ಕ್ರೀಡೆ
ಬಾಕ್ಸಿಂಗ್’ನಲ್ಲಿ ಮೇರಿ ಕೋಮ್ ವಿಶ್ವ ದಾಖಲೆ; ವಿಶ್ವ ಚಾಂಪಿಯನ್ ಬಾಕ್ಸರ್ ಮಣಿಸಿದ ಭಾರತದ ಕುಡಿ
ಸುದ್ದಿದಿನ ನವದೆಹಲಿ: ನವದೆಹಲಿಯ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವ ಬಾಕ್ಸಿಂಗ್ ಚಾಂಪಿಯನ್’ಶಿಪ್ ಪಂದ್ಯಾವಳಿಯಲ್ಲಿ ಭಾರತದ ಬಾಕ್ಸಿಂಗ್ ಲೆಜೆಂಡ್ ಎಂಸಿ ಮೇರಿ ಕೋಮ್ ಶನಿವಾರ ಉಕ್ರೇನಿನ ಹನ್ನಾ ಓಕೋಟಾ ಅವರನ್ನು ಮಣಿಸುವ ಮೂಲಕ ಆರು ಬಂಗಾರದ ಪದಕ ಗಳಿಸಿ ದಾಖಲೆ ನಿರ್ಮಿಸಿದ್ದಾರೆ.
ವಿಶ್ವ ಚಾಂಪಿಯನ್’ಶಿಪ್ ಇತಿಹಾಸದಲ್ಲಿ 48ಕೆಜಿ ಲೈಟ್ ಪ್ಲೈ ವೇಯಟ್ ವಿಭಾಗದಲ್ಲಿ ಕ್ಯೂಬಾದ ಲೆಜೆಂಡ್ ಫೆಲಿಕ್ಸ್ ಸಾವೋನ್ ದಾಖಲೆಯ ಸಮಾನವಾಗಿದ್ದು, ಇಬ್ಬರ ದಾಖಲೆಯೂ ಯಶಸ್ವಿ ಬಾಕ್ಸರ್ ಆಗಿದ್ದಾರೆ.
ಇದಕ್ಕೂ ಇದೇ ವರ್ಷ ಪೋಲ್ಯಾಂಡಿನಲ್ಲಿ ಮಣಿಸಿದ್ದರು. ಯುಥ್ ವಿಶ್ವ ಚಾಂಪಿಯನ್’ಶಿಪ್’ನಲ್ಲಿ ಉಕ್ರೇನಿನ ಓಕೋಟಾ ರಜತ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದರು. ಶನಿವಾರ ಗೆಲ್ಲುವ ಮೂಲಕ ಮೇರಿ ಕೋಮ್ ಪದಕಗಳ ಪಟ್ಟಿ ಏಳನೇ ಸ್ಥಾನ ಪಡೆದಿದೆ. ಈ ಹಿಂದಿನ ವಿಶ್ವ ಚಾಂಪಿಯನ್’ಶಿಪ್’ನಲ್ಲಿ ಮೇರಿ ಕೋಮ್ ಆರು ಬಂಗಾರ ಪದಕ (2002, 2005, 2006, 2008, 2010) ಮತ್ತು 2001ರಲ್ಲಿ ಒಂದು ಬೆಳ್ಳಿ ಪದಕ ಪಡೆದಿದ್ದರು.
ಮೇರಿ ಕೋಮ್ ಸಾಧನೆಯನ್ನು ಪ್ರಧಾನಿ ಮೋದಿ ಸೇರಿ ಗಣ್ಯಾತಿಗಣ್ಯರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
A proud moment for Indian sports.
Congratulations to Mary Kom for winning a Gold in the Women’s World Boxing Championships. The diligence with which she’s pursued sports and excelled at the world stage is extremely inspiring. Her win is truly special. @MangteC
— Narendra Modi (@narendramodi) November 24, 2018

ಕ್ರೀಡೆ
ಏ.10 ರಿಂದ ಬೇಸಿಗೆ ಕಬಡ್ಡಿ ತರಬೇತಿ ಶಿಬಿರ

ಸುದ್ದಿದಿನ,ದಾವಣಗೆರೆ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸೃಷ್ಟಿ ಕಬಡಿ ಅಕಾಡೆಮಿ(ರಿ), ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಬೇಸಿಗೆ ಕಬಡ್ಡಿ ತರಬೇತಿ ಶಿಬಿರವನ್ನು ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಏಪ್ರಿಲ್ 10 ರಿಂದ 30 ರವರೆಗೆ ಬೆಳಿಗ್ಗೆ 6.30 ರಿಂದ 8 ಗಂಟೆಯ ವರೆಗೆ ಹಾಗೂ ಸಾಯಂಕಾಲ ಸಂಜೆ 5 ರಿಂದ 6.30 ರ ವರೆಗೆ ಆಯೋಜಿಸಲಾಗಿದೆ.
ಆಸಕ್ತ ಶಾಲಾ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಬೇಸಿಗೆ ಕಬಡ್ಡಿ ತರಬೇತಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಇಲಾಖೆಯ ತರಬೇತುದಾರರಾದ ಶ್ರೀಶೈಲ ಎಸ್-ಮೊ.ನಂ: 9448667255 ಹಾಗೂ ನೂರುಲ್ಲ ಮೊ.ನಂ: 9740107364, ಶಿವಯೋಗಿ ಮೊ.ನಂ: 9019619900, ರಾಕೇಶ್ ಮೊನಂ:9448835907 ಇವರನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಬೇಸಿಗೆ ವಾಲಿಬಾಲ್ ತರಬೇತಿ

ಸುದ್ದಿದಿನ,ದಾವಣಗೆರೆ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಿಟಿ ಸ್ಟಾರ್ ವಾಲಿಬಾಲ್ ಕ್ಲಬ್, ಫ್ರೆಂಡ್ಸ್ ಸ್ಪೋಟ್ಸ್ ಕ್ಲಬ್ ಹಾಗೂ ಗೋಲ್ಡನ್ ಈಗಲ್ ಕ್ಲಬ್ ಇವರ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 25 ರವರೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಬೇಸಿಗೆ ವಾಲಿಬಾಲ್ ತರಬೇತಿ ಶಿಬಿರವನ್ನು ಬೆಳಿಗ್ಗೆ 5 ರಿಂದ 7 ಗಂಟೆಯವರೆಗೆ ಹಾಗೂ ಸಂಜೆ 5 ರಿಂದ 6.30 ರವರೆಗೆ ಆಯೋಜಿಸಲಾಗಿದೆ.
ಶಾಲಾ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಬೇಸಿಗೆ ವಾಲಿಬಾಲ್ ತರಬೇತಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಇಲಾಖೆಯ ತರಬೇತುದಾರರಾದ ಎಂ.ಎಸ್. ಜಮಾ ಅಹಮ್ಮದ್-ಮೊ.ನಂ: 9141091590, ದರ್ಶನ್ ಮೊ.ನಂ: 8147842647 ಇವರನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ..
ದಾವಣಗೆರೆ ನಗರದ ಜಿಎಫ್ ಜಿಸಿ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದಿಂದ ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಗಳು ನಡೆದವು, ಕಾಲೇಜಿನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿರುವ ರಾಘವೇಂದ್ರ, ಹಳೇ ಕುಂದುವಾಡದ ಬಸವರಾಜ್, ಲಕ್ಷ್ಮಿದೇವಿ ದಂಪತಿಯ ಪುತ್ರನಾಗಿದ್ದು, ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ದೇಹ ಪ್ರದರ್ಶಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾನೆ.
ಓದಿನ ಜೊತೆಗೆ ತನ್ನ ತಂದೆಯ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಾ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಬಿಡುವಿನ ವೇಳೆಯಲ್ಲಿ ಕೋಚ್ ಮಧು ಪೂಜಾರ್ ಮಾರ್ಗದರ್ಶನದಲ್ಲಿ ದೇಹ ಹುರಿಗೊಳಿಸಿ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ್ದಾನೆ, ಸ್ಪರ್ಧೆಯಲ್ಲಿ ಬೈಸಿಪ್ಸ್, ಲ್ಯಾಟ್ ಸ್ಟ್ರೈಡ್ ಪೋಸ್ ಕೊಟ್ಟು ನೋಡುಗರನ್ನು, ತೀರ್ಪುಗಾರರನ್ನು ಬೆರಗುಗೊಳಿಸಿದ್ದಾನೆ.
ಇನ್ನೂ ರಾಘವೇಂದ್ರನ ದೇಹ ಪ್ರದರ್ಶನ ವೇಳೆ ಶಿಳ್ಳೆ, ಚಪ್ಪಾಳೆ ಕೇಳಿ ಬಂದವು, ರಾಘವೇಂದ್ರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಬರುವ ಫೆಬ್ರುವರಿಯಲ್ಲಿ ಮಂಗಳೂರಿನಲ್ಲಿ ಸ್ಪರ್ಧೆ ನಡೆಯಲಿದೆ, ಇನ್ನೂ ಚಿನ್ನದ ಪದಕ ಗಳಿಸಿರುವ ರಾಘವೇಂದ್ರನಿಗೆ ಜಿಎಫ್ ಜಿಸಿ ಕಾಲೇಜು ಆಡಳಿತ ಮಂಡಳಿ, ಮಾರ್ಗದರ್ಶಕರು, ಹಳೇ ಕುಂದುವಾಡ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ಅವಹೇಳನಕಾರಿ ಹೇಳಿಕೆ ; ಲೋಕಿಕೆರೆ ನಾಗರಾಜ್ ಕೂಡಲೇ ಕ್ಷಮೆ ಕೇಳಬೇಕು : ಸವಿತಾ ಹುಲ್ಲುಮನೆ ಗಣೇಶ್ ಆಗ್ರಹ
-
ದಿನದ ಸುದ್ದಿ3 days ago
ದೇಶಾದ್ಯಂತ 11 ದಿನಗಳ ಕಾಲ ತಿರಂಗ ಯಾತ್ರೆ
-
ದಿನದ ಸುದ್ದಿ5 days ago
ಆಪರೇಷನ್ ಸಿಂದೂರ್ ಕಾರ್ಯಾಚರಣೆಯಲ್ಲಿ ನೂರು ಉಗ್ರಗಾಮಿಗಳು ಹತ : ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್
-
ದಿನದ ಸುದ್ದಿ4 days ago
ದಾವಣಗೆರೆ | ಮುಂಗಾರು ವಿಪತ್ತು ನಿರ್ವಹಣೆಗೆ ಸಿದ್ದತೆ, ಸಿಡಿಲಬ್ಬರ ಮುನ್ನೆಚ್ಚರಿಕೆಗೆ ಆಪ್ ಅಳವಡಿಸಿಕೊಳ್ಳಲು ಸಲಹೆ
-
ದಿನದ ಸುದ್ದಿ3 days ago
ರಕ್ತ ಮತ್ತು ನೀರು ಒಟ್ಟಿಗೆ ಹರಿಯಲಾರವು : ಪ್ರಧಾನಿ ನರೇಂದ್ರ ಮೋದಿ
-
ದಿನದ ಸುದ್ದಿ4 days ago
ದಾವಣಗೆರೆ | ಡಿ.ಇ.ಎಲ್.ಇಡಿ. ದಾಖಲಾತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
-
ದಿನದ ಸುದ್ದಿ3 days ago
ದಾವಣಗೆರೆ | ವಾಹನ ತಪಾಸಣೆ ವೇಳೆ ಲಾರಿ ಹರಿದು ಪೋಲಿಸ್ ಸಾವು ; ಲಾರಿಯೊಂದಿಗೆ ಚಾಲಕ ಪರಾರಿ