Connect with us

ದಿನದ ಸುದ್ದಿ

ಮತ್ತಿ ಗ್ರಾಮ ಪಂಚಾಯಿತಿಯಿಂದ ನನಗೆ ನ್ಯಾಯ ಕೊಡಿಸಿ : ಬಿ. ನಾಗರತ್ನಮ್ಮ ಮನವಿ

Published

on

ನನ್ನ ಹೆಸರು ಬಿ. ನಾಗರತ್ನಮ್ಮ. 76ರ ವಯೋವೃದ್ಧೆಯಾದ ನಾನು ಪ್ರಸ್ತುತ ದಾವಣಗೆರೆ ವಿನೋಬನಗರದ ಬಾಡಿಗೆ ಮನೆ ನಿವಾಸಿ. 2008 ರಲ್ಲಿ ಆಧ್ಯಾತ್ಮ ಮಂದಿರ ನಿರ್ಮಾಣದ ಉದ್ದೇಶದಿಂದ ದಾವಣಗೆರೆ ತಾಲ್ಲೂಕು ಮತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ತಿಮ್ಮಪ್ಪನ ಕ್ಯಾಂಪ್ ನಲ್ಲಿ ಸರ್ಕಾರಿ ಜಾಗದಲ್ಲಿ ಖಾತಾ ಸಂಖ್ಯೆ 154/1 , 30 x 40 ಅಳತೆಯ ನಿವೇಶನ ಮಂಜೂರು ಮಾಡಿಸಿಕೊಂಡು, ಈವರೆಗೂ ನಿವೇಶನ ಕಂದಾಯ ಪಾವತಿಸುತಿದ್ದೇನೆ.

ಆದರೆ ಆಗಿನ ಗ್ರಾಪಂ ಅಧಿಕಾರಿಗಳು ತೋರಿಸಿದ್ದ ಜಾಗದಲ್ಲಿ ಈಗ ನನ್ನ ಹೆಸರಿಗೆ ಜಾಗವೇ ಇಲ್ಲ. ನನ್ನ ಖಾತಾ ಎಕ್ಸಾಟ್ರಕ್ಷನ್ ನಲ್ಲಿ ನಮೂದಿಸಿರುವ ಚಕ್ಕುಬಂದಿ ಪ್ರಕಾರ ನನಗೆ ತೋರಿಸಿರುವ ಅಳತೆಯ ಜಾಗವೇ ಇಲ್ಲ. ಹಕ್ಕುಪತ್ರವನ್ನು ಸಹ ನೀಡಿಲ್ಲ. 76 ವರ್ಷದ ಇಳಿವಯಸ್ಸಿನ ನಾನು ಈ ಸಂಬಂಧ ಹಲವಾರು ವರ್ಷ ಅಲೆದಾಡಿ ಸಾಕಾಗಿ ಬೇಸತ್ತು ಹೋಗಿದೆ. ಅತ್ತ ಕಂದಾಯದ ಹಣ ಮತ್ತು ಅಧಿಕಾರಿಗಳ ಬಳಿ ಅಡ್ಡಾಡಿದ ಪ್ರಯಾಣದ ವೆಚ್ಚ ಎರಡೂ ಸಹ ನೀರಿನಲ್ಲಿ ಹೋಮ ಆದಂತಾಗಿ ಕಂಗಾಲಾಗಿದ್ದೇನೆ.

ಈ ಸಂಬಂಧ ಮಾನ್ಯ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಕಂದಾಯ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಹಾಗೂ ಮಾಧ್ಯಮ ಬಂಧುಗಳು ಮತ್ತಿ ಗ್ರಾಪಂನಿಂದ ನನಗೆ ನ್ಯಾಯ ದೊರಕಿಸಿಕೊಡಬೇಕಾಗಿ ಈ ಮೂಲಕ ಕಳಕಳಿಯ ಪ್ರಾರ್ಥನೆ.

