ದಿನದ ಸುದ್ದಿ
ಅಂಬೇಡ್ಕರ್ ‘370ನೇ ವಿಧಿ’ ಪರವಾಗಿರಲಿಲ್ಲ : ಮಾಯಾವತಿ
ಸುದ್ದಿದಿನ,ಲಖ್ನೋ: ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು, ಸದಾ ಸಮಾನತೆ, ಏಕತೆ ಮತ್ತು ದೇಶದ ಅಖಂಡತೆಯ ಪರವಾಗಿದ್ದರು. ಜಮ್ಮು-ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯನ್ವಯ ಸವಲತ್ತು ಕೊಡುವುದರ ಪರವಾಗಿ ಅವರು ಇರಲಿಲ್ಲ. ಆದ್ದರಿಂದ ಸಂವಿಧಾನದ 370ನೇ ವಿಧಿ ರದ್ದನ್ನು ಬಿಎಸ್ಪಿ ಬೆಂಬಲಿಸಿತು ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ನಡೆಯನ್ನು ಬಿಎಸ್ಪಿ ಬೆಂಬಲಿಸಿದೆ.
ಆದರೆ, ದೇಶದಲ್ಲಿ ಸಂವಿಧಾನ ಜಾರಿಗೆ ಬಂದು 69 ವರ್ಷಗಳ ನಂತರ 370ನೇ ವಿಧಿಯನ್ನು ರದ್ದುಗೊಳಿಸಲಾಗಿದೆ. ಈಗ ಅಲ್ಲಿ ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಬರಲು ಸಮಯ ಹಿಡಿಯುತ್ತದೆ. ಇದಕ್ಕಾಗಿ ಕೆಲವು ಸಮಯ ಕಾಯುವುದು ಉತ್ತಮ. ಇದನ್ನು ಮಾನ್ಯ ಕೋರ್ಟ್ ಕೂಡ ಮಾನ್ಯ ಮಾಡಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
1. जैसाकि विदित है कि बाबा साहेब डा. भीमराव अम्बेडकर हमेशा ही देश की समानता, एकता व अखण्डता के पक्षधर रहे हैं इसलिए वे जम्मू-कश्मीर राज्य में अलग से धारा 370 का प्रावधान करने के कतई भी पक्ष में नहीं थे। इसी खास वजह से बीएसपी ने संसद में इस धारा को हटाये जाने का समर्थन किया।
— Mayawati (@Mayawati) August 26, 2019
ಇಂತಹ ಸಮಯದಲ್ಲಿ ಅನುಮತಿ ಇಲ್ಲದೆ ಕಾಂಗ್ರೆಸ್ ಅಥವಾ ಅನ್ಯಪಕ್ಷಗಳ ನಾಯಕರು ಭೇಟಿ ನೀಡುವುದು ಕೇಂದ್ರ ಅಥವಾ ಅಲ್ಲಿಯ ರಾಜ್ಯಪಾಲರಿಗೆ ರಾಜಕೀಯ ಮಾಡಲು ನೀಡುವ ಅವಕಾಶವಲ್ಲವೇ? ಎಂದು ಪ್ರಶ್ನಿಸಿರುವ ಅವರು, ಅಲ್ಲಿಗೆ ಹೋಗುವ ಮುನ್ನ ಈ ಕುರಿತು ಕೂಡ ಯೋಚಿಸಿದ್ದರೆ ಉಚಿತವಾಗಿರುತ್ತಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
2. लेकिन देश में संविधान लागू होने के लगभग 69 वर्षों के उपरान्त इस धारा 370 की समाप्ति के बाद अब वहाँ पर हालात सामान्य होने में थोड़ा समय अवश्य ही लगेगा। इसका थोड़ा इंतजार किया जाए तो बेहतर है, जिसको माननीय कोर्ट ने भी माना है।
— Mayawati (@Mayawati) August 26, 2019
3. ऐसे में अभी हाल ही में बिना अनुमति के कांग्रेस व अन्य पार्टियों के नेताओं का कश्मीर जाना क्या केन्द्र व वहां के गवर्नर को राजनीति करने का मौका देने जैसा इनका यह कदम नहीं है? वहाँ पर जाने से पहले इस पर भी थोड़ा विचार कर लिया जाता, तो यह उचित होता।
— Mayawati (@Mayawati) August 26, 2019
ಕೃಪೆ : ಡೆಮಾಕ್ರಟಿಕ್ ನ್ಯೂಸ್
ಸುದ್ದಿದಿನ.ಕಾಂ|ವಾಟ್ಸಾಪ್|9980346243