Connect with us

ದಿನದ ಸುದ್ದಿ

ಜನ್ಮದಿನದ ಹೊತ್ತಲಿ ಮಹಾತ್ಮನನ್ನು ನೆನೆಯುತ್ತಾ, ನಮಿಸುತ್ತಾ..!

Published

on

  • ಕವಿರಾಜ್, ಗೀತರಚನೆಕಾರ, ಬೆಂಗಳೂರು

ಮ್ಮೆಲ್ಲರ ಹಾಗೂ ಇಂದು ಬಲಪಂಥೀಯರೆಂದು ಹೇಳಿಕೊಳ್ಳುವ ಬಹುತೇಕರ ತಾತ ಮುತ್ತಾತಂದಿರು / ಅಜ್ಜ ಅಜ್ಜಿಯಂದಿರು ಗಾಂಧೀಜಿ, ನೆಹರೂ, ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ ಬದುಕಿದ್ದವರು. ಎಲ್ಲವನ್ನು ಪ್ರತ್ಯಕ್ಷ ಅನುಭವಿಸಿದ್ದವರು. ಯಾವುದು ಮತ್ತು ಯಾರು ಸರಿ ಯಾವುದು ತಪ್ಪು ಅಂತ ಅವರು ಕಂಡಿದ್ದರು , ಅವರಿಗೆ ಸ್ಪಷ್ಟತೆಯಿತ್ತು .

ಹಾಗಾಗಿ ಅವರೆಲ್ಲಾ ಯಾರ್ಯಾರನ್ನು ಯಾವ್ಯಾವ ಸ್ಥಾನದಲ್ಲಿಡಬೇಕೋ ಅಲ್ಲೇ ಇಟ್ಟಿದ್ದರು.
ಆದರೆ ಕಾಲಕ್ರಮೇಣ ಅವರ ವಿರುದ್ಧ ಸಿದ್ದಾಂತದ ಶಕ್ತಿಗಳು ನಿಧಾನವಾಗಿ ಹೆಡೆಯೆತ್ತಿ ವ್ಯವಸ್ಥಿತ ಅಪಪ್ರಚಾರ ಮಾಡುತ್ತಾ, ಇತಿಹಾಸ ತಿರುಚುತ್ತಾ ಅಂದಿನ ಮಹನೀಯರ ತೇಜೋವಧೆ ಮಾಡುತ್ತಲೇ ಬಂದಿದ್ದಾರೆ. ಸೂಕ್ತ ಅನುಭವ , ಅಧ್ಯಯನ ಎರಡೂ ಇಲ್ಲದ ಇಂದಿನ ಯುವ ಪೀಳಿಗೆ ಆ ಪುಂಖಾನುಪುಂಖ ಸುಳ್ಳುಗಳನ್ನೇ ನಂಬಿ ಉಘೇ ಉಘೇ ಎಂದು ತಮ್ಮ ಗುಂಡಿ ತಾವೇ ತೋಡಿಕೊಳ್ಳುತ್ತಾ ದೇಶವನ್ನು ಅಧೋಗತಿಗೆ ತಳ್ಳುತ್ತಿದ್ದಾರೆ.

ಗಾಂಧೀಜಿ ಅವರ ಜನ್ಮದಿನವಾದ ಇಂದು ನನಗೆ ವಿಶ್ವದ ಅತೀ ಬುದ್ದಿವಂತ ಮೆದುಳು ಎಂದು ಪರಿಗಣಿಸಲಾಗಿರುವ ‘ಆಲ್ಬರ್ಟ್ ಐನ್ ಸ್ಟೈನ್ ‘ ಅವರ ಅಂದಿನ ನಿಖರ ಪ್ರೆಡಿಕ್ಷನ್ ಪದೇ ಪದೇ ಕಾಡುತ್ತಿದೆ. ” ರಕ್ತ ಮಾಂಸಗಳಿಂದ ತುಂಬಿದ್ದ ಇಂತಹ ಉದಾತ್ತ ವ್ಯಕ್ತಿತ್ವವೊಂದು ಈ ಭೂಮಿಯ ಮೇಲೆ ನಡೆದಾಡಿತ್ತು ಎಂದರೆ ಮುಂದಿನ ಪೀಳಿಗೆಗೆ ನಂಬುವುದು ಕಷ್ಟವಾಗಬಹುದು” ಎಂದು ಗಾಂಧೀಜಿ ಅವರ ಕುರಿತಾಗಿ ಅಂದು ಐನ್ ಸ್ಟೈನ್ ಹೇಳಿದ ಮಾತು ಇಂದು ಅಕ್ಷರಶಃ ನಿಜವಾಗಿದೆ.

ಗಾಂಧೀಜಿ ಅವರ ಮಹೋನ್ನತ ಧ್ಯೇಯಗಳು ಇಂದಿನ ಯುವ ಜನಾಂಗಕ್ಕೆ ನಂಬಲು ಆಗದಷ್ಟು ಉನ್ನತವಾಗಿವೆ.
ಎಲ್ಲಾ ಇದ್ದು ತುಂಡು ಬಟ್ಟೆಯುಟ್ಟು ಬದುಕಿದ ಪಕೀರ, ತನ್ನ ನೇತೃತ್ವದಲ್ಲೇ ಸ್ವಾತಂತ್ರ್ಯ ಬಂದರು ಅಧಿಕಾರ ಬಯಸದೇ ಅದೇ ದಿನ ದೂರದ ಊರಲ್ಲಿ ದೀನರ ಸೇವೆಯಲ್ಲಿ ನಿರತರಾದ ನಿಸ್ವಾರ್ಥಿ.

ಸೂರ್ಯ ಮುಳುಗದ ಸಾಮ್ರಾಜ್ಯವನ್ನು ಮಣಿಸಿದ ಕೃಶಕಾಯದ ಸಂತ, ಉಪವಾಸ, ಸತ್ಯಾಗ್ರಹ ,ಅಹಿಂಸೆಗಳು ಹೋರಾಟದ ಆಯುಧಗಳಾಗಬಹುದು ಎಂದು ಜಗತ್ತಿಗೆ ಸಾರಿದ ಮಾನವತಾವಾದಿ ಗಾಂಧೀಜಿ . ಇವೆಲ್ಲವೂ ಅಪ್ಪಟ ಸತ್ಯವಾದರೂ, ಕಳ್ಳರಿಗೆ ,ಸುಳ್ಳರಿಗೆ , ಭ್ರಷ್ಟರಿಗೆ , ಮೂಢರಿಗೆ ಜೈಕಾರ ಹಾಕುತ್ತ ಅವರನ್ನೇ ಆದರ್ಶವಾಗಿ ಇಟ್ಟುಕೊಂಡಿರುವವರಿಗೆ ಐನ್ ಸ್ಟೈನ್ ಅವರು ಹೇಳಿದಂತೆ ಇಂತಹ ಅದ್ಬುತ ವ್ಯಕ್ತಿತ್ವವೊಂದು ಇತ್ತೆಂದು ಜೀರ್ಣಿಸಿಕೊಳ್ಳಲಾಗದೆ ಸುಳ್ಳು ಅನಿಸುವುದು ಸಹಜವೇ ಆಗಿದೆ.

ಇನ್ನೊಬ್ಸ ಮಹಾನ್ ಮಾನವತಾವಾದಿ ಅಂಬೇಡ್ಕರ್ ಮತ್ತು ಗಾಂಧೀಜಿ ಅವರಿಗೂ ಕೆಲವು ವಿಷಯಗಳಲ್ಲಿ ಭಿನ್ನ ನಿಲುವು ಇದ್ದಿದ್ದು ನಿಜ. ಆದರೆ ಅದು ಎರಡು ಸಮಕಾಲೀನ ಪ್ರಖರ ಚಿಂತಕರ ನಡುವೆ ಸಹಜವಾಗಿಯೇ ಹುಟ್ಟಿಕೊಳ್ಳುವ ಭಿನ್ನಾಭಿಪ್ರಾಯಗಳು.

ಮುಖ್ಯವಾಗಿ ಅಂಬೇಡ್ಕರ್ ಅವರಿಗೆ 1935ರಲ್ಲೇ ಮುಸ್ಲಿಂ ಮತ್ತು ಸಿಖ್ ಸಮುದಾಯಕ್ಕೆ ಇದ್ದಂತೆ ಪ್ರತ್ಯೇಕ ಎಲೆಕ್ಟೋರೇಟ್ ಗಳನ್ನು ಪರಿಶಿಷ್ಟರಿಗೂ ಒದಗಿಸಬೇಕೆಂಬ ಆಗ್ರಹವಿತ್ತು . ಆದರೆ ಗಾಂಧೀಜಿಯವರಿಗೆ ಹೀಗೆ ಮಾಡುವುದರಿಂದ ಅವರು ಹಿಂದೂ ಧರ್ಮದಿಂದ ಹೊರಗೆ ಗುರುತಿಸಿಕೊಳ್ಳುತ್ತಾರೆ , ಹಿಂದೂ ಧರ್ಮ ಒಡೆದು ಹೋಗುತ್ತದೆ ಎಂಬ ಆತಂಕವಿತ್ತು.

ಅದರ ಬದಲಾಗಿ ಪರಿಶಿಷ್ಟರು ಮಾತ್ರ ಸ್ಪರ್ಧಿಸಿ ಎಲ್ಲರೂ ಮತದಾನ ಮಾಡುವ ಮೀಸಲು ಕ್ಷೇತ್ರಗಳನ್ನು ನೀಡಬಹುದು ಎಂದು ಗಾಂಧೀಜಿಯವರ ನಿಲುವಾಗಿತ್ತು.
ಈ ವ್ಯವಸ್ಥೆಯಲ್ಲಿ ಅಂಬೇಡ್ಕರ್ ಅವರು ಪ್ರತ್ಯೇಕ ಎಲೆಕ್ಟೋರೇಟ್ ಅಲ್ಲಿ ಆಗ್ರಹಿಸಿದಕ್ಕಿಂತ ಮೂರು ಪಟ್ಟು ಹೆಚ್ಚು ಸ್ಥಾನಗಳನ್ನು ನೀಡಲು ಗಾಂಧೀಜಿ ಪ್ರಸ್ತಾಪವಿತ್ತರು.

ಇದಕ್ಕಾಗಿ ಅಂಬೇಡ್ಕರ್ ಅವರ ಮೇಲೆ ಒತ್ತಡ ಹೇರಲು ಗಾಂಧೀಜಿ ಅವರು ಯರವಾಡ ಜೈಲಿನಲ್ಲೇ ಉಪವಾಸ ಕುಳಿತರು. ಅದು ಗಾಂಧೀಜಿ ಅವರ ಆಶಯದಂತೆ ಅಸ್ಪ್ರಶ್ಯತಾ ನಿವಾರಣ ಚಳುವಳಿ ಇಡೀ ದೇಶದಲ್ಲಿ ಹಬ್ಬಲು ನಾಂದಿಯಾಯಿತು. ಕೊನೆಗೆ ಮನಸ್ಸಿಲ್ಲದ ಮನಸ್ಸಿನಿಂದ ಅಂಬೇಡ್ಕರ್ ಗಾಂಧೀಜಿಯವರ ಪ್ರಸ್ತಾಪ ಒಪ್ಪಿಕೊಳ್ಳಬೇಕಾಯಿತು.

ಒಟ್ಟಾರೆ ಅಸ್ಪ್ರಶ್ಯತೆ ನಿವಾರಣೆ ಆಗಬೇಕೆಂಬುದು ಇಬ್ಬರು ಮಹನೀಯರ ಧ್ಯೇಯವಾಗಿತ್ತು. ವಿಪರ್ಯಾಸವೆಂದರೆ ಅಂದು ಯಾವ ಹಿಂದೂ ಧರ್ಮದ ಏಕತೆಗಾಗಿ ಗಾಂಧೀಜಿ ಅಂಬೇಡ್ಕರ್ ಅವರ ಪ್ರಸ್ತಾಪವನ್ನು ವಿರೋಧಿಸಿದರೋ ಇಂದು ಅದೇ ಹಿಂದೂ ಧರ್ಮದ ಕಟ್ಟಾ ಪ್ರತಿಪಾದಕರು ಅಂಬೇಡ್ಕರ್ ಅನುಯಾಯಿಗಳನ್ನು ಗಾಂಧೀಜಿ ಅವರ ವಿರುದ್ಧ ಎತ್ತಿಕಟ್ಟುತ್ತಿದ್ದಾರೆ.

ಅಂಬೇಡ್ಕರ್ ಅವರ ಮೇಲೆ ಗಾಂಧೀಜಿ ಅವರಿಗೆ ವ್ಯಕ್ತಿಗತ ವಿರೋಧವಿದ್ದರೆ ದೇಶದ ಸಂವಿಧಾನ ರಚನೆಯಂತ ಮಹೋನ್ನತ ಜವಾಬ್ದಾರಿ ಅಂಬೇಡ್ಕರ್ ಅವರ ಹೆಗಲಿಗೇರಲು , ಅಂಬೇಡ್ಕರ್ ಅವರು ದೇಶದ ಮೊದಲ ಕಾನೂನು ಮಂತ್ರಿಯಾಗಲು ವಿರೋಧಿಸಬೇಕಿತ್ತಲ್ಲವೇ ???

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending