Connect with us

ದಿನದ ಸುದ್ದಿ

ಅಂತರಗಂಗೆ ಶ್ರೀಮತಿ ಲಲಿತಾ ವಿರೂಪಾಕ್ಷಯ್ಯ ಸ್ವಾಮಿ ಅವರಿಗೆ ಒಲಿದು ಬಂದ ಚಂದರಗಿ ಚೆಂದ ರಾಜ್ಯ ಪ್ರಶಸ್ತಿ

Published

on

ಸುದ್ದಿದಿನ,ಮಸ್ಕಿ:ತಾಲೂಕಿನ ಅಂತರಂಗಿ ಗ್ರಾಮದ. ಶ್ರೀಮತಿ ಲಲಿತಾ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಇವರಿಗೆ 2024ರ ಚಂದರಗಿಯ ಚಂದ ದಂಪತಿ ರಾಜ್ಯ ಪ್ರಶಸ್ತಿ ಆಯ್ಕೆಯಾಗಿದ್ದಾರೆಂದು ತಪಭೂಷಣ ತಪ್ಪು ರತ್ನ ಶ್ರೀ ಪೂಜ್ಯ ವೀರಭದ್ರ ಮಹಾ ಶಿವಾಚಾರ್ಯ ದೇವರು. ಎಂ ಚಂದರಗಿ ಕಟಕೋಳ್ ತಿಳಿಸಿದರು.

ಗುರುಪೂರ್ಣಿಮೆಯ ಕಾರ್ಯಕ್ರಮದಲ್ಲಿ ಗುರು ಶಿಷ್ಯರ ಭಾಂದವ್ಯ ಸಮ್ಮಿಲನ ಕಾರ್ಯಕ್ರಮ ಜರುಗಲಿದ್ದು. ಈ ಕಾರ್ಯಕ್ರಮಕ್ಕೆ ನಾಡಿನ ಮಠಾಧೀಶರು ಪೂಜ್ಯರು ಡಾಕ್ಟರ್ ಪೂಜ್ಯ ಶಿವಲಿಂಗ ಶಿವಾಚಾರ್ಯ ದೇವರು ಸೇರಿದಂತೆ .ಹಾಗೂ ಜನಪ್ರತಿನಿಧಿಗಳು ಜಿಲ್ಲಾಧಿಕಾರಿ ಹಾಗೂ ಬೆಳಗಾವಿ ಜಿಲ್ಲೆಯ ಜನಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕೆ ರಂಗಕ್ಕೆ ತನ್ನದೇ ಆದ ಇತಿಹಾಸವಿದ್ದು. ಅಂತಹ ನಿಟ್ಟಿನಲ್ಲಿ ಮಾಧ್ಯಮ ರಂಗದಲ್ಲಿ ಹೆಸರು ಮಾಡಿರುವ ಶ್ರೀಮತಿ ಲಲಿತಾ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ. ಅವರ ಸಮಾಜ ಸೇವೆಯನ್ನು ಗುರುತಿಸಿ ರಾಜ್ಯ ಪ್ರಶಸ್ತಿ ದೊರಕಿದೆ.

ಇದು ದಂಪತಿಗಳ ಎರಡನೆಯ ರಾಜ್ಯ ಪ್ರಶಸ್ತಿ ವಾಗಿದ್ದು
ಈ ಪ್ರಶಸ್ತಿಗೆ ಶ್ರೀ ಮಾತೆ ಮಂಜಮ್ಮ ಪದ್ಮ ಶ್ರೀ ಪ್ರಶಸ್ತಿ ಪುರಸ್ಕೃತ ಹಾಗೂ ನನ್ನ ಆರಾಧ್ಯ ದೈವ ವರ ರುದ್ರಮುನಿ ಶಿವಾಚಾರ್ಯ ದೇವರು ಮಸ್ಕಿ ಹಾಗೂ ಆತ್ಮೀಯ ಸ್ನೇಹಿತ ಬಂಗ್ಲೆ ಮಲ್ಲಿಕಾರ್ಜುನ ಸಂಸ್ಥಾಪಕ ರಾಜ್ಯಾಧ್ಯಕ್ಷ ಹಾಗೂ ಶ್ರೀಮತಿ ಅವನಿಕ ಎಸ್ ನಾಗರತ್ನ ಕಿರುತೆರೆ ಚಿತ್ರನಟಿ ಸಂಪಾದಕರು ಹಾಗೂ ಶ್ರೀಮತಿ ಸುಕನ್ಯ ಪ್ರಾಧ್ಯಾಪಕಿ ಹರಿಹರ ಪತ್ರಕರ್ತರು ಶಿಕಾರಿಪುರದ ಕುಮಾರಿ ವೀಣಾ ಹಿರೇಮಠ ನ್ಯಾಯಾ ವಾದಿಗಳು ಶ್ರೀಮತಿ ಸೌಮ್ಯ ಶ್ರೀ ಹಿರೇಮಠ ಹಿರಿಯ ಸಾಹಿತಿಗಳು ಬೆಂಗಳೂರು ಶ್ರೀಮತಿ ಡಾಕ್ಟರ್ ಶ್ರೀದೇವಿ ಲಕ್ಕುಂಡಿ ಪ್ರಾಧ್ಯಾಪಕ ಕಾನೂನು ಮಹಾವಿದ್ಯಾಲಯ ಹಿರಿಯ ಸಾಹಿತಿಗಳು ಜಮಖಂಡಿ ಶ್ರೀಮತಿ ಅನಿತಾ ಮಂತ್ರಿ ಜಿಲ್ಲಾಧ್ಯಕ್ಷರು ರಾಯ್ಚೂರ್ ಮಸ್ಕಿಯ ಜಂಗಮ ಸಮಾಜದ ಅಧ್ಯಕ್ಷರು ಶ್ರೀ ಕರಿಬಸಯ್ಯಸ್ವಾಮಿ ಸಿಂಧನೂರ್ ಮಠ ಹಾಗೂ ಸಿದ್ದಲಿಂಗಯ್ಯ ಸ್ವಾಮಿ ಸೊಪ್ಪಿಮಠ ಹಾಗೆ ಅನೇಕರು ಈ ಪ್ರಶಸ್ತಿಗೆ ಶುಭ ಹಾರೈಸಿದ್ದಾರೆ.

