/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ದಿನದ ಸುದ್ದಿ

ಅಂಬೇಡ್ಕರ್ ‘370ನೇ ವಿಧಿ’ ಪರವಾಗಿರಲಿಲ್ಲ : ಮಾಯಾವತಿ

Published

on

ಸುದ್ದಿದಿನ,ಲಖ್ನೋ: ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು, ಸದಾ ಸಮಾನತೆ, ಏಕತೆ ಮತ್ತು ದೇಶದ ಅಖಂಡತೆಯ ಪರವಾಗಿದ್ದರು. ಜಮ್ಮು-ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯನ್ವಯ ಸವಲತ್ತು ಕೊಡುವುದರ ಪರವಾಗಿ ಅವರು ಇರಲಿಲ್ಲ. ಆದ್ದರಿಂದ ಸಂವಿಧಾನದ 370ನೇ ವಿಧಿ ರದ್ದನ್ನು ಬಿಎಸ್ಪಿ ಬೆಂಬಲಿಸಿತು ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ನಡೆಯನ್ನು ಬಿಎಸ್ಪಿ ಬೆಂಬಲಿಸಿದೆ.

ಆದರೆ, ದೇಶದಲ್ಲಿ ಸಂವಿಧಾನ ಜಾರಿಗೆ ಬಂದು 69 ವರ್ಷಗಳ ನಂತರ 370ನೇ ವಿಧಿಯನ್ನು ರದ್ದುಗೊಳಿಸಲಾಗಿದೆ. ಈಗ ಅಲ್ಲಿ ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಬರಲು ಸಮಯ ಹಿಡಿಯುತ್ತದೆ. ಇದಕ್ಕಾಗಿ ಕೆಲವು ಸಮಯ ಕಾಯುವುದು ಉತ್ತಮ. ಇದನ್ನು ಮಾನ್ಯ ಕೋರ್ಟ್ ಕೂಡ ಮಾನ್ಯ ಮಾಡಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇಂತಹ ಸಮಯದಲ್ಲಿ ಅನುಮತಿ ಇಲ್ಲದೆ ಕಾಂಗ್ರೆಸ್ ಅಥವಾ ಅನ್ಯಪಕ್ಷಗಳ ನಾಯಕರು ಭೇಟಿ ನೀಡುವುದು ಕೇಂದ್ರ ಅಥವಾ ಅಲ್ಲಿಯ ರಾಜ್ಯಪಾಲರಿಗೆ ರಾಜಕೀಯ ಮಾಡಲು ನೀಡುವ ಅವಕಾಶವಲ್ಲವೇ? ಎಂದು ಪ್ರಶ್ನಿಸಿರುವ ಅವರು, ಅಲ್ಲಿಗೆ ಹೋಗುವ ಮುನ್ನ ಈ ಕುರಿತು ಕೂಡ ಯೋಚಿಸಿದ್ದರೆ ಉಚಿತವಾಗಿರುತ್ತಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೃಪೆ : ಡೆಮಾಕ್ರಟಿಕ್ ನ್ಯೂಸ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version