗೆ ಒಳಪಡಬೇಕಿದೆ.
ಗೃಹಜ್ಯೋತಿ ಮರುಸಮೀಕ್ಷೆಗೆ ಅಂತಿಮ ಗಡುವು ಸಮೀಪ
200 ಯೂನಿಟ್ಗಿಂತ ಕಡಿಮೆ ವಿದ್ಯುತ್ ಬಳಸುವ ಅರ್ಹ ಗೃಹ ಬಳಕೆದಾರರಿಗೆ ವಿದ್ಯುತ್ ಬಿಲ್ ಭಾರ ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಗೃಹಜ್ಯೋತಿ ಯೋಜನೆ ಜಾರಿಗೊಳಿಸಿದೆ. ಆದರೆ, ಯೋಜನೆಗೆ ಅನರ್ಹರಾಗಿದ್ದರೂ ಸೌಲಭ್ಯ ಪಡೆಯುತ್ತಿರುವವರು ಅಥವಾ ತಪ್ಪಾಗಿ ನೋಂದಣಿಯಾಗಿರುವ ಸಂಪರ್ಕಗಳನ್ನು ಪತ್ತೆಹಚ್ಚಲು ಸರ್ಕಾರ ಮರುಸಮೀಕ್ಷೆ ಕೈಗೊಂಡಿದೆ.
2026ರ ಜುಲೈ 1ರಿಂದ ಮನೆ-ಮನೆಗೆ ತೆರಳಿ ಪರಿಶೀಲನೆ ಆರಂಭಿಸಲಾಗಿದ್ದು, ಎರಡು ತಿಂಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಅದರಂತೆ ಆಗಸ್ಟ್ 31ಕ್ಕೆ ಮರುಸಮೀಕ್ಷೆಯ ಗಡುವು ಮುಕ್ತಾಯಗೊಳ್ಳಲಿದೆ.
ಮೈಸೂರಿನಲ್ಲಿ ಶೇ.84ರಷ್ಟು ಪರಿಶೀಲನೆ ಪೂರ್ಣ
ಮೈಸೂರು ಜಿಲ್ಲೆಯಲ್ಲಿ ಒಟ್ಟು 7.65 ಲಕ್ಷ ಗೃಹಜ್ಯೋತಿ ಫಲಾನುಭವಿಗಳಿದ್ದು, ಆಗಸ್ಟ್ 24ರ ಅಂತ್ಯದ ವೇಳೆಗೆ 6.48 ಲಕ್ಷ ಮಂದಿಯ ಮರುಪರಿಶೀಲನೆ ಪೂರ್ಣಗೊಂಡಿದೆ. ಅಂದರೆ ಶೇ.84ರಷ್ಟು ಪ್ರಕ್ರಿಯೆ ಮುಗಿದಿದೆ.
ಆದರೆ ಇನ್ನೂ 1.17 ಲಕ್ಷ ಫಲಾನುಭವಿಗಳು ತಮ್ಮ ದಾಖಲೆಗಳನ್ನು ಸಲ್ಲಿಸಿ ಪರಿಶೀಲನೆಗೆ ಒಳಪಡಬೇಕಿದೆ. ನಿಗದಿತ ಅವಧಿಯಲ್ಲಿ ಪರಿಶೀಲನೆ ಮಾಡಿಸಿಕೊಳ್ಳದಿದ್ದರೆ, ಇಂತಹ ಫಲಾನುಭವಿಗಳು ಯೋಜನೆಯ ಸೌಲಭ್ಯದಿಂದ ಹೊರಗುಳಿಯುವ ಸಾಧ್ಯತೆ ಇದೆ.
ಮನೆಗೆ ನೋಟಿಸ್ ಅಂಟಿಸುವ ಕಾರ್ಯ
ಕೆಲ ವಾರಗಳಿಂದ ಪರಿಶೀಲನೆಗೆ ಲಭ್ಯವಾಗದ ಬಳಕೆದಾರರ ಮನೆಗಳಿಗೆ ಸೆಸ್ಕ್ ಸಿಬ್ಬಂದಿ ನೋಟಿಸ್ ಅಂಟಿಸುತ್ತಿದ್ದಾರೆ. ನೋಟಿಸ್ ಪಡೆದವರು ತಮ್ಮ ವ್ಯಾಪ್ತಿಯ ಸೆಸ್ಕ್ ಕಚೇರಿಗೆ ತೆರಳಿ ಅಗತ್ಯ ದಾಖಲೆಗಳನ್ನು ನೀಡಿ ಪರಿಶೀಲನೆ ಮಾಡಿಸಿಕೊಳ್ಳಬೇಕಾಗಿದೆ.
ಉಳಿದ 1.17 ಲಕ್ಷ ಫಲಾನುಭವಿಗಳ ಪರಿಶೀಲನೆ ಕೆಲವೇ ದಿನಗಳಲ್ಲಿ ಪೂರ್ಣಗೊಳಿಸುವುದು ಅಧಿಕಾರಿಗಳಿಗೆ ದೊಡ್ಡ ಸವಾಲಾಗಿದೆ. ಈ ಅವಧಿಯಲ್ಲಿ ಸಾಧ್ಯವಾಗದಿದ್ದರೆ ಸರ್ಕಾರ ಗಡುವು ವಿಸ್ತರಿಸುವ ಸಾಧ್ಯತೆಯೂ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏಕೆ ನಡೆಯುತ್ತಿದೆ ಮರುಸಮೀಕ್ಷೆ?
ಮರುಪರಿಶೀಲನೆಯ ಪ್ರಮುಖ ಉದ್ದೇಶಗಳು:
- ತಪ್ಪಾದ ನೋಂದಣಿಗಳನ್ನು ಪತ್ತೆಹಚ್ಚುವುದು
- ಅನರ್ಹ ವಿದ್ಯುತ್ ಸಂಪರ್ಕಗಳನ್ನು ಗುರುತಿಸುವುದು
- ದಾಖಲೆಗಳ ಹೊಂದಾಣಿಕೆ ಪರಿಶೀಲಿಸುವುದು
- ಸಬ್ಸಿಡಿಯ ದುರ್ಬಳಕೆ ತಡೆಯುವುದು
- ಅರ್ಹ ಕುಟುಂಬಗಳಿಗೆ ಮಾತ್ರ ಯೋಜನೆಯ ಲಾಭ ಖಚಿತಪಡಿಸುವುದು
ಫಲಾನುಭವಿಗಳು ಯಾವ ದಾಖಲೆ ನೀಡಬೇಕು?
ಪರಿಶೀಲನೆ ವೇಳೆ ಫಲಾನುಭವಿಗಳು ವಿದ್ಯುತ್ ಬಿಲ್, ಖಾತೆ ಸಂಖ್ಯೆ, ಆಧಾರ್ ಸಂಬಂಧಿತ ವಿವರ, ಗುರುತಿನ ದಾಖಲೆ ಹಾಗೂ ವಿಳಾಸದ ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಅಗತ್ಯವಿದ್ದರೆ ಇತರೆ ದಾಖಲೆಗಳನ್ನೂ ಅಧಿಕಾರಿಗಳು ಕೇಳಬಹುದು.
ಯಾರಿಗೆ ಗೃಹಜ್ಯೋತಿ ಸೌಲಭ್ಯ?
ವಸತಿ ಉದ್ದೇಶದ ವಿದ್ಯುತ್ ಸಂಪರ್ಕ ಹೊಂದಿರುವ, ನಿಗದಿತ ಬಳಕೆ ಮಿತಿಯೊಳಗಿರುವ ಮತ್ತು ವಿದ್ಯುತ್ ಖಾತೆಗೆ ಆಧಾರ್ ಲಿಂಕ್ ಮಾಡಿರುವ ರಾಜ್ಯದ ಕುಟುಂಬಗಳಿಗೆ ಯೋಜನೆ ಅನ್ವಯಿಸುತ್ತದೆ. 2022-23ರ ಸರಾಸರಿ ಮಾಸಿಕ ವಿದ್ಯುತ್ ಬಳಕೆಯನ್ನು ಆಧಾರವಾಗಿಟ್ಟುಕೊಂಡು ಶೇ.10ರಷ್ಟು ಹೆಚ್ಚುವರಿ ಬಳಕೆಗೆ ಅವಕಾಶ ನೀಡಲಾಗಿದೆ. ಈ ಲೆಕ್ಕಾಚಾರದಲ್ಲಿ ಬಳಕೆ ಮಿತಿ 200 ಯೂನಿಟ್ಗಿಂತ ಕಡಿಮೆ ಇರಬೇಕು.
ಉದಾಹರಣೆಗೆ, ಒಂದು ಮನೆಯ ಸರಾಸರಿ ಬಳಕೆ 100 ಯೂನಿಟ್ ಆಗಿದ್ದರೆ, ಶೇ.10 ಹೆಚ್ಚುವರಿ ಅವಕಾಶದೊಂದಿಗೆ ಸುಮಾರು 110 ಯೂನಿಟ್ವರೆಗೆ ಸಬ್ಸಿಡಿ ಮಿತಿ ಅನ್ವಯಿಸಬಹುದು. 200 ಯೂನಿಟ್ ಮೀರಿದ ಬಳಕೆಗೆ ಸಂಪೂರ್ಣ ಬಿಲ್ ಉಚಿತವಾಗುವುದಿಲ್ಲ.
ಅರ್ಹ ಫಲಾನುಭವಿಗಳಿಗೆ ಹಿಂದಿನ ನಿಯಮದಂತೆ ಸಬ್ಸಿಡಿ ಮುಂದುವರಿಯಲಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಪರಿಶೀಲನೆ ಬಾಕಿ ಇರುವ ಫಲಾನುಭವಿಗಳು ಕೊನೆಯ ದಿನದವರೆಗೆ ಕಾಯದೆ, ಅಗತ್ಯ ದಾಖಲೆಗಳೊಂದಿಗೆ ಸೆಸ್ಕ್ ಕಚೇರಿಗೆ ತೆರಳಿ ಪ್ರಕ್ರಿಯೆ ಪೂರ್ಣಗೊಳಿಸುವುದು ಮುಖ್ಯವಾಗಿದೆ.

ದಿನದ ಸುದ್ದಿ
ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.
ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.
ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ4 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ6 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ದಿನದ ಸುದ್ದಿ2 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ2 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ1 day agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ2 days agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ


