Connect with us

ದಿನದ ಸುದ್ದಿ

ಮಾಯಕೊಂಡ : ಬಿಜೆಪಿ ಪ್ರಬಲ ಆಕಾಂಕ್ಷಿ ಜಿ.ಎಸ್. ಶ್ಯಾಮ್ ಗೆ ಮುಂಬರುವ ಚುನಾವಣೆಯಲ್ಲಿ ಬೆಂಬಲ ನೀಡುವ ಭರವಸೆ ನೀಡಿದ ಹೊಸಳ್ಳಿ‌ ಗ್ರಾಮಸ್ಥರು

Published

on

ಸುದ್ದಿದಿನ,ದಾವಣಗೆರೆ: ನಿಮ್ಮ ಜೊತೆಯಲ್ಲೇ ನಾವಿದ್ದು ಮುಂಬರುವ ಚುನಾವಣೆಯಲ್ಲಿ ಮಾಯಕೊಂಡ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಕೊಡಿಸಿ ಬಹುಮತದಿಂದ ನಿಮ್ಮ ಗೆಲುವಿಗೆ ಶಕ್ತಿಯಾಗಿ ನಿಲ್ಲುತ್ತೇವೆ ಎಂಬುದಾಗಿ ಹೊಸಳ್ಳಿ ಗ್ರಾಮಸ್ಥರು ಮಾಯಕೊಂಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯದರ್ಶಿ ಹಾಗೂ ಪ್ರಬಲ ಆಕಾಂಕ್ಷಿ ಜಿ.ಎಸ್. ಶ್ಯಾಮ್ ಅವರಿಗೆ ಅಭಯ ನೀಡಿದ್ದಾರೆ.

ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ಬಸವಾಪಟ್ಟಣದ ಹೊಸಳ್ಳಿಯ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ಅಮ್ಮನವರ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಶ್ಯಾಮ್ ಅವರು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಗ್ರಾಮಸ್ಥರೊಂದಿಗೆ ಆತ್ಮೀಯವಾಗಿ ಮಾತನಾಡಿದರು.

ಈ ವೇಳೆ ಗ್ರಾಮಸ್ಥರು ಶ್ಯಾಮ್ ಅವರಿಗೆ ಸನ್ಮಾನಿಸಿ ಗೌರವಿಸಿದರು. ಅಲ್ಲದೇ ಮುಂಬರುವ ಚುನಾವಣೆಯಲ್ಲಿ ಬೆಂಬಲ ನೀಡುವ ಭರವಸೆ ನೀಡಿದರು.

ಈ ವೇಳೆ ಗ್ರಾಮಸ್ಥರ ಉದ್ದೇಶಿಸಿ ಮಾತನಾಡಿದ ಶ್ಯಾಮ್, ತಾಯಿಯ ಆರ್ಶೀವಾದದ ಜೊತೆಗೆ ಗ್ರಾಮಸ್ಥರ ಬೆಂಬಲದ ಜನಾರ್ಶೀವಾದವೂ ಬೇಕು. ನಿರುದ್ಯೋಗಿ ಯುವಕರು ಸಾಕಷ್ಟಿದ್ದು, ಅವರ ಬದುಕು ಮತ್ತು ಕುಟುಂಬ ಉಜ್ವಲಗೊಳಿಸುವ ದೃಷ್ಟಿಯಿಂದ ಉದ್ಯೋಗ ಕಟ್ಟಿಕೊಡಲು ಸಹಕರಿಸ ಲಾಗುವುದು ಎಂದು ಮನದಾಳದ ಮಾತು ತಿಳಿಸಿದರು.

