Connect with us

ರಾಜಕೀಯ

ಮೀಡಿಯಾಗಳು ಮೋದಿ ಪರವಾಗಿಲ್ಲ; ಪರವಾಗಿ ಇರಲೇಬೇಕಿದೆ’: ಎಬಿಪಿ ನ್ಯೂಸ್‌ ವೃತ್ತಾಂತದ ಸುತ್ತ…

Published

on

ಸುದ್ದಿದಿನ ಡೆಸ್ಕ್ | ಎಬಿಪಿ ನ್ಯೂಸ್‌ ನೆಟ್‌ವರ್ಕ್‌ನ ಮ್ಯಾನೇಜಿಂಗ್‌ ಎಡಿಟರ್‌ ಮಿಲಿಂದ್‌ ಖಂಡೇಕರ್‌ ಆಗಸ್ಟ್‌ 1ರಂದು ರಾಜೀನಾಮೆ ನೀಡಿ ಸಂಸ್ಥೆಯಿಂದ ಹೊರ ನಡೆದಿದ್ದಾರೆ. ಬೆನ್ನಿಗೆ ಹಲವು ಹಿರಿತಲೆಗಳೂ ಚಾನಲ್‌ ತೊರೆದಿದ್ದಾರೆ.

ಕೆಲವು ತಿಂಗಳ ಕೆಳಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ‘ದೇಶದ ಮಾಧ್ಯಮ ವಲಯದಲ್ಲಿ ಭಯ ಸೃಷ್ಟಿಯಾಗಿದೆ. ಪತ್ರಕರ್ತರು, ಮಾಧ್ಯಮ ಸಂಸ್ಥೆಗಳು ಒತ್ತಡದಲ್ಲಿವೆ’ ಎಂಬರ್ಥದ ಹೇಳಿಕೆ ನೀಡಿದ್ದರು.

ಈ ಆರೋಪಗಳ ನಡುವೆ ಎಬಿಪಿ ನ್ಯೂಸ್‌ ನೆಟ್‌ವರ್ಕ್‌ನ ಮ್ಯಾನೇಜಿಂಗ್‌ ಎಡಿಟರ್‌ ಮಿಲಿಂದ್‌ ಖಂಡೇಕರ್‌ ಆಗಸ್ಟ್‌ 1ರಂದು ರಾಜೀನಾಮೆ ನೀಡಿ ಸಂಸ್ಥೆಯಿಂದ ಹೊರ ನಡೆದಿದ್ದಾರೆ. ಬೆನ್ನಿಗೆ ಹಲವು ಹಿರಿತಲೆಗಳೂ ಚಾನಲ್‌ ತೊರೆದಿದ್ದಾರೆ. ವಾಹಿನಿಯಲ್ಲಿ ಪ್ರೈಮ್‌ಟೈಮ್‌ ಕಾರ್ಯಕ್ರಮ ಮಾಸ್ಟರ್‌ಸ್ಟ್ರೋಕ್‌ ನಡೆಸಿಕೊಡುತ್ತಿದ್ದ ಹಿರಿಯ ಪತ್ರಕರ್ತ ಪುನ್ಯ ಪ್ರಸೂನ್‌ ಬಾಜಪೇಯಿ ಗುರುವಾರ ಚಾನಲ್ ತೊರೆದಿದ್ದರೆ, ಅಭಿಸಾರ್‌ ಶರ್ಮಾ ರಜೆಯ ಮೇಲೆ ಕಚೇರಿಯಿಂದ ಹೊರ ಹೋಗಿದ್ದಾರೆ.

ಸಾಮಾನ್ಯವಾಗಿ ಪತ್ರಕರ್ತರು ಮಾಧ್ಯಮ ಸಂಸ್ಥೆಯೊಂದನ್ನು ತೊರೆದಾಗ ಮಾಧ್ಯಮ ವಲಯದಿಂದಾಚೆ ಚರ್ಚೆಗಳಾಗುವುದು ಅಪರೂಪ. ಆದರೆ ಬಾಜಪೇಯಿ ಮತ್ತು ಖಂಡೇಕರ್‌ ನಿರ್ಗಮನ ಪತ್ರಕರ್ತರ ವರ್ತುಲ ದಾಟಿ ಸುದ್ದಿಯಾಗಿದೆ.

ಈ ಕುರಿತು ಟ್ಟೀಟ್‌ ಮಾಡಿರುವ ಕಾಂಗ್ರೆಸ್ ವಕ್ತಾರ ರಣದೀಪ್‌ ಸಿಂಗ್‌ ಸುರ್ಜೇವಾಲ, ‘ಅಧಿಕಾರದಲ್ಲಿರುವವರ ಬಗೆಗಿನ ಸತ್ಯದ ಧ್ವನಿಯನ್ನು ನಿಗ್ರಹಿಸುವ ಯತ್ನ ಇದು’ ಎಂದು ಕಿಡಿಕಾರಿದ್ದಾರೆ. ಇನ್ನೊಂದು ಕಡೆ ಸಂಸತ್‌ನಲ್ಲಿ ಮಾತನಾಡಿರುವ ಟಿಎಂಸಿ ಸಂಸದ ಡೆರೇಕ್‌ ಓಬ್ರಿಯಾನ್, ಪತ್ರಕರ್ತರ ಮೇಲೆ ಒತ್ತಡಗಳಿವೆ ಎಂದು ಹೇಳಿದ್ದಾರೆ.

ಆಗಿದ್ದೇನು?

ಅಷ್ಟಕ್ಕೂ ಈ ಪತ್ರಕರ್ತರ ನಿರ್ಗಮನಕ್ಕೆ ಕಾರಣವಾಗಿದ್ದು ಏನು ಎಂದು ಹುಡುಕುತ್ತಾ ಹೊರಟರೆ ಅಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮ ಮತ್ತು ಅದರ ಸುತ್ತಾ ನಡೆದ ಘಟನಾವಳಿಗಳು ಕಾಣಿಸಿಕೊಳ್ಳುತ್ತವೆ.

ತಮ್ಮ ಅವಧಿ ಮುಗಿಯುತ್ತಾ ಬಂದಿರುವಾಗ ಪ್ರಧಾನಿ ನರೇಂದ್ರ ಮೋದಿ ದೇಶದ ವಿವಿಧ ಸಮುದಾಯಗಳ ಜತೆ ಸಂವಾದ ನಡೆಸುತ್ತಿದ್ದಾರೆ. ಹೀಗೆ ಛತ್ತೀಸ್‌ಗಢದ ಚಂದ್ರಮನಿ ಕೌಶಿಕ್‌ ಎಂಬ ಮಹಿಳೆ ಜತೆ ಅವರು ಮಾತುಕತೆ ನಡೆಸುತ್ತಿದ್ದಾಗ, ಆಕೆ ‘ನಾನು ಭತ್ತ ಬೆಳೆಯುವ ಬದಲು ಸೀತಾಪಲ ಬೆಳೆಯಲು ಆರಂಭಿಸಿ ದುಪ್ಪಟ್ಟು ಲಾಭ ಗಳಿಸುತ್ತಿದ್ದೇನೆ’ ಎಂದು ಹೇಳಿದ್ದರು.

ಈ ಬಗ್ಗೆ ‘ಮಾಸ್ಟರ್‌ಸ್ಟ್ರೋಕ್’ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿದ್ದ ಬಾಜಪೇಯಿ, ಮಹಿಳೆಗೆ ಸುಳ್ಳು ಹೇಳಲು ತರಬೇತಿ ನೀಡಲಾಗಿದೆ ಎಂದು ಆರೋಪಿಸಿದ್ದರು. ದೆಹಲಿಯಿಂದ ಕಂಕೇರ್‌ ಜಿಲ್ಲೆಗೆ ತೆರಳಿದ್ದ ಅಧಿಕಾರಿಯೊಬ್ಬರು ಈ ರೀತಿ ತಪ್ಪು ಮಾಹಿತಿ ಹೇಳುವಂತೆ ಮಹಿಳೆಗೆ ಸೂಚಿಸಿದ್ದರು ಎಂದು ವರದಿಯಲ್ಲಿ ಹೇಳಲಾಗಿತ್ತು. ಈ ವಿಡಿಯೋ ಕ್ಲಿಪ್‌ನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ ಗಾಂಧಿ ಟ್ಟೀಟ್‌ ಮಾಡುವ ಮೂಲಕ ಇದು ಎಬಿಪಿಯ ಸಾಂಪ್ರದಾಯಿಕ ವೀಕ್ಷಕರನ್ನು ದಾಟಿ ಜನರನ್ನು ತಲುಪಿತ್ತು.

ಮುಗಿಬಿದ್ದ ಬಿಜೆಪಿ

ಇಷ್ಟಾಗಿದ್ದೇ ತಡ ಬಿಜೆಪಿಗರು ಎಬಿಪಿ ನ್ಯೂಸ್‌ ವಿರುದ್ಧ ಮುಗಿಬಿದ್ದಿದ್ದರು. ಕೇಂದ್ರ ಸಚಿವ ರಾಜ್ಯವರ್ಧನ್‌ ಸಿಂಗ್‌ ರಾಥೋಡ್‌ ನರೇಂದ್ರ ಮೋದಿಯನ್ನು ವಿರೋಧಿಸುವ ಅಜೆಂಡಾವನ್ನು ಎಬಿಪಿ ಪತ್ರಕರ್ತರು ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿದರು. ವಾಹಿನಿಯ ವರದಿ ಸುಳ್ಳು ಎಂದು ಅವರು ಕಿಡಿಕಾರಿದರು. ರಕ್ಷಣಾ ಸಚಿವೆ, ಮಾಜಿ ಪತ್ರಕರ್ತೆ ನಿರ್ಮಲಾ ಸೀತರಾಮನ್‌ ಬಾಯಿಯಿಂದಲೂ ಇದೇ ಮಾತು ಹೊರ ಬಂತು.

ಈ ಆರೋಪಕ್ಕೆ ಪ್ರತಿಕ್ರಿಯೆ ನೀಡಲು ನಿರ್ಧರಿಸಿದ ‘ಎಬಿಪಿ ನ್ಯೂಸ್‌’ ತನ್ನ ವರದಿಗಾರನನ್ನು ಮಹಿಳೆಯಿದ್ದ ಗ್ರಾಮಕ್ಕೆ ಕಳುಹಿಸಿ ವಾಸ್ತವ ವರದಿಯನ್ನು ಬಿತ್ತರಿಸಿತು. ಮತ್ತು ಇದು ನಿಮ್ಮ ‘ಫೇಕ್ ನ್ಯೂಸ್‌’ ಆರೋಪಕ್ಕೆ ಪ್ರತಿಕ್ರಿಯೆ ಎಂಬುದಾಗಿ ನಿರ್ಮಾಲಾ ಸೀತಾರಾಮನ್‌ ಮತ್ತು ರಾಜ್ಯವರ್ಧನ್‌ ಸಿಂಗ್‌ ರಾಥೋಡ್‌ರನ್ನು ಟ್ಯಾಗ್‌ ಮಾಡಿ ಟ್ಟೀಟ್‌ ಮಾಡಿತು.

ಈ ಬೆಳವಣಿಗೆಯಿಂದ ಉರಿದು ಹೋದ ಬಿಜೆಪಿ ನಾಯಕರು ಚಾನಲ್‌ಗೆ ಬಹಿಷ್ಕಾರ ಹಾಕಲು ನಿರ್ಧರಿಸಿದ್ದರು ಎಂದು ಚಾನಲ್‌ ಮೂಲಗಳು ಹೇಳಿದ್ದಾಗಿ ‘ಸ್ಕ್ರಾಲ್‌’ ವರದಿ ಮಾಡಿದೆ.