ವಿವರ

ನನ್ನ ದೀಕ್ಷಾ ಗುರುಗಳ ಹೆಸರಿನಲ್ಲಿ ” ಪೂಜ್ಯ ಶ್ರೀ ಕೆ. ಎನ್ ಸ್ವಾಮಿ ಅವಧೂತರ ಆಧ್ಯಾತ್ಮ ಮಂದಿರದ ” ಮೂಲಕ 40 ವರ್ಷಗಳಿಂದ ಆಧ್ಯಾತ್ಮ ಸೇವೆಯಲ್ಲಿ ತೊಡಗಿರುವ ನಾನು ಗುರುಗಳಿಂದ ಕಲಿತ ಬ್ರಹ್ಮ ಜ್ಞಾನ, ಕಾಲಜ್ಞಾನ, ಕಾಲನಿರ್ಣಯ, ಸಾಂಖ್ಯಾ ತಾರಕ, ಛಾಯಾಪುರುಷ ಲಕ್ಷಣ ಇತ್ಯಾದಿ ಆಧ್ಯಾತ್ಮ ಬೋಧನೆ ಮೂಲಕ ಆತ್ಮೋನ್ನತಿಯ ಸೇವೆಯಲ್ಲಿ ತೊಡಗಿದ್ದೇನೆ. ಅಲ್ಲದೆ ವಿಷಜಂತು ಕಡಿದವರಿಗೆ ಗಿಡಮೂಲಿಕೆಯ ಔಷಧ ನೀಡಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದವರ ಜೀವ ಉಳಿಸುವ ಕೈಂಕರ್ಯವನ್ನೂ ಹಲವು ವರ್ಷಗಳಿಂದ ಮಾಡುತ್ತಲೇ ಇದ್ದೇನೆ.

ವೃದ್ಧಾಪ್ಯದ ಕಾರಣ ಒಂದು ಕಡೆ ನೆಲೆನಿಂತು ಈ ಸೇವೆಯನ್ನು ಸುಗಮವಾಗಿ ನೆರವೇರಿಸಿಕೊಂಡು ಹೋಗುವ ಸಂಕಲ್ಪದೊಂದಿಗೆ 2008 ರಲ್ಲಿ ಪರಿಚಿತರೊಬ್ಬರ ಸಹಕಾರದೊಂದಿಗೆ ಅರ್ಜಿ ಸಲ್ಲಿಸಿ ಆಗ ಬಿಲ್ ಕಲೆಕ್ಟರ್ ಆಗಿದ್ದ ನಾಗರಾಜ್ ಎಂಬುವರು ತೋರಿಸಿದ ಅನ್ವಯ ಮತ್ತಿಯಿಂದ 2 ಕಿಮೀ ದೂರದಲ್ಲಿರುವ ತಿಮ್ಮಪ್ಪನ ಕ್ಯಾಂಪ್ ನ ಶ್ರೀ ಸಿದ್ಧಾರೂಢ ಆಶ್ರಮದ ಪಕ್ಕ ತಾತ್ಕಾಲಿಕವಾಗಿ ಮುಂಡದ ಕಟ್ಟಿಗೆಯ ನೆರೆಕೆ ಮನೆ ನಿರ್ಮಿಸಿಕೊಂಡು ಒಬ್ಬಂಟಿಯಾಗಿ ಸೇವಾ ಕಾರ್ಯ ಮುಂದುವರಿಸುತಲಿದ್ದೆ .

ಆಗ ಆ ಸ್ಥಳ ನಿರ್ಜನ ಪ್ರದೇಶವಾಗಿತ್ತು. ನಮ್ಮ ಆಶ್ರಮ ಬಿಟ್ಟರೆ ಬೇರಾವ ಮನೆಗಳೂ ಇರಲಿಲ್ಲ. 2013ನೇ ಇಸವಿಯಲ್ಲಿ ಒಮ್ಮೆ ನನಗೆ ಅತೀವ ವಾಂತಿ, ಭೇದಿ, ಜ್ವರ ಉಂಟಾದ ಕಾರಣ ನನ್ನ ಚಿಕ್ಕ ಮಗಳಾದ ಶ್ರೀಮತಿ ಕಲ್ಪನಾ ನನ್ನನ್ನು ದಾವಣಗೆರೆ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಸುಶ್ರೂಷೆ ಮಾಡಿಸಿದಳು. ವಯಸ್ಸಾದ ನೀನು ಮತ್ತಿ ಕ್ಯಾಂಪ್ ನಲ್ಲಿ ಒಬ್ಬಂಟಿಗಳಾಗಿ ಇರುವುದು ಬೇಡ.

