ಬಹಿರಂಗ
ಕೊರೊನಾಕ್ಕೆ ಸ್ವಾಗತ ಕೋರುತ್ತಿರುವ ಮಾಧ್ಯಮಗಳು

- ಭಾರತೀಯರಲ್ಲಿ ರೋಗನಿರೋಧಕ ಶಕ್ತಿ (ರೋ.ಶ.) ಗಟ್ಟಿ ಇದೆ; ಈ ದೇಶದ ಉಷ್ಣಾಂಶವೂ ವೈರಾಣುವನ್ನು ಹಿಮ್ಮೆಟ್ಟಿಸುವಂತಿದೆ. ಆದರೆ ಮಾಧ್ಯಮಗಳ ಡೋಲು ತಮಟೆಯಿಂದಾಗಿ ನಮ್ಮ ರೋ.ಶ. ತಗ್ಗುವ, ನಾವು ಸೋಲುವ ಸಾಧ್ಯತೆ ಹೆಚ್ಚುತ್ತಿದೆ. ಈ ಕುರಿತು ತುಸು ಉದ್ದನ್ನ ಆದರೆ ಸರಳವಾದ ವೈಜ್ಞಾನಿಕ ವಿಶ್ಲೇಷಣೆ ಇಲ್ಲಿದೆ.
-ನಾಗೇಶ್ ಹೆಗಡೆ
ದೇಹವೆಂಬ ಈ ಭದ್ರಕೋಟೆ ಗಟ್ಟಿಯಾಗಿದ್ದರೆ ಕೊರೊನಾ ವೈರಸ್ಸನ್ನು ಸುಲಭವಾಗಿ ಮಣಿಸಬಹುದು. ಇಳಿವಯಸ್ಸಿನಲ್ಲಿ ರೋಗನಿರೋಧಕ ವ್ಯವಸ್ಥೆ (ಇಮ್ಯೂನ್ ಸಿಸ್ಟಮ್) ಕಡಿಮೆಯಾಗುತ್ತದೆ ಎಂಬುದೇನೋ ನಿಜ. ಆದರೆ ಇಲ್ಲೊಂದು ಸ್ವಾರಸ್ಯ ಇದೆ. ನಮ್ಮ ವಯಸ್ಸಿಗೂ ರೋಗನಿರೋಧಕತೆಗೂ ಅಷ್ಟೇನೂ ನೇರ ಸಂಬಂಧ ಇಲ್ಲ. ನಿಮ್ಮ ವಯಸ್ಸು45 ಇದ್ದರೆ ನಿಮ್ಮ ರೋಗನಿರೋಧಕ ವ್ಯವಸ್ಥೆಗೆ 60 ವರ್ಷ ಆಗಿರಬಹುದು. ಅಥವಾ ಅದು 25ರ ಯೌವನದಲ್ಲಿರಬಹುದು.
ನಮ್ಮ ದೇಹದ ಎಲ್ಲ ಅಂಗಾಂಗಗಳೂ ಅಷ್ಟೆ.ನಿಮಗೆ 45 ವರ್ಷ ಆಗಿದ್ದರೆ ನಿಮ್ಮ ಕಣ್ಣಿಗೆ 55 ಅಥವಾ 35 ಆಗಿರಬಹುದು. ನಿಮ್ಮ ಕೂದಲಿಗೆ 55 ವರ್ಷ ಆಗಿರಬಹುದು; ನಿಮ್ಮ ಕಿವಿಗೆ 49ಮತ್ತು ದಂತಪಂಕ್ತಿಗೆ 35 ಆಗಿರಬಹುದು (ಈ ವಿಲಕ್ಷಣತೆಯ ಕುರಿತು ಅಂಕಿತ ಪುಸ್ತಕ ಪ್ರಕಟಿಸಿದ ‘ನಮ್ಮೊಳಗಿನ ಬ್ರಹ್ಮಾಂಡ’ ಎಂಬ ನನ್ನ ಪುಸ್ತಕದಲ್ಲಿ ವಿಸ್ತೃತ ಲೇಖನ ಇದೆ).
ಈ ನಮ್ಮ ರೋಗನಿರೋಧಕ ಶಕ್ತಿಯ ಲಕ್ಷಣಗಳೇನು?
ಎಲ್ಲರ ದೇಹದಲ್ಲೂ ಎರಡು ಬಗೆಯ ರೋಗನಿರೋಧಕ ಶಕ್ತಿ (ರೋ.ಶ.) ಇರುತ್ತದೆ.
(1) ಜನ್ಮತಃ ಬಂದಿರುವುದು. ನಾವು ಮಗುವಾಗಿದ್ದಾಗಲಿಂದ ಮ್ಯಾಕ್ರೊಫೇಜ್ ಮತ್ತು ನ್ಯೂಟ್ರೊಫಿಲ್ಸ್ ಹೆಸರಿನ ಕೋಶಗಳು ರಕ್ತದಲ್ಲಿ ಓಡಾಡುತ್ತಿರುತ್ತವೆ. ದೇಹದಲ್ಲಿ ರೋಗಾಣುಗಳು ಹೊಕ್ಕರೆ ಇದು ತಕ್ಷಣವೇ ದಾಳಿ ಮಾಡಲು ಸಜ್ಜಾಗಿರುತ್ತದೆ.
(2) ಸಾಂದರ್ಭಿಕ ವ್ಯವಸ್ಥೆ: ದಾಳಿಗೆ ಬಂದ ರೋಗಾಣುವಿನ ಗುರುತು ಚೆಹರೆಯನ್ನು ಸರಿಯಾಗಿ ನೋಡಿ, ಅದರ ಶಸ್ತ್ರಾಸ್ತ್ರಗಳ ಅಧ್ಯಯನ ಮಾಡಿ, ಅದನ್ನು ಮಣಿಸಬಲ್ಲ ಪ್ರತ್ಯಸ್ತ್ರಗಳನ್ನು ಸಿದ್ಧಪಡಿಸಿಕೊಂಡು ಯುದ್ಧಕ್ಕೆ ಇಳಿಯುತ್ತದೆ. ಕೌರವ ಗದೆಯನ್ನು ಹೊತ್ತಿದ್ದರಿಂದಲೇ ಗದೆ ಹಿಡಿದ ಭೀಮನನ್ನೇ ಯುದ್ಧಕ್ಕೆ ಇಳಿಸಿದ್ದನಲ್ಲ ಆ ಕೃಷ್ಣ? ಹಾಗೇ ಇದು. ಆದರೆ ಈ ರೋ.ಶ. ತಕ್ಷಣಕ್ಕೆ ಪ್ರಕಟ ಆಗುವುದಿಲ್ಲ. ಸೂಕ್ತ ವೇಷ ಧರಿಸಿ ರಂಗಕ್ಕೆ ಬರಲು ತುಸು ಸಮಯ ಬೇಕು ತಾನೆ? ರಕ್ತದಲ್ಲಿ T ಕೋಶ, B ಕೋಶ ಹಾಗೂ ಪ್ರತಿಕಾಯಗಳು (ಆಂಟಿಬಾಡೀಸ್) ಹೀಗೆ ಹೊಸದಾಗಿ ಸೃಷ್ಟಿಯಾಗಿ ಯುದ್ಧಕ್ಕೆ ಇಳಿಯುತ್ತವೆ.
ಒಮ್ಮೆ ಇವು ವೇಷ ಧರಿಸಲು ಕಲಿತರೆ ನಮ್ಮ ದೇಹ ಅದನ್ನು ಎಂದೂ ಮರೆಯುವುದಿಲ್ಲ. ಮಮ್ಸ್ ಅಥವಾ ದಢಾರದ ರೋಗಾಣುಗಳ ವಿರುದ್ಧ ಶಸ್ತ್ರಾಸ್ತ್ರ ಸಜ್ಜಾಗಿ, ಬಾಲ್ಯದಲ್ಲಿ ಈ ರೋಗಗಳನ್ನು ಮಣಿಸಿದ್ದೇ ಆದರೆ ಮುಂದೆ ಎಂದೂ ಈ ರೋಗಗಳು ಬಾರದಂತೆ ದೇಹ ಅದೇ ಶಸ್ತ್ರಾಸ್ತ್ರವನ್ನು ಶೀಘ್ರದಲ್ಲೇ ಹಿಡಿದು ನಿಲ್ಲುತ್ತದೆ.
[ಎಲ್ಲ ಸಂದರ್ಭದಲ್ಲೂ ಹೀಗೇ ಎಂದು ಹೇಳುವಂತಿಲ್ಲ. ರೋಗಾಣು ತನ್ನ ಹಳೇ ರೂಪವನ್ನು ಕಳಚಿಹಾಕಿ ಹೊಸ ರೂಪದಲ್ಲಿ ಬಂದರೂ ಬಂದೀತು. ಕೊರೊನಾ ವೈರಸ್ಸಿಗೆ ಈ ಗುಣ ಇದೆ. 2003ರಲ್ಲಿ ‘ಸಾರ್ಸ್’ ಹೆಸರಿನಲ್ಲಿ ಬಂದ ಇದೇ ಕೊರೊನಾ ವೈರಾಣು ಈಗ ಬೇರೆ ಕವಚ ಧರಿಸಿ ಬಂದಿದೆ. ಅದಕ್ಕೇ ಈಗಿನ ಈ ಹೊಸ ರಾಮಾಯಣ.]
ಹಾಗೆಂದು ಹೆದರಬೇಕಿಲ್ಲ. ಬಹುಪಾಲು ಜನರಲ್ಲಿ ಹುಟ್ಟಿದಾಗಿನಿಂದ ಬಂದ ರೋ.ಶ. ಸಾಕಷ್ಟು ಗಟ್ಟಿಯಾಗಿಯೇ ಇರುತ್ತದೆ. ಕೋವಿಡ್-೧೯ ಕಾಯಿಲೆ ಬಂದವರಲ್ಲಿ ಅರ್ಧಕ್ಕರ್ಧ ಜನಕ್ಕೆ ಕಾಯಿಲೆಯ ಲಕ್ಷಣಗಳು ಎದ್ದುಕಾಣುವ ಮೊದಲೇ ರೋಗಾಣು ನಿರ್ನಾಮ ಆಗಿರುತ್ತದೆ. ಇನ್ನು ಕೆಲವಷ್ಟು ಜನರು ಒಣಕೆಮ್ಮು, ಜ್ವರದಿಂದ ನಾಲ್ಕಾರು ದಿನ ಫಜೀತಿಪಟ್ಟರೂ ಅವರು ಆಸ್ಪತ್ರೆಗೆ ಧಾವಿಸಬೇಕಾಗಿಲ್ಲ. ನಾರು, ಬೇರು, ಶುಂಠಿ- ಅಮೃತಬಳ್ಳಿ ಕಷಾಯ, ಬೆಚ್ಚಗಿನ ಉಪ್ಪುನೀರಲ್ಲಿ ಬಾಯಿ ಮುಕ್ಕಳಿಸುವುದೇ ಮುಂತಾದ ಮನೆಮದ್ದು ಮಾಡಿಸಿಕೊಳ್ಳುತ್ತ ವಿಶ್ರಾಂತ ಸ್ಥಿತಿಯಲ್ಲಿದ್ದರೆ ಸಾಕು.ಆಂಟಿಬಯಾಟಿಕ್ಸ್ (ಜೀವಿರೋಧಕ ಮಾತ್ರೆ) ಕೂಡ ಬೇಕಾಗುವುದಿಲ್ಲ. ಇನ್ನು ಮೂರನೆಯ ಕೆಟೆಗರಿಯವರು ಆಸ್ಪತ್ರೆಗೆ ಹೋಗಿ ಔಷಧಗಳ ಸಾಗರದಲ್ಲಿ ಮಿಂದೆದ್ದು ನಿಂತು ಗುಣಮುಖರಾಗಿ ಬರುತ್ತಾರೆ.
ತೀರ ಅಪರೂಪಕ್ಕೆ ನೂರರಲ್ಲಿ ಒಬ್ಬಿಬ್ಬರಿಗೆ (ಮಾತ್ರ) ಶ್ವಾಸಕೋಶದಲ್ಲಿ ನೀರು ತುಂಬಿಕೊಂಡು, ಉಸಿರಾಟವೂ ಕಷ್ಟವಾಗಿ, ಕೃತಕ ಉಸಿರಾಟದ ವೆಂಟಿಲೇಟರ್ ಹಾಕಿಸಿಕೊಳ್ಳಬೇಕಾಗುತ್ತದೆ. ಅವರ ವಿಷಯ ಕೊಂಚ ಕಷ್ಟ. ಅಂಥವರಲ್ಲಿ ರೋ.ಶ. ದುರ್ಬಲವಾಗಿರುತ್ತದೆ. ಒಂದೋ ಅವರು ತೀರ ಇಳಿವಯಸ್ಸಿನವರಾಗಿ, ಸಂಸಾರಬಂಧನವನ್ನು ಕಳಚಿಕೊಳ್ಳಲು ಸಿದ್ಧರಾಗಿರಬಹುದು. ಅಥವಾ ಕಿರಿ ವಯಸ್ಸಿನವರಾಗಿದ್ದರೂ ಅವರ ರೋ.ಶ.ಕ್ಕೆ ಜಾಸ್ತಿ ವಯಸ್ಸಾಗಿರಬಹುದು. ಅಂದರೆ, ಈಗಾಗಲೇ ಸ್ಥೂಲ ದೇಹಿಗಳಾಗಿ, ಇಲ್ಲವೆ ಸಕ್ಕರೆ ರೋಗಿಗಳಾಗಿ, ಅಥವಾ ಹೃದಯಸಂಬಂಧೀ ಕಾಯಿಲೆಯವರಾಗಿ ಅಥವಾ ಬೀಡಿ-ಸಿಗರೇಟು ಚಟದಿಂದಾಗಿ ಅವರ ಶ್ವಾಸಕೋಶ ಸಾಕಷ್ಟು ಆಗಲೇ ಸುಸ್ತಾಗಿರಬಹುದು. ಅಂಥವರು ಹುಷಾರಾಗಿರಬೇಕು.
ಹಾಗೆಂದು ಕೊರೊನಾ ಬಂತೆಂದು ಅವರೂ ತೀರ ಗಾಬರಿ ಪಡಬೇಕಿಲ್ಲ. ಫ್ರಾನ್ಸಿನ ಪಾಶ್ಚರ್ ಸಂಶೋಧನಾ ಸಂಸ್ಥೆಯ ತಜ್ಞರ 2018ರ ಅಧ್ಯಯನದ ಪ್ರಕಾರ, ಚಿಕ್ಕಂದಿನಿಂದ ನಾನಾ ಬಗೆಯ ವೈರಾಣು, ಬ್ಯಾಕ್ಟೀರಿಯಾ, ಜಂತುಹುಳುವಿನ ಬಾಧೆಯನ್ನು ಎದುರಿಸಿದ ದೇಹದಲ್ಲಿ ಸಾಕಷ್ಟು ಬಗೆಯ ಶಸ್ತ್ರಾಸ್ತ್ರಗಳು ಜಮಾ ಆಗಿರುತ್ತವೆ. ಒಂದಲ್ಲ ಒಂದು ಶಸ್ತ್ರದಿಂದ ಕೊರೊನಾ ಕೂಡ ಹಿಮ್ಮೆಟ್ಟಬಹುದು. ಆದರೆ ಬಾಲ್ಯದಿಂದಲೂ ತೀರ ಶುಚಿಯಾದ ನೀರು, ತೀರ ಶುದ್ಧಾತಿಶುದ್ಧ ಆಹಾರ ಸೇವಿಸುತ್ತ ಶುದ್ಧೋದನನ ಅರಮನೆಯ ಮಕ್ಕಳಂತೆ ಬೆಳೆದಿದ್ದರೆ ಅಂಥವರ ದೇಹದಲ್ಲಿ ರೋಗನಿರೋಧಕ ಶಸ್ತ್ರಾಸ್ತ್ರಗಳ ಸಂಖ್ಯೆ ಕಡಿಮೆ ಇರುತ್ತದೆ. (ಯುರೋಪ್ ಅಮೆರಿಕದಲ್ಲಿ ಎಷ್ಟೆಲ್ಲ ಜನರನ್ನು ಕೋವಿಡ್ ಕೊಲ್ಲುತ್ತಿದೆ.) ಇದೀಗ ಬಂದ ಮಾಹಿತಿಯ ಪ್ರಕಾರ, ಬಾಲ್ಯದಲ್ಲಿ ಕ್ಷಯನಿರೋಧಕ ಬಿಸಿಜಿ ಚುಚ್ಚುಮದ್ದನ್ನು ಹಾಕಿಸಿಕೊಂಡಿದ್ದರೆ ಅಂಥವರಿಗೆ ಕೊರೊನಾ ಅಷ್ಟಾಗಿ ಬಾಧಿಸುವುದಿಲ್ಲವಂತೆ. ಭಾರತ, ಜಪಾನ್ ಮುಂತಾದ ಕೆಲವೇ ದೇಶಗಳಲ್ಲಿ ಹಿಂದೆಲ್ಲ ಬಿಸಿಜಿ ಕಡ್ಡಾಯವಾಗಿತ್ತು. ಇಂಥ ದೇಶಗಳಲ್ಲಿ ಕೊರೊನಾ ಕುಣಿದಾಟ ಇದುವರೆಗೆ ಕಡಿಮೆ ಇದೆ.
ಇವೆಲ್ಲಕ್ಕಿಂತ ಮುಖ್ಯವಾಗಿ ರೋ.ಶ. ನಮ್ಮನಮ್ಮ ಜೀನ್ಸ್ ಅಂದರೆ ರಕ್ತಗುಣದಲ್ಲಿ ಬಂದಿರುತ್ತದೆ. ನಮ್ಮ ತಾತ, ಮುತ್ತಜ್ಜಿಯರು ಎಷ್ಟೆಷ್ಟು ಬಗೆಯ ರೋಗಗಳನ್ನು ಎದುರಿಸಿ ಬದುಕಿದ್ದರಿಂದಲೇ ನಾವು ಇಂದು ಇಲ್ಲಿದ್ದೇವೆ. ಯುರೋಪ್ ಅಮೆರಿಕದಂತಹ ಚಳಿಪ್ರದೇಶಗಳಲ್ಲಿ ಹಿಂದಿನ ಕಾಲದಲ್ಲೂ ರೋಗಾಣುಗಳ ಸಂಖ್ಯೆ ತೀರ ಕಮ್ಮಿ ಇತ್ತು. ಹಿಮಪ್ರದೇಶಗಳಲ್ಲಿ ಸೊಳ್ಳೆ ಕೂಡ ಇರುವುದಿಲ್ಲ. ಹಾಗಾಗಿ ಅವರ ವಂಶಗುಣದಲ್ಲಿ ರೋ.ಶ. ಸಹಜವಾಗಿ ಕಡಿಮೆ ಇತ್ತು. ಆದ್ದರಿಂದಲೇ ಪ್ಲೇಗು, ಸಿಡುಬಿನಂಥ ಕಾಯಿಲೆಗಳು ಬಂದೆರಗಿದಾಗ ಅಲ್ಲಿಯ ಜನರು ಅಕ್ಷರಶಃ ಹುಳಗಳಂತೆ ಸಾಯುತ್ತಿದ್ದರು.
ಈಗಲೂ ಸಾಮಾನ್ಯ ನೆಗಡಿ ಜ್ವರಕ್ಕೇ ಅಮೆರಿಕದಲ್ಲಿ ದಿನಕ್ಕೆ ಸರಾಸರಿ ನೂರು ಜನರು (ಹೌದು, ಪ್ರತಿದಿನಕ್ಕೆ ನೂರು; ವರ್ಷಕ್ಕೆ 36ಸಾವಿರ ಜನರು) ಸಾಯುತ್ತಾರೆ. ಅದಕ್ಕೆ ಲಸಿಕೆ ಪಸಿಕೆ,ನೂರೊಂದು ಔಷಧಗಳು ಇದ್ದರೂ ಫ್ಲೂ ರೋಗಾಣು ಅಷ್ಟೊಂದು ಜನರನ್ನು ಬಲಿ ತೆಗೆದುಕೊಳ್ಳುತ್ತಿದೆ. ಅವರ ದುರದೃಷ್ಟಕ್ಕೆ ಈಗಿನ ಈ ಕೊರೊನಾ ಕೂಡ ಚಳಿಮಂಜಿನ ದಿನಗಳಲ್ಲಿ (ಉಷ್ಣತೆ 7ರಿಂದ 25 ಡಿಗ್ರಿ ಸೆ. ಇದ್ದಲ್ಲಿ) ತುಂಬ ಉಗ್ರವಾಗಿರುತ್ತದೆ. ವೈರಾಣುಗಳು ಪಬ್ಗಳಲ್ಲಿ, ಸೂಪರ್ ಬಝಾರ್ಗಳಲ್ಲಿ ಬಾಗಿಲ ಹಿಡಿಕೆಗಳ ಮೇಲೆ, ಎಸ್ಕಲೇಟರಿನ ಜಾರುಪಟ್ಟಿಯ ಮೇಲೆ, ಲಿಫ್ಟ್ ಎಂಬ ಏರುಬಂಡಿಯಲ್ಲಿರುವ ಬಟನ್ಗಳ ಮೇಲೆ ಹೆಚ್ಚಿನ ಅವಧಿಯಲ್ಲಿ ಜೀವಂತವಾಗಿ ಕೂತಿರುತ್ತವೆ. ಪಾರ್ಕಿನಲ್ಲಿ, ಫುಟ್ಪಾತ್ ನಲ್ಲಿ, ರೈಲಿನಲ್ಲಿ, ಲಿಫ್ಟ್ನಲ್ಲಿ ಆಲಿಂಗನ, ಚುಂಬನ ಇದ್ದಲ್ಲಂತೂ ವೈರಾಣುವಿಗೆ ಮಜವೋ ಮಜ!
ನಮ್ಮ ದೇಹ, ನಮ್ಮ ದೇಶ ಎರಡೂ ಗಟ್ಟಿಮುಟ್ಟಾಗಿದೆ. ಇಲ್ಲಿ ಬೇಸಿಗೆ ಉಗ್ರವಾಗಿದೆ, ವೈರಾಣುವಿನ ಉಗ್ರತೆಯನ್ನು ಗಾಳಿಯೇ ಕಮ್ಮಿ ಮಾಡಿರುತ್ತದೆ. ಜೊತೆಗೆ ಇಲ್ಲಿನ ಹತ್ತಾರು, ಅಷ್ಟೇಕೆ ನೂರಾರು ಬಗೆಯ ರೋಗಾಣುಗಳ ಸಂತೆಯನ್ನೇ ನೋಡಿ ಕೊರೊನಾ ಇನ್ನಷ್ಟು ನರ್ವಸ್ ಆಗಲೂ ಬಹುದು. ಆ ಸಂತೆಯಲ್ಲಿ ಓಡಾಡುತ್ತ ನಾವು ನಮ್ಮ ದೇಹದಲ್ಲಿ ಎಷ್ಟೊಂದು ರೋ.ಶ. ಶಸ್ತ್ರಾಸ್ತ್ರಗಳನ್ನು ಪೇರಿಸಿಕೊಂಡಿದ್ದೇವೆ. ಅಮೆರಿಕದಲ್ಲಿ ಫ್ಲೂ ರೋಗದಿಂದ ಸಾಯುವವರ ಸಂಖ್ಯೆಯನ್ನು ನೆನಪಿಸಿಕೊಳ್ಳಿ. ನಾವೂ ವರ್ಷಕ್ಕೆ ಎಷ್ಟೊಂದು ಬಾರಿ ಫ್ಲೂ-ನೆಗಡಿ ಎದುರಿಸುವುದಿಲ್ಲ? ನಮ್ಮಲ್ಲಿ ನೆಗಡಿಜ್ವರದ ಸಾವಿನ ಸಂಖ್ಯೆ ಅಮೆರಿಕದ ಹತ್ತರಲ್ಲೊಂದು ಪಾಲೂ ಇಲ್ಲ.
ಆದರೂ ನಾವು ಎಚ್ಚರದಿಂದಿರಬೇಕು. ಯಾಕೆ ಗೊತ್ತೆ? ನಮ್ಮೊಳಗಿನ ರೋ.ಶ.ಕ್ಕೆ ಒಂದು ಸಣ್ಣ ದೌರ್ಬಲ್ಯವೂ ಇದೆ. ನಮ್ಮ ಮನಸ್ಸು ಅಧೀರವಾದರೆ, ನಾವು ಧೈರ್ಯಗುಂದಿದರೆ ಈ ರೋ.ಶ. ಕೂಡ ನರ್ವಸ್ ಆಗುತ್ತದೆ. ಬೇಕಿದ್ದರೆ ಯಾವುದೇ ಮನೋವಿಜ್ಞಾನಿಗಳನ್ನು ಕೇಳಿ ನೋಡಿ. ಮನೋಬಲಕ್ಕೂ ದೇಹಬಲಕ್ಕೂ ನೇರಸಂಬಂಧ ಇದೆ.
ಮಾಧ್ಯಮಗಳ ಈ ಬಗೆಯ ಡೋಲು ತಮಟೆಯ ಅಬ್ಬರದಿಂದಾಗಿ ನಮ್ಮ ಆತ್ಮವಿಶ್ವಾಸ, ನಮ್ಮ ರೋಗನಿರೋಧಕ ಶಕ್ತಿ ಕೂಡ ಕುಂದಬಹುದು. ಟಿವಿ ನೋಡುತ್ತ ಕೂತಂತೆ ಗಂಟಲಲ್ಲಿ ಸಣ್ಣ ಕೆರೆತವೂ ದೊಡ್ಡದಾಗಿ, ಸಣ್ಣ ಆಕ್ಷೀ ಕೂಡ ದೊಡ್ಡ ಸೀನನ್ನೇ ಸೃಷ್ಟಿ ಮಾಡಿ ನಮ್ಮನ್ನು ಮತ್ತು ಇಡೀ ಕುಟುಂಬವನ್ನು ತಬ್ಬಿಬ್ಬು ಮಾಡುತ್ತದೆ. ನಮ್ಮೊಳಗಿನ ರೋ.ಶ. ‘’ತೋಳ ಬಂತಲೇ ತೋಳ’’ದ ಕತೆಯಂತೆ ಮತ್ತೆ ಮತ್ತೆ ಧಿಗ್ಗನೆದ್ದು ಮತ್ತೆ ಮತ್ತೆ ಹೈರಾಣಾಗಿ ಮುದುಡುತ್ತದೆ.
ಅಷ್ಟೇ ಅಲ್ಲ, ಕಣ್ಣಿಗೆ ರಾಚುವ ಪ್ರತಿಯೊಂದು ಮುಖವಾಡವೂ ಕೊರೊನಾವನ್ನು ಸಂಕೇತಿಸುತ್ತದೆ. ಸಮಾಜದಲ್ಲಿ ಮುಗುಳ್ನಗೆಯೇ ಮರೆತಂತಾಗಿದೆ. ಭಯ, ಅಧೀರತೆ ಎಲ್ಲೆಲ್ಲೂ ತಾಂಡವವಾಡತೊಗಿದೆ. ಕೊರೊನಾ ಕೌರವ ಪಡೆಯನ್ನು ಕಂಡಾಕ್ಷಣ ಅಸಲೀ ಕದನ ಆರಂಭವಾಗುವ ಮೊದಲೇ ನಾವು ಉತ್ತರ ಕುಮಾರರಾಗುತ್ತಿದ್ದೇವೆ. ಅರ್ಜುನ ಅವಿತಿರುತ್ತಾನೆ.
ಕೊರೊನಾ ವೈರಾಣು ಜಾಣ. ವಿಮಾನ ಏರಿದರೆ ಜೆಟ್ ವೇಗದಲ್ಲಿ ಚಲಿಸಬಹುದು ಎಂಬುದು ಅದಕ್ಕೆ ಗೊತ್ತಾಗಿದೆ. ಯುರೋಪ್, ಅಮೆರಿಕಕ್ಕೆ ಹೋದರೆ ಪುಷ್ಕಳ ಬೇಟೆ ಸಿಗುತ್ತದೆ ಎಂಬುದೂ ಅದಕ್ಕೆ ಗೊತ್ತಿದೆ. ಹೇಗೂ ಮೀಡಿಯಾ ತನ್ನ ಸ್ವಾಗತಕ್ಕೆ ತುತ್ತೂರಿ ದುಂದುಭಿ ಮೊಳಗಿಸುತ್ತ, ಕಂಡಕಂಡವರಿಗೆ ಮುಖವಾಡ ತೊಡಿಸುತ್ತ, ಸಮೂಹಸನ್ನಿಯನ್ನು ಸೃಷ್ಟಿಸಿ ಇಡೀ ನಾಗರಿಕತೆಯ ಜಂಘಾಬಲವನ್ನೇ ಉಡುಗಿಸುತ್ತಿದೆ. ವಿಮಾನಗಳನ್ನು ನೆಲಕ್ಕಿಳಿಸಿ, ಹೈಸ್ಪೀಡ್ ರೈಲುಗಳನ್ನು, ಕಾರುಗಳನ್ನು ಹಡಗುಗಗಳನ್ನು ನಿಂತಲ್ಲೇ ನಿಲ್ಲಿಸಿದ್ದಷ್ಟೇ ಅಲ್ಲ, ಲಕ್ಷುರಿ ಕಾರುಗಳನ್ನು ತಯಾರಿಸುತ್ತಿದ್ದ ಜಿಎಮ್, ಫೋರ್ಡ್, ಟಾಟಾ ಮಹೀಂದ್ರಗಳೆಲ್ಲ ತಮ್ಮ ಕಾರ್ಖಾನೆಗಳಲ್ಲಿ ವೆಂಟಿಲೇಟರ್ಗಳನ್ನೂ ಟೆಸ್ಟಿಂಗ್ ಕಿಟ್ಗಳನ್ನೂ ತಯಾರಿಸಲು ತೊಡಗುವಂತೆ ಮಾಡಿದೆ. ಮಹಾನ್ ರಾಷ್ಟ್ರನಾಯಕರುಗಳನ್ನು ಟಿವಿ ಕ್ಯಾಮರಾಗಳ ಎದುರಿಗೆ ತಂದು ನಿಲ್ಲಿಸಿದೆ.
ಈ ಮಹಾನ್ ನಾಯಕರುಗಳಿಗೆ ಕೊರೊನಾ ಒಂದು ಹೊಸ ಪಾಠವನ್ನು ಕಲಿಸುತ್ತಿದೆ. ರಾಷ್ಟ್ರ ರಕ್ಷಣೆ ಎಂದರೆ ಕೇವಲ ಅಣ್ವಸ್ತ್ರಗಳನ್ನೋ ಫೈಟರ್ ಜೆಟ್ಗಳನ್ನೋ ಸಬ್ಮರೀನ್ಗಳನ್ನೋ ಪೇರಿಸುವುದಷ್ಟೇ ಅಲ್ಲ; ಸಮುದಾಯ ಆರೋಗ್ಯ, ಗುಣಮಟ್ಟದ ಔಷಧ, ಕೈಗೆಟಕುವ ಮಟ್ಟದಲ್ಲಿ ಸುಸಜ್ಜಿತ ಆಸ್ಪತ್ರೆ, ಸಮರ್ಪಣ ಮನೋಭಾವದ ಸ್ವಾಸ್ಥ್ಯ ಸಿಬ್ಬಂದಿ ಕೂಡ ರಕ್ಷಣೆಯ ಭಾಗವೇ ಆಗಬೇಕೆಂಬುದನ್ನು ಅದು ಕಲಿಸುತ್ತಿದೆ.
ಹಾಗೆಯೇ ನಗರಗಳಿಂದ ಗುಳೆಹೊರಟ ಬರಿಹೊಟ್ಟೆಯ, ಖಾಲಿ ಕಿಸೆಯ, ಬೊಬ್ಬೆಗಾಲಿನ ಶ್ರಮಜೀವಿಗಳ ಮೂಲಕ ಅದು ಸರಕಾರಗಳಿಗೆ ಇನ್ನೂ ಒಂದು ಪಾಠವನ್ನು ಕಲಿಸುತ್ತಿದೆ. ರಾಷ್ಟ್ರದ ಘನತೆ ಎಂದರೆ ಕೇವಲ ಥಳಥಳಿಸುವ ಐಟಿ ಪಾರ್ಕ್, ಏರ್ಪೋರ್ಟ್, ಭರ್ಜರಿ ಹೈವೇ, ಪೆಟ್ರೋಲ್ ಬಂಕ್ ಇದ್ದರೆ ಸಾಲದು; ಊರೂರಲ್ಲಿ ನೆರಳಿಗೆ ಒಂದಿಷ್ಟು ಗಿಡಮರಗಳು, ತುರ್ತು ಆಸರೆಗೆ ಉತ್ತಮ ಶಾಲೆ ಇರಬೇಕು, ಶುದ್ಧ ನೀರು-ಶೌಚದ ವ್ಯವಸ್ಥೆ ಇರಬೇಕು. ಕಡೇಪಕ್ಷ ರಕ್ತಸೋರುವ ಕಾಲುಗಳಿಗೆ ಬ್ಯಾಂಡೇಜ್ ಪಟ್ಟಿ ಸಿಗುವಂಥ ಪ್ರಾಥಮಿಕ ಶುಶ್ರೂಷೆಯ ಸೌಲಭ್ಯ ಇರಬೇಕು ಎಂದು ಅದು ಹೇಳುತ್ತಿದೆ.
ಮುಂದಿನ ಗಣರಾಜ್ಯದ ಪರೇಡ್ನಲ್ಲಿ ಮಿಲಿಟರಿ ಫೇರಿಗಿಂತ ಮುಂಚೂಣಿಯಲ್ಲಿ ಸುಸಜ್ಜಿತ ಆಸ್ಪತ್ರೆಯ, ಸುಸಜ್ಜಿತ ಶಾಲೆಯ ಮೆರವಣಿಗೆಯ ವ್ಯವಸ್ಥೆ ಮಾಡಿ ಎಂದು ಅದು ಹೇಳುತ್ತಿದೆಯೇನೊ.ಇದನ್ನೆಲ್ಲ ಅಳೆದು ತೂಗಿ ನೋಡಿದರೆ, ಪ್ರಾಯಶಃ ಕೊರೊನಾಕ್ಕೆ ನಾವು ಶಾಪ ಹಾಕಬೇಕಿಲ್ಲ. ಅದನ್ನು ಮೆರೆಸಿ ಕುಣಿಸುತ್ತಿರುವ ಮಾಧ್ಯಮವನ್ನೂ ಶಪಿಸಬೇಕಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭಾರತದ ಜನಸಂಖ್ಯೆ ವರವೋ..? ಶಾಪವೋ..?

- ಅಂಬಿಕಾ. ಕೆ
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಬೆಂಗಳೂರು ವಿಶ್ವವಿದ್ಯಾಲಯ
ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.
ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.
ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.
ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.
ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.
ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

- ವೆನ್ನೆಲಾ ಕೆ.
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು
ಇತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.
ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.
ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.
ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.
ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.
ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಬಹಿರಂಗ
ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

- ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ ಚಿಂತಕರು, ಬೆಂಗಳೂರು
ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.
ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.
ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.
ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.
ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.
ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.
ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ
-
ದಿನದ ಸುದ್ದಿ5 days ago
ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ
-
ದಿನದ ಸುದ್ದಿ1 day ago
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್
-
ದಿನದ ಸುದ್ದಿ4 days ago
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು
-
ದಿನದ ಸುದ್ದಿ19 hours ago
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