ಹೀಗೊಂದು ಹೊಸ ಒತ್ತಡ ತಂತ್ರ

ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ವಾಹಿನಿಗೆ ಹೊಸತೊಂದು ತಲೆನೋವು ಆರಂಭವಾಯಿತು. ‘ಮಾಸ್ಟರ್‌ಸ್ಟ್ರೋಕ್‌’ ಕಾರ್ಯಕ್ರಮ ಪ್ರಸಾರವಾಗುತ್ತಿದ್ದ ಪ್ರೈಮ್‌ಟೈಮ್‌ ಅವಧಿಯಲ್ಲೇ ವಾಹಿನಿಯ ಸಿಗ್ನಲ್‌ನಲ್ಲಿ ತೊಂದರೆ ಕಾಣಿಸಿಕೊಳ್ಳಲು ಆರಂಭವಾಯಿತು. ಜುಲೈ 13ರಿಂದ ತಾಂತ್ರಿಕ ಸಮಸ್ಯೆಯೊಂದು ತೆರೆದುಕೊಂಡಿತು.

ಇವೆಲ್ಲಾ ವಾಹಿನಿಯ ಗಮನಕ್ಕೂ ಬಂದಿತ್ತು. ಇದನ್ನು ಉದ್ದೇಶಿಸಿಯೇ ‘ಎಲ್ಲಾ ಅಡ್ಡಿ ಆತಂಕಗಳ ನಡುವೆಯೂ ವಾಹಿನಿ ಸತ್ಯವನ್ನೇ ಹೇಳುತ್ತಾ ಬಂದಿದೆ’ ಎಂದು ಬಾಜಪೇಯಿ ಕಾರವಾಗಿ ಟ್ಟೀಟ್‌ ಮಾಡಿದ್ದರು. ತಮ್ಮ ಮಾಸ್ಟ್ರರ್‌ಸ್ಟ್ರೋಕ್‌ ಪ್ರೋಗ್ರಾಂಗೆ ಆಗುತ್ತಿರುವ ಈ ಸಿಗ್ನಲ್‌ ಸಮಸ್ಯೆಯಿಂದ ಬೇಸತ್ತಿದ್ದ ಬಾಜಪೇಯಿ, ಹಸಿವಿನಿಂದ ಸಾಯುತ್ತಿರುವರುವವರು, ನಿರುದ್ಯೋಗ, ರೈತರ ಆತ್ಮಹತ್ಯೆ, ಶುದ್ಧಗಾಳಿ, ನೀರು ಇದ್ಯಾವುದರ ಕಡೆಯಗೂ ಗಮನ ನೀಡಲಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು. ಇದಾದ ನಂತರ ಅವರು ತಮ್ಮ ಶೋನ ವಿಡಿಯೋಗಳನ್ನು ಅನಿವಾರ್ಯವಾಗಿ ಟ್ಟೀಟ್‌ ಮಾಡಲು ಆರಂಭಿಸಿದ್ದರು.

ಅಂದ ಹಾಗೆ ಟಿವಿ ವಾಹಿನಿಗಳ ಪ್ರಸಾರಕ್ಕೆ ಬೇಕಾದ ಈ ಸಿಗ್ನಲ್‌ಗಳು ಕೇಂದ್ರ ಸರಕಾರದ ಸುಪರ್ದಿಯಲ್ಲಿವೆ. ಮತ್ತು ಹೀಗೆ ಇದ್ದಕ್ಕಿದ್ದ ಹಾಗೆ ವಾಹಿನಿಯೊಂದು ತಾಂತ್ರಿಕ ಸಮಸ್ಯೆಗೆ ಒಳಗಾಗಿದ್ದರ ಹಿಂದೆ ಏನು ನಡೆದಿರಬಹುದು ಎಂದು ಊಹಿಸುವುದು ಕಷ್ಟವೇನಲ್ಲ.

ಈ ಎಲ್ಲಾ ಬೆಳವಣಿಗೆಗಳ ನಂತರ ಬುಧವಾರ ಖಂಡೇಕರ್‌, ಗುರುವಾರ ಬಾಜೊಪೇಯಿ ರಾಜೀನಾಮೆ ನೀಡಿ ವಾಹಿನಿಯಿಂದ ಹೊರ ನಡೆದಿದ್ದಾರೆ. ಇನ್ನೋರ್ವ ಪತ್ರಕರ್ತ ಅಭಿಸಾರ್‌ ಶರ್ಮಾ ರಜೆಯ ಮೇಲೆ ತೆರಳಿದ್ದಾರೆ. ಬಹುಶಃ ‘ದೆಹಲಿ ದರ್ಬಾರ್‌’ನಲ್ಲಿ ಕುಳಿತವರೀಗ ಅಟ್ಟಹಾಸದ ನಗು ಬೀರುತ್ತಿರಬಹುದು. ನೀವು ನಮ್ಮ ಪರವಾಗಿರಿ ಇಲ್ಲವಾದಲ್ಲಿ ವೃತ್ತಿ ತೊರೆಯಲು ಸಿದ್ಧರಾಗಿ ಎಂಬ ಸಂದೇಶವೊಂದು ಮತ್ತೊಮ್ಮೆ ಎದುರಾಗಿದೆ. ಯಾಕೆ ದೇಶದ ಬಹುತೇಕ ಸುದ್ದಿವಾಹಿನಿಗಳು ಕೇಂದ್ರ ಸರಕಾರ ತುತ್ತೂರಿಗಳಾಗಿವೆ ಮತ್ತು ಪತ್ರಕರ್ತರು ಯಾಕೆ ಸ್ವಂತಿಕೆ ಕಳೆದುಕೊಂಡು ಬೆತ್ತಲಾಗಿದ್ದಾರೆ ಎಂಬುದಕ್ಕೆ ಉತ್ತರ ಈ ವೃತ್ತಾಂತದಲ್ಲಿ ಸಿಗುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ

Published

on

ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ ವೀರ ಯೋಧರಿಗೆ ಪ್ರಧಾನಿ ಗೌರವ ಸಮರ್ಪಣೆ ಮಾಡಲಿದ್ದಾರೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಶಿಂಕುನ್ ಲಾ ಸುರಂಗ ಮಾರ್ಗ ಯೋಜನೆಗೆ ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ.

ಈ ಯೋಜನೆಯಡಿ ನಿಮು-ಪದುಮ್-ಡಾರ್ಚಾ ರಸ್ತೆಯಿಂದ ಲೇಹ್‌ಗೆ ಎಲ್ಲಾ ಹವಾಮಾನಗಳಲ್ಲೂ ಸಂಪರ್ಕ ಕಲ್ಪಿಸಲು ಸುಮಾರು 15 ಸಾವಿರದ 800 ಅಡಿ ಎತ್ತರದಲ್ಲಿ 4.1 ಕಿಲೋಮೀಟರ್ ಉದ್ದದ ಜೋಡಿ ಸುರಂಗ ಮಾರ್ಗವನ್ನು ನಿರ್ಮಿಸಲಾಗುವುದು. ಈ ಕಾರ್ಯ ಪೂರ್ಣಗೊಂಡ ನಂತರ ವಿಶ್ವದಲ್ಲೇ ಇದು ಅತಿ ಎತ್ತರದ ಸುರಂಗ ಮಾರ್ಗವಾಗಲಿದೆ. ಸಶಸ್ತ್ರ ಪಡೆಗಳ ಸುಗಮ ಪ್ರಯಾಣಕ್ಕಷ್ಟೇ ಅಲ್ಲದೇ ಲಡಾಕ್‌ನಲ್ಲಿ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೂ ಈ ಸುರಂಗ ಮಾರ್ಗವು ಸಹಕಾರಿಯಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೇಂದ್ರ ಬಜೆಟ್ : ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

Published

on

ಸುದ್ದಿದಿನಡೆಸ್ಕ್:ಕೇಂದ್ರದ ಮುಂಗಡ ಪತ್ರ ದೇಶದ ಅಭಿವೃದ್ಧಿಗೆ ಪೂರಕವಾಗಿದೆ ಎಂದು ತೆಲುಗು ದೇಶಂ ನಾಯಕ ಕೇಂದ್ರ ಸಚಿವ ಕಿಂಜರಪು ರಾಮಮೋಹನ ನಾಯ್ಡು ಹೇಳಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಬಜೆಟ್ ಎಲ್ಲರ ಕನಸಾಗಿದೆ ಎಂದು ಹೇಳಿದ್ದಾರೆ. ಈಶಾನ್ಯ ರಾಜ್ಯಗಳ ಬೆಳವಣಿಗೆಗೆ ಆಯ-ವ್ಯಯ ಪೂರಕವಾಗಿದೆ ಎಂದು ಹೇಳಿದರು.

ಬಿಜೆಪಿ ಹಿರಿಯ ನಾಯಕ ರವಿಶಂಕರ್ ಪ್ರಸಾದ್, ಉದ್ಯೋಗ ಹೆಚ್ಚಿಸುವ ಕಾರ್ಯಕ್ರಮವನ್ನು ಹಣಕಾಸು ಸಚಿವರು ಪ್ರಕಟಿಸಿರುವುದಾಗಿ ಹೇಳಿದ್ದಾರೆ. ಜೆಡಿಯು ಮುಖಂಡ ರಾಜೀವ್ ರಂಜನ್ ಸಿಂಗ್, ಆಯ-ವ್ಯಯ ಬಿಹಾರ ಜನತೆಗೆ ಹಾಗೂ ಪ್ರವಾಸೋದ್ಯಮಕ್ಕೆ ಒತ್ತು ನೀಡಿದೆ ಎಂದರು.

ಕಾಂಗ್ರೆಸ್ ಮುಖಂಡ ಶಶಿತರೂರ್ ಪ್ರತಿಕ್ರಿಯೆಸಿ, ಉದ್ಯೋಗ ಖಾತರಿ ಯೋಜನೆಯ ರಾಜ್ಯಗಳ ತಾರತಮ್ಯವನ್ನು ನಿಭಾಯಿಸಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಶಿವಸೇನಾ ನಾಯಕ ಪ್ರಿಯಾಂಕ ಚತುರ್ವೇದಿ, ಮಹಾರಾಷ್ಟ್ರ ರಾಜ್ಯಕ್ಕೆ ನಿರ್ಧಿಷ್ಟವಾದ ಯೋಜನೆಗಳನ್ನು ಪ್ರಕಟಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಡಿಎಂಕೆ ನಾಯಕ ಟಿ.ಆರ್.ಬಾಲು, ಟಿಎಂಸಿ ನಾಯಕಿ ಕಲ್ಯಾಣ ಬ್ಯಾನರ್ಜಿ ಅವರು, ಆಯ-ವ್ಯಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕದ ಸಂಸದರಾದ ಬಸವರಾಜ ಬೊಮ್ಮಾಯಿ, ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಜಗದೀಶ್ ಶೆಟ್ಟರ್, ಜನಪರ ಸಾಮಾನ್ಯವರ್ಗದವರ ಆಯ-ವ್ಯಯವಾಗಿದೆ ಎಂದರು. ಕೇಂದ್ರ ಸಚಿವರಾದ ಎಚ್.ಡಿ.ಕುಮಾರ್‌ಸ್ವಾಮಿ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಅವರುಗಳು ಆಯ-ವ್ಯಯವನ್ನು ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ. ಭಾರತೀಯ ಕೈಗಾರಿಕಾ ಒಕ್ಕೂಟದ ಅಧ್ಯಕ್ಷ ಅನಿಶ್ ಶಹಾ ಪ್ರತಿಕ್ರಿಯಿಸಿ, ದೇಶದ ಬೆಳವಣಿಗೆಗೆ ಪೂರಕ ಆಯ-ವ್ಯಯ ರೈತರು, ಯುವಕರು, ಮಹಿಳೆಯರಿಗೆ ಸಹಕಾರಿ ಎಂದು ಹೇಳಿದ್ದಾರೆ.

ಶಿಕ್ಷಣ, ಆರೋಗ್ಯ, ರಕ್ಷಣಾ ಕ್ಷೇತ್ರಗಳಿಗೆ ಅನುದಾನವನ್ನು ಗಣನೀಯವಾಗಿ ಖಡಿತ ಮಾಡಿದ್ದಾರೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಹಲವು ಯೋಜನೆಗಳ ಅನುಷ್ಠಾನಕ್ಕೆ ನೆರವು ಕೋರಿದ್ದೆವು. ಮಾಹಿತಿ ತಂತ್ರಜ್ಞಾನಕ್ಕೆ ನೀಡಿದ್ದ ಅನುದಾನವನ್ನು ಕಡಿಮೆ ಮಾಡಿರುವ ಕೇಂದ್ರ ಸರ್ಕಾರ, ಪರಿಶಿಷ್ಟ ಸಮುದಾಯ ಮತ್ತು ಅಲ್ಪ ಸಂಖ್ಯಾತರ ಅಭಿವೃದ್ಧಿಗೆ ಅನುದಾನವನ್ನು ಖಡಿತ ಮಾಡಿ, ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮೂಲ ಸೌಕರ್ಯ ಅನ್ವೇಷಣೆ ಹಾಗೂ ಅಭಿವೃದ್ಧಿಗೆ ಆಯ-ವ್ಯಯ ಪೂರಕವಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಹಾಗೂ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಆಯ-ವ್ಯಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ದೇಶದ ಉತ್ಪಾದನೆ ಹಾಗೂ ಬೆಳವಣಿಗೆಯ ಪ್ರಮಾಣದಲ್ಲಿ ಕೃಷಿ, ಉದ್ಯೋಗ, ಕೌಶಲ್ಯಾಭಿವೃದ್ಧಿ ಜೊತೆಗೆ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಾಗಿದೆ ಎಂದು ಅವರು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಕ್ರೀಡೆ15 hours ago

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ...

ದಿನದ ಸುದ್ದಿ15 hours ago

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ...

ದಿನದ ಸುದ್ದಿ16 hours ago

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ16 hours ago

HEAVY RAIN | ಮೂರು ದಿನ ಭಾರೀ ಮಳೆ ; ಆರೆಂಜ್ ಅಲರ್ಟ್ ಘೋಷಣೆ

ಸುದ್ದಿದಿನಡೆಸ್ಕ್:ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಿಸಿದೆ. ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ,...

ದಿನದ ಸುದ್ದಿ16 hours ago

ಇಂದು – ನಾಳೆ ಹಾವೇರಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಇಂದು ಮತ್ತು ನಾಳೆ, ಹಾವೇರಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಕಡ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ, ಐಟಿಐ ಮತ್ತು...

ದಿನದ ಸುದ್ದಿ18 hours ago

ಯುವಕರಿಗೆ ಶಿಕ್ಷಣ, ಕೌಶಲ್ಯ ಹೆಚ್ಚಿಸುವ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ

ಸುದ್ದಿದಿನಡೆಸ್ಕ್:ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ನವದೆಹಲಿಯಲ್ಲಿ ನಿನ್ನೆ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ ನೀಡಿದರು. ಸಮಾರಂಭ ಉದ್ದೇಶಿಸಿ ಮಾತನಾಡಿದ...

ದಿನದ ಸುದ್ದಿ18 hours ago

ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ

ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ...

ದಿನದ ಸುದ್ದಿ1 day ago

ದಾವಣಗೆರೆ | ನಾಳೆ ಎಲ್ಲೆಲ್ಲಿ ಕರೆಂಟ್ ಕಟ್..

ಸುದ್ದಿದಿನ,ದಾವಣಗೆರೆ:ಜಲಸಿರಿ ಕಾಮಗಾರಿ ಪ್ರಯುಕ್ತ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಎಫ್.15 ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಕೊನೆ ಬಸ್ ನಿಲ್ದಾಣದಿಂದ...

ದಿನದ ಸುದ್ದಿ1 day ago

ದಾವಣಗೆರೆ | ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್

ಸುದ್ದಿದಿನ,ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ್...

ದಿನದ ಸುದ್ದಿ1 day ago

ದಾವಣಗೆರೆ ಜಿಲ್ಲೆಯಲ್ಲಿ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರಿನಲ್ಲಿ ವಾಡಿಕೆಗಿಂತ 41 ಮಿ.ಮೀ ಹೆಚ್ಚು ಮಳೆಯಾಗಿದೆ. 2024 ರ ಜನವರಿಯಿಂದ ಜುಲೈ 23 ರ ವರೆಗಿನ...

Trending