ದಿನದ ಸುದ್ದಿ

ಮೀ ಟೂ ಪ್ರಕರಣ; ಮಹಿಳಾ ಆಯೋಗದ ಮುಂದೆ ಹೋದ ನಟಿ ಶ್ರುತಿ ಹರಿಹರನ್

Published

on

ಸುದ್ದಿದಿನ ಬೆಂಗಳೂರು: ಚಿತ್ರನಟಿ ಶ್ರುತಿ ಹರಿಹರನ್ ಬುಧವಾರ ರಾಜ್ಯ ಮಹಿಳಾ ಆಯೋಗದಲ್ಲಿ ತಮ್ಮ ಅಳಲು ತೋಡಿಕೊಂಡಿದ್ದು, ‘ವಿಸ್ಮಯ’ ಚಿತ್ರೀಕರಣ ವೇಳೆ ತಮಗಾದ ನೋವನ್ನು ಆಯೋಗದಲ್ಲಿ ದಾಖಲಿದ್ದಾರೆ.

ಮೀ ಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜಿನ್ ಸರ್ಜಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ಪ್ರಕಟಿಸಿದ್ದರು. ಇದನ್ನು ಆಧರಿಸಿ ಮಹಿಳಾ ಆಯೋಗ ಸ್ವಪ್ರೇರಣೆಯಿಂದ ಪ್ರಕರಣ ದಾಖಲಿಸಿಕೊಂಡಿತ್ತು. ಈ ಹೇಳಿಕೆ ದಾಖಲಿಸುವಂತೆ ಮಹಿಳಾ ಆಯೋಗ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಮಹಿಳಾ ಆಯೋಗಕ್ಕೆ ಹಾಜರಾಗಿದ್ದರು.

ನಟಿ ಶ್ರುತಿ ಹರಿಹರನ್ ಅವರನ್ನು ಪ್ರತ್ಯೇಕ ಕೊಠಡಿಗೆ ಕರೆದುಕೊಂಡು ಹೋಗಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನನ್ನ ಮೇಲೆ ನಡೆದ ದೌರ್ಜನ್ಯ ಬಗ್ಗೆ ವಿಡಿಯೋ ದಾಖಲೆಗಳಿದ್ದು, ಅವುಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದೇನೆ ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version