ಸಿನಿ ಸುದ್ದಿ
#MeToo | ಎಲ್ಲವನ್ನೂ ಒಪ್ಪಿಕೊಂಡೇ ಆಕ್ಟ್ ಮಾಡಿದ್ದಾರೆ ಸಂಜನಾ : ನಿರ್ದೇಶಕ ರವಿ ಶ್ರೀವತ್ಸ ಸ್ಪಷ್ಟನೆ
ಸುದ್ದಿದಿನ, ಬೆಂಗಳೂರು : ನಟಿ ಸಂಜನಾ #ಮೀಟೂ ಆರೋಪವನ್ನು ನಿರ್ದೇಶಕ ರವಿ ಶ್ರೀವತ್ಸ ಮೇಲೆ ಹೊರಿಸಿದ ನಂತರ ಇಂದು ಸುದ್ದಿ ಗೋಷ್ಟಿ ಕರೆದು ಮಾತನಾಡಿದ ಅವರು, ಗಂಡ ಹೆಂಡತಿ ಚಿತ್ರಕ್ಕೆ ಮೊದಲು ಆಯ್ಕೆ ಆಗಿದ್ದು ರಕ್ಷಿತಾ. ಆದರೆ ರಕ್ಷಿತಾ ರಿಜೆಕ್ಟ್ ಮಾಡಿದ್ರು. ಆಗ ಹೊಸಬರನ್ನ ಆಯ್ಕೆ ಮಾಡಿಕೊಳ್ಳೋಣಾ ಅಂತ ಸಂಜಾನರಾನ್ನ ಆಯ್ಕೆ ಮಾಡಿಕೊಂಡ್ವಿ.ಆ ಕ್ಯರೆಕ್ಟ್ ಮಾಡೋದಕ್ಕೆ ಮಡಿವಂತಿಕೆ ಹೆಣ್ಣುಮಕ್ಕಳೂ ಸೂಟ್ ಆಗ್ತಿರಲ್ಲಿ.
ಹೀಗಾಗಿ ಸಂಜನಾ ಗೆ ಕಥೆ ಹೇಳಿದ್ವಿ.ಅವರು ಈ ಕಥೆಗೆ ಒಪ್ಪಿಕೊಂಡೇ ಮಾಡಿದ್ರು. ಸಂಜನಾ ಈಗ ಹೇಳ್ತಾರೆ ನನಗೆ ಆಗ 16 ವರ್ಷ ಅಂತಾ ಹೇಳ್ತಾರೆ.ಆದರೆ ಅವರ ನಿಜವಾದ ವರ್ಷ ಆ ಟೈಂ ನಲ್ಲಿ ಎಷ್ಟಿತ್ತು ಅಂತ ಅವರಿಗೆ ಗೊತ್ತು. ವಿಕಿಪೀಡಿಯಾದಲ್ಲಿ ಎಲ್ಲವೂ ಇದೆ. ಗಂಡ ಹೆಂಡತಿ ಸಂಜನಾರ ಮೊದಲ ಸಿನಿಮಾ ಅಲ್ಲ. 5 ಸಿನಿಮಾ ಇದು. ಆದರು ಗಂಡ ಹೆಂಡತಿ ಮೊದಲ ಸಿನಿಮಾ ಅಂತಾರೆ. ನನ್ನ ತಂದೆ ಸಿನಿಮಾ ನೋಡಿ ನೊಂದುಕೊಂಡ್ರು ಅಂತ ಸಂಜನಾ ಹೇಳ್ತಾರೆ. ಆದರೆ ಸಂಜನಾ ಸಿನಿಮಾ ಶುರುವಾದಾಗಿನಿಂದ ಇಲ್ಲಿ ವರೆಗು ತಂದೆಯನ್ನು ನಮಗೆ ಪರಿಚಯಿಸೇ ಇಲ್ಲ ಎಂದು ಹೇಳಿದರು.
ನಿರ್ದೇಶಕರ ಬೆಂಬಲ ಕೋರಿರೋ ವಾಯ್ಸ್ ನೋಟ್ ಮತ್ತು ಗಂಡ ಹೆಂಡತಿ ಚಿತ್ರದ ಡೈರೆಕ್ಟರ್ ರವಿ ಶ್ರೀವತ್ಸ ಮನದಾಳ ಮಾತು
ಸಾಕ್ಷಿ ಸಮೇತ ಸಂಜನಾ ಮಾಡಿರೋ ಆರೋಪ ಸುಳ್ಳು ಅಂತ ಸಾಬೀತು ಪಡಿಸಲಿದ್ದಾರೆ ರವಿ ಶ್ರೀವತ್ಸ್ ಇಂದು ನಡೆಯೋ ಸಭೆ ಬಗ್ಗೆ ನಿನ್ನೆ ರವಿ ಶ್ರೀವತ್ಸ್ ವಾಯ್ಸ್ ನೋಟ್ ಕಳಿಸಿರೋದು ನಂಬಿಕೆ ಇಟ್ಟು ಸಭೆಗೆ ಬನ್ನಿ. ನಾನು ನಿಮ್ಮ ನಂಬಿಕೆ ಉಳಿಸಿಕೊಳ್ಳುತ್ತೆ ಎಂದು ನಿರ್ದೇಶಕರಲ್ಲಿ ರವಿ ಶ್ರೀವತ್ಸ ಬೆಂಬಲಿಸುವಂತೆ ಮನವಿಸಂಜನಾ ಮೀ ಟೂ ಆರೋಪ ನಿರ್ದೇಶಕ ಸಂಘದ ಪತ್ರಿಕಾಗೋಷ್ಠಿ ಆರಂಭವಾದಾಗ
ರವಿ ಶ್ರೀವತ್ಸ, ಗಂಡ ಹೆಂಡತಿ ಚಿತ್ರದ ಸಹ ನಿರ್ದೇಶಕ ಮುಸಂಜೆ ಮಹೇಶ್ ಹಾಜರಾಜಿದ್ದರು. ಈ ಕುರಿತು ಮೊನ್ನೆನೆ ಸಂಘದ ಸದಸ್ಯರ ಜತೆ ಚರ್ಚೆ ಆಗಿದೆ.ಸಂಜನಾ ವಿರುದ್ದ ಏನ ಕ್ರಮ ತೆಗೆದು ಕೊಳ್ತಾರೆಂಬ ಕುತೂಹಲ
ಈ ಕುರಿತು ಮೊನ್ನೆನೆ ಸಂಘದ ಸದಸ್ಯರ ಜತೆ ಚರ್ಚೆ ಆಗಿದೆ. ಯಾವ ದಾಖಲೆ ಮಾಧ್ಯಮಕ್ಕೆ ಕೊಡ್ತಾರೆ ರವಿ ಶ್ರೀವತ್ಸ.
ಸಂಜನಾ ಆರೋಪಕ್ಕೆ ರವಿ ಶ್ರೀವತ್ಸ ಏನ್ ಹೇಳ್ತಾರೆ ? ರವಿ ಶ್ರೀವತ್ಸ ಬಳಿ ಏನಿದೆ ದಾಖಲೆ ?
ಬೆತ್ತಲಾದ,ಚರ್ಮವನ್ನ ಎಷ್ಟುದಿನ ಅಂತ ಜನ ನೋಡ್ತಾರೆ ಅಂದಿದ್ದರು. ನವ ನಟಿಯರು ಚಿತ್ರರಂಗದಲ್ಲಿ ನೆಲೆ ಕಾಣಬೇಕು ಅಂದರೆ ವಸ್ತ್ರತ್ಯಾಗ ಮಾಡಲೇಬೇಕು ಅಂದಿದ್ದರು. ಸಂಜನಾ ಈ ಹೇಳಿಕೆಯನ್ನ ಪ್ರಕಟಿಸಿದ್ದ ಪತ್ರಿಕೆಯನ್ನ ಆಧಾರವಾಗಿ ಇಟ್ಟು ಕೊಂಡು ಮಾತ್ ಆಡಿದ ಗಂಡ ಹೆಂಡತಿ ಸಹ ನಿರ್ದೇಶಕ ಮಹೇಶ ವಿಜಯನಗರದ ನಿರ್ದೇಶಕರ ಸಂಘದಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು.
ಬೀದಿಗೆ ಬಂದ ಗಂಡ ಹೆಂಡತಿ ಜಗಳ
ಸಂಜನಾ ಆರೋಪಕ್ಕೆ ರವಿ ಶ್ರೀವತ್ಸ ಉತ್ತರ
ರವಿ ಶ್ರೀ ವತ್ಸ ಗಂಡ ಹೆಂಡತಿ ಸಿನಿಮಾ ನಿರ್ದೆಶಕ
ನಿರ್ದೇಶಕರ ಸಂಘದ ಅಧ್ಯಕ್ಷ ನಾಗೇಂದ್ರ ಪ್ರಸಾದ್ ನೇತೃತ್ವದಲ್ಲಿ ಸುದ್ದಿಗೋಷ್ಠಿ ವಿಜಯನಗರದಲ್ಲಿ ಸುದ್ದಿಗೋಷ್ಠೀ- # mee too ಅಭಿಯಾನಕ್ಕೆ ನಿರ್ದೇಶಕರ ಸಂಘ ಬೆಂಬಲ ಸೂಚಿಸಿದ್ದಾರೆ. ಸಿನಿಮಾ ಬಿಡುಗಡೆಯಾದ ಬಳಿಕ 12 ವರ್ಷಗಳ ನಂತರ ಆರೋಪ ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.
ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.
ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.
ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.
ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್ಬೌನ್ಸ್ ಕೇಸ್ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?

ಸುದ್ದಿದಿನಡೆಸ್ಕ್:ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
ಗುರುಪ್ರಸಾದ್ ಮೇಲೆ ಸಾಲು ಸಾಲು ಚೆಕ್ಬೌನ್ಸ್ ಕೇಸ್ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್ ಕೂಡ ಆಗಿತ್ತು. ಗುರುಪ್ರಸಾದ್ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್ ಗೌಡ.
ಹಣ ವಾಪಸ್ ಕೊಡಲಾಗದೇ ಕಿರಿಕ್ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್ ಅವರು. ಈ ಬಗ್ಗೆ ಕೋರ್ಟ್ ಮೆಟ್ಟಿಲೇರಿದ್ದ, ಗುರುಪ್ರಸಾದ್ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್ 24ರಂದು ಇದ್ದ ಕೋರ್ಟ್ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್. ಮೆಡಿಕಲ್ ರಿಪೋರ್ಟ್ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.
ನಿನ್ನೆ ಅಂದರೆ ನವೆಂಬರ್ 2ಕ್ಕೆ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್ ರೀಚಬಲ್ ಬಂದಿತ್ತು ಮೊಬೈಲ್.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!

ಸುದ್ದಿದಿನಡೆಸ್ಕ್:ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
52 ವರ್ಷದ ಕನಕಪುರ ಮೂಲದ ಗುರುಪ್ರಸಾದ್ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್ಮೆಂಟ್ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್ ಚಿತ್ರದ ಮೂಲಕ ಮನೆಮಾತಾಗಿದ್ದರು.
ನಿರ್ದೇಶಕ ʻಮಠʼ ಗುರುಪ್ರಸಾದ್ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್ ಡೇ ವಿಶ್ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್ ಅವರ ಮೊಬೈಲ್ ನಾಟ್ ರೀಚಬಲ್ ಆಗಿತ್ತು, ಗುರುಪ್ರಸಾದ್ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ
-
ದಿನದ ಸುದ್ದಿ5 days ago
ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ
-
ದಿನದ ಸುದ್ದಿ7 days ago
ಅನ್ನಭಾಗ್ಯ ಯೋಜನೆ | ನೇರ ನಗದು ವರ್ಗಾವಣೆ ಬದಲು ಅಕ್ಕಿ ವಿತರಣೆ
-
ದಿನದ ಸುದ್ದಿ2 days ago
ನೆಲಮಂಗಲ ಸಮೀಪದ ದಾಸನಪುರದಲ್ಲಿ 306 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಕೃಷಿ ಮಾರುಕಟ್ಟೆ ನಿರ್ಮಾಣ : ಸಚಿವ ಶಿವಾನಂದಪಾಟೀಲ್
-
ದಿನದ ಸುದ್ದಿ5 days ago
ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ
-
ದಿನದ ಸುದ್ದಿ2 days ago
ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಗೆ ರಾಜ್ಯದ ಶಿಲಾ ಶಾಸನಗಳು ಸೇರ್ಪಡೆ
-
ದಿನದ ಸುದ್ದಿ1 day ago
ಮಾಸಾಶನ ಪಡೆಯುತ್ತಿರುವ ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ
-
ದಿನದ ಸುದ್ದಿ4 days ago
ಕವಿತೆ | ಮತ್ತಿನ ಕುಣಿಕೆ