ವಾರಕ್ಕೊಮ್ಮೆ ತಿಮ್ಮಪ್ಪನ ಕ್ಯಾಂಪ್ ಗೆ ಹೋಗಿ ಸೇವಾ ಕಾರ್ಯ ಮುಗಿಸಿ ಬಾ ಎಂದು ಒತ್ತಾಯಿಸಿ ಕೆಲವು ದಿನಗಳ ಕಾಲ ತನ್ನೊಂದಿಗೆಯೇ ಇರಿಸಿಕೊಂಡಳು. ಹಾಗಾಗಿ ಅಂದಿನಿಂದ ನಾನು ವಾರಕ್ಕೆ ಒಂದೆರಡು ಬಾರಿ ಅಲ್ಲಿಗೆ ಹೋಗಿ ಬರತೊಡಗಿದೆ. ಆದರೆ 2014 ರಲ್ಲಿ ಒಂದು ದಿನ ಇದ್ದಕ್ಕಿದ್ದ ಹಾಗೇ ತಿಮ್ಮಪ್ಪನ ಕ್ಯಾಂಪ್ ನ ಸಿದ್ಧಾರೂಢ ಮಠದ ಪಕ್ಕ ಇದ್ದ ನನ್ನ ನೆರಕೆ ಮನೆ ಕಾಣೆಯಾಗಿತ್ತು. ಯಾರು ಕೆಡವಿದ್ದಾರೆಂದು ಪತ್ತೆಯಾಗಲೇ ಇಲ್ಲ. ಈ ವಿಚಾರವನ್ನು ಮತ್ತಿ ಗ್ರಾಮ ಪಂಚಾಯಿತಿಗೆ ತಿಳಿಸಿದರೆ ನಾವೆಲ್ಲಾ ಸರಿಪಡಿಸುತ್ತೇವೆ ಎಂದು ತಿಳಿಸಿದರೆ ಹೊರತು ಸಮಸ್ಯೆ ನಿವಾರಣೆಯಾಗಲಿಲ್ಲ.

ಅಂದಿನಿಂದ ಪ್ರಯತ್ನಿಸುತ್ತಲೇ ಇದ್ದ ನಾನು 2020 ರಲ್ಲಿ ಕಂದಾಯ ಪಾವತಿಸಲು ಮತ್ತಿ ಗ್ರಾಪಂ ಗೆ ತೆರಳಿದ ಸಮಯದಲ್ಲಿ ಇನ್ನು ಮುಂದೆ ಭಕ್ತರ ಸಹಾಯದೊಂದಿಗೆ ನಾನು ತಿಮ್ಮಪ್ಪನ ಕ್ಯಾಂಪ್ ನಲ್ಲಿಯೇ ನೆಲೆಸಿ ಆಧ್ಯಾತ್ಮ ಸೇವೆ ಮಾಡುವುದಾಗಿ ತೀರ್ಮಾನಿಸಿ ” ಈ ಸ್ವತ್ತಿಗೆ ” ಅರ್ಜಿ ಹಾಕುವ ಕುರಿತು ಮಾಹಿತಿ ಕೇಳಿದಾಗ ಸತ್ಯಾಂಶ ಬೆಳಕಿಗೆ ಬಂದಿತು.

ಆಗ ನಾವು ಜಾಗ ಅಳತೆ ಮಾಡಿ ಕೊಡುವಂತೆ ಅರ್ಜಿ ಹಾಕಿದೆವು. ಆದರೆ ನಿಮ್ಮ ಜಾಗ ಎಲ್ಲಿದೆ ನೀವೇ ತೋರಿಸಿ ಎಂದು ಕೇಳುವ ಮತ್ತಿ ಗ್ರಾಪಂ ಅಧಿಕಾರಿಗಳು , ನಾವು ಇಲ್ಲಿ ಮಂಜೂರು ಮಾಡಿರುವ ಎಲ್ಲರಿಗೂ ಹಕ್ಕುಪತ್ರ ನೀಡಿದ್ದೇವೆ. ನಿಮ್ಮ ಹೆಸರಿನಲ್ಲಿ ನಿವೇಶನ ಮಂಜೂರು ಆಗಿದ್ದಲ್ಲಿ ನಿಮಗೂ ಹಿಂದಿನ ಅಧಿಕಾರಿಗಳು ಹಕ್ಕು ಪತ್ರ ನೀಡಿರಬೇಕಲ್ಲವೇ.

ಹಕ್ಕುಪತ್ರ ತೋರಿಸದಿದ್ದರೆ ನಾವು ಎಲ್ಲಿಂದ ತಂದು ಕೊಡಬೇಕು ಎಂದು ನಮ್ಮನ್ನೇ ಅನುಮಾನಿಸುವ ರೀತಿ ಈಗಿನ ಅಧಿಕಾರಿಗಳು ಪ್ರಶ್ನಿಸಿ ವಾಪಸ್ ಕಳುಹಿಸಿದ್ದಾರೆ. ಅದರೆ ನಾನು ಹಲವಾರು ವರ್ಷಗಳಿಂದ ಮತ್ತಿ ಗ್ರಾಪಂ ಅಧಿಕಾರಿಗಳ ಬಳಿ ಹೋಗಿ ಸತತವಾಗಿ ಪ್ರಯತ್ನಿಸಿದರೂ ಅಂದಿನ ಅಧಿಕಾರಿಗಳು ಇಲ್ಲಸಲ್ಲದ ಸಬೂಬು ಹೇಳಿ ಮುಂದೆ ತಳ್ಳುತ್ತಲೇ ಬಂದರು.

ನಮ್ಮ ಹೆಸರಿನಲ್ಲಿ ಜಾಗವೇ ಇಲ್ಲವೆಂದ ಮೇಲೆ ಈವರೆಗೂ ಪ್ರತಿವರ್ಷ ಕಂದಾಯ ಪಾವತಿಸಿಕೊಂಡದ್ದು ಹೇಗೆ ? ವಯೋವೃದ್ಧಳಾದ ನಾನು ಇದಕ್ಕಾಗಿ ಹಲವಾರು ವರ್ಷಗಳಿಂದ ವಿವಿಧ ಕಚೇರಿ ಮತ್ತು ಅಧಿಕಾರಿಗಳ ಬಳಿ ಅಲೆದಾಡಿ ಸೋತು ಹೋಗಿದ್ದೇನೆ. ಅಲ್ಲದೆ ವಿಪರೀತ ಹಣ ಕೂಡ ಖರ್ಚು ಮಾಡಿಕೊಂಡಿದ್ದೇನೆ. ಅಲ್ಲದೆ ನನ್ನ ನಂಬಿಕೆ, ವಿಶ್ವಾಸ, ಆಧ್ಯಾತ್ಮಿಕ ಸೇವೆಯ ಕನಸಿಗೆ ಕೊಡಲಿ ಪೆಟ್ಟು ಬಿದ್ದಿದೆ. ಈ ಮೋಸಕ್ಕೆ ಮನನೊಂದು ಹೈರಾಣಾಗಿದೆ.

ಈಗ ನನಗೆ ನ್ಯಾಯ ಬೇಕು. ಮತ್ತಿ ಗ್ರಾಮ ಪಂಚಾಯಿತಿಯು ಖಾತೆಯಲ್ಲಿ ತೋರಿಸಿರುವ ನಿವೇಶನದ ಹಕ್ಕುಪತ್ರ ನೀಡಬೇಕು. ಅಲ್ಲಿ ನೆಲೆಸಿ ನನ್ನ ಕನಸಿನ ಕೂಸಾದ ನನ್ನ ಗುರುಗಳ ಹೆಸರಿನ ಆಧ್ಯಾತ್ಮ ಮಂದಿರ ನಿರ್ಮಾಣಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡಬೇಕು.

ಸನ್ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿಸಿದ ಮೇಲಧಿಕಾರಿಗಳು ಕೂಡಲೇ ಈ ಸಮಸ್ಯೆ ಬಗೆಹರಿಸಬೇಕು ಹಾಗೂ ಮಾಧ್ಯಮ ಬಂಧುಗಳು ವಯೋವೃದ್ಧಳ ಈ ಸಮಸ್ಯೆ ನಿವಾರಣೆಗೆ ಸಹಕರಿಸಬೇಕಾಗಿ ಕೋರಿಕೆ. ಶೀಘ್ರ ಪರಿಹಾರ ಲಭಿಸದಿದ್ದರೆ ಮತ್ತಿ ಗ್ರಾಮ ಪಂಚಾಯಿತಿ ಮುಂದೆ ಅಮರಣಾಂತ ಧರಣಿ ನಡೆಸಲಾಗುವುದು.

ಇಂತಿ ತಮ್ಮ ವಿಶ್ವಾಸಿ
ಬಿ. ನಾಗರತ್ನಮ್ಮ
ಮೊ.ನಂ : 9741458905

ಸುದ್ದಿದಿನ.ಕಾಂ | ವಾಟ್ಸಾಪ್ | 9980346243

ದಿನದ ಸುದ್ದಿ

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

Published

on

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.

ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.

ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.

ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.

ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.

ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

Published

on

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.

ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.

ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.

ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

Published

on

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.

ಶುಕ್ರವಾರ ಜೂನ್(19) ‌ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್‌ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್‌ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್‌ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್‌ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.

ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್‌ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್‌ಲೀನೋ, ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending