Connect with us

ಸಿನಿ ಸುದ್ದಿ

#MeToo | ಎಲ್ಲವನ್ನೂ ಒಪ್ಪಿಕೊಂಡೇ ಆಕ್ಟ್ ಮಾಡಿದ್ದಾರೆ ಸಂಜನಾ : ನಿರ್ದೇಶಕ ರವಿ ಶ್ರೀವತ್ಸ ಸ್ಪಷ್ಟನೆ

Published

on

ಸುದ್ದಿದಿನ, ಬೆಂಗಳೂರು : ನಟಿ‌ ಸಂಜನಾ‌ #ಮೀಟೂ ಆರೋಪವನ್ನು ನಿರ್ದೇಶಕ ರವಿ ಶ್ರೀವತ್ಸ ಮೇಲೆ ಹೊರಿಸಿದ ನಂತರ ಇಂದು ಸುದ್ದಿ ಗೋಷ್ಟಿ ಕರೆದು ಮಾತನಾಡಿದ ಅವರು, ಗಂಡ ಹೆಂಡತಿ ಚಿತ್ರಕ್ಕೆ ಮೊದಲು ಆಯ್ಕೆ ಆಗಿದ್ದು ರಕ್ಷಿತಾ. ಆದರೆ ರಕ್ಷಿತಾ ರಿಜೆಕ್ಟ್ ಮಾಡಿದ್ರು. ಆಗ ಹೊಸಬರನ್ನ ಆಯ್ಕೆ ಮಾಡಿಕೊಳ್ಳೋಣಾ ಅಂತ ಸಂಜಾನರಾನ್ನ ಆಯ್ಕೆ ಮಾಡಿಕೊಂಡ್ವಿ.ಆ ಕ್ಯರೆಕ್ಟ್ ಮಾಡೋದಕ್ಕೆ ಮಡಿವಂತಿಕೆ ಹೆಣ್ಣುಮಕ್ಕಳೂ ಸೂಟ್ ಆಗ್ತಿರಲ್ಲಿ.

ಹೀಗಾಗಿ ಸಂಜನಾ ಗೆ ಕಥೆ ಹೇಳಿದ್ವಿ.ಅವರು ಈ ಕಥೆಗೆ ಒಪ್ಪಿಕೊಂಡೇ ಮಾಡಿದ್ರು. ಸಂಜನಾ ಈಗ ಹೇಳ್ತಾರೆ ನನಗೆ ಆಗ 16 ವರ್ಷ ಅಂತಾ ಹೇಳ್ತಾರೆ.ಆದರೆ ಅವರ ನಿಜವಾದ ವರ್ಷ ಆ ಟೈಂ ನಲ್ಲಿ ಎಷ್ಟಿತ್ತು ಅಂತ ಅವರಿಗೆ ಗೊತ್ತು. ವಿಕಿಪೀಡಿಯಾದಲ್ಲಿ ಎಲ್ಲವೂ ಇದೆ. ಗಂಡ ಹೆಂಡತಿ ಸಂಜನಾರ ಮೊದಲ ಸಿನಿಮಾ ಅಲ್ಲ. 5 ಸಿನಿಮಾ ಇದು. ಆದರು ಗಂಡ ಹೆಂಡತಿ ಮೊದಲ ಸಿನಿಮಾ ಅಂತಾರೆ. ನನ್ನ ತಂದೆ ಸಿನಿಮಾ ನೋಡಿ ನೊಂದುಕೊಂಡ್ರು ಅಂತ ಸಂಜನಾ ಹೇಳ್ತಾರೆ. ಆದರೆ ಸಂಜನಾ ಸಿನಿಮಾ ಶುರುವಾದಾಗಿನಿಂದ ಇಲ್ಲಿ ವರೆಗು ತಂದೆಯನ್ನು ನಮಗೆ ಪರಿಚಯಿಸೇ ಇಲ್ಲ‌ ಎಂದು ಹೇಳಿದರು.

ನಿರ್ದೇಶಕರ ಬೆಂಬಲ ಕೋರಿರೋ ವಾಯ್ಸ್ ನೋಟ್ ಮತ್ತು ಗಂಡ ಹೆಂಡತಿ ಚಿತ್ರದ ಡೈರೆಕ್ಟರ್ ರವಿ ಶ್ರೀವತ್ಸ ಮನದಾಳ ಮಾತು

ಸಾಕ್ಷಿ ಸಮೇತ ಸಂಜನಾ ಮಾಡಿರೋ ಆರೋಪ ಸುಳ್ಳು ಅಂತ ಸಾಬೀತು ಪಡಿಸಲಿದ್ದಾರೆ ರವಿ ಶ್ರೀವತ್ಸ್ ಇಂದು ನಡೆಯೋ ಸಭೆ ಬಗ್ಗೆ ನಿನ್ನೆ ರವಿ ಶ್ರೀವತ್ಸ್ ವಾಯ್ಸ್ ನೋಟ್ ಕಳಿಸಿರೋದು ನಂಬಿಕೆ ಇಟ್ಟು ಸಭೆಗೆ ಬನ್ನಿ. ನಾನು ನಿಮ್ಮ ನಂಬಿಕೆ ಉಳಿಸಿಕೊಳ್ಳುತ್ತೆ ಎಂದು ನಿರ್ದೇಶಕರಲ್ಲಿ ರವಿ ಶ್ರೀವತ್ಸ ಬೆಂಬಲಿಸುವಂತೆ ಮನವಿಸಂಜನಾ ಮೀ ಟೂ ಆರೋಪ ನಿರ್ದೇಶಕ ಸಂಘದ ಪತ್ರಿಕಾಗೋಷ್ಠಿ ಆರಂಭವಾದಾಗ
ರವಿ ಶ್ರೀವತ್ಸ, ಗಂಡ ಹೆಂಡತಿ ಚಿತ್ರದ ಸಹ ನಿರ್ದೇಶಕ ಮುಸಂಜೆ ಮಹೇಶ್ ಹಾಜರಾಜಿದ್ದರು. ಈ ಕುರಿತು ಮೊನ್ನೆನೆ ಸಂಘದ ಸದಸ್ಯರ ಜತೆ ಚರ್ಚೆ ಆಗಿದೆ.‌ಸಂಜನಾ ವಿರುದ್ದ ಏನ ಕ್ರಮ ತೆಗೆದು ಕೊಳ್ತಾರೆಂಬ ಕುತೂಹಲ
ಈ ಕುರಿತು ಮೊನ್ನೆನೆ ಸಂಘದ ಸದಸ್ಯರ ಜತೆ ಚರ್ಚೆ ಆಗಿದೆ. ಯಾವ ದಾಖಲೆ ಮಾಧ್ಯಮಕ್ಕೆ ಕೊಡ್ತಾರೆ ರವಿ ಶ್ರೀವತ್ಸ.

ಸಂಜನಾ ಆರೋಪಕ್ಕೆ ರವಿ ಶ್ರೀವತ್ಸ ಏನ್‌ ಹೇಳ್ತಾರೆ ? ರವಿ ಶ್ರೀವತ್ಸ ಬಳಿ ಏನಿದೆ ದಾಖಲೆ ?

ಬೆತ್ತಲಾದ,ಚರ್ಮವನ್ನ ಎಷ್ಟು‌ದಿನ ಅಂತ ಜನ ನೋಡ್ತಾರೆ ಅಂದಿದ್ದರು. ನವ ನಟಿಯರು ಚಿತ್ರರಂಗದಲ್ಲಿ ನೆಲೆ ಕಾಣಬೇಕು ಅಂದರೆ ವಸ್ತ್ರತ್ಯಾಗ‌ ಮಾಡಲೇಬೇಕು ಅಂದಿದ್ದರು. ಸಂಜನಾ ಈ ಹೇಳಿಕೆಯನ್ನ ಪ್ರಕಟಿಸಿದ್ದ ಪತ್ರಿಕೆಯನ್ನ ಆಧಾರವಾಗಿ ಇಟ್ಟು ಕೊಂಡು ಮಾತ್ ಆಡಿದ ಗಂಡ ಹೆಂಡತಿ ಸಹ ನಿರ್ದೇಶಕ ಮಹೇಶ ವಿಜಯನಗರದ ನಿರ್ದೇಶಕರ ಸಂಘದಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು.

ಬೀದಿಗೆ ಬಂದ ಗಂಡ ಹೆಂಡತಿ ಜಗಳ

ಸಂಜನಾ ಆರೋಪಕ್ಕೆ ರವಿ ಶ್ರೀವತ್ಸ ಉತ್ತರ
ರವಿ ಶ್ರೀ ವತ್ಸ ಗಂಡ ಹೆಂಡತಿ ಸಿನಿಮಾ ನಿರ್ದೆಶಕ
ನಿರ್ದೇಶಕರ ಸಂಘದ ಅಧ್ಯಕ್ಷ ನಾಗೇಂದ್ರ ಪ್ರಸಾದ್​ ನೇತೃತ್ವದಲ್ಲಿ ಸುದ್ದಿಗೋಷ್ಠಿ  ವಿಜಯನಗರದಲ್ಲಿ ಸುದ್ದಿಗೋಷ್ಠೀ- # mee too ಅಭಿಯಾನಕ್ಕೆ ನಿರ್ದೇಶಕರ ಸಂಘ ಬೆಂಬಲ‌ ಸೂಚಿಸಿದ್ದಾರೆ. ಸಿನಿಮಾ ಬಿಡುಗಡೆಯಾದ ಬಳಿಕ 12 ವರ್ಷಗಳ ನಂತರ ಆರೋಪ ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

Published

on

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.

ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.

ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್​ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

ಗುರುಪ್ರಸಾದ್‌ ಮೇಲೆ ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್‌ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್‌ ಕೂಡ ಆಗಿತ್ತು. ಗುರುಪ್ರಸಾದ್‌ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್‌ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್‌ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್‌ ಗೌಡ.

ಹಣ ವಾಪಸ್‌ ಕೊಡಲಾಗದೇ ಕಿರಿಕ್‌ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್‌ ಅವರು. ಈ ಬಗ್ಗೆ ಕೋರ್ಟ್‌ ಮೆಟ್ಟಿಲೇರಿದ್ದ, ಗುರುಪ್ರಸಾದ್‌ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್‌ 24ರಂದು ಇದ್ದ ಕೋರ್ಟ್‌ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್‌. ಮೆಡಿಕಲ್‌ ರಿಪೋರ್ಟ್‌ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.

ನಿನ್ನೆ ಅಂದರೆ ನವೆಂಬರ್‌ 2ಕ್ಕೆ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್‌ ರೀಚಬಲ್‌ ಬಂದಿತ್ತು ಮೊಬೈಲ್‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

52 ವರ್ಷದ ಕನಕಪುರ ಮೂಲದ ಗುರುಪ್ರಸಾದ್‌ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್‌ ಚಿತ್ರದ ಮೂಲಕ ಮನೆಮಾತಾಗಿದ್ದರು.

ನಿರ್ದೇಶಕ ʻಮಠʼ ಗುರುಪ್ರಸಾದ್‌ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್‌ ಡೇ ವಿಶ್‌ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್‌ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್‌ ಅವರ ಮೊಬೈಲ್‌ ನಾಟ್‌ ರೀಚಬಲ್‌ ಆಗಿತ್ತು, ಗುರುಪ್ರಸಾದ್‌ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ57 minutes ago

ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಅಗತ್ಯ : ಪ್ರಾಚಾರ್ಯ ಎಂ.ನಾಸಿರುದ್ದೀನ್

ಸುದ್ದಿದಿನ,ಚಿತ್ರದುರ್ಗ: ಜಗತ್ತಿನಲ್ಲಿ ಭೂಮಿಯ ಮೇಲೆ ಸಕಲ ಜೀವರಾಶಿಗಳು ಬದುಕಲು ಅವಕಾಶವಿದ್ದು ಪರಿಸರ ಸಂರಕ್ಷಣೆ ಮಾಡುವುದರ ಮೂಲಕ ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಡಯಟ್ ಪ್ರಾಚಾರ್ಯ...

ದಿನದ ಸುದ್ದಿ2 hours ago

ದಾವಣಗೆರೆ | ನಾಳೆಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಆರಂಭ, 81 ಕೇಂದ್ರಗಳಲ್ಲಿ 22579 ವಿದ್ಯಾರ್ಥಿಗಳು

ಸುದ್ದಿದಿನ,ದಾವಣಗೆರೆ:2024-25 ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಜರುಗಲಿವೆ. ಹೊಸದಾಗಿ ಒಟ್ಟು 21704 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಇದರಲ್ಲಿ 10587...

ಅಂಕಣ10 hours ago

ಸಿದ್ಧಾಂತ ಮತ್ತು ಪತ್ರಿಕೋದ್ಯಮ

ಹರ್ಷಕುಮಾರ್‌ ಕುಗ್ವೆ, ಪತ್ರಕರ್ತ ಮತ್ತು ಆಕ್ಟಿವಿಸ್ಟ್ ಇದು ಸುಮಾರು 2002-03ರ ಸಂದರ್ಭ. ಶಿವಮೊಗ್ಗದಲ್ಲಿ ನಾವು ಹೋರಾಟಗಳಲ್ಲಿ ಸಕ್ರಿಯವಾಗಿದ್ದ ಕಾಲ. ಒಬ್ಬ ಪತ್ರಕರ್ತ ಮಿತ್ರರೊಂದಿಗೆ ಹೀಗೇ ಚರ್ಚೆ ನಡೆಯುತ್ತಿತ್ತು....

ದಿನದ ಸುದ್ದಿ11 hours ago

ಅಮಾನವೀಯ ಕೃತ್ಯ | ಹೆಣ್ಣು ಮಗು ಮಾರಾಟ ಮಾಡಿದ ಪೋಷಕರು

ಸುದ್ದಿದಿನಡೆಸ್ಕ್:ರಾಜ್ಯದಲ್ಲಿ ಮಕ್ಕಳ ಮಾರಾಟ ಜಾಲ ಎಗ್ಗಿಲ್ಲದೆ ನಡೆಯುತ್ತಿದೆ. ಇಂತಹ ಸಂಧರ್ಭದಲ್ಲಿ ಮೈಸೂರಿನಲ್ಲೊಂದು ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಅಮಾನವೀಯ ಕೃತ್ಯ ನಡೆದಿದೆ. 14ಸಾವಿರ ರೂ ಗೆ ಹೆಣ್ಣು...

ದಿನದ ಸುದ್ದಿ13 hours ago

ಕ್ಯೂ-ಸ್ಪೈಡರ್ಸ್ ವತಿಯಿಂದ ಉಚಿತ ಉದ್ಯೋಗದರಿತ ಕೌಶಲ್ಯ ತರಬೇತಿ ಆಯ್ಕೆ ಪ್ರಕ್ರಿಯೆ

(ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್ಮೆಂಟ್ ಸೆಲ್ ಅಡಿಯಲ್ಲಿ ಆಯೋಜನೆ) ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್ಮೆಂಟ್ ಸೆಲ್ ನೇತೃತ್ವದಲ್ಲಿ ಖ್ಯಾತ ಐಟಿ ತರಬೇತಿ...

ದಿನದ ಸುದ್ದಿ1 day ago

ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಆರಂಭಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ

ಸುದ್ದಿದಿನ,ದಾವಣಗೆರೆ: ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿ ಬಳಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಸ್ಥಾಪಿಸಲು ಭೂಮಿ ಖರೀದಿಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೂಡಲೇ ಅನುದಾನ...

ದಿನದ ಸುದ್ದಿ1 day ago

ಕೆರೆಬಿಳಚಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆರೆಬಿಳಚಿಯಲ್ಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ ,ಕ್ರಿಶ್ಚಿಯನ್, ಜೈನ್ ,ಬೌದ್ಧ ಸಿಖ್...

ದಿನದ ಸುದ್ದಿ1 day ago

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ : ಹೊಸ ಸದಸ್ಯರ ನೊಂದಣಿ, ನೊಂದಣಿಯಾದ ಸದಸ್ಯರನ್ನು ನವೀಕರಿಸಲು ಸೂಚನೆ

ಸುದ್ದಿದಿನ,ದಾವಣಗೆರೆ:ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ಹಾಗೂ ಸಹಕಾರ ಸಂಘಗಳ ನಿಯಮ 1960ರಡಿ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಎಲ್ಲಾ ವಿಧದ ಸಹಕಾರ ಸಂಘಗಳ ಸದಸ್ಯರು ಮಾರ್ಚ್ 31ರೊಳಗಾಗಿ ಯಶಸ್ವಿನಿ...

ದಿನದ ಸುದ್ದಿ1 day ago

ಮಾಸಾಶನ ಪಡೆಯುತ್ತಿರುವ ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

ಸುದ್ದಿದಿನ,ದಾವಣಗೆರೆ:ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ತಮ್ಮ ಆಧಾರ್ ಕಾರ್ಡ್, ಪಿಂಚಣಿ ಪುಸ್ತಕದ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ಜೀವಿತಾವಧಿ ಪ್ರಮಾಣ...

ದಿನದ ಸುದ್ದಿ2 days ago

ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಗೆ ರಾಜ್ಯದ ಶಿಲಾ ಶಾಸನಗಳು ಸೇರ್ಪಡೆ

ಸುದ್ದಿದಿನಡೆಸ್ಕ್:ಭಾರತದ 6 ಮಹತ್ವದ ಐತಿಹಾಸಿಕ ಸ್ಥಳಗಳು ಹಾಗೂ ಹೆಗ್ಗುರುತುಗಳು ಯುನೆಸ್ಕೋದ ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಗೆ, ಸೇರ್ಪಡೆಗೊಂಡಿವೆ. ಇತ್ತೀಚೆಗೆ ಚಕ್ರವರ್ತಿ ಅಶೋಕನ ಶಿಲಾ ಶಾಸನಗಳು ಈ...

Trending