ಕ್ಷೇತ್ರದ ಶ್ರಮ ಜೀವಿಗಳು, ಬಡವರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುವ ಸದಾಶಯ ನನಗಿದೆ. ಇದಕ್ಕೆ ನಿಮ್ಮ ಅಮೂಲ್ಯವಾದ ಮತದಾನದ ಹಕ್ಕನ್ನು ಚಲಾಯಿಸಿ ನನಗೆ ಬೆಂಬಲಿಸಿ ಆರ್ಶೀವದಿಸುವ ಮುಖೇನ ಗೆಲುವು ಕೊಟ್ಟು ಕ್ಷೇತ್ರದ ಏಳಿಗೆಗೆ ಸದಾವಕಾಶವನ್ನು ನೀಡಬೇಕು ಎಂದು ಮನವಿ ಮಾಡಿದರು. ಈ ವೇಳೆ ಗ್ರಾಮಸ್ಥರು ಹಾಗೂ ಯುವಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿ ವಾಸವಿದ್ದರೆ ಮಾಹಿತಿ ಕೊಡಿ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳ ಉಪಟಳ ತಡೆಯಲು ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಮತ್ತು ಸರ್ಕಾರಿ ಆಸ್ಪತೆಗಳು, ಕ್ರೀಡಾ ಸಂಕೀರ್ಣ, ಬಸ್ ನಿಲ್ದಾಣ, ರೈಲ್ವೇ ನಿಲ್ದಾಣಗಳಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಮಾಹಿತಿಯನ್ನು ಹರಿಹರ ಪೌರಾಯುಕ್ತರಿಗೆ ನೀಡಲು ತಿಳಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖರೀದಿಸಿದ ಸಾಮಾಗ್ರಿಗಳ ಬಿಲ್ಲಿನ ದಿನಾಂಕಕ್ಕೂ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಇರುವ ವ್ಯತ್ಯಾಸಕ್ಕೆ ಸ್ಪಷ್ಟನೆ ಕೋರಿ 3 ತಿಂಗಳು ಕಳೆದರೂ ಯಾವುದೇ ಸ್ಪಷ್ಟನೆ ನೀಡದೆ ಕರ್ತವ್ಯ ಲೋಪ ಎಸಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಕೆ.ಎ.ಓಬಳೇಶ್ ದೂರು ನೀಡಿದ್ದಾರೆ.

ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2020-21 ರಿಂದ 2024-25ನೇ ಸಾಲಿನ ಅವಧಿಯ ದಾಸ್ತಾನು ವಹಿಯನ್ನು ಮಾಹಿತಿಹಕ್ಕು ಅಧಿನಿಯಮ ಅಡಿಯಲ್ಲಿ ಪಡೆದು ಪರಿಶಿಲನೆ ಮಾಡಿದಾಗ ಸಾಮಾಗ್ರಿಗಳು ಖರೀದಿ ದಿನಾಂಕ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಸಾಕಷ್ಟು ವ್ಯತ್ಯಾಸ ಕಂಡು ಬಂದಿದ್ದು, ಈ ಬಗ್ಗೆ ಸ್ಪಷ್ಟತೆ ನೀಡುವಂತೆ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿಯವರಿಗೆ ಅರ್ಜಿ ಸಲ್ಲಿಸಿರುತ್ತಾರೆ. ನಿಗದಿತ ಅವಧಿಯಲ್ಲಿ ಯಾವುದೇ ಸ್ಪಷ್ಟನೆ ನೀಡದ ಕಾರಣ ಜ್ಞಾಪನವನ್ನು ನೀಡಲಾಗಿತ್ತು. ಜ್ಞಾಪನ ಪತ್ರ ನೀಡಿ ನಿಗದಿತ ಅವಧಿ ಮುಕ್ತಾಯವಾದರೂ ಯಾವುದೇ ಸ್ಪಷ್ಟನೆ ನೀಡದೆ ನಿರ್ಲಕ್ಷö್ಯ ತೋರಿದ ರೇಣುಕಾ ದೇವಿಯವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:2024 ನೇ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡಾಪಟುಗಳು ಅಧಿಕೃತ ಜಾಲತಾಣ http://sevasindhu.karnataka.gov.in ಆನ್‍ಲೈನ್ ಮೂಲಕ ಡಿಸೆಂಬರ್ 3 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-237480 ನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ಹರ್ಷ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending