ಭಾವ ಭೈರಾಗಿ
ಕವಿತೆ | ಅವಳು ಮಸಣ ಕಾಯುವ ಪಾರ್ವತಿ..!
- ಪದ್ಮಶ್ರೀ ಗೋವಿಂದರಾಜು,ಭದ್ರಾವತಿ
ಹುಂ!!
ಅವಳ ಪರಶಿವನು ಅದೇ ಮಸಣದಲಿ ಐಕ್ಯವಾಗಿಹನು
ಅದಕೇ ಅವಳು ಹಲವು ನಿರ್ಜೀವ ಅನಾಥ ದೇಹಗಳ
ಹಗಲು ರಾತ್ರಿಯೇನ್ನದೆ ಕಾಯುವಳು
ಅನಾಥವಾದ ದೇಹಕೆ ಅವಳಿಂದಲೇ ಮೋಕ್ಷ
ಅವಳೇ ವಂಶವಿಲ್ಲದ ದೇಹಕೆ ವಾರಸುದಾರಳು!!
ಚಿತೆಯ ಅಗ್ನಿ ಸ್ಪರ್ಶ ಮಾಡಿ ತಿರುಗಿ
ನೋಡದೆ ಹೋದ ನೆಂಟರು,
ಉಳಿಸಿ ಹೋದ ಬೆಂಕಿಯ
ಅರದಂತೆ ಉರಿಸುವಳು ಅವಳು.
ಮಕ್ಕಳು ಮರಿಯ ಸಂಸಾರವೇ
ಇಲ್ಲದ ಅವಳಿಗೆ ಆಗಾಗ ಬರುವ
ದೇಹಗಳ ಜೊತೆ ಬಂದ ಜನರು
ನಡೆದಾಡುವ ಶವಗಳಂತೆ ಕಾಣುವರು
ಕಾರಣ
ಮಸಣವೊಂದೇ ಕೊನೆಯ ಮನೆ
ಆಕೆ ಅರಿತಿದ್ದಾಳೆ
ಅದಕೇ
ಆಕೆ ಮಸಣ ಕಾಯುವ ಪಾರ್ವತಿ!!
(ಸುಮಾರು ವರ್ಷಗಳಿಂದ ಶಿವಮೊಗ್ಗ ಸ್ಮಶಾನ ಕಾಯುವುದು ಒಬ್ಬ ಹೆಣ್ಣು.
ಆಕೆಯ ಛಲದ ಬದುಕಿಗೆ ಒಂದು ಪ್ರಣಾಮ )
ಸುದ್ದಿದಿನ.ಕಾಂ | ವಾಟ್ಸಾಪ್ | 9980346243