ಇದೇ ತಿಂಗಳು 20ನೇ ತಾರೀಕಿಗೆ ರಾಮದುರ್ಗ ತಾಲೂಕಿನ ಸುಕ್ಷೇತ್ರ ಎಂ ಚಂದಮಠದಲ್ಲಿ ಪ್ರತಿಭಾ ಪುರಸ್ಕಾರದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗುವುದು.ಶ್ರೀಗಳ ಆಶೀರ್ವಾದದಿಂದ ಹಾಗೂ ಆತ್ಮೀಯ ಸ್ನೇಹಿತ ಮಹಾಂತೇಶ್ ಪಟ್ಟಣಶೆಟ್ಟಿ ರತ್ನಮ್ಮ ಪಟ್ಟಣಶೆಟ್ಟಿ ಅವರಿಗೂ ಸಹ ಚಂದರಗಿ ಚೆಂದ ಪ್ರಶಸ್ತಿ ಲಭಿಸಿದ್ದು ಅವರಿಗೂ ಕೂಡ ಪ್ರತಿಭಾ ಪುರಸ್ಕಾರ ಶ್ರೀಗಳಾ ಆಶೀರ್ವಾದವಿದ್ದು.

ಈ ಕಾರ್ಯಕ್ರಮಕ್ಕೆ ಶ್ರೀ ಮಠದ ಶಿಷ್ಯಂದಿರು ಹಾಗೂ ಕಡಕೋಳ ಸಂಸ್ಥಾನ ಹಿರೇಮಠದ ಶಿಷ್ಯಂದಿರು ಬಾಘೂಜಿ ಕೊಪ್ಪದ ಶಿಷ್ಯಂದರು ಮತ್ತು ಶ್ರೀಗಳು ದಿದ್ದಿಗಿ ಅಂತರಗಂಗೆ ಗ್ರಾಮದ ಸರ್ವ ಸದ್ಭಕ್ತರು ಶ್ರೀಗಳ ಕೃಪೆಗೆ ಪಾತ್ರರಾಗಿ ಪುನೀತರಾಗಬೇಕೆಂದು ಶ್ರೀಗಳ ಶಿಷ್ಯಂದಿರಾದ ನಡೆಹಳ್ಳಿ ಶಿಕ್ಷಕರು ಸರ್ ತಿಳಿಸಿದರು.

ಈ ಕಾರ್ಯಕ್ರಮಕ್ಕೆ ತನು ಮನ ಧನದಿಂದ ಶ್ರೀಗಳ ಕಾರ್ಯಕ್ರಮಕ್ಕೆ ನೀವು ಬನ್ನಿ ಬರವರನ್ನು ಕರೆತನ್ನಿ ಗುರು ಶಿಷ್ಯರ ಸಮ್ಮೇಳನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ಗುರುಗಳ ಕೃಪೆಗೆ ಪಾತ್ರರಾಗಿ ರಾಜ್ಯ ಪ್ರಶಸ್ತಿ ದೊರಕಿರುವ ಚಂದರಗಿ ಚೆಂದ ಪ್ರಶಸ್ತಿಗೆ ಆಯ್ಕೆಯಾಗಿರುವ ಶ್ರೀಮತಿ ಲಲಿತಾ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಇವರನ್ನು ಅಭಿನಂದಿಸಿ ಶ್ರೀಗಳ ಕಾರ್ಯಕ್ರಮಕ್ಕೆ ಪಾಲ್ಗೊಳ್ಳಿ ಎಂದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

Published

on

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಹಾಗೂ ಆನ್‌ಲೈನ್ ಪೇಮೆಂಟ್ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.

ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂಪಾಯಿ ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿ ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.

ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

Published

on

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ ಅದರಂತೆ ಬೆಂಗಳೂರು ಜನತೆ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನ ಮೂರ್ತಿಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸಲು ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನೂ ಗಣೇಶ ಚತುರ್ಥಿ ವಿಶೇಷವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತ್ತೆ ಅನೇಕ ಸಚಿವರು ಹಾಗೂ ಗಣ್ಯರು ಶುಭ ಹಾರೈಸಿದ್ದಾರೆ.

ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಗಲಭೆಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳಡಿ ಇಂದಿನಿಂದ ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇದೇ 9 ಮತ್ತು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 2 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ನೈಸರ್ಗಿಕವಾಗಿ ತಯಾರಿಸಿದ ಮಣ್ಣಿನ ಗಣೇಶನ ವಿಗ್ರಹಗಳನ್ನು ಮಾತ್ರ ಬಳಸುವ ಮೂಲಕ ಕೆರೆ, ನದಿ ಮೂಲಗಳು ಕಲುಷಿತಗೊಳಿಸದಂತೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending