Connect with us

ರಾಜಕೀಯ

ಮೀಡಿಯಾಗಳು ಮೋದಿ ಪರವಾಗಿಲ್ಲ; ಪರವಾಗಿ ಇರಲೇಬೇಕಿದೆ’: ಎಬಿಪಿ ನ್ಯೂಸ್‌ ವೃತ್ತಾಂತದ ಸುತ್ತ…

Published

on

ಸುದ್ದಿದಿನ ಡೆಸ್ಕ್ | ಎಬಿಪಿ ನ್ಯೂಸ್‌ ನೆಟ್‌ವರ್ಕ್‌ನ ಮ್ಯಾನೇಜಿಂಗ್‌ ಎಡಿಟರ್‌ ಮಿಲಿಂದ್‌ ಖಂಡೇಕರ್‌ ಆಗಸ್ಟ್‌ 1ರಂದು ರಾಜೀನಾಮೆ ನೀಡಿ ಸಂಸ್ಥೆಯಿಂದ ಹೊರ ನಡೆದಿದ್ದಾರೆ. ಬೆನ್ನಿಗೆ ಹಲವು ಹಿರಿತಲೆಗಳೂ ಚಾನಲ್‌ ತೊರೆದಿದ್ದಾರೆ.

ಕೆಲವು ತಿಂಗಳ ಕೆಳಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ‘ದೇಶದ ಮಾಧ್ಯಮ ವಲಯದಲ್ಲಿ ಭಯ ಸೃಷ್ಟಿಯಾಗಿದೆ. ಪತ್ರಕರ್ತರು, ಮಾಧ್ಯಮ ಸಂಸ್ಥೆಗಳು ಒತ್ತಡದಲ್ಲಿವೆ’ ಎಂಬರ್ಥದ ಹೇಳಿಕೆ ನೀಡಿದ್ದರು.

ಈ ಆರೋಪಗಳ ನಡುವೆ ಎಬಿಪಿ ನ್ಯೂಸ್‌ ನೆಟ್‌ವರ್ಕ್‌ನ ಮ್ಯಾನೇಜಿಂಗ್‌ ಎಡಿಟರ್‌ ಮಿಲಿಂದ್‌ ಖಂಡೇಕರ್‌ ಆಗಸ್ಟ್‌ 1ರಂದು ರಾಜೀನಾಮೆ ನೀಡಿ ಸಂಸ್ಥೆಯಿಂದ ಹೊರ ನಡೆದಿದ್ದಾರೆ. ಬೆನ್ನಿಗೆ ಹಲವು ಹಿರಿತಲೆಗಳೂ ಚಾನಲ್‌ ತೊರೆದಿದ್ದಾರೆ. ವಾಹಿನಿಯಲ್ಲಿ ಪ್ರೈಮ್‌ಟೈಮ್‌ ಕಾರ್ಯಕ್ರಮ ಮಾಸ್ಟರ್‌ಸ್ಟ್ರೋಕ್‌ ನಡೆಸಿಕೊಡುತ್ತಿದ್ದ ಹಿರಿಯ ಪತ್ರಕರ್ತ ಪುನ್ಯ ಪ್ರಸೂನ್‌ ಬಾಜಪೇಯಿ ಗುರುವಾರ ಚಾನಲ್ ತೊರೆದಿದ್ದರೆ, ಅಭಿಸಾರ್‌ ಶರ್ಮಾ ರಜೆಯ ಮೇಲೆ ಕಚೇರಿಯಿಂದ ಹೊರ ಹೋಗಿದ್ದಾರೆ.

ಸಾಮಾನ್ಯವಾಗಿ ಪತ್ರಕರ್ತರು ಮಾಧ್ಯಮ ಸಂಸ್ಥೆಯೊಂದನ್ನು ತೊರೆದಾಗ ಮಾಧ್ಯಮ ವಲಯದಿಂದಾಚೆ ಚರ್ಚೆಗಳಾಗುವುದು ಅಪರೂಪ. ಆದರೆ ಬಾಜಪೇಯಿ ಮತ್ತು ಖಂಡೇಕರ್‌ ನಿರ್ಗಮನ ಪತ್ರಕರ್ತರ ವರ್ತುಲ ದಾಟಿ ಸುದ್ದಿಯಾಗಿದೆ.

ಈ ಕುರಿತು ಟ್ಟೀಟ್‌ ಮಾಡಿರುವ ಕಾಂಗ್ರೆಸ್ ವಕ್ತಾರ ರಣದೀಪ್‌ ಸಿಂಗ್‌ ಸುರ್ಜೇವಾಲ, ‘ಅಧಿಕಾರದಲ್ಲಿರುವವರ ಬಗೆಗಿನ ಸತ್ಯದ ಧ್ವನಿಯನ್ನು ನಿಗ್ರಹಿಸುವ ಯತ್ನ ಇದು’ ಎಂದು ಕಿಡಿಕಾರಿದ್ದಾರೆ. ಇನ್ನೊಂದು ಕಡೆ ಸಂಸತ್‌ನಲ್ಲಿ ಮಾತನಾಡಿರುವ ಟಿಎಂಸಿ ಸಂಸದ ಡೆರೇಕ್‌ ಓಬ್ರಿಯಾನ್, ಪತ್ರಕರ್ತರ ಮೇಲೆ ಒತ್ತಡಗಳಿವೆ ಎಂದು ಹೇಳಿದ್ದಾರೆ.

ಆಗಿದ್ದೇನು?

ಅಷ್ಟಕ್ಕೂ ಈ ಪತ್ರಕರ್ತರ ನಿರ್ಗಮನಕ್ಕೆ ಕಾರಣವಾಗಿದ್ದು ಏನು ಎಂದು ಹುಡುಕುತ್ತಾ ಹೊರಟರೆ ಅಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮ ಮತ್ತು ಅದರ ಸುತ್ತಾ ನಡೆದ ಘಟನಾವಳಿಗಳು ಕಾಣಿಸಿಕೊಳ್ಳುತ್ತವೆ.

ತಮ್ಮ ಅವಧಿ ಮುಗಿಯುತ್ತಾ ಬಂದಿರುವಾಗ ಪ್ರಧಾನಿ ನರೇಂದ್ರ ಮೋದಿ ದೇಶದ ವಿವಿಧ ಸಮುದಾಯಗಳ ಜತೆ ಸಂವಾದ ನಡೆಸುತ್ತಿದ್ದಾರೆ. ಹೀಗೆ ಛತ್ತೀಸ್‌ಗಢದ ಚಂದ್ರಮನಿ ಕೌಶಿಕ್‌ ಎಂಬ ಮಹಿಳೆ ಜತೆ ಅವರು ಮಾತುಕತೆ ನಡೆಸುತ್ತಿದ್ದಾಗ, ಆಕೆ ‘ನಾನು ಭತ್ತ ಬೆಳೆಯುವ ಬದಲು ಸೀತಾಪಲ ಬೆಳೆಯಲು ಆರಂಭಿಸಿ ದುಪ್ಪಟ್ಟು ಲಾಭ ಗಳಿಸುತ್ತಿದ್ದೇನೆ’ ಎಂದು ಹೇಳಿದ್ದರು.

ಈ ಬಗ್ಗೆ ‘ಮಾಸ್ಟರ್‌ಸ್ಟ್ರೋಕ್’ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿದ್ದ ಬಾಜಪೇಯಿ, ಮಹಿಳೆಗೆ ಸುಳ್ಳು ಹೇಳಲು ತರಬೇತಿ ನೀಡಲಾಗಿದೆ ಎಂದು ಆರೋಪಿಸಿದ್ದರು. ದೆಹಲಿಯಿಂದ ಕಂಕೇರ್‌ ಜಿಲ್ಲೆಗೆ ತೆರಳಿದ್ದ ಅಧಿಕಾರಿಯೊಬ್ಬರು ಈ ರೀತಿ ತಪ್ಪು ಮಾಹಿತಿ ಹೇಳುವಂತೆ ಮಹಿಳೆಗೆ ಸೂಚಿಸಿದ್ದರು ಎಂದು ವರದಿಯಲ್ಲಿ ಹೇಳಲಾಗಿತ್ತು. ಈ ವಿಡಿಯೋ ಕ್ಲಿಪ್‌ನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ ಗಾಂಧಿ ಟ್ಟೀಟ್‌ ಮಾಡುವ ಮೂಲಕ ಇದು ಎಬಿಪಿಯ ಸಾಂಪ್ರದಾಯಿಕ ವೀಕ್ಷಕರನ್ನು ದಾಟಿ ಜನರನ್ನು ತಲುಪಿತ್ತು.

ಮುಗಿಬಿದ್ದ ಬಿಜೆಪಿ

ಇಷ್ಟಾಗಿದ್ದೇ ತಡ ಬಿಜೆಪಿಗರು ಎಬಿಪಿ ನ್ಯೂಸ್‌ ವಿರುದ್ಧ ಮುಗಿಬಿದ್ದಿದ್ದರು. ಕೇಂದ್ರ ಸಚಿವ ರಾಜ್ಯವರ್ಧನ್‌ ಸಿಂಗ್‌ ರಾಥೋಡ್‌ ನರೇಂದ್ರ ಮೋದಿಯನ್ನು ವಿರೋಧಿಸುವ ಅಜೆಂಡಾವನ್ನು ಎಬಿಪಿ ಪತ್ರಕರ್ತರು ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿದರು. ವಾಹಿನಿಯ ವರದಿ ಸುಳ್ಳು ಎಂದು ಅವರು ಕಿಡಿಕಾರಿದರು. ರಕ್ಷಣಾ ಸಚಿವೆ, ಮಾಜಿ ಪತ್ರಕರ್ತೆ ನಿರ್ಮಲಾ ಸೀತರಾಮನ್‌ ಬಾಯಿಯಿಂದಲೂ ಇದೇ ಮಾತು ಹೊರ ಬಂತು.

ಈ ಆರೋಪಕ್ಕೆ ಪ್ರತಿಕ್ರಿಯೆ ನೀಡಲು ನಿರ್ಧರಿಸಿದ ‘ಎಬಿಪಿ ನ್ಯೂಸ್‌’ ತನ್ನ ವರದಿಗಾರನನ್ನು ಮಹಿಳೆಯಿದ್ದ ಗ್ರಾಮಕ್ಕೆ ಕಳುಹಿಸಿ ವಾಸ್ತವ ವರದಿಯನ್ನು ಬಿತ್ತರಿಸಿತು. ಮತ್ತು ಇದು ನಿಮ್ಮ ‘ಫೇಕ್ ನ್ಯೂಸ್‌’ ಆರೋಪಕ್ಕೆ ಪ್ರತಿಕ್ರಿಯೆ ಎಂಬುದಾಗಿ ನಿರ್ಮಾಲಾ ಸೀತಾರಾಮನ್‌ ಮತ್ತು ರಾಜ್ಯವರ್ಧನ್‌ ಸಿಂಗ್‌ ರಾಥೋಡ್‌ರನ್ನು ಟ್ಯಾಗ್‌ ಮಾಡಿ ಟ್ಟೀಟ್‌ ಮಾಡಿತು.

ಈ ಬೆಳವಣಿಗೆಯಿಂದ ಉರಿದು ಹೋದ ಬಿಜೆಪಿ ನಾಯಕರು ಚಾನಲ್‌ಗೆ ಬಹಿಷ್ಕಾರ ಹಾಕಲು ನಿರ್ಧರಿಸಿದ್ದರು ಎಂದು ಚಾನಲ್‌ ಮೂಲಗಳು ಹೇಳಿದ್ದಾಗಿ ‘ಸ್ಕ್ರಾಲ್‌’ ವರದಿ ಮಾಡಿದೆ.

ಹೀಗೊಂದು ಹೊಸ ಒತ್ತಡ ತಂತ್ರ

ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ವಾಹಿನಿಗೆ ಹೊಸತೊಂದು ತಲೆನೋವು ಆರಂಭವಾಯಿತು. ‘ಮಾಸ್ಟರ್‌ಸ್ಟ್ರೋಕ್‌’ ಕಾರ್ಯಕ್ರಮ ಪ್ರಸಾರವಾಗುತ್ತಿದ್ದ ಪ್ರೈಮ್‌ಟೈಮ್‌ ಅವಧಿಯಲ್ಲೇ ವಾಹಿನಿಯ ಸಿಗ್ನಲ್‌ನಲ್ಲಿ ತೊಂದರೆ ಕಾಣಿಸಿಕೊಳ್ಳಲು ಆರಂಭವಾಯಿತು. ಜುಲೈ 13ರಿಂದ ತಾಂತ್ರಿಕ ಸಮಸ್ಯೆಯೊಂದು ತೆರೆದುಕೊಂಡಿತು.

ಇವೆಲ್ಲಾ ವಾಹಿನಿಯ ಗಮನಕ್ಕೂ ಬಂದಿತ್ತು. ಇದನ್ನು ಉದ್ದೇಶಿಸಿಯೇ ‘ಎಲ್ಲಾ ಅಡ್ಡಿ ಆತಂಕಗಳ ನಡುವೆಯೂ ವಾಹಿನಿ ಸತ್ಯವನ್ನೇ ಹೇಳುತ್ತಾ ಬಂದಿದೆ’ ಎಂದು ಬಾಜಪೇಯಿ ಕಾರವಾಗಿ ಟ್ಟೀಟ್‌ ಮಾಡಿದ್ದರು. ತಮ್ಮ ಮಾಸ್ಟ್ರರ್‌ಸ್ಟ್ರೋಕ್‌ ಪ್ರೋಗ್ರಾಂಗೆ ಆಗುತ್ತಿರುವ ಈ ಸಿಗ್ನಲ್‌ ಸಮಸ್ಯೆಯಿಂದ ಬೇಸತ್ತಿದ್ದ ಬಾಜಪೇಯಿ, ಹಸಿವಿನಿಂದ ಸಾಯುತ್ತಿರುವರುವವರು, ನಿರುದ್ಯೋಗ, ರೈತರ ಆತ್ಮಹತ್ಯೆ, ಶುದ್ಧಗಾಳಿ, ನೀರು ಇದ್ಯಾವುದರ ಕಡೆಯಗೂ ಗಮನ ನೀಡಲಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು. ಇದಾದ ನಂತರ ಅವರು ತಮ್ಮ ಶೋನ ವಿಡಿಯೋಗಳನ್ನು ಅನಿವಾರ್ಯವಾಗಿ ಟ್ಟೀಟ್‌ ಮಾಡಲು ಆರಂಭಿಸಿದ್ದರು.

ಅಂದ ಹಾಗೆ ಟಿವಿ ವಾಹಿನಿಗಳ ಪ್ರಸಾರಕ್ಕೆ ಬೇಕಾದ ಈ ಸಿಗ್ನಲ್‌ಗಳು ಕೇಂದ್ರ ಸರಕಾರದ ಸುಪರ್ದಿಯಲ್ಲಿವೆ. ಮತ್ತು ಹೀಗೆ ಇದ್ದಕ್ಕಿದ್ದ ಹಾಗೆ ವಾಹಿನಿಯೊಂದು ತಾಂತ್ರಿಕ ಸಮಸ್ಯೆಗೆ ಒಳಗಾಗಿದ್ದರ ಹಿಂದೆ ಏನು ನಡೆದಿರಬಹುದು ಎಂದು ಊಹಿಸುವುದು ಕಷ್ಟವೇನಲ್ಲ.

ಈ ಎಲ್ಲಾ ಬೆಳವಣಿಗೆಗಳ ನಂತರ ಬುಧವಾರ ಖಂಡೇಕರ್‌, ಗುರುವಾರ ಬಾಜೊಪೇಯಿ ರಾಜೀನಾಮೆ ನೀಡಿ ವಾಹಿನಿಯಿಂದ ಹೊರ ನಡೆದಿದ್ದಾರೆ. ಇನ್ನೋರ್ವ ಪತ್ರಕರ್ತ ಅಭಿಸಾರ್‌ ಶರ್ಮಾ ರಜೆಯ ಮೇಲೆ ತೆರಳಿದ್ದಾರೆ. ಬಹುಶಃ ‘ದೆಹಲಿ ದರ್ಬಾರ್‌’ನಲ್ಲಿ ಕುಳಿತವರೀಗ ಅಟ್ಟಹಾಸದ ನಗು ಬೀರುತ್ತಿರಬಹುದು. ನೀವು ನಮ್ಮ ಪರವಾಗಿರಿ ಇಲ್ಲವಾದಲ್ಲಿ ವೃತ್ತಿ ತೊರೆಯಲು ಸಿದ್ಧರಾಗಿ ಎಂಬ ಸಂದೇಶವೊಂದು ಮತ್ತೊಮ್ಮೆ ಎದುರಾಗಿದೆ. ಯಾಕೆ ದೇಶದ ಬಹುತೇಕ ಸುದ್ದಿವಾಹಿನಿಗಳು ಕೇಂದ್ರ ಸರಕಾರ ತುತ್ತೂರಿಗಳಾಗಿವೆ ಮತ್ತು ಪತ್ರಕರ್ತರು ಯಾಕೆ ಸ್ವಂತಿಕೆ ಕಳೆದುಕೊಂಡು ಬೆತ್ತಲಾಗಿದ್ದಾರೆ ಎಂಬುದಕ್ಕೆ ಉತ್ತರ ಈ ವೃತ್ತಾಂತದಲ್ಲಿ ಸಿಗುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಶ್ವೇತಪತ್ರ ಹೊರಡಿಸಲು ಎಚ್.ಡಿ. ಕುಮಾರಸ್ವಾಮಿ ಆಗ್ರಹ

Published

on

ಸುದ್ದಿದಿನ, ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಯೋಜನೆಯ ಫಲ ಎಷ್ಟು ಜನರಿಗೆ ಲಭ್ಯವಾಗಿದೆ, ಆರ್ಥಿಕವಾಗಿ ಎಷ್ಟು ಹೊರೆಬಿದ್ದಿದೆ, ಇದುವರೆಗೆ ಫಲಾನುಭವಿಗಳ ಖಾತೆಗೆ ಎಷ್ಟು ಹಣ ಜಮೆಯಾಗಿದೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಿದ್ದಾರೆ.

ಸರ್ಕಾರದ ಗ್ಯಾರಂಟಿ ಯೋಜನೆಗಳು ವಿಫಲವಾಗಿದೆ, ಸಮರ್ಪಕವಾಗಿ ಜಾರಿಯಾಗುತ್ತಿಲ್ಲ, ಈ ಬಗ್ಗೆ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಂಚಾಯತ್ ರಾಜ್ ಇಲಾಖೆ ಜತೆ ಕೆಲಸ ಮಾಡಲು ಬಂಧುತ್ವ ಫೌಂಡೇಷನ್ ಸಿದ್ಧ : ಅಧ್ಯಕ್ಷ ರಾಘು ದೊಡ್ಡಮನಿ

Published

on

ಸುದ್ದಿದಿನ, ದಾವಣಗೆರೆ : ಮಕ್ಕಳ ವಿಷೇಶ ಗ್ರಾಮ ಸಭೆಯ ಮೂಲಕ ಜಿಲ್ಲೆಯ ಮಕ್ಕಳ ಶಿಕ್ಷಣ, ರಕ್ಷಣೆ ಹಾಗೂ ಅವರ ಹಕ್ಕು ಬಾಧ್ಯತೆಗಳಿಗಾಗಿ ಪಂಚಾಯತ್ ರಾಜ್ ಇಲಾಖೆಯ ಜತೆ ಕೆಲಸ ಮಾಡಲು ನಮ್ಮ ಬಂಧುತ್ವ ಫೌಂಡೇಷನ್ ಸಿದ್ಧವಿದೆ ಎಂದು ಫೌಂಡೇಶನ್ ನ ಅಧ್ಯಕ್ಷರಾದ ರಾಘು ದೊಡ್ಡಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಸಹ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ರೂಪಿಸಲು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದ್ದು, ಇದೇ ತಿಂಗಳ 14 ರಿಂದ ಜನವರಿ 24 ರವರೆಗೆ 10 ವಾರಗಳ ಮಕ್ಕಳ ಸ್ನೇಹಿ ಅಭಿಯಾನ ಹಾಗೂ ಮಕ್ಕಳ ಗ್ರಾಮ ಸಭೆ ನಡೆಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೂ ಸೂಚನೆ ನೀಡಲಾಗಿದೆ.

ಈ ಅಭಿಯಾನವು ಗ್ರಾಮ ಪಂಚಾಯಿತಿಗಳನ್ನು ಮಕ್ಕಳ ಸ್ನೇಹಿಯಾಗಿಸಲು ಪಂಚಾಯತ್ ರಾಜ್ ಇಲಾಖೆ ಈ ಮೂಲಕ ದಾಪುಗಾಲಿಟ್ಟಿದೆ. ಸ್ಥಳೀಯ ಸಂಸ್ಥೆಗಳ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವ ಸರ್ಕಾರದ ಮಹಾತ್ವಕಾಂಕ್ಷೆಯ ಯೋಜನೆ ಇದಾಗಿದ್ದು, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಸಹಕಾರದೊಂದಿಗೆ ಗ್ರಾಮ ಪಂಚಾಯಿತಿಗಳು ತಮ್ಮ ಸದಸ್ಯರು ಹಾಗೂ ಸ್ಥಳೀಯ ಶಾಲೆಗಳು, ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ನಮ್ಮ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಕಡ್ಡಾಯವಾಗಿ ಈ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ವಿಷೇಶ ಗ್ರಾಮ ಸಭೆ ನಡೆಸಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದಿದ್ದಾರೆ.

ಮಕ್ಕಳ ವಿಷೇಶ ಗ್ರಾಮ ಸಭೆಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮಕ್ಕಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಮಕ್ಕಳ ಆರೋಗ್ಯ, ರಕ್ಷಣೆ, ಅಂಗನವಾಡಿಗಳು, ಶಾಲೆ, ಶಾಲಾ ಆವರಣ, ಸ್ವಚ್ಛತೆ, ಬಡ ಮಕ್ಕಳಿಗೆ ನೆರವು ಮುಂತಾದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಬೇಕು. ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳ ಜೊತೆ ಅಧಿಕಾರಿಗಳು ಸಭೆಯಲ್ಲಿ ಖುದ್ದು ಹಾಜರಿರಬೇಕು. ಮಕ್ಕಳ ಸಭೆ ಅಲ್ಲವೇ ಎಂದು ಯಾರು ಸಹ ನಿರ್ಲಕ್ಷ್ಯ ತೋರುವಂತಿಲ್ಲ. ಸಾಮಾನ್ಯ ಗ್ರಾಮ ಸಭೆಗಳಿಗಿರುವಷ್ಟು ಪ್ರಾಮುಖ್ಯತೆ ಈ ಮಕ್ಕಳ ಸಭೆಗೂ ಇರುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆ; ರಾಜಕೀಯ ಪಕ್ಷಗಳೊಂದಿಗೆ ಜಾಹಿರಾತು ದರ ನಿಗದಿ ಸಭೆ

Published

on

ಸುದ್ದಿದಿನ,ದಾವಣಗೆರೆ : 2024 ರಲ್ಲಿ ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮುದ್ರಣ, ವಿದ್ಯುನ್ಮಾನ ಮಾಧ್ಯಮ, ಕೇಬಲ್ ಟಿ.ವಿ ಗಳಲ್ಲಿ ಪ್ರಚಾರ ಮಾಡಲು ನಿಗದಿ ಮಾಡಿರುವ ಜಾಹಿರಾತು ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನವೆಂಬರ್ 10 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.

ಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿಗಳು ರಾಜ್ಯ ಮಟ್ಟದ ಪತ್ರಿಕೆಗಳು, ಸ್ಥಳೀಯ, ಪ್ರಾದೇಶಿಕ, ವಾರಪತ್ರಿಕೆ, ಕೇಬಲ್ ಟಿ.ವಿ.ಗಳಲ್ಲಿ ನೀಡುವ ಚುನಾವಣಾ ಜಾಹಿರಾತುಗಳಿಗೆ ಅನ್ವಯಿಸುವ ದರದ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರಿಗೆ ತಿಳಿಸಲಾಯಿತು.

ಚುನಾವಣಾ ಸಂದರ್ಭದಲ್ಲಿ ಎಂಸಿಎಂಸಿ ಸಮಿತಿಯು ಕಾರ್ಯನಿರ್ವಹಿಸಲಿದ್ದು ಇದರ ಎಲ್ಲಾ ಮೇಲ್ವಿಚಾರಣೆ ನಡೆಸಲಿದೆ. ಅಭ್ಯರ್ಥಿಗಳು ನೀಡುವ ಜಾಹಿರಾತು ವೆಚ್ಚವು ಸಹ ಅಭ್ಯರ್ಥಿಗಳಿಗೆ ವೆಚ್ಚಕ್ಕೆ ನಿಗದಿಪಡಿಸಿರುವ ಮೊತ್ತದಲ್ಲಿ ಸೇರಲಿದೆ ಎಂದು ಪಕ್ಷಗಳ ಮುಖಂಡರಿಗೆ ಮನವರಿಕೆ ಮಾಡಿದರು.

ಸಭೆಯಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಜಿ.ಸಿ.ರಾಘವೇಂದ್ರ ಪ್ರಸಾದ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಧನಂಜಯ, ಚುನಾವಣಾ ತಹಶೀಲ್ದಾರ್ ಅರುಣ್ ಎಸ್.ಕಾರ್ಗಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 days ago

ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ‌ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ....

ದಿನದ ಸುದ್ದಿ4 days ago

ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ...

ದಿನದ ಸುದ್ದಿ7 days ago

ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

ಪುರಂದರ್ ಲೋಕಿಕೆರೆ ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ...

ದಿನದ ಸುದ್ದಿ7 days ago

ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ

ಸುದ್ದಿದಿನ, ಚನ್ನಗಿರಿ : ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ತಮ್ಮ ಸೇವಾ ಖಾಯಂಯಾತಿ ಆಗಿ ಸರ್ಕಾರಕ್ಕೆ ಒತ್ತಾಯಿಸಿ ಶುಕ್ರವಾರ...

ದಿನದ ಸುದ್ದಿ1 week ago

ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ

ಸುದ್ದಿದಿನ, ಚನ್ನಗಿರಿ : ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎ ವಿದ್ಯಾರ್ಥಿ ಪ್ರೇಮ್ ಕುಮಾರ್ ದಾವಣಗೆರೆ ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸರ್ಕಾರಿ ಪ್ರಥಮ...

ದಿನದ ಸುದ್ದಿ2 weeks ago

‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರದ ಟಿಕೆಟ್‍ ಮೇಲೆ ಶೆ.20ರಷ್ಟು ಕಡಿತ

ಸುದ್ದಿದಿನ ಡೆಸ್ಕ್ : ರಕ್ಷಿತ್‍ ಶೆಟ್ಟಿ ಮತ್ತು ರುಕ್ಷಿಣಿ ವಸಂತ್‍ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ...

ದಿನದ ಸುದ್ದಿ2 weeks ago

‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ‌ ಪ್ರೇಕ್ಷಕ ದರ್ಶನ್

ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್‍ ಅಂಬರೀಶ್‍ ಅಭಿನಯಿಸಿರುವ ‘ಬ್ಯಾಡ್‍ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ...

ದಿನದ ಸುದ್ದಿ2 weeks ago

ಕವಿತೆ | ಮಣ್ಣ ಮಕ್ಕಳು

ಸಿ.ಕೃಷ್ಣನಾಯಕ್, ಆಡಳಿತಾಧಿಕಾರಿ, ಐಟಿಐ ಕಾಲೇಜು ದಾವಣಗೆರೆ ಮಣ್ಣ ಮಕ್ಕಳು ನಾವು ಹಗಳಿರುಳೆನ್ನದೆ ಬೆವರು ಬಸಿದು ಹಸಿದ ಹೊಟ್ಟೆಯಲಿ ಉಸಿರು ಹಿಡಿದವರು ಕಸದಲಿ ರಸ ತೆಗದು ಬದುಕಿನುದ್ದಕ್ಕೂ ಉಳ್ಳವರ...

ದಿನದ ಸುದ್ದಿ2 weeks ago

10,000 ಅಡಿ ಉದ್ದದ ‘ಘೋಸ್ಟ್’ ಪೋಸ್ಟರ್ ಬಿಡುಗಡೆ

ಸುದ್ದಿದಿನ ಡೆಸ್ಕ್ : ಶಿವರಾಜಕುಮಾರ್‍ ಅಭಿನಯದ ‘ಘೋಸ್ಟ್’ ಚಿತ್ರವು ಈಗಾಗಲೇ ನವೆಂಬರ್‌ 17ರಂದು ಜೀ5ನಲ್ಲಿ ಬಿಡುಗಡೆಯಾಗಿದೆ. ಈ ಚಿತ್ರದ ಪ್ರಮೋಷನ್ಗೆ ಬರೋಬ್ಬರಿ 10 ಸಾವಿರ ಚದರ ಅಡಿಯ...

ದಿನದ ಸುದ್ದಿ2 weeks ago

ಮ್ಯಾಸ ನಾಯಕ ಬುಡಕಟ್ಟನಲ್ಲಿ ದೀಪಾವಳಿ ಹಬ್ಬದ ಆಚರಣೆ

ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ. ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು...

